18.4 C
London
Saturday, May 18, 2024
Homeಕ್ರಿಕೆಟ್ನವೆಂಬರ್ 16,17ರಂದು ಹೊನಲು ಬೆಳಕಿನ ಬೀಜಾಡಿ ಟ್ರೋಫಿ-2019

ನವೆಂಬರ್ 16,17ರಂದು ಹೊನಲು ಬೆಳಕಿನ ಬೀಜಾಡಿ ಟ್ರೋಫಿ-2019

Date:

Related stories

ನಿನ್ನ ಟೈಮ್ ಬಂದೇ ಬರುವುದು, ಹೀಗೇ ಆಡುತ್ತಿರು ಕರುಣ್..!

1996ರಲ್ಲಿ ಅರ್ಜುನ ರಣತುಂಗ ನಾಯಕತ್ವದ ಶ್ರೀಲಂಕಾ ತಂಡ ಏಕದಿನ ವಿಶ್ವಕಪ್ ಗೆದ್ದಾಗ...

ದುಡ್ಡಿನ ಮದದಲ್ಲಿ ಕೊಬ್ಬಿರುವ ಈ business tycoonಗಳಿಗೆ ದೇಶದ ಕ್ರಿಕೆಟ್ ಹೀರೊಗಳ ಮೇಲೆ ಗೌರವ ಇರಲು ಹೇಗೆ ಸಾಧ್ಯ..?

17 ವರ್ಷಗಳ ಐಪಿಎಲ್ ಚರಿತ್ರೆಯಲ್ಲಿ ಸಾವಿರಕ್ಕೂ ಹೆಚ್ಚು ಪಂದ್ಯಗಳು ನಡೆದಿವೆ. ಆ...

Reject ಪೀಸ್‌ಗಳು ವಾಪಸ್ ಎದ್ದು ಬಂದ ಕಥೆ..!

ಒಬ್ಬ by mistake ಪಂಜಾಬ್ ಕಿಂಗ್ಸ್ ತಂಡ ಸೇರಿದ್ದವ. ಇನ್ನೊಬ್ಬ ತನ್ನ...

ಇಂದು ವಿಶ್ವದ ಅತ್ಯಂತ ಪ್ರೀತಿಪಾತ್ರ ಕ್ರಿಕೆಟಿಗ ಧೋನಿಯ ಕೊನೆಯ ಪಂದ್ಯ..

ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯಲಿರುವ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಮುಂಬೈ...

T20 ವಿಶ್ವಕಪ್‌ನಲ್ಲಿ ಭಾರತದ ವಿಕೆಟ್‌ಕೀಪರ್ ಯಾರು? 5 ಆಟಗಾರರು ರೇಸ್ ನಲ್ಲಿ

ಐಪಿಎಲ್  ನಂತರ ಟಿ20 ವಿಶ್ವಕಪ್ ಆಡಬೇಕಿದೆ. ಈ ಮೆಗಾ  ಟೂರ್ನಿಯನ್ನು ಜೂನ್‌ನಲ್ಲಿ...
spot_imgspot_img

ಸಮಾಜದ ಅಶಕ್ತ ಕುಟುಂಬದ ನೆರವು ಹಾಗೂ ಗ್ರಾಮೀಣ ಮಟ್ಟದ ಪ್ರತಿಭೆಗಳನ್ನು ಮುಖ್ಯ ವೇದಿಕೆಗೆ ತರುವ ಸದುದ್ದೇಶದಿಂದ ಗೆಳೆಯರ ಬಳಗ ಬೀಜಾಡಿ ವಿನೂತನ ಪ್ರಯತ್ನಕ್ಕೆ ಕೈ ಹಾಕಿದೆ. ಇದೇ ಬರುವ ಶನಿವಾರ ಹಾಗೂ ರವಿವಾರದಂದು ಬೀಜಾಡಿ ಪಡುಶಾಲೆಯಲ್ಲಿ 40 ಗಜಗಳ ಹೊನಲು ಬೆಳಕಿನ ಪಂದ್ಯಾಕೂಟವನ್ನು ಏರ್ಪಡಿಸಲಾಗಿದೆ.

ಶನಿವಾರದಂದು ಸ್ಥಳೀಯ ಆಟಗಾರರನ್ನೊಳಗೊಂಡ 6 ಫ್ರಾಂಚೈಸಿಗಳು ಕಾದಾಡಲಿದ್ದು ಗ್ರಾಮೀಣ ಮಟ್ಟದ ಕ್ರಿಕೆಟ್ ಪಟುಗಳ ಪ್ರತಿಭೆ ಅನಾವರಣಗೊಳ್ಳಲಿದೆ. ರವಿವಾರದಂದು ಉಡುಪಿ, ಕುಂದಾಪುರ ಪರಿಸರದ 29 ತಂಡಗಳು ಪ್ರಶಸ್ತಿಗಾಗಿ ಸೆಣಸಾಡಲಿದೆ. ಪ್ರಥಮ ಪ್ರಶಸ್ತಿ ವಿಜೇತ ತಂಡ‌ 25,555 ನಗದು,ದ್ವಿತೀಯ ಸ್ಥಾನಿ ತಂಡ 15,555 ನಗದು ಸಹಿತ ಆಕರ್ಷಕ ಟ್ರೋಫಿಗಳನ್ನು ಪಡೆಯಲಿದ್ದಾರೆ.

ಮಂಗಳವಾರ ಸಂಜೆ ನಡೆದ ಸರಳ ಸಮಾರಂಭದಲ್ಲಿ ಅತ್ಯಾಕರ್ಷಕ “ಬೀಜಾಡಿ ಟ್ರೋಫಿ” ಅನಾವರಣ ಹಾಗೂ ಸಮವಸ್ತ್ರ ವಿತರಣೆ ನಡೆಯಿತು‌.

ಈ ಸಂದರ್ಭ ಬೀಜಾಡಿ ಶಾಲೆಯ S.D.M.C ಅಧ್ಯಕ್ಷ ಸುಭಾಷ್ ಕಾಂಚನ್, ಗೆಳೆಯರ ಬಳಗದ ಅಧ್ಯಕ್ಷ ಅಶೋಕ್ ಪೂಜಾರಿ, ಉಪಾಧ್ಯಕ್ಷ ಗಣೇಶ ಅಕ್ಷಾಂತರಿಯ, ಸ್ಪೋರ್ಟ್ಸ್ ಕನ್ನಡದ ಮುಖ್ಯಸ್ಥ ಕೋಟ ರಾಮಕೃಷ್ಣ ಆಚಾರ್ಯ, ಸಮವಸ್ತ್ರ ಪ್ರಾಯೋಜಕರಾದ ಸುಧಾಕರ್ ಪೂಜಾರಿ, ಸಿರಾಜ್ ರಿಧಾ ಅಮೀನ್, ಆನಂದ್ ಬಿಳಿಯ, ರಾಜೇಶ್ ಪೂಜಾರಿ‌ ಹಾಗೂ ಪಂದ್ಯಾಕೂಟದ ಮುಖ್ಯ ರೂವಾರಿ ಚಾಲೆಂಜ್ ಗಣೇಶ್ ಉಪಸ್ಥಿತರಿದ್ದರು.

ಆರ್.ಕೆ.ಆಚಾರ್ಯ ಕೋಟ

ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

Latest stories

LEAVE A REPLY

Please enter your comment!
Please enter your name here

five × four =