ಕ್ರಿಕೆಟ್ಅಭಿ ಹೊಡೆತಕ್ಕೆ ಶೇಕ್ ಆದ ಇಂಗ್ಲೆಂಡ್; ಸೂರ್ಯ ಬಾಯ್ಸ್ ಗೆ ಸುಲಭ...

ಅಭಿ ಹೊಡೆತಕ್ಕೆ ಶೇಕ್ ಆದ ಇಂಗ್ಲೆಂಡ್; ಸೂರ್ಯ ಬಾಯ್ಸ್ ಗೆ ಸುಲಭ ಜಯ

-

- Advertisment -spot_img

ಅಭಿ ಹೊಡೆತಕ್ಕೆ ಶೇಕ್ ಆದ ಇಂಗ್ಲೆಂಡ್; ಸೂರ್ಯ ಬಾಯ್ಸ್ ಗೆ ಸುಲಭ ಜಯ

ತವರು ನೆಲದಲ್ಲಿ ಇಂಗ್ಲೆಂಡ್ ವಿರುದ್ಧದ ಐದು ಟಿ20 ಸರಣಿಯಲ್ಲಿ ಟೀಂ ಇಂಡಿಯಾ ಶುಭಾರಂಭ ಮಾಡಿದೆ. ಕೋಲ್ಕತ್ತಾದಲ್ಲಿ ಬುಧವಾರ ನಡೆದ ಮೊದಲ ಟಿ20 ಪಂದ್ಯದಲ್ಲಿ ಟೀಂ ಇಂಡಿಯಾ 7 ವಿಕೆಟ್‌ಗಳಿಂದ ಇಂಗ್ಲೆಂಡ್ ತಂಡವನ್ನು ಸೋಲಿಸಿತು. ಅಭಿಷೇಕ್ ಶರ್ಮಾ (34 ಎಸೆತಗಳಲ್ಲಿ 5 ಬೌಂಡರಿ ಹಾಗೂ 8 ಸಿಕ್ಸರ್ ನೆರವಿನಿಂದ 79 ರನ್) ಭಾರತದ ಗೆಲುವಿಗೆ ಕಾರಣರಾದರು. ಈ ಗೆಲುವಿನೊಂದಿಗೆ ಟೀಂ ಇಂಡಿಯಾ 5 ಟಿ20 ಸರಣಿಯಲ್ಲಿ 1-0 ಮುನ್ನಡೆ ಸಾಧಿಸಿದೆ.

ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಇಂಗ್ಲೆಂಡ್ ನಿಗದಿತ 20 ಓವರ್‌ಗಳಲ್ಲಿ 132 ರನ್‌ಗಳಿಗೆ ಆಲೌಟಾಯಿತು. ನಾಯಕ ಜೋಸ್ ಬಟ್ಲರ್ (44 ಎಸೆತಗಳಲ್ಲಿ 8 ಬೌಂಡರಿ, 2 ಸಿಕ್ಸರ್ ಸಹಿತ 68) ಏಕಾಂಗಿ ಹೋರಾಟ… ಉಳಿದ ಬ್ಯಾಟ್ಸ್ ಮನ್ ಗಳು ದಯನೀಯವಾಗಿ ವಿಫಲರಾದರು.

ಬಳಿಕ ಅಭಿಷೇಕ್ ಶರ್ಮಾ ಅವರ ವಿಧ್ವಂಸಕ ಬ್ಯಾಟಿಂಗ್‌ನಿಂದ ಭಾರತ 12.5 ಓವರ್‌ಗಳಲ್ಲಿ 3 ವಿಕೆಟ್ ಕಳೆದುಕೊಂಡು 133 ರನ್ ಗಳಿಸಿತು. ಅಭಿಷೇಕ್ ಶರ್ಮಾ ಜತೆಗೆ ಸಂಜು ಸ್ಯಾಮ್ಸನ್ (20 ಎಸೆತಗಳಲ್ಲಿ 4 ಬೌಂಡರಿ ಸಹಿತ 26) ಮತ್ತು ತಿಲಕ್ ವರ್ಮಾ (16 ಎಸೆತಗಳಲ್ಲಿ 3 ಬೌಂಡರಿ ಸಹಿತ ಔಟಾಗದೆ 19) ಮಿಂಚಿದರು. ಉಭಯ ತಂಡಗಳ ನಡುವಿನ ಎರಡನೇ ಟಿ20 ಶನಿವಾರ ಚೆನ್ನೈನಲ್ಲಿ ನಡೆಯಲಿದೆ.

ಟೀಂ ಇಂಡಿಯಾಕ್ಕೆ ಆರಂಭಿಕರಾದ ಸಂಜು ಸ್ಯಾಮ್ಸನ್ ಹಾಗೂ ಅಭಿಷೇಕ್ ಶರ್ಮಾ ಭರ್ಜರಿ ಆರಂಭ ನೀಡಿದರು. ಆಕ್ರಮಣಕಾರಿ ಆಟವಾಡಿದ ಈ ಜೋಡಿ ಮೊದಲ ವಿಕೆಟ್‌ಗೆ 41 ರನ್ ಸೇರಿಸಿತು.

ಬೃಹತ್ ಸಿಕ್ಸರ್ ಗಳ ಮೂಲಕ ಇಂಗ್ಲೆಂಡ್ ಬೌಲರ್ ಗಳನ್ನು ಬೆಂಡೆತ್ತಿದ್ದರು. ಪವರ್ ಪ್ಲೇನಲ್ಲಿ ಟೀಂ ಇಂಡಿಯಾ 2 ವಿಕೆಟ್ ನಷ್ಟಕ್ಕೆ 63 ರನ್ ಗಳಿಸಿ ನಂತರ ಅದೇ ವೇಗವನ್ನು ಮುಂದುವರಿಸಿತು. ಅದರಲ್ಲೂ ಅಭಿಷೇಕ್ ಶರ್ಮಾ ಭರ್ಜರಿ ಸಿಕ್ಸರ್ ಸಿಡಿಸಿದ್ದರು. 20 ಎಸೆತಗಳಲ್ಲಿ ಅರ್ಧಶತಕ ಪೂರೈಸಿದ ಅಭಿಷೇಕ್ ಶರ್ಮಾ ನಂತರ ಹೆಚ್ಚು ಆಕ್ರಮಣಕಾರಿ ಆಟವಾಡಿ ಬೃಹತ್ ಸಿಕ್ಸರ್ ಬಾರಿಸಿದರು. ಆದಿಲ್ ರಶೀದ್ ಎಸೆತದಲ್ಲಿ ಅಭಿಷೇಕ್ ಶರ್ಮಾ ಕ್ಯಾಚಿತ್ತು ಔಟಾದರೂ, ಕ್ರೀಸ್ ಗೆ ಬಂದ ಹಾರ್ದಿಕ್ ಪಾಂಡ್ಯ (ಔಟಾಗದೆ 3) ಜತೆಗೂಡಿ ತಿಲಕ್ ವರ್ಮಾ ಗೆಲುವನ್ನು ಪೂರ್ಣಗೊಳಿಸಿದರು.

LEAVE A REPLY

Please enter your comment!
Please enter your name here

4 × 4 =

Latest news

ಗೊರವನಹಳ್ಳಿ ಪ್ರೀಮಿಯರ್ ಲೀಗ್ (GPL) – ಡಾ|| ಎಚ್ಎಸ್ ಪ್ರಸನ್ನ ಕುಮಾರ್ ಸ್ವಾಮೀಜಿ ಕಪ್ ಕ್ರಿಕೆಟ್

ಗೊರವನಹಳ್ಳಿ ಪ್ರೀಮಿಯರ್ ಲೀಗ್ (GPL) – ಡಾ|| ಎಚ್ಎಸ್ ಪ್ರಸನ್ನ ಕುಮಾರ್ ಸ್ವಾಮೀಜಿ ಕಪ್ ಕ್ರಿಕೆಟ್ ಗೊರವನಹಳ್ಳಿ ಪ್ರೀಮಿಯರ್ ಲೀಗ್ (GPL) –  ಡಾ|| ಎಚ್ಎಸ್...

ಜಿಎಸ್‌ಬಿ ಕ್ರಿಕೆಟ್ ಲೋಕದ ಮಹಾಸಂಗ್ರಾಮಕ್ಕೆ ದಿನಾಂಕ ನಿಗದಿ: ಡಿಸೆಂಬರ್ 5 ಮತ್ತು 6ರಂದು ನಡೆಯಲಿದೆ BPPL ಸೀಸನ್-3

ಜಿಎಸ್‌ಬಿ ಕ್ರಿಕೆಟ್ ಲೋಕದ ಮಹಾಸಂಗ್ರಾಮಕ್ಕೆ ದಿನಾಂಕ ನಿಗದಿ: ಡಿಸೆಂಬರ್ 5 ಮತ್ತು 6ರಂದು ನಡೆಯಲಿದೆ BPPL ಸೀಸನ್-3 ಕರ್ನಾಟಕದ ಜಿಎಸ್‌ಬಿ ಕ್ರಿಕೆಟ್ ವಲಯದಲ್ಲಿ ಅತ್ಯಂತ ನಿರೀಕ್ಷಿತ...

ಕ್ರೀಡಾಭಿಮಾನಿಗಳು, ಆಟಗಾರರು ಹಾಗೂ ಆಯೋಜಕರಿಗೆ ಮತ್ತು ಅಭಿಮಾನಿಗಳಿಗೆ ಸ್ಪೋರ್ಟ್ಸ್ ಕನ್ನಡದ ಹೃತ್ಪೂರ್ವಕ ಕೃತಜ್ಞತೆ

ಕ್ರೀಡಾಭಿಮಾನಿಗಳು, ಆಟಗಾರರು ಹಾಗೂ ಆಯೋಜಕರಿಗೆ ಮತ್ತು ಅಭಿಮಾನಿಗಳಿಗೆ ಸ್ಪೋರ್ಟ್ಸ್ ಕನ್ನಡದ ಹೃತ್ಪೂರ್ವಕ ಕೃತಜ್ಞತೆ ಕರಾವಳಿ ಭಾಗದ ಗ್ರಾಮೀಣ ಕ್ರಿಕೆಟ್‌ಗೆ ಹೊಸ ಆಯಾಮ ನೀಡಿರುವ ಸ್ಪೋರ್ಟ್ಸ್ ಕನ್ನಡ, ಮತ್ತೊಂದು...

ಕಟ್ಟೆ ಫ್ರೆಂಡ್ಸ್ ಕಾಳಾವರ-ಬ್ಲೂ ಬರ್ಡ್ಸ್ ನಾಗಾರ್ಜುನ ಬುಕ್ಕಿಗುಡ್ಡೆ ತಂಡಗಳಿಗೆ ಉಚಿತ ಪ್ರವೇಶ ಘೋಷಣೆ…!!!

ಕಟ್ಟೆ ಫ್ರೆಂಡ್ಸ್ ಕಾಳಾವರ-ಬ್ಲೂ ಬರ್ಡ್ಸ್ ನಾಗಾರ್ಜುನ ಬುಕ್ಕಿಗುಡ್ಡೆ ತಂಡಗಳಿಗೆ ಉಚಿತ ಪ್ರವೇಶ ಘೋಷಣೆ...!!! ನೊಂದ ಜೀವಗಳಿಗೆ ಆಸರೆಯಾದ ಕಟ್ಟೆ ಫ್ರೆಂಡ್ಸ್ ಕಾಳಾವರ ಮತ್ತು ಬ್ಲೂ ಬರ್ಡ್ಸ್ ನಾಗಾರ್ಜುನ...
- Advertisement -spot_imgspot_img

ಮಾನವೀಯತೆಯ ಮೆರಗು: ಬಹುಮಾನ ಮೊತ್ತವನ್ನೆಲ್ಲಾ ಗಾಯಾಳು ಕ್ರಿಕೆಟಿಗನ ಚಿಕಿತ್ಸೆಗೆ ನೀಡಿದ ಕಟ್ಟೆ ಫ್ರೆಂಡ್ಸ್ ಕಾಳಾವರ ತಂಡ

  ಮಾನವೀಯತೆಯ ಮೆರಗು: ಬಹುಮಾನ ಮೊತ್ತವನ್ನೆಲ್ಲಾ ಗಾಯಾಳು ಕ್ರಿಕೆಟಿಗನ ಚಿಕಿತ್ಸೆಗೆ ನೀಡಿದ ಕಟ್ಟೆ ಫ್ರೆಂಡ್ಸ್ ಕಾಳಾವರ ತಂಡ ಉಡುಪಿ: ಕ್ರೀಡಾ ಕ್ಷೇತ್ರದಲ್ಲಿ ಕ್ರಿಕೆಟ್ ಆಟಗಾರನ ಸಂಕಷ್ಟಕ್ಕೆ ಸ್ಪಂದಿಸಿ ಮಾನವೀಯತೆಯ...

ವಿದ್ಯಾಬೆಳಕು ಕಾರ್ಯಕ್ರಮ; ಜೂನ್ 7ರಂದು ಪಿತ್ರೋಡಿಯಲ್ಲಿ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ವಿತರಣೆ

ವಿದ್ಯಾಬೆಳಕು ಕಾರ್ಯಕ್ರಮ; ಜೂನ್ 7ರಂದು ಪಿತ್ರೋಡಿಯಲ್ಲಿ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ವಿತರಣೆ ಉಡುಪಿ: ಶಿಕ್ಷಣ ಕ್ಷೇತ್ರದಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸುವ ಉದ್ದೇಶದಿಂದ ವೆಂಕಟರಮಣ ಸ್ಪೋರ್ಟ್ಸ್ ಅಂಡ್ ಕಲ್ಚರಲ್...

Must read

- Advertisement -spot_imgspot_img

You might also likeRELATED
Recommended to you