#covid19ಟೆನ್ನಿಸ್ಬಾಲ್ ಕ್ರಿಕೆಟ್ ಅಂಗಣದಲ್ಲಿ ಮಿಂಚಿದ ಉಡುಪಿಯ ನಾಗಾರ್ಜುನ ಈಗ ಕೋವಿಡ್ ವೀರ

ಟೆನ್ನಿಸ್ಬಾಲ್ ಕ್ರಿಕೆಟ್ ಅಂಗಣದಲ್ಲಿ ಮಿಂಚಿದ ಉಡುಪಿಯ ನಾಗಾರ್ಜುನ ಈಗ ಕೋವಿಡ್ ವೀರ

-

- Advertisment -spot_img
ಉಡುಪಿ ನಗರಸಭೆಯಲ್ಲಿ 5 ವರೆ ವರ್ಷಗಳಿಂದ  ಸ್ಯಾನಿಟರಿ ಸೂಪರ್ವೈಸರ್ ಆಗಿ ಕೆಲಸ ಮಾಡುತ್ತಿರುವ ನಾಗಾರ್ಜುನ್.ಡಿ.ಪೂಜಾರಿಯವರು ದಿನೇಶ್. ಪೂಜಾರಿ ಹಾಗೂ ಜಯ. ಡಿ.  ಪೂಜಾರಿ. ರವರ ಪುತ್ರನಾಗಿದ್ದು. ಇವರು  ಕೋರೋನಾ ಕೋವಿಡ್- 19 ಈ ಭೀಕರ ವೈರಸ್ ಎಲ್ಲಾ ವರ್ಗದ ಜನರ ಮೇಲೆ ಪರಿಣಾಮ ಭೀರಿ ಜನಜೀವನವನ್ನೆ ಸತತ 6 ತಿಂಗಳಿಂದ ಅಸ್ತವ್ಯಸ್ತತೆ ಮಾಡಿದೆ.
ಕೋರೋನಾ ಸೋಂಕಿಗೆ ಉಡುಪಿ ಜಿಲ್ಲೆಯಲ್ಲಿ ಸುಮಾರು ನನಗೆ ತಿಳಿದಂತೆ 70+ ಸಾವನ್ನಪ್ಪಿದ್ದರೆ ಅದರಲ್ಲಿ 57 ಜನರ ಅಂತ್ಯಕ್ರಿಯೆ ಕ್ರಮಬದ್ಧವಾಗಿ ನಡೆಸಿ ಮನೆಯವರಿಗೆ ಬೂದಿ ಓಪ್ಪಿಸುವ ತನಕ ಕಾರ್ಯಮಾಡುತ್ತಿರುವ ಆತ್ಮಿಯಾ ಗೆಳೆಯ ನಾಗಾರ್ಜುನ್ ರವರ ಸಾಹಸ ಕಥೆ ಅಂದರೇ ತಪ್ಪಗಲಾರದು.
ಉಡುಪಿ ನಗರಸಭೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಇವರು ಸತತ ಮೂರು ತಿಂಗಳಿಂದ ಕೋರೋನಾ ಸೋಂಕಿತ ಮೃತದೇಹವನ್ನು ದಹನ ಮಾಡುವ ಕಾರ್ಯದಲ್ಲಿ ತನ್ನ ನಾಲ್ಕು ಜನ ಒಳಗೊಂಡ ತಂಡಕ್ಕೆ ಸಾರಥಿಯಂತೆ ಇದ್ದು ಅವರಿಗೂ ಧೈರ್ಯ ನೀಡುತ್ತ ಮಾನವೀಯತೆಯಿಂದ ನಿಸ್ವಾರ್ಥವಾಗಿ ಯಾವುದೇ ಅಪೇಕ್ಷೆ ಇಲ್ಲದೆ ಇಂತಹ ಕಾರ್ಯದಲ್ಲಿ ತೊಡಗಿರುವ ಗೆಳಯನಿಗೆ ಧನ್ಯವಾದಗಳು.
ಗಾಂಧಿ ಆಸ್ಪತ್ರೆ ಪಂಚಲಹರಿ ಫೌಂಡೇಷನ್ ಪಂಚಮಿ ಟ್ರಸ್ಟ್ ವತಿಯಿಂದ ಗೌರವ ಅರ್ಪಣೆ ಮಾಡುವ ಮೂಲಕ ನಾಗಾರ್ಜುನ ಕಾರ್ಯವನ್ನು ಶ್ಲಾಘಿಸಿದರು.
ಇಡೀ ವಿಶ್ವವನ್ನೇ ಆವರಿಸಿರುವ ಕೊರೊನಾ ಎಂಬ ಹೆಮ್ಮಾರಿಗೆ ತುತ್ತಾದವರು ಕೋಟ್ಯಾಂತರ ಜನ.. ಲಕ್ಷಾಂತರ ಮಂದಿ ಪ್ರಾಣ ಕಳೆದುಕೊಂಡರು.. ನಮ್ಮ ಉಡುಪಿ ಜಿಲ್ಲೆಯೂ ಇದಕ್ಕೆ ಹೊರತಾಗಿಲ್ಲ.. ಕೊರೋನಾ ಬಹಳ ಬೇಗನೆ ಒಬ್ಬರಿಂದ ಇನ್ನೊಬ್ಬರಿಗೆ ಹರಡುವ ಸೋಂಕು ಆಗಿರುವುದರಿಂದ ಸತ್ತವರ ಅಂತ್ಯಕ್ರಿಯೆ ಕೂಡಾ ಸರಕಾರವೇ ( ಸ್ವಯಂಸೇವಕರ ಸಹಾಯದಿಂದ) ನೆರವೇರಿಸುತ್ತದೆ.. ಉಡುಪಿ ಜಿಲ್ಲೆಯಲ್ಲಿ ಈ ಕಾಯಕದಲ್ಲಿ ನಿಸ್ವಾರ್ಥವಾಗಿ ತನ್ನನ್ನು ತೊಡಗಿಸಿಕೊಂಡವರು ಇದೇ ನಾಗಾರ್ಜುನ್ ಪೂಜಾರಿ..
ಕ್ರಿಕೆಟ್ ಲೋಕದ ಅತ್ಯದ್ಭುತ ಪ್ರತಿಭೆ ಕೂಡಾ ಹೌದು ನಾಗಾರ್ಜುನ್.
ತನ್ನ ಹದಿಮೂರನೆಯ ವಯಸ್ಸಿಗೇ ದೊಡ್ಡಣಗುಡ್ಡೆ ಫ್ರೆಂಡ್ಸ್ ತಂಡದ ಮೂಲಕವಾಗಿ ಟೆನಿಸ್ ಕ್ರಿಕೆಟ್ ಗೆ ಪರಿಚಯ ಕಂಡು ನಂತರ ಗುರುಶ್ರೀ ಗುಂಡಿಬೈಲು ಹಾಗೂ ವಿಷ್ಣುಮೂರ್ತಿ ದೊಡ್ಡಣಗುಡ್ಡೆ, ಸಾಟರ್ಡೇ ಪ್ಯಾಂಥರ್ಸ್ ಇಂದ್ರಾಳಿ ಹಾಗೂ  ಲೋಕಲ್ ಬಾಯ್ಸ್ ಉಡುಪಿ ತಂಡದ ಪರವಾಗಿ ಬಹಳಷ್ಟು ಪಂದ್ಯಾಟವನ್ನು ಗೆಲ್ಲಿಸಿಕೊಟ್ಟ ಕ್ರಿಕೆಟಿಗ..
ಜಿಲ್ಲೆ ಹಾಗೂ ರಾಜ್ಯಮಟ್ಟದ ಪಂದ್ಯಾವಳಿಗಳಲ್ಲಿ ಆಲ್-ರೌಂಡರ್ ಆಟಗಾರನಾಗಿ ಗುರುತಿಸಿಕೊಂಡರು..  ಟೆನಿಸ್ ಕ್ರಿಕೆಟ್‌ನ ಜನಪ್ರಿಯ ತಂಡಗಳಾದ ಉಡುಪಿಯ ಎ.ಕೆ. ಸ್ಪೋರ್ಟ್ಸ್, ಉಡುಪಿ ಫ್ರೆಂಡ್ಸ್, ಬಿಬಿಸಿ ಅಗ್ರಹಾರ, ಸೈಮಂಡ್ಸ್ ಕಡಿಯಾಳಿ, ರಿಯಲ್ ಫೈಟರ್ಸ್ ನಂತಹ ತಂಡಗಳನ್ನು ಪ್ರತಿನಿಧಿಸಿ ಅಪಾರ ಯಶಸ್ಸನ್ನು ಕೂಡಾ ತನ್ನದಾಗಿಸಿಕೊಂಡಿದ್ದಾರೆ..
ಕರಾವಳಿಯ ಭಾಗದಲ್ಲಿ ಜನಪ್ರಿಯತೆಯನ್ನು ಪಡೆದಿರುವ  40 ಗಜಗಳ ಮಾದರಿಯ ಪಂದ್ಯಾಕೂಟಗಳಲ್ಲಿ ಆ ಪಂದ್ಯಾಕೂಟಗಳ ಶ್ರೇಷ್ಠ ತಂಡಗಳೆನಿಸಿಕೊಂಡ ಜಾನ್ಸನ್ ಕುಂದಾಪುರ, ಚಾಲೆಂಜ್ ಕುಂದಾಪುರ , ಈಗಲ್ಸ್ ಕುಂಭಾಶಿಯ ಪರವಾಗಿ ಉತ್ತಮ ನಿರ್ವಹಣೆ ನೀಡಿದ್ದಾರೆ..
2011 ರಿಂದ ಈಚೆಗೆ ತನ್ನನ್ನು ಸಂಪೂರ್ಣವಾಗಿ ಕ್ರಿಕೆಟ್‌ನಲ್ಲಿ ತೊಡಗಿಸಿಕೊಂಡು ಇಲ್ಲಿಯವರೆಗೆ ತನ್ನ ಸಾಧನೆಗಾಗಿ 350 +ಕ್ಕೂ ಮಿಗಿಲಾಗಿ ಪಂದ್ಯಶ್ರೇಷ್ಠ ಪ್ರಶಸ್ತಿ, 170 ಕ್ಕೂ ಹೆಚ್ಚು ಉತ್ತಮ ದಾಂಡಿಗ ಹಾಗೂ ಉತ್ತಮ ಬೌಲರ್ ಪ್ರಶಸ್ತಿ ಮತ್ತು 45 ಬಾರಿ ಸರಣಿಶ್ರೇಷ್ಠ ಪ್ರಶಸ್ತಿ ಇವರ ಮುಡಿಗೇರಿದೆ..
ಉಡುಪಿಯ ಮಹಿಳಾ ಪ್ರಥಮ ದರ್ಜೆ ಕಾಲೇಜಿನ ತಂಡಕ್ಕೆ ಸತತ ಮೂರು ವರ್ಷಗಳ ಕಾಲ ಉಚಿತವಾಗಿ ಕ್ರಿಕೆಟ್ ತರಬೇತಿ ನೀಡಿ ಒಟ್ಟು ನಾಲ್ಕು ಬಾರಿ ಪ್ರಶಸ್ತಿ ಗೆಲ್ಲುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು..
ಕನಸಿನ ಟೂರ್ನಮೆಂಟ್:-
   ಬಹುತೇಕ ಎಲ್ಲಾ ಬಿಲ್ಲವ ಸಮಾಜ ಬಾಂಧವರು ತಮ್ಮ ಕ್ರೀಡಾಪ್ರತಿಭೆಯ ಪ್ರದರ್ಶನಕ್ಕಾಗಿ ಕಾಯುತ್ತಿದ್ದರು.. ಮೂಲ್ಕಿ ವಿಜಯ ಕಾಲೇಜಿನ ಮೈದಾನದಲ್ಲಿ ಸಾಗಿದ ಅಂತರಾಜ್ಯ ಮಟ್ಟದ ಬಿಲ್ಲವ ಸಮಾಜ ಬಾಂಧವರ ಎರಡು ಲಕ್ಷ ರೂಪಾಯಿಗಳ ಬಹುಮಾನ ಮೊತ್ತದ ಪ್ರತಿಷ್ಠಿತ ಪಂದ್ಯಾಕೂಟ..
ಆ ಪಂದ್ಯಾವಳಿಯಲ್ಲಿ ಫೈನಲ್ ಪಂದ್ಯದ ಪಂದ್ಯಶ್ರೇಷ್ಠ , ಉತ್ತಮ ಬೌಲರ್ ಹಾಗೂ ಸರಣಿಶ್ರೇಷ್ಠ ಪ್ರಶಸ್ತಿಗಳೆಲ್ಲವೂ ನಾಗಾರ್ಜುನ್ ಪಾಲಾಗಿದ್ದವು ಎನ್ನುವುದು ಅವರ ಸಮಾರೋಪಾದಿ ಯಶಸ್ಸಿನ ನಾಗಾಲೋಟಕ್ಕೆ ಸಾಕ್ಷಿ..
ಒಟ್ಟಾರೆಯಾಗಿ ಉಡುಪಿ ಜಿಲ್ಲೆಯಲ್ಲಿ ತನ್ನ ಉತ್ತಮ ರೀತಿಯ ದಾಂಡಿಗತನ ಹಾಗೂ ನಿಖರವಾಗಿ ಚೆಂಡನ್ನು ತಿರುಗಿಸಬಲ್ಲ ಚಾಣಾಕ್ಷ ಎಸೆತಗಾರನಾಗಿ ತನ್ನನ್ನು ಗುರುತಿಸಿಕೊಂಡು ತನ್ನದೇ ಆದ ಅಭಿಮಾನಿ ಬಳಗವನ್ನು ಹೊಂದಿಕೊಂಡಿದ್ದಾರೆ..
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

LEAVE A REPLY

Please enter your comment!
Please enter your name here

ten + 8 =

Latest news

ಸಿರ್ಸಿಯಲ್ಲಿ ‘ಶ್ರೀ ಮಾರಿಕಾಂಬಾ ಟ್ರೋಫಿ’ ಕ್ರಿಕೆಟ್ ಟೂರ್ನಮೆಂಟ್‌ಗೆ ಭರ್ಜರಿ ಸಿದ್ಧತೆ

ಸಿರ್ಸಿಯಲ್ಲಿ ‘ಶ್ರೀ ಮಾರಿಕಾಂಬಾ ಟ್ರೋಫಿ’ ಕ್ರಿಕೆಟ್ ಟೂರ್ನಮೆಂಟ್‌ಗೆ ಭರ್ಜರಿ ಸಿದ್ಧತೆ ಸಿರ್ಸಿಯ ಶ್ರೀ ಮಾರಿಕಾಂಬಾ ಜಿಲ್ಲಾ ಕ್ರೀಡಾಂಗಣದಲ್ಲಿ Shri Marikamba Trophy ಓಪನ್ ಹಾರ್ಡ್ ಟೆನಿಸ್ ಕ್ರಿಕೆಟ್...

ಹೆಜಮಾಡಿಯಲ್ಲಿ ಸಂಭ್ರಮದೊಂದಿಗೆ ಯಶಸ್ವಿಯಾಗಿ ನಡೆದ “ಅಭರಣ್ GPL ಉತ್ಸವ 2026” – ಸಿಡಿಲಿನ ಸಮರದಲ್ಲಿ Temple Square Puttur ಗೆ ಚಾಂಪಿಯನ್ ಪಟ್ಟ!

ಹೆಜಮಾಡಿಯಲ್ಲಿ ಸಂಭ್ರಮದೊಂದಿಗೆ ಯಶಸ್ವಿಯಾಗಿ ನಡೆದ “ಅಭರಣ್ GPL ಉತ್ಸವ 2026” – ಸಿಡಿಲಿನ ಸಮರದಲ್ಲಿ Temple Square Puttur ಗೆ ಚಾಂಪಿಯನ್ ಪಟ್ಟ! ಹೆಜಮಾಡಿ ಸಮೀಪದ ಶಾನುಭಾಗ...

ಕಟಪಾಡಿಯಲ್ಲಿ ಕ್ರಿಕೆಟ್ ಪ್ರೇರಿತ ಮಿಯಾವಾಕಿ ಅರಣ್ಯ ಯೋಜನೆ ಉದ್ಘಾಟನೆ

ಕಟಪಾಡಿಯಲ್ಲಿ ಕ್ರಿಕೆಟ್ ಪ್ರೇರಿತ ಮಿಯಾವಾಕಿ ಅರಣ್ಯ ಯೋಜನೆ ಉದ್ಘಾಟನೆ ಉಡುಪಿ, ಏಪ್ರಿಲ್ 5, 2026: ಪರಿಸರ ಸಂರಕ್ಷಣೆಗೆ ಹೊಸ ದಿಕ್ಕು ತೋರಿಸುವ ವಿಶಿಷ್ಟ ಪ್ರಯತ್ನವಾಗಿ, ಕ್ರಿಕೆಟ್ ದಂತಕಥೆ...

ಅಮ್ಗೆಲೆ ಅಭರಣ್ GPL ಉತ್ಸವ – 2026: ತಂಡಗಳ ಫಿಕ್ಸ್ಚರ್ಸ್ ಬಿಡುಗಡೆ, ಕಾದಿದ್ದ ಕ್ಷಣಕ್ಕೆ ತೆರೆ

ಅಮ್ಗೆಲೆ ಅಭರಣ್ GPL– 2026: ತಂಡಗಳ ಫಿಕ್ಸ್ಚರ್ಸ್ ಬಿಡುಗಡೆ, ಕಾದಿದ್ದ ಕ್ಷಣಕ್ಕೆ ತೆರೆ ಜಿಎಸ್‌ಬಿ ಕ್ರೀಡಾಭಿಮಾನಿಗಳು ಆತುರದಿಂದ ಕಾಯುತ್ತಿದ್ದ ಕ್ಷಣ ಕೊನೆಗೂ ಬಂದಿದೆ. *ಅಮ್ಗೆಲೆ ಅಭರಣ್ GPL...
- Advertisement -spot_imgspot_img

ಮುಂಬೈಯಲ್ಲಿ ಮಾಜಿ ರಣಜಿ ಕ್ರಿಕೆಟಿಗ ಪ್ರಕಾಶ್ ಕರ್ಕೇರಾ ನಿಧನ

ಮುಂಬೈಯಲ್ಲಿ ಮಾಜಿ ರಣಜಿ ಕ್ರಿಕೆಟಿಗ ಪ್ರಕಾಶ್ ಕರ್ಕೇರಾ ನಿಧನ ರೈಲ್ವೇಸ್ ಪರವಾಗಿ ರಣಜಿ ಟ್ರೋಫಿಯಲ್ಲಿ ಪ್ರತಿನಿಧಿಸಿದ್ದ ಮಾಜಿ ಕ್ರಿಕೆಟಿಗ ಪ್ರಕಾಶ್ ಕರ್ಕೇರಾ ಅವರು ಹೃದಯಾಘಾತದಿಂದ ಮುಂಬೈನ ಮುಲುಂಡ್‌ನಲ್ಲಿರುವ...

ಅಳಿಯೂರು ಪ್ರೀಮಿಯರ್ ಲೀಗ್ (APL-2026) ಗೆ ಸಜ್ಜಾಗಿದೆ ಅಳಿಯೂರು

ಅಳಿಯೂರು ಪ್ರೀಮಿಯರ್ ಲೀಗ್ (APL-2026) ಗೆ ಸಜ್ಜಾಗಿದೆ ಅಳಿಯೂರು ಫ್ರೆಂಡ್ಸ್ ಅಳಿಯೂರು ವತಿಯಿಂದ ಮೊದಲ ಬಾರಿಗೆ ಅಳಿಯೂರು ಪ್ರೀಮಿಯರ್ ಲೀಗ್ (APL-2026) – ಸೀಸನ್ 1 ಆಯೋಜಿಸಲಾಗಿದೆ....

Must read

- Advertisement -spot_imgspot_img

You might also likeRELATED
Recommended to you