ಭರವಸೆಯ ಬೆಳಕುವಾಸಿಸಲು ಸೂರಿಲ್ಲದ ಅಸಹಾಯ ಕಣ್ಣುಗಳ ಕಂಬನಿ ಒರೆಸಿದ ಸೇವಾರತ್ನ- ಡಾ.ಗೋವಿಂದ ಬಾಬು...

ವಾಸಿಸಲು ಸೂರಿಲ್ಲದ ಅಸಹಾಯ ಕಣ್ಣುಗಳ ಕಂಬನಿ ಒರೆಸಿದ ಸೇವಾರತ್ನ- ಡಾ.ಗೋವಿಂದ ಬಾಬು ಪೂಜಾರಿ

-

- Advertisment -spot_img
ಅಸಹಾಯಕ ಮನಗಳಿಗೆ ಆತ್ಮವಿಶ್ವಾಸ ತುಂಬುವ ಸ್ಪೂರ್ತಿಯ ಚಿಲುಮೆ-ಡಾ.ಗೋವಿಂದ ಬಾಬು ಪೂಜಾರಿ ಇವರಿಂದ 6 ನೇ ಮನೆ ಹಸ್ತಾಂತರ
*”ಸ್ವಂತಕ್ಕೆ ಸ್ವಲ್ಪ ಸಮಾಜಕ್ಕೆ ಸರ್ವಸ್ವ”* ಎಂಬ ಮಾತಿಗೆ ಉದಾಹರಣೆಯಾಗಿ ನಿಲ್ಲುವ ಕ್ರೀಡಾ ಪ್ರೋತ್ಸಾಹಕ,  ಸಮಾಜಮುಖಿ ಕೆಲಸದ ಕುರಿತು ತುಡಿತವನ್ನಿಟ್ಟುಕೊಂಡು ನಿತ್ಯವೂ ಪರರು ಏಳಿಗೆಯನ್ನೇ
ಧ್ಯೇಯವಾಗಿಸಿಕೊಂಡಿರುವ ಆದರ್ಶ ವ್ಯಕ್ತಿತ್ವ, ತಮ್ಮ ಕೆಲಸ ಕಾರ್ಯಗಳಿಂದಲೇ ಪ್ರತಿಷ್ಠಿತ ಭಾರತ ಗೌರವಕ್ಕೆ ಭಾಜನರಾಗಿರುವ ಡಾ. ಗೋವಿಂದ ಬಾಬು ಪೂಜಾರಿ ಸಮಾಜಕ್ಕೊಂದು ಸ್ಫೂರ್ತಿಯ ಕಿರಣ.
ಸಾವಿರಕ್ಕೂ ಹೆಚ್ಚು ಜನರಿಗೆ ಉದ್ಯೋಗವನ್ನು ಕಲ್ಪಿಸಿ ನಿರುದ್ಯೋಗಿ ಗಳನ್ನು ಸ್ವಾವಲಂಬಿ ಜೀವನಕ್ಕೆ ಮುನ್ನುಗ್ಗಿಸುತ್ತಾ,ಕ್ರೀಡಾ ಪ್ರತಿಭೆಗಳಿಗೂ ಬೆನ್ನು ತಟ್ಟಿ ಪ್ರೋತ್ಸಾಹಿಸುವ ಮಿನುಗು ತಾರೆ.ಬಡ ಕುಟುಂಬಗಳಿಗೆ ಕಿಟ್ ಗಳನ್ನು ಹಂಚುತ್ತಿರುವ ಭರವಸೆಯ ಬೆಳಕು. ವಾಸಿಸಲು ಸೂರಿಲ್ಲದೆ ಒದ್ದಾಡುತ್ತಿದ್ದ ಅಸಹಾಯಕ ಕಣ್ಣುಗಳ ಕಂಬನಿ ಒರೆಸುವ ಸೇವಾ ರತ್ನ .ತಮ್ಮ ಶೈಕ್ಷಣಿಕ ,ಸಾಮಾಜಿಕ ಶ್ರೀ ವರಲಕ್ಷ್ಮಿ ಚಾರಿಟೇಬಲ್ ಟ್ರಸ್ಟ್ ರಿ. ಉಪ್ಪುಂದ ಮುಖೇನ ಇದುವರೆಗೂ ಒಟ್ಟು  ಐದು ಸುಸಜ್ಜಿತ ಮನೆಗಳನ್ನು ನಿರ್ಮಿಸಿಕೊಟ್ಟು ಇದೀಗ ಶ್ರೀ ವರಲಕ್ಷ್ಮೀ ನಿಲಯ ಎಂಬ ತಮ್ಮ ಆಶಯದ  ಆರನೇ ಮನೆಯ ಗೃಹ ಪ್ರವೇಶೋತ್ಸವವು 07-01-2022 ನೇ ಶುಕ್ರವಾರ ಬೆಳಿಗ್ಗೆ 10:30 ಕ್ಕೆ ಹೊಸಾಡು ಗ್ರಾಮದ ಕೊಪ್ಪರಿಗೆಬೆಟ್ಟು ಮುಳ್ಳಿಕಟ್ಟೆಯಲ್ಲಿ ನಡೆಯಲಿದೆ.ಈ ಸೇವಾ ಕೈಂಕರ್ಯಕ್ಕೆ ಶ್ರೀ ರಾಮ ಕ್ಷೇತ್ರ ಧರ್ಮಸ್ಥಳದ ಶ್ರೀ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮಿ ಆಗಮಿಸಲಿರುವರು.
ತಾನು ತನ್ನದೆಂದು ಸ್ವಾರ್ಥ ತುಂಬಿರುವ ಈ ಸಮಾಜದಲ್ಲಿ ಇತರರ ಏಳಿಗೆಯನ್ನು ತನ್ನ ಏಳಿಗೆಯಂತೆ ಬಯಸುವ ಇಂತಹ ಅಪರೂಪದ ವ್ಯಕ್ತಿತ್ವ ಸಮಾಜಕ್ಕೆ  ಮಾದರಿ.
ಇನ್ನಷ್ಟು ಸಮಾಜಮುಖಿ ಕೆಲಸ ಕಾರ್ಯಗಳು ನಿಮ್ಮಿಂದಾಗಲಿ.ಸಕಲ ದೈವ ದೇವರುಗಳ ಆಶೀರ್ವಾದ ನಿಮ್ಮೊಂದಿಗಿರಲಿ ಎಂದು ಸ್ಪೋರ್ಟ್ಸ್ ಕನ್ನಡ ವೆಬ್ಸೈಟ್  ಆಶಿಸುತ್ತದೆ..
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

LEAVE A REPLY

Please enter your comment!
Please enter your name here

eleven − 8 =

Latest news

ಶ್ರೀ ಜಲವಿನಾಯಕ ಟ್ರೋಫಿ 2026: ಕ್ರಿಕೆಟ್ ಪಂದ್ಯಾವಳಿಗೆ ಸಜ್ಜಾದ ಹುಣಸವಳ್ಳಿ

ಶ್ರೀ ಜಲವಿನಾಯಕ ಟ್ರೋಫಿ 2026: ಕ್ರಿಕೆಟ್ ಪಂದ್ಯಾವಳಿಗೆ ಸಜ್ಜಾದ ಹುಣಸವಳ್ಳಿ ಹುಣಸವಳ್ಳಿ ಹಾಗೂ ಕುರುವಳ್ಳಿ ಪೋಸ್ಟ್, ತೀರ್ಥಹಳ್ಳಿ ತಾಲೂಕು ಕ್ರೀಡಾಭಿಮಾನಿಗಳಿಗೆ ಸಂತಸದ ಸುದ್ದಿ. ಆಗುಂಬೆ ಮತ್ತು ಮುತ್ತೂರು...

ಭಾರತೀಯ ತಂಡದಲ್ಲಿ ಸ್ಥಾನಕ್ಕಾಗಿ ಹೋರಾಡಿ ಹೀರೋ ಆದ ಸಂಜು ಸ್ಯಾಮ್ಸನ್ ಕಥೆ

  ಭಾರತೀಯ ತಂಡದಲ್ಲಿ ಸ್ಥಾನಕ್ಕಾಗಿ ಹೋರಾಡಿ ಹೀರೋ ಆದ ಸಂಜು ಸ್ಯಾಮ್ಸನ್ ಕಥೆ ಕ್ರಿಕೆಟ್ ಜೀವನದಲ್ಲಿ ಕೆಲ ಕ್ಷಣಗಳು ಆಟಗಾರನ ಜೀವನವನ್ನೇ ಬದಲಾಯಿಸುತ್ತವೆ. ಆ ಕ್ಷಣಗಳು ನೋವು,...

ಭಾರತ ವಿಶ್ವ ಚಾಂಪಿಯನ್: ಟಿ20 ವಿಶ್ವಕಪ್ ಮತ್ತೆ ಭಾರತಕ್ಕೇ!

  ಭಾರತ ವಿಶ್ವ ಚಾಂಪಿಯನ್: ಟಿ20 ವಿಶ್ವಕಪ್ ಮತ್ತೆ ಭಾರತಕ್ಕೇ! ಟೀಮ್ ಇಂಡಿಯಾ ಇತಿಹಾಸ ಸೃಷ್ಟಿಸಿದೆ. ಹಾಲಿ ಚಾಂಪಿಯನ್ ಆಗಿ ಟಿ20 ವಿಶ್ವಕಪ್ ಉಳಿಸಿಕೊಳ್ಳುವುದರ ಜೊತೆಗೆ, ತವರು ನೆಲದಲ್ಲಿ...

ಭಾರತಕ್ಕೆ ಮೂರನೇ ಟಿ20 ವಿಶ್ವಕಪ್ ಕಿರೀಟ – ಐತಿಹಾಸಿಕ ಸಾಧನೆ

ಭಾರತಕ್ಕೆ ಮೂರನೇ ಟಿ20 ವಿಶ್ವಕಪ್ ಕಿರೀಟ – ಐತಿಹಾಸಿಕ ಸಾಧನೆ ಕ್ರಿಕೆಟ್ ಲೋಕದಲ್ಲಿ ಮತ್ತೊಮ್ಮೆ ಇತಿಹಾಸ ನಿರ್ಮಿಸಿದ Team India ತಂಡವು ಟಿ20 ವಿಶ್ವಕಪ್‌ನಲ್ಲಿ ತನ್ನ ಪ್ರಭಾವವನ್ನು...
- Advertisement -spot_imgspot_img

NIPM ಕ್ರಿಕೆಟ್ ಎಕ್ಸ್‌ಪ್ಲೋಶನ್ ಕಾರ್ಪೊರೇಟ್ ಟೂರ್ನಮೆಂಟ್ 2026: NMPA ಚಾಂಪಿಯನ್

NIPM ಕ್ರಿಕೆಟ್ ಎಕ್ಸ್‌ಪ್ಲೋಶನ್ ಕಾರ್ಪೊರೇಟ್ ಟೂರ್ನಮೆಂಟ್ 2026: NMPA ಚಾಂಪಿಯನ್ **New Mangalore Port Authority (ಎನ್‌ಎಂಪಿಎ)** ತಂಡವು **NIPM Cricket Explosion Corporate Cricket Tournament...

ಮಂಗಳೂರಿನಲ್ಲಿ ಕಾರ್ಪೊರೇಟ್ ಕ್ರಿಕೆಟ್ ಹಬ್ಬಕ್ಕೆ ಚಾಲನೆ; NIPM ಮಂಗಳೂರು ಚಾಪ್ಟರ್‌ನಿಂದ “ಕ್ರಿಕೆಟ್ ಎಕ್ಸ್‌ಪ್ಲೋಷನ್” ಟೂರ್ನಿ

ಮಂಗಳೂರಿನಲ್ಲಿ ಕಾರ್ಪೊರೇಟ್ ಕ್ರಿಕೆಟ್ ಹಬ್ಬಕ್ಕೆ ಚಾಲನೆ NIPM ಮಂಗಳೂರು ಚಾಪ್ಟರ್‌ನಿಂದ “ಕ್ರಿಕೆಟ್ ಎಕ್ಸ್‌ಪ್ಲೋಷನ್” ಟೂರ್ನಿ ಮಂಗಳೂರು: ಮಾನವ ಸಂಪನ್ಮೂಲ ಕ್ಷೇತ್ರದ ಪ್ರಮುಖ ಸಂಘಟನೆಯಾದ ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಪರ್ಸನಲ್ ಮ್ಯಾನೇಜ್‌ಮೆಂಟ್ (NIPM)...

Must read

- Advertisement -spot_imgspot_img

You might also likeRELATED
Recommended to you