ಕ್ರಿಕೆಟ್ಭಾರತ ಟೆಸ್ಟ್ ತಂಡಕ್ಕೆ ಉಡುಪಿ ಹುಡುಗನ ಎಂಟ್ರಿ.. ಈತ ಅಶ್ವಿನ್ ಉತ್ತರಾಧಿಕಾರಿ

ಭಾರತ ಟೆಸ್ಟ್ ತಂಡಕ್ಕೆ ಉಡುಪಿ ಹುಡುಗನ ಎಂಟ್ರಿ.. ಈತ ಅಶ್ವಿನ್ ಉತ್ತರಾಧಿಕಾರಿ

-

- Advertisment -spot_img

ಭಾರತ ಟೆಸ್ಟ್ ತಂಡಕ್ಕೆ ಉಡುಪಿ ಹುಡುಗನ ಎಂಟ್ರಿ..
ಈತ ಅಶ್ವಿನ್ ಉತ್ತರಾಧಿಕಾರಿ

ಇದು ಉಡುಪಿ ಜಿಲ್ಲೆಯ ಕ್ರಿಕೆಟ್ ಪ್ರಿಯರಿಗೆ ಸಿಹಿ ಸುದ್ದಿ. ಉಡುಪಿಯ ಪಾಂಗಾಳ ಮೂಲದ ಕ್ರಿಕೆಟಿಗ ತನುಷ್ ಕೋಟ್ಯಾನ್ ಭಾರತ ಟೆಸ್ಟ್ ತಂಡಕ್ಕೆ ಆಯ್ಕೆಯಾಗಿದ್ದಾರೆ. ಸ್ಪಿನ್ ಮಾಂತ್ರಿಕ ರವಿಚಂದ್ರನ್ ಅಶ್ವಿನ್ ಅಂತರಾಷ್ಟ್ರೀಯ ಕ್ರಿಕೆಟ್’ಗೆ ನಿವೃತ್ತಿ ಘೋಷಿಸಿರುವ ಕಾರಣ, ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯಲ್ಲಿ ಅಶ್ವಿನ್ ಅವರ ಸ್ಥಾನಕ್ಕೆ ತನುಷ್ ಕೋಟ್ಯಾನ್ ಆಯ್ಕೆಯಾಗಿದ್ದಾರೆ.

ರಣಜಿ ಚಾಂಪಿಯನ್ ಮುಂಬೈ ತಂಡ, 15ನೇ ಬಾರಿ ಇರಾನಿ ಕಪ್ ಟ್ರೋಫಿ ಗೆಲ್ಲುವಲ್ಲಿ ತನುಷ್ ಪಾತ್ರ ಮಹತ್ವದ್ದಾಗಿತ್ತು. ಲಕ್ನೋದ ಅಟಲ್ ಬಿಹಾರಿ ವಾಜಪೇಯಿ – ಏಕನಾ ಮೈದಾನದಲ್ಲಿ ನಡೆದಿದ್ದ ಪಂದ್ಯದಲ್ಲಿ ರೆಸ್ಟ್ ಆಫ್ ಇಂಡಿಯಾ ವಿರುದ್ಧ ತನುಷ್ ಕೋಟ್ಯಾನ್ ಅಮೋಘ ಶತಕ ಬಾರಿಸಿದ್ದರು.

25 ವರ್ಷದ ತನುಷ್ ಕೋಟ್ಯಾನ್ ಪ್ರತಿಭಾವಂತ ಆಲ್ರೌಂಡರ್. ಆಫ್ ಸ್ಪಿನ್ನರ್ ಆಗಿರುವ ತನುಷ್ ಉತ್ತಮ ಬ್ಯಾಟ್ಸ್’ಮನ್ ಕೂಡ ಹೌದು.
2018ರಲ್ಲಿ ಮುಂಬೈ ಪರ ಪ್ರಥಮದರ್ಜೆ ಕ್ರಿಕೆಟ್’ಗೆ ಪಾದಾರ್ಪಣೆ ಮಾಡಿದ್ದ ತನುಷ್ ಕೋಟ್ಯಾನ್ ಇಲ್ಲಿವರೆಗೆ ಒಟ್ಟು 30 ಪ್ರಥಮದರ್ಜೆ ಪಂದ್ಯಗಳನ್ನಾಡಿದ್ದಾರೆ. 30 ಪಂದ್ಯಗಳಿಂದ 88 ವಿಕೆಟ್’ಗಳನ್ನು ಪಡೆದಿರುವ ತನುಷ್ 2 ಶತಕಗಳು ಹಾಗೂ 13 ಅರ್ಧಶತಕಗಳ ಸಹಿತ 45.34ರ ಸರಾಸರಿಯಲ್ಲಿ 1451 ರನ್ ಗಳಿಸಿದ್ದಾರೆ. 19 ಲಿಸ್ಟ್ ಎ ಪಂದ್ಯಗಳನ್ನಾಡಿರುವ ತನುಷ್ ಕೋಟ್ಯಾನ್ 20 ವಿಕೆಟ್ ಹಾಗೂ 90 ರನ್ ಗಳಿಸಿದ್ದಾರೆ. ಐಪಿಎಲ್ ಸಹಿತ ಆಡಿರುವ 24 ಟಿ20 ಪಂದ್ಯಗಳಿಂದ 24 ವಿಕೆಟ್ ಪಡೆದಿರುವ ತನುಷ್ ಕೋಟ್ಯಾನ್ 86 ರನ್ ಗಳಿಸಿದ್ದಾರೆ.

ತನುಷ್ ಕೋಟ್ಯಾನ್ ಹುಟ್ಟಿದ್ದು ದೇಶದ ವಾಣಿಜ್ಯ ನಗರಿ ಮುಂಬೈನಲ್ಲಿ. ಅವರ ತಂದೆ ಕರುಣಾಕರ್ ಕೋಟ್ಯಾನ್ ಉಡುಪಿ ಜಿಲ್ಲೆಯ ಪಾಂಗಾಳಗವರು. ಕರಾವಳಿಯಿಂದ ಮುಂಬೈಗೆ ಹೋಗಿ ಅಲ್ಲೇ ನೆಲೆಸಿರುವ ಕರುಣಾಕರ್, ಪುತ್ರನನ್ನು ಕ್ರಿಕೆಟಿಗನನ್ನಾಗಿ ರೂಪಿಸುವಲ್ಲಿ ಯಶಸ್ವಿಯಾಗಿದ್ದಾರೆ.

LEAVE A REPLY

Please enter your comment!
Please enter your name here

14 + ten =

Latest news

ಸಿರ್ಸಿಯಲ್ಲಿ ‘ಶ್ರೀ ಮಾರಿಕಾಂಬಾ ಟ್ರೋಫಿ’ ಕ್ರಿಕೆಟ್ ಟೂರ್ನಮೆಂಟ್‌ಗೆ ಭರ್ಜರಿ ಸಿದ್ಧತೆ

ಸಿರ್ಸಿಯಲ್ಲಿ ‘ಶ್ರೀ ಮಾರಿಕಾಂಬಾ ಟ್ರೋಫಿ’ ಕ್ರಿಕೆಟ್ ಟೂರ್ನಮೆಂಟ್‌ಗೆ ಭರ್ಜರಿ ಸಿದ್ಧತೆ ಸಿರ್ಸಿಯ ಶ್ರೀ ಮಾರಿಕಾಂಬಾ ಜಿಲ್ಲಾ ಕ್ರೀಡಾಂಗಣದಲ್ಲಿ Shri Marikamba Trophy ಓಪನ್ ಹಾರ್ಡ್ ಟೆನಿಸ್ ಕ್ರಿಕೆಟ್...

ಹೆಜಮಾಡಿಯಲ್ಲಿ ಸಂಭ್ರಮದೊಂದಿಗೆ ಯಶಸ್ವಿಯಾಗಿ ನಡೆದ “ಅಭರಣ್ GPL ಉತ್ಸವ 2026” – ಸಿಡಿಲಿನ ಸಮರದಲ್ಲಿ Temple Square Puttur ಗೆ ಚಾಂಪಿಯನ್ ಪಟ್ಟ!

ಹೆಜಮಾಡಿಯಲ್ಲಿ ಸಂಭ್ರಮದೊಂದಿಗೆ ಯಶಸ್ವಿಯಾಗಿ ನಡೆದ “ಅಭರಣ್ GPL ಉತ್ಸವ 2026” – ಸಿಡಿಲಿನ ಸಮರದಲ್ಲಿ Temple Square Puttur ಗೆ ಚಾಂಪಿಯನ್ ಪಟ್ಟ! ಹೆಜಮಾಡಿ ಸಮೀಪದ ಶಾನುಭಾಗ...

ಕಟಪಾಡಿಯಲ್ಲಿ ಕ್ರಿಕೆಟ್ ಪ್ರೇರಿತ ಮಿಯಾವಾಕಿ ಅರಣ್ಯ ಯೋಜನೆ ಉದ್ಘಾಟನೆ

ಕಟಪಾಡಿಯಲ್ಲಿ ಕ್ರಿಕೆಟ್ ಪ್ರೇರಿತ ಮಿಯಾವಾಕಿ ಅರಣ್ಯ ಯೋಜನೆ ಉದ್ಘಾಟನೆ ಉಡುಪಿ, ಏಪ್ರಿಲ್ 5, 2026: ಪರಿಸರ ಸಂರಕ್ಷಣೆಗೆ ಹೊಸ ದಿಕ್ಕು ತೋರಿಸುವ ವಿಶಿಷ್ಟ ಪ್ರಯತ್ನವಾಗಿ, ಕ್ರಿಕೆಟ್ ದಂತಕಥೆ...

ಅಮ್ಗೆಲೆ ಅಭರಣ್ GPL ಉತ್ಸವ – 2026: ತಂಡಗಳ ಫಿಕ್ಸ್ಚರ್ಸ್ ಬಿಡುಗಡೆ, ಕಾದಿದ್ದ ಕ್ಷಣಕ್ಕೆ ತೆರೆ

ಅಮ್ಗೆಲೆ ಅಭರಣ್ GPL– 2026: ತಂಡಗಳ ಫಿಕ್ಸ್ಚರ್ಸ್ ಬಿಡುಗಡೆ, ಕಾದಿದ್ದ ಕ್ಷಣಕ್ಕೆ ತೆರೆ ಜಿಎಸ್‌ಬಿ ಕ್ರೀಡಾಭಿಮಾನಿಗಳು ಆತುರದಿಂದ ಕಾಯುತ್ತಿದ್ದ ಕ್ಷಣ ಕೊನೆಗೂ ಬಂದಿದೆ. *ಅಮ್ಗೆಲೆ ಅಭರಣ್ GPL...
- Advertisement -spot_imgspot_img

ಮುಂಬೈಯಲ್ಲಿ ಮಾಜಿ ರಣಜಿ ಕ್ರಿಕೆಟಿಗ ಪ್ರಕಾಶ್ ಕರ್ಕೇರಾ ನಿಧನ

ಮುಂಬೈಯಲ್ಲಿ ಮಾಜಿ ರಣಜಿ ಕ್ರಿಕೆಟಿಗ ಪ್ರಕಾಶ್ ಕರ್ಕೇರಾ ನಿಧನ ರೈಲ್ವೇಸ್ ಪರವಾಗಿ ರಣಜಿ ಟ್ರೋಫಿಯಲ್ಲಿ ಪ್ರತಿನಿಧಿಸಿದ್ದ ಮಾಜಿ ಕ್ರಿಕೆಟಿಗ ಪ್ರಕಾಶ್ ಕರ್ಕೇರಾ ಅವರು ಹೃದಯಾಘಾತದಿಂದ ಮುಂಬೈನ ಮುಲುಂಡ್‌ನಲ್ಲಿರುವ...

ಅಳಿಯೂರು ಪ್ರೀಮಿಯರ್ ಲೀಗ್ (APL-2026) ಗೆ ಸಜ್ಜಾಗಿದೆ ಅಳಿಯೂರು

ಅಳಿಯೂರು ಪ್ರೀಮಿಯರ್ ಲೀಗ್ (APL-2026) ಗೆ ಸಜ್ಜಾಗಿದೆ ಅಳಿಯೂರು ಫ್ರೆಂಡ್ಸ್ ಅಳಿಯೂರು ವತಿಯಿಂದ ಮೊದಲ ಬಾರಿಗೆ ಅಳಿಯೂರು ಪ್ರೀಮಿಯರ್ ಲೀಗ್ (APL-2026) – ಸೀಸನ್ 1 ಆಯೋಜಿಸಲಾಗಿದೆ....

Must read

- Advertisement -spot_imgspot_img

You might also likeRELATED
Recommended to you