ಉಡುಪಿ ಜಿಲ್ಲಾ ಟೆನ್ನಿಸ್ಬಾಲ್ ಕ್ರಿಕೆಟ್ಪಡುಕೋಣೆಯಲ್ಲಿ ಪ್ರಪ್ರಥಮ ಬಾರಿಗೆ ನಡೆಯುತ್ತಿದೆ ರಾಷ್ಟ್ರ ಮಟ್ಟದ ವಾಲಿಬಾಲ್ ಹಾಗೂ ಲೀಗ್...

ಪಡುಕೋಣೆಯಲ್ಲಿ ಪ್ರಪ್ರಥಮ ಬಾರಿಗೆ ನಡೆಯುತ್ತಿದೆ ರಾಷ್ಟ್ರ ಮಟ್ಟದ ವಾಲಿಬಾಲ್ ಹಾಗೂ ಲೀಗ್ ಮಾದರಿಯ ಕ್ರಿಕೆಟ್ ಪಂದ್ಯಕೂಟ…!

-

- Advertisment -spot_img
ಪಡುಕೋಣೆಯ *ಗ್ರೆಗರಿ ಪ್ರೌಢಶಾಲಾ* ಮೈದಾನ ನಾಳೆಯಿಂದ ಮೂರು ದಿನ *(ಮಾರ್ಚ್ 24 ಶುಕ್ರವಾರ – 26 ಭಾನುವಾರ*)ಒಂದು ಅಪರೂಪದ ಕ್ರೀಡಾಕೂಟಕ್ಕೆ ಸಾಕ್ಷಿಯಾಗಲಿದೆ.
ಈ ಹಿಂದೆ ಹತ್ತಾರು ಸಮಾಜಮುಖಿ ಕ್ರೀಡಾಕೂಟಗಳನ್ನು ನಡೆಸಿಕೊಂಡು ಬಂದಿರುವಂತಹ ಈ ಭಾಗದ ಹೆಮ್ಮೆಯ ಸಂಸ್ಥೆಯಾದ *ಪಡುಕೋಣೆ ಎಜುಕೇಶನ್ & ಸ್ಪೋರ್ಟ್ಸ್ ಪ್ರಮೋಟರ್ಸ್* ಇವರು ಈ ಹೊನಲು ಬೆಳಕಿನ ವಾಲಿಬಾಲ್ ಹಾಗೂ ಕ್ರಿಕೆಟ್ ಪಂದ್ಯಕೂಟವನ್ನು ಆಯೋಜಿಸುತ್ತಿದ್ದಾರೆ…*ದಿ.ಪ್ರಭು ಅರ್ಥರ್ ಪಿರೇರಾ* ಸ್ಮರಣಾರ್ಥ ಮೊದಲು ನಡೆಯುವ ವಾಲಿಬಾಲ್ ಟೂರ್ನಮೆಂಟಿನಲ್ಲಿ
*ಅಶ್ವಲ್ ರೈ(ಸೀನಿಯರ್ ಇಂಡಿಯಾ)*
*ಪಂಕಜ್ ಶರ್ಮಾ (ಸೀನಿಯರ್ ಇಂಡಿಯಾ)*
*ರತೀಶ್ (ಸೀನಿಯರ್ ಇಂಡಿಯಾ)*
*ಕಾರ್ತಿಕ್ ಮಧು (ಸೀನಿಯರ್ ಇಂಡಿಯಾ)*
*ಅನೂಪ್ ಡಿ ಕೋಷ್ಟಾ (ಸೀನಿಯರ್ ಇಂಡಿಯಾ)*
*ಮನೋಜ್ (ಸೀನಿಯರ್ ಇಂಡಿಯಾ)*
*ನಿಖಿಲ್ ಗೌಡ (ಇಂಡಿಯನ್ ಆರ್ಮಿ)*
*ರೈಸನ್ ರೆಬ್ಬೆಲ್ಲೋ (ಕರ್ನಾಟಕ ಸ್ಟೇಟ್)*
*ಪ್ರಮೋದ್ ಹೆಗ್ಡೆ ಚಿನ್ನ*
*ನವೀನ್ ಕಾಂಚನ್*
*ಹರಿಪ್ರಸಾದ್ ಚೋಟು (ಇಂಡಿಯನ್ ಜೂನಿಯರ್)*
*ರಾಕಿ*
ಮುಂತಾದ ರಾಜ್ಯ,ರಾಷ್ಟ್ರ,ಅಂತಾರಾಷ್ಟ್ರೀಯ ಮಟ್ಟದ ವಾಲಿಬಾಲ್ ಆಟಗಾರರು ಭಾಗವಹಿಸುತ್ತಿರುವುದು ನಮ್ಮೂರಿನ ಕ್ರೀಡಾಭಿಮಾನಿಗಳು ಹೆಮ್ಮೆ ಪಡುವಂತಹ ವಿಚಾರ…
ಜೊತೆಗೆ ಗತಕಾಲ ವೈಭವ ಸಾರುವ *ದಿ.ಸುರೇಶ್ ಡಿ ಪಡುಕೋಣೆ* ಇವರ ಕನಸಿನ ಕೂಸಾದ *ಅಪ್ಪೋಲೋ* ಮಾದರಿಯ  ಕ್ರಿಕೆಟ್ ಪಂದ್ಯಕೂಟದಲ್ಲಿ ಕೂಡ *ರಾಜ್ಯ,ರಾಷ್ಟ್ರ,ಮಟ್ಟದ* ಆಟಗಾರರಿಗೆ ಭಾಗವಹಿಸಲು ಮುಕ್ತ ಅವಕಾಶ ನೀಡಿದ್ದು ಇವರುಗಳು ಕ್ರೀಡಾಭಿಮಾನಿಗಳಿಗೆ ರಸಾದೌತಣ ಉಣಬಡಿಸುವುದರಲ್ಲಿ ಅನುಮಾನವಿಲ್ಲ…!
ನಮ್ಮೂರ ಮಹಾನ್ ಕ್ರೀಡಾ ಪ್ರೋತ್ಸಾಹಕರಾಗಿದ್ದ *ದಿ.ಸುರೇಶ್ ಡಿ ಪಡುಕೋಣೆ ಹಾಗೂ ದಿ.ಪ್ರಭು ಅರ್ಥರ್ ಪಿರೇರಾ* ಇವರ ಸ್ಮರಣಾರ್ಥ ನಡೆಯುವ ಈ ಮೂರು ದಿನದ ಕ್ರೀಡಾ ಮಹೋತ್ಸವ ಕಣ್ತುಂಬಿಕೊಳ್ಳಲು ನೀವು ಬರಲೇಬೇಕು….ನಿಮ್ಮವರನ್ನು ಕರೆತರಲೇಬೇಕು…ಯಾಕೆಂದರೆ ಮತ್ತೆ ಮತ್ತೆ ಇಂತಹ ಅದ್ಬುತ ಆಯೋಜನೆಯ ಕ್ರೀಡಾಕೂಟ ಕಾಣಸಿಗದು…!
*ಮರೆಯದಿರಿ ಮಾರ್ಚ್ 24 ಶುಕ್ರವಾರ ಸಂಜೆ 7 ರಿಂದ*
*ಸ್ಥಳ – ಗ್ರೆಗರಿ ಪ್ರೌಢಶಾಲಾ ಮೈದಾನ ಪಡುಕೋಣೆ*
*-ಎಮ್ ಪಿ ಬೆಳ್ಳಾಡಿ*
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

LEAVE A REPLY

Please enter your comment!
Please enter your name here

5 × 4 =

Latest news

ವಿಶ್ವಕರ್ಮ ಪ್ರೀಮಿಯರ್ ಲೀಗ್ 2026ಕ್ಕೆ ಮಧು ಡೈಮಂಡ್ಸ್ ಟೈಟಲ್ ಸ್ಪಾನ್ಸರ್

ವಿಶ್ವಕರ್ಮ ಪ್ರೀಮಿಯರ್ ಲೀಗ್ 2026ಕ್ಕೆ ಮಧು ಡೈಮಂಡ್ಸ್ ಟೈಟಲ್ ಸ್ಪಾನ್ಸರ್ ಚಿತ್ರದುರ್ಗ: ಕರ್ನಾಟಕ ರಾಜ್ಯದ ವಿಶ್ವಕರ್ಮ ಸಮುದಾಯದ ಕ್ರೀಡಾ ಪ್ರತಿಭೆಗಳನ್ನು ಒಂದೇ ವೇದಿಕೆಯಲ್ಲಿ ಒಗ್ಗೂಡಿಸುವ ಮಹತ್ವಾಕಾಂಕ್ಷೆಯ ಕ್ರಿಕೆಟ್ ಮಹಾಕೂಟ ವಿಶ್ವಕರ್ಮ...

16 ವರ್ಷಗಳ ಸಾಹಸಗಾಥೆ ಅಂತ್ಯಗೊಂಡಿದೆ! ಡಬ್ಲ್ಯೂಟಿಸಿ ಹೀರೋ ಕೇನ್ ವಿಲಿಯಮ್ಸನ್ ಅಂತರರಾಷ್ಟ್ರೀಯ ಕ್ರಿಕೆಟ್‌ನಿಂದ ನಿವೃತ್ತಿ!

16 ವರ್ಷಗಳ ಸಾಹಸಗಾಥೆ ಅಂತ್ಯಗೊಂಡಿದೆ! ಡಬ್ಲ್ಯೂಟಿಸಿ ಹೀರೋ ಕೇನ್ ವಿಲಿಯಮ್ಸನ್ ಅಂತರರಾಷ್ಟ್ರೀಯ ಕ್ರಿಕೆಟ್‌ನಿಂದ ನಿವೃತ್ತಿ! ನ್ಯೂಜಿಲೆಂಡ್ ಕ್ರಿಕೆಟ್ ಇತಿಹಾಸದಲ್ಲಿ ಅತಿ ಹೆಚ್ಚು ರನ್ ಗಳಿಸಿದ ದಾಖಲೆಯನ್ನು ಕೇನ್...

ಮಹಿಳಾ ಟಿ-20 ವಿಶ್ವಕಪ್‌ಗೆ ಕ್ಷಣಗಣನೆ: ವಿಶ್ವದ ಕಣ್ಣುಗಳು ಇಂಗ್ಲೆಂಡ್ ಕಡೆ

ಮಹಿಳಾ ಟಿ-20 ವಿಶ್ವಕಪ್‌ಗೆ ಕ್ಷಣಗಣನೆ: ವಿಶ್ವದ ಕಣ್ಣುಗಳು ಇಂಗ್ಲೆಂಡ್ ಕಡೆ ಕ್ರಿಕೆಟ್ ಅಭಿಮಾನಿಗಳು ಬಹು ನಿರೀಕ್ಷೆಯಿಂದ ಕಾಯುತ್ತಿರುವ ಐಸಿಸಿ ಮಹಿಳಾ ಟಿ-20 ವಿಶ್ವಕಪ್ 2026 ಟೂರ್ನಿಯು ಜೂನ್...

ಮಹಾರಾಜ ಟ್ರೋಫಿ 2026: ಕರ್ನಾಟಕ ಕ್ರಿಕೆಟ್‌ಗೆ ಮತ್ತೊಂದು ಹಬ್ಬ

  ಮಹಾರಾಜ ಟ್ರೋಫಿ 2026: ಕರ್ನಾಟಕ ಕ್ರಿಕೆಟ್‌ಗೆ ಮತ್ತೊಂದು ಹಬ್ಬ Maharaja Trophy: ಜೂನ್‌ 20 ರಿಂದ ಟೂರ್ನಿ ಆರಂಭ, ಬೆಂಗಳೂರು, ಮೈಸೂರು, ಹುಬ್ಬಳ್ಳಿಯಲ್ಲಿ ಪಂದ್ಯ ಆಯೋಜನೆ ಐದನೇ ಆವೃತ್ತಿಯ...
- Advertisement -spot_imgspot_img

ಟೆಂಪೋ ಚಾಲಕರು ಮತ್ತು ಮಾಲಕರ ಸಂಘ (ರಿ.) ಮಲ್ಪೆ ಆಯೋಜಕರಿಂದ “ಸಾರಥಿ ಮಾನ್ಸೂನ್ ಟ್ರೋಫಿ – 2026” ಟೆನಿಸ್ ಬಾಲ್ ಕ್ರಿಕೆಟ್ ಟೂರ್ನಿ

ಟೆಂಪೋ ಚಾಲಕರು ಮತ್ತು ಮಾಲಕರ ಸಂಘ (ರಿ.) ಮಲ್ಪೆ ಆಯೋಜಕರಿಂದ “ಸಾರಥಿ ಮಾನ್ಸೂನ್ ಟ್ರೋಫಿ – 2026” ಟೆನಿಸ್ ಬಾಲ್ ಕ್ರಿಕೆಟ್ ಟೂರ್ನಿ ಉಡುಪಿ ಜಿಲ್ಲೆಯ ಮಲ್ಪೆಯ...

ಯೋಗದಿಂದ ಗೋಸೇವೆ-ಕಾಮಧೇನು ಗೋಶಾಲೆಯ ಅನಾಥ ಗೋವುಗಳ ಪಾಲನೆಗೆ ಯೋಗರತ್ನ ತನುಶ್ರೀ ಪಿತ್ರೋಡಿ 300 ಯೋಗಾಸನ ಪ್ರದರ್ಶನ

ಯೋಗದಿಂದ ಗೋಸೇವೆ-ಕಾಮಧೇನು ಗೋಶಾಲೆಯ ಅನಾಥ ಗೋವುಗಳ ಪಾಲನೆಗೆ ಯೋಗರತ್ನ ತನುಶ್ರೀ ಪಿತ್ರೋಡಿ 300 ಯೋಗಾಸನ ಪ್ರದರ್ಶನ ಕಾಮಧೇನು‌ ಗೋಶಾಲೆ ಮಹಾಸಂಘ ಟ್ರಸ್ಟ್(ರಿ)ನಂಚಾರು ಇಲ್ಲಿರುವ ಗೋವುಗಳಿಗಾಗಿ 12 ನೇ...

Must read

- Advertisement -spot_imgspot_img

You might also likeRELATED
Recommended to you