ಭರವಸೆಯ ಬೆಳಕುಪಡುಬಿದ್ರಿ-ಶಶಿಕಲಾ ಆಚಾರ್ಯ ಕುಟುಂಬಕ್ಕೆ ಆರ್ಥಿಕ ನೆರವು ನೀಡಿ ಆದರ್ಶ ಮೆರೆದ ಶ್ರೀವಿಕಾ...

ಪಡುಬಿದ್ರಿ-ಶಶಿಕಲಾ ಆಚಾರ್ಯ ಕುಟುಂಬಕ್ಕೆ ಆರ್ಥಿಕ ನೆರವು ನೀಡಿ ಆದರ್ಶ ಮೆರೆದ ಶ್ರೀವಿಕಾ ಕ್ರಿಕೆಟರ್ಸ್

-

- Advertisment -spot_img
ಶ್ರೀವಿಕಾ ಕ್ರಿಕೆಟ್ ಕ್ಲಬ್ ಪಾದೆಬೆಟ್ಟು “ಶ್ರೀವಿಕಾ ಕಪ್-2022” ಆಯೋಜಿಸಿ ಪಂದ್ಯಾಟದ ಸಮಾರೋಪ ಸಮಾರಂಭದಲ್ಲಿ,ರೇಷನ್ ಕಿಟ್ ಸಹಿತ,ಸಂಗ್ರಹವಾದ ಅಷ್ಟೂ ಮೊತ್ತವನ್ನು ಪಾದೆಬೆಟ್ಟು ಶಶಿಕಲಾ ಆಚಾರ್ಯ ರವರ ಕುಟುಂಬ ನಿರ್ವಹಣೆಗೆ ನೀಡಿ ಮಾನವೀಯತೆ ಮೆರೆದಿದೆ.
ಏಪ್ರಿಲ್ ದಿನಾಂಕ 9 ಮತ್ತು 10 ರಂದು ಪಡುಬಿದ್ರಿ ಬೋರ್ಡ್ ಶಾಲಾ ಮೈದಾನದಲ್ಲಿ ಈ ಪಂದ್ಯಾವಳಿ ನಡೆದಿದ್ದು ಧನಲಕ್ಷ್ಮೀ ಚಿತ್ರಾಪುರ ಪ್ರಥಮ ಬಹುಮಾನ ಮತ್ತು ಶ್ರೀವಿಕಾ ಪಾದೆಬೆಟ್ಟು ತಂಡ ದ್ವಿತೀಯ ಬಹುಮಾನ ಪಡೆದರು. ಟೂರ್ನಮೆಂಟ್ ನ ಬೆಸ್ಟ್ ಬ್ಯಾಟ್ಸ್‌ಮನ್‌ ಸುದೇಶ್ ಶ್ರೀವಿಕಾ,ಬೆಸ್ಟ್ ಬೌಲರ್ ವರುಣ್ ಶ್ರೀವಿಕಾ,
ಮತ್ತು ಫೈನಲ್ ಪಂದ್ಯಶ್ರೇಷ್ಟ ಮತ್ತು ಸರಣಿ ಶ್ರೇಷ್ಠ ಪ್ರಶಸ್ತಿ ವಿತೇಶ್ ಪಡೆದುಕೊಂಡರು.
ಶನಿವಾರ ಬೆಳಿಗ್ಗೆ ನಡೆದ ಉದ್ಘಾಟನಾ ಸಮಾರಂಭದಲ್ಲಿ ಉಡುಪಿ ಜಿಲ್ಲೆ ಟೆನಿಸ್ಬಾಲ್ ಕ್ರಿಕೆಟ್ ಅಸೋಸಿಯೇಷನ್ ಗೌರವಾಧ್ಯಕ್ಷರಾದ ಶರತ್ ಶೆಟ್ಟಿ ಪಡುಬಿದ್ರಿ ಮಾತನಾಡಿ “ಪಂದ್ಯಾಟ ಸಂಘಟನೆಯೊಂದಿಗೆ ಬಡಕುಟುಂಬದ ಸಹಾಯಕ್ಕೆ ಮುಂದಾಗಿರುವುದು ಸಮಾಜಕ್ಕೆ ಮಾದರಿ” ಎಂದರು.
ಸಮಾರೋಪ ಸಮಾರಂಭದ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಉಚ್ಚಿಲ ಕಾಳಿಕಾಂಬಾ ದೇವಸ್ಥಾನದ 2 ನೇ ಮೊಕ್ತೇಸರರಾದ ಗಣೇಶ್ ಆಚಾರ್ಯ ಉಚ್ಚಿಲ “ಕ್ರೀಡಾ ಕೂಟ ಸಂಘಟಿಸಿ,ವಿಶ್ವಕರ್ಮ ಸಮಾಜದ ಬಡಕುಟುಂಬದ ನೆರವಿಗೆ ನಿಂತ ಶ್ರೀವಿಕಾ ಪಾದೆಬೆಟ್ಟು ತಂಡದ ಸಾಧನೆ ಶ್ಲಾಘನೀಯ ಎಂದರು‌.
ಈ ಸಂದರ್ಭ ಮುಖ್ಯ ಅತಿಥಿಗಳಾಗಿ ಕೋಟ ರಾಮಕೃಷ್ಣ ಆಚಾರ್ ಸ್ಪೋರ್ಟ್ಸ್ ಕನ್ನಡ, ಶ್ರೀಕಾಂತ್ ಆಚಾರ್ಯ ವಿಶ್ವಭಾರತಿ ಕಾಪು,ವಿಶ್ವಬ್ರಾಹ್ಮಣ ಸಮಾಜ ಸೇವಾ ಸಂಘದ ಉಪಾಧ್ಯಕ್ಷರಾದ ವ್ಯಾಸರಾಯ ಆಚಾರ್ಯ,ಪಾದೆಬೆಟ್ಟು ವಿಶ್ವಬ್ರಾಹ್ಮಣ ಸಮಾಜ ಸೇವಾಸಂಘದ ಅಧ್ಯಕ್ಷ ಸುಬ್ರಾಯ ಆಚಾರ್ಯ,ಗ್ರಾಮ ಪಂಚಾಯತ್ ಸದಸ್ಯರು ಸಂದೇಶ್ ಶೆಟ್ಟಿ,ಶ್ರೀಧರ ಆಚಾರ್ಯ ಪಾದೆಬೆಟ್ಟು,ಕಾಪು ವಿಶ್ವಬ್ರಾಹ್ಮಣ ಯುವ ಸಂಘಟನೆ ಉಪಾಧ್ಯಕ್ಷರಾದ ರತ್ನಾಕರ ಆಚಾರ್ಯ,ಪಡುಬಿದ್ರಿ ಗ್ರಾಮ ಪಂಚಾಯತ್ ಸದಸ್ಯೆ ಶೋಭಾ ಶೆಟ್ಟಿ,ಶರತ್ ಶರ್ಮಾ ಪಡುಬಿದ್ರಿ,ಅಶೋಕ್ ಆಚಾರ್ಯ ಬೆಂಗಳೂರು, ಶಿವರಾಮ ಆಚಾರ್ಯ ಕಿನ್ನಿಗೋಳಿ,ಹಿರಿಯ ಆಟಗಾರರಾದ ಭಾಸ್ಕರ್ ಆಚಾರ್ಯ ಗುಂಡಿಬೈಲು ಮತ್ತು ಶ್ರೀವಿಕಾ ತಂಡದ ಸರ್ವಸದಸ್ಯರು ಉಪಸ್ಥಿತರಿದ್ದರು…
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

LEAVE A REPLY

Please enter your comment!
Please enter your name here

three × two =

Latest news

ಫ್ರೆಂಡ್ಸ್ ಟ್ರೋಫಿ ಹೆಮ್ಮಾಡಿ ಕ್ರಿಕೆಟ್ ಟೂರ್ನಿ: ಮೇ 30 ಮತ್ತು 31ರಂದು ಆಯೋಜನೆ

ಫ್ರೆಂಡ್ಸ್ ಟ್ರೋಫಿ ಹೆಮ್ಮಾಡಿ ಕ್ರಿಕೆಟ್ ಟೂರ್ನಿ: ಮೇ 30 ಮತ್ತು 31ರಂದು ಆಯೋಜನೆ ಟ್ರೋಫಿ ಹೆಮ್ಮಾಡಿ ಕ್ರಿಕೆಟ್ ಟೂರ್ನಿ: ಮೇ 30 ಮತ್ತು 31ರಂದು ಆಯೋಜನೆ ಯುವ...

ಕಪ್ ರೆಡಿಯಾ..? ಗುಜರಾತ್ ಮಣಿಸಿ ಫೈನಲ್‌ಗೆ ಎಂಟ್ರಿ ಕೊಟ್ಟ ಬೆಂಗಳೂರು!

ಕಪ್ ರೆಡಿಯಾ..? ಗುಜರಾತ್ ಮಣಿಸಿ ಫೈನಲ್‌ಗೆ ಎಂಟ್ರಿ ಕೊಟ್ಟ ಬೆಂಗಳೂರು!   2026ರ ಐಪಿಎಲ್‌ನ ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ಗುಜರಾತ್ ಟೈಟನ್ಸ್ ತಂಡವನ್ನು 92 ರನ್‌ಗಳಿಂದ ಮಣಿಸಿದ ರಾಯಲ್...

20 ಲಕ್ಷದ ಆಟಗಾರ… ಇಂದು ಆರ್‌ಸಿಬಿಯ ಅಮೂಲ್ಯ ರತ್ನ!

20 ಲಕ್ಷದ ಆಟಗಾರ… ಇಂದು ಆರ್‌ಸಿಬಿಯ ಅಮೂಲ್ಯ ರತ್ನ! ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಇತಿಹಾಸದಲ್ಲಿ ಕೆಲವು ಆಟಗಾರರು ಕೇವಲ ಕ್ರಿಕೆಟಿಗರಾಗಿ ಮಾತ್ರ ಉಳಿಯುವುದಿಲ್ಲ; ಅವರು ಭಾವನೆಗಳಾಗುತ್ತಾರೆ....

RCBvsGT: ಫೈನಲ್‌ಗೆ ಯಾರು ಮುನ್ನಡೆಯುತ್ತಾರೆ… ಪ್ಲೇ-ಆಫ್ ಸುತ್ತನ್ನು ಗೆಲ್ಲುವ ಹೆಚ್ಚಿನ ಅವಕಾಶ ಯಾರಿಗೆ ಇದೆ?

  RCBvsGT: ಫೈನಲ್‌ಗೆ ಯಾರು ಮುನ್ನಡೆಯುತ್ತಾರೆ... ಪ್ಲೇ-ಆಫ್ ಸುತ್ತನ್ನು ಗೆಲ್ಲುವ ಹೆಚ್ಚಿನ ಅವಕಾಶ ಯಾರಿಗೆ ಇದೆ? ಈ ಋತುವಿನ ಐಪಿಎಲ್‌ನ ಮೊದಲ ಅರ್ಹತಾ ಸುತ್ತಿನಲ್ಲಿ ಬೆಂಗಳೂರು ಮತ್ತು ಗುಜರಾತ್...
- Advertisement -spot_imgspot_img

ಮಾಜಿ ಕರ್ನಾಟಕ ಕ್ರಿಕೆಟಿಗ ಎಸ್.ಎಲ್. ಅಕ್ಷಯ್ ಹೃದಯಾಘಾತದಿಂದ ನಿಧನ

ಮಾಜಿ ಕರ್ನಾಟಕ ಕ್ರಿಕೆಟಿಗ ಎಸ್.ಎಲ್. ಅಕ್ಷಯ್ ಹೃದಯಾಘಾತದಿಂದ ನಿಧನ ಕರ್ನಾಟಕದ ಮಾಜಿ ಕ್ರಿಕೆಟಿಗ ಹಾಗೂ ಪ್ರತಿಭಾವಂತ ವೇಗದ ಬೌಲರ್ ಎಸ್.ಎಲ್. ಅಕ್ಷಯ್ ಅವರು ಭಾನುವಾರ ಲೀಗ್ ಪಂದ್ಯವೊಂದರ...

ಜೆ ಕೆ ಪ್ರೆಸೆಂಟ್ಸ್ ಅರಸೀಕೆರೆ ಚಾಂಪಿಯನ್ಸ್ ಕಪ್ 2026 – ಕ್ರಿಕೆಟ್ ಟೂರ್ನಮೆಂಟ್

ಜೆ ಕೆ ಪ್ರೆಸೆಂಟ್ಸ್ ಅರಸೀಕೆರೆ ಚಾಂಪಿಯನ್ಸ್ ಕಪ್ 2026 – ಕ್ರಿಕೆಟ್ ಟೂರ್ನಮೆಂಟ್ ಅರಸೀಕೆರೆಯ ಕ್ರಿಕೆಟ್ ಅಭಿಮಾನಿಗಳಿಗೆ ಭರ್ಜರಿ ಕ್ರೀಡಾ ರಸದೌತಣ ನೀಡಲು “ಅರಸೀಕೆರೆ ಚಾಂಪಿಯನ್ಸ್...

Must read

- Advertisement -spot_imgspot_img

You might also likeRELATED
Recommended to you