Categories
ಭರವಸೆಯ ಬೆಳಕು ಸ್ಪೋರ್ಟ್ಸ್

ಚೆಸ್ ವಿಶ್ವಕಪ್ ಫೈನಲ್‌ಗೆ ಲಗ್ಗೆ ಇಟ್ಟ ಪ್ರಗ್ನಾನಂದ್

ಭಾರತದ ಭರವಸೆಯ ಯುವ ಚೆಸ್ ಆಟಗಾರ ಆರ್.ಪ್ರಗ್ನಾನಂದ ಅವರು ಚೆಸ್ ವಿಶ್ವಕಪ್ ಫೈನಲ್‌ಗೆ ತಲುಪಿದ ಅತ್ಯಂತ ಕಿರಿಯ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.
ಮಾಸ್ಟರ್​ ಗೇಮ್​ ಚೆಸ್​ನಲ್ಲಿ ತಮಿಳುನಾಡಿನ 16 ರ ಹರೆಯದ ಹುಡುಗ ಜೂನಿಯರ್ ಗ್ರಾಂಡ್ ಮಾಸ್ಟರ್  ಆರ್​  ಪ್ರಗ್ನಾನಂದ್​ ವಿಶ್ವ ಚಾಂಪಿಯನ್​ ನಾರ್ವೆಯ ಮ್ಯಾಗ್ನಸ್​ ಕಾರ್ಲ್‌ಸನ್​ರನ್ನು ಮತ್ತೊಮ್ಮೆ ಸೋಲಿಸುವ ಮೂಲಕ 6 ತಿಂಗಳ ಅವಧಿಯಲ್ಲಿ ಮೂರನೇ ಬಾರಿಗೆ ಶಾಕ್​ ನೀಡಿದ್ದಾರೆ.
ಆರ್ ಪ್ರಗ್ನಾನಂದ್ ರ  ಗೆಲುವನ್ನು ಚೆಸ್ ಲೋಕ ಸಂಭ್ರಮಿಸಿದೆ. ಸೆಮಿಫೈನಲ್‌ನಲ್ಲಿ ಪ್ರಗ್ನಾನಂದನ್ ಅವರು ಟೈಬ್ರೇಕರ್‌ನಲ್ಲಿ ವಿಶ್ವದ ಮೂರನೇ ಶ್ರೇಯಾಂಕದ ಫ್ಯಾಬಿಯಾನೊ ಕರುವಾನಾ ಅವರನ್ನು 3.5-2.5 ರಿಂದ ಸೋಲಿಸಿದರು. ಈ ಗೆಲುವಿನೊಂದಿಗೆ ಪ್ರಗ್ನಾನಂದ ಫೈನಲ್‌ಗೆ ಅರ್ಹತೆ ಪಡೆದಿದ್ದಾರೆ.
ಈ ಗೆಲುವಿನೊಂದಿಗೆ ಪ್ರಗ್ನಾನಂದ ಅವರು ಫಿಡೆ ಚೆಸ್ ನಲ್ಲಿ ಫೈನಲ್ ತಲುಪಿದ ಎರಡನೇ ಭಾರತೀಯ ಆಟಗಾರ ಎನಿಸಿಕೊಂಡಿದ್ದಾರೆ. ವಿಶ್ವನಾಥನ್ ಆನಂದ್ ಅವರು ಪ್ರಗ್ನಾನಂದ ಅವರಿಗಿಂತ ಮೊದಲು ಫೈನಲ್ ತಲುಪುವಲ್ಲಿ ಯಶಸ್ವಿಯಾಗಿದ್ದರು. ಪ್ರಗ್ನಾನಂದನ್ ಈಗ ಕಾರ್ ಫೈನಲ್‌ನಲ್ಲಿ ವಿಶ್ವದ ಅಗ್ರಮಾನ್ಯ ಆಟಗಾರ ಮ್ಯಾಗ್ನಸ್‌ಸನ್‌ರನ್ನು ಎದುರಿಸಲಿದ್ದಾರೆ. ಪ್ರಗ್ನಾನಂದನ್ ಫೈನಲ್ ಪಂದ್ಯದಲ್ಲಿ FIDE ಚೆಸ್ ಪ್ರಶಸ್ತಿಯನ್ನು ಗೆಲ್ಲಲು ಪ್ರಯತ್ನಿಸುತ್ತಾರೆ.
ಈ ಗೆಲುವಿಗಾಗಿ ಮಾಜಿ ವಿಶ್ವ ಚಾಂಪಿಯನ್ ಮತ್ತು ರಷ್ಯಾದ ಚೆಸ್ ಗ್ರ್ಯಾಂಡ್ ಮಾಸ್ಟರ್ ಗ್ಯಾರಿ ಕಾಸ್ಪರೋವ್ ಪ್ರಗ್ನಾನಂದ ಅವರನ್ನು ಅಭಿನಂದಿಸಿದ್ದಾರೆ.
ಮ್ಯಾಗ್ನಸ್ ಕಾರ್ಲ್‌ಸನ್ ವಿರುದ್ಧದ ಪ್ರಶಸ್ತಿ ಹಣಾಹಣಿಗಾಗಿ ಅವರಿಗೆ ಶುಭ ಹಾರೈಸಿದರು.
ಪ್ರಗ್ನಾನಂದ್ ಅವರನ್ನು ಈ ಹಂತಕ್ಕೆ ತಲುಪುವಲ್ಲಿ ಅವರ ತಾಯಿ ನಾಗಲಕ್ಷ್ಮಿ ಅವರ ಪಾತ್ರವಿದೆ,  ಈ ಪಂದ್ಯಾವಳಿಯ ಸಂದರ್ಭದಲ್ಲಿ ಸಂದರ್ಶನವೊಂದರಲ್ಲಿ ಪ್ರಗ್ನಾನಂದ್ ಅವರು ತಮ್ಮ ತಾಯಿಯ ಬಗ್ಗೆ ಅನೇಕ ವಿಷಯಗಳನ್ನು ಪ್ರಸ್ತಾಪಿಸಿದರು. ನನ್ನ ತಾಯಿ ಯಾವಾಗಲೂ ನನ್ನನ್ನು ಬೆಂಬಲಿಸುತ್ತಾರೆ. ನನ್ನ ತಾಯಿಯೇ ನನ್ನ ದೊಡ್ಡ ಬೆಂಬಲ ಮತ್ತು ನನಗೆ  ಸರ್ವಸ್ವ! ಆಟದಲ್ಲಿ ಸೋತ ನಂತರವೂ, ಅವಳು ನನ್ನನ್ನು ನಿಭಾಯಿಸಲು ಮತ್ತು ಶಾಂತಗೊಳಿಸಲು ಪ್ರಯತ್ನಿಸುತ್ತಾಳೆ ಎಂದು ಅವರು ಹೇಳಿದರು. ಇದರೊಂದಿಗೆ ಪ್ರತಿ ಟೂರ್ನಮೆಂಟ್‌ಗೆ ಮಗನ ಜೊತೆಗಿರುವ ಪ್ರಗಣಾನಂದ್ ಅವರ ತಾಯಿಯೂ ಮೆಚ್ಚುಗೆಗೆ ಪಾತ್ರರಾದರು.

By ಕೋಟ ರಾಮಕೃಷ್ಣ ಆಚಾರ್ಯ

ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ
ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

Leave a Reply

Your email address will not be published.

3 × 5 =