ಸ್ಪೋರ್ಟ್ಸ್ಮಂಗಳೂರಿನಲ್ಲಿ ಕಶ್ವಿಸ್ ಮೊದಲನೆಯ ಅಂತರಾಷ್ಟ್ರೀಯ ಓಪನ್ ಫಿಡೆ ರೇಟೆಡ್ ರಾಪಿಡ್ ಚೆಸ್...

ಮಂಗಳೂರಿನಲ್ಲಿ ಕಶ್ವಿಸ್ ಮೊದಲನೆಯ ಅಂತರಾಷ್ಟ್ರೀಯ ಓಪನ್ ಫಿಡೆ ರೇಟೆಡ್ ರಾಪಿಡ್ ಚೆಸ್ ಟೂರ್ನಮೆಂಟ್ 2023 ಪಂದ್ಯಾವಳಿ ಸಮಾರೋಪ ಸಮಾರಂಭ ರತ್ನವೇಲು ಪ್ರಥಮ.

-

- Advertisment -spot_img
ಕಶ್ವಿ ಚೆಸ್ ಸ್ಕೂಲ್(ರಿ) ಕುಂದಾಪುರ ಇವರ ಆಯೋಜಕತ್ವದಲ್ಲಿ ಕಶ್ವಿಸ್ ಮೊದಲನೆಯ ಅಂತರಾಷ್ಟ್ರೀಯ ಓಪನ್ ಫಿಡೆ ರೇಟೆಡ್ ರಾಪಿಡ್ ಚೆಸ್ ಟೂರ್ನಮೆಂಟ್ 2023  ಎರಡು ದಿನಗಳ ಚೆಸ್ ಪಂದ್ಯಾಕೂಟ ಡಿಸೆಂಬರ್ 10 ರಂದು ಮುಕ್ತಾಯಗೊಂಡಿತು.
ಮಂಗಳೂರಿನ ಇಂಡಿಯಾನ ಕನ್ವೆನ್ಷನ್ ಸೆಂಟರ್ ನಲ್ಲಿ ಶನಿವಾರ ಡಿಸೆಂಬರ್ 9 ರಂದು ಆರಂಭಗೊಂಡ ಈ ಪಂದ್ಯಾಕೂಟದಲ್ಲಿ ಕರ್ನಾಟಕ, ಕೇರಳ, ತಮಿಳುನಾಡು, ಗೋವಾ,ಒರಿಸ್ಸಾ, ಉತ್ತರಪ್ರದೇಶ ಹಾಗೂ ರಾಜ್ಯದ ವಿವಿಧ ಜಿಲ್ಲೆಗಳಿಂದ ಸುಮಾರ 400ಕ್ಕೂ ಹೆಚ್ಚು ಚೆಸ್ ಆಟಗಾರರು ಭಾಗವಹಿಸಿದ್ದರು. ಪಂದ್ಯಾಕೂಟದಲ್ಲಿ ಸುಮಾರು 26 ಲಕ್ಷ ಮೊತ್ತದ ಬಹುಮಾನ ಅಲ್ಲದೇ ವಿವಿಧ ವಯೋಮಾನದ ವಿಭಾಗಗಳಲ್ಲಿ ಗೆದ್ದ ವಿಜೇತರಿಗೆ ಬಹುಮಾನ ನೀಡಲಾಯಿತು.
ಸಮಾರೋಪ ಸಮಾರಂಭದಲ್ಲಿ   ಮಾಜಿ ಲೋಕಾಯುಕ್ತರು, ಮಾಜಿ ಉಚ್ಚ ನ್ಯಾಯಾಲಯದ ನ್ಯಾಯಾಧೀಶರಾದ ಎನ್ ಸಂತೋಷ ಹೆಗ್ಡೆ ಮಾತನಾಡುತ್ತಾ ತಾನು ಶಾಲಾ, ಕಾಲೇಜು ದಿನಗಳಲ್ಲಿ ಸ್ವತಃ ಆಟಗಾರನಾಗಿದ್ದು, ಚೆಸ್ ಬುದ್ದಿಮತ್ತೆಗೆ ಸಂಬಂದಪಟ್ಟಿದ್ದು ಎಲ್ಲಾ ವಯೋಮಾನದವರು ಆಡಬಹುದು ಎಂದರು.
 ಅಂತರಾಷ್ಟ್ರೀಯ ಗ್ರಾಂಡ್ ಮಾಸ್ಟರ್ ಹಾಗೂ ಅರ್ಜುನ ಪ್ರಶಸ್ತಿ ಪುರಸ್ಕ್ರತ ಪ್ರವೀಣ ತಿಪ್ಸೆ ಮಾತನಾಡುತ್ತಾ ಭಾರತೀಯ ಮೂಲದ ಆಟವಾದ ಚದುರಂಗ ಮುಂದೆ ಚೆಸ್ ಆಗಿ ಪರಿವರ್ತಿಯಗೊಂಡಿದ್ದು ಇಂದು ಸುಮಾರು 180 ಕ್ಕೂ ಹೆಚ್ಚು ರಾಷ್ಟ್ರಗಳಲ್ಲಿ ಆಡಲಾಗುತ್ತಿದೆ. ಸ್ಥಳೀಯ ಶಾಲಾ ಕಾಲೇಜುಗಳಲ್ಲಿ ಚೆಸ್ ಆಟದ ತರಭೇತಿ ನೀಡಬೇಕು. ಹಾಗೂ ಇಂತಹ ಪಂದ್ಯಾವಳಿಯಿಂದ ಸ್ಥಳೀಯ ಆಟಗಾರರಿಗೆ ದೇಶದ ಅಗ್ರಮಾನ್ಯ ಆಟಗಾರರೋಂದಿಗೆ ಆಟವಾಡಲು ಒಂದು ಉತ್ತಮ ಅವಕಾಶ ಎಂದರು. ಮಕ್ಕಳು ಈ ಆಟವನ್ನು ವೃತ್ತಿಯಾಗಿ ಪರಿಗಣಿಸಿದರೆ ಇತರ ಆಟದಂತೆ ವಿಪುಲ ಸದವಕಾಶವಿದೆ ಎಂದರು.
ವೇದಿಕೆಯಲ್ಲಿ ಮುಖ್ಯ ಅತಿಥಿಯಾಗಿ ದಕ್ಷಿಣ ಕನ್ನಡ ಚೆಸ್ ಅಸೋಸಿಯೇಷನ್(ರಿ), ಅಧ್ಯಕ್ಷರು ರಮೇಶ ಕೋಟೆ,  ಪಂದ್ಯಾವಳಿಯ ಅಧ್ಯಕ್ಷ, ಕಶ್ವಿ ಚೆಸ್ ಸ್ಕೂಲ್ ಸ್ಥಾಪಕ ಅಧ್ಯಕ್ಷ ಹಾಗೂ ಪಂದ್ಯಾವಳಿಯ ಆಯೋಜಕ ನರೇಶ್ ಬಿ, ಕಶ್ವಿ ಚೆಸ್ ಸ್ಕೂಲ್ ನ ಪ್ರಧಾನ ಕಾರ್ಯದರ್ಶಿ ಪುರುಷೋತ್ತಮ ಕಾಮತ್, ಕಟಿಲೇಶ್ವರಿ ಡವಲಪರ್ಸನ ಪ್ರಕಾಶ ಶೆಟ್ಟಿ, ಪಂದ್ಯಾವಳಿಯ ಸಲಹೆಗಾರ ಸುರೇಶ ಶೆಟ್ಟಿ ಉಪಸ್ಥಿತರಿದ್ದರು.
ಅವಿನಾಶ ಕಾಮತ್ ಕಾರ್ಯಕ್ರಮ ನಿರೂಪಿಸಿದರು. ಆರಾಧ್ಯ ಎಸ್ ಶೆಟ್ಟಿ ಪ್ರಾಸ್ಥಾವನೆಗೈದರು ಪ್ರಕೃತಿ ಪಿ ಶೆಟ್ಟಿ ದನ್ಯವಾಧಗೈದರು.
ವಿಜೇತರು ತಮಿಳುನಾಡಿನ ರತ್ನವೇಲು ಪ್ರಥಮ, ಪ್ರಣವ ದ್ವಿತೀಯ ಹಾಗೂ ಕರ್ನಾಟಕದ ಬಾಲಕೃಷ್ಣ ತೃತೀಯ ಸ್ಥಾನ ಪಡೆದರು.
ಅಲ್ಲದೇ ರೇಟಿಂಗ್ ವಿಭಾಗ, ವಯೋಮಿತಿ, ಹಿರಿಯ ನಾಗರೀಕ, ಮಹಿಳಾ ವಿಭಾಗ, ಅತ್ಯಂತ ಕಿರಿಯ ಆಟಗಾರ, ವಿಶೇಷ ಮಕ್ಕಳು‌ ಹೀಗೆಯೇ ನೂರಕ್ಕೂ ಹೆಚ್ಚು ವಿಭಾಗದಲ್ಲಿ ನಗದು ಬಹುಮಾನ ಹಾಗೂ ಟ್ರೋಫಿಯನ್ನು ನೀಡಲಾಯಿತು
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

LEAVE A REPLY

Please enter your comment!
Please enter your name here

three × 5 =

Latest news

Chicken Road Game – Mabilis‑Pacing na Multiplier Action para sa Mahilig sa Quick‑Play

1. Ang Bite‑Sized Thrill ng Chicken RoadAng chicken road game ay sumasalamin sa rush ng isang tanging, mapagpasiyang hakbang...

BDM Bet : Une expérience casino express pour les joueurs pressés

La vitesse est reine dans le monde du casinoLe joueur moderne ne cherche pas un marathon ; il veut...

Minimum Deposit Casino: Fast‑Track Slots, Roulette & Quick Wins

Welcome to the Minimum Deposit Casino – Quick Play AdventureWhen you log into the Minimum Deposit casino, the first...

Spinsy Casino – Quick Spins & Fast Wins

Hai mai desiderato un'esperienza di casinò che ti dia un'esplosione di emozioni in pochi minuti? Spinsy Casino offre proprio...
- Advertisement -spot_imgspot_img

Legiano Casino: Ekspresowe emocje z Quick Spin dla graczy mobilnych

Legiano Casino wypracowało niszę dla graczy, którzy pragną adrenaliny w krótkim czasie gry. Niezależnie od tego, czy masz przerwę...

ಉರ್ವಾ ಮೈದಾನದಲ್ಲಿ ಡಿಸೆಂಬರ್ 5 ಮತ್ತು 6 ರಂದು ಪ್ಯಾಂಥರ್ಸ್ ಸೂಪರ್ ಲೀಗ್ 2026

ಉರ್ವಾ ಮೈದಾನದಲ್ಲಿ ಡಿಸೆಂಬರ್ 5 ಮತ್ತು 6 ರಂದು ಪ್ಯಾಂಥರ್ಸ್ ಸೂಪರ್ ಲೀಗ್ 2026 ಮಂಗಳೂರು: ಜಿಎಸ್‌ಬಿ ಸಮುದಾಯದ ಕ್ರಿಕೆಟ್ ಪ್ರತಿಭೆಗಳಿಗೆ ವೇದಿಕೆಯಾಗಿರುವ ಪ್ರತಿಷ್ಠಿತ **ಪ್ಯಾಂಥರ್ಸ್ ಸೂಪರ್...

Must read

- Advertisement -spot_imgspot_img

You might also likeRELATED
Recommended to you