Uncategorizedಡಿಸೆಂಬರ್ 29 ಇಂದಿನಿಂದ ಕುಂದಾಪುರದಲ್ಲಿ ರಾಷ್ಟ್ರೀಯ ಮಟ್ಟದ ಹೊನಲು ಬೆಳಕಿನ ಕ್ರಿಕೆಟ್...

ಡಿಸೆಂಬರ್ 29 ಇಂದಿನಿಂದ ಕುಂದಾಪುರದಲ್ಲಿ ರಾಷ್ಟ್ರೀಯ ಮಟ್ಟದ ಹೊನಲು ಬೆಳಕಿನ ಕ್ರಿಕೆಟ್ ಹಬ್ಬ- ಜಾನ್ಸನ್ ಟ್ರೋಫಿ-2022/23

-

- Advertisment -spot_img
ಕುಂದಾಪುರ: ಜಾನ್ಸನ್ ಕ್ರಿಕೆಟರ್ಸ್ ಹಂಗಳೂರು ಇವರ ಆಶ್ರಯದಲ್ಲಿ ನಾಲ್ಕು ದಿನಗಳ ಕಾಲ ನಡೆಯಲಿರುವ ರಾಷ್ಟ್ರ ಮಟ್ಟದ ಕ್ರಿಕೆಟ್ ಪಂದ್ಯಾಟ ಜಾನ್ಸನ್ ಟ್ರೋಫಿ ಇಲ್ಲಿನ ಗಾಂಧೀ ಮೈದಾನದಲ್ಲಿ ಶುಕ್ರವಾರ ಸಂಜೆ 7 ಗಂಟೆಗೆ ಉದ್ಘಾಟನೆಗೊಳ್ಳಲಿದೆ ಎಂದು ಜಾನ್ಸನ್ ಕ್ರಿಕೆಟರ್ಸ್ ಹಂಗಳೂರು ಇದರ ಅಧ್ಯಕ್ಷರಾದ ರವೀಂದ್ರ ಹೆಗ್ಡೆ ಹೇಳಿದರು.
ಬುಧವಾರ ಕುಂದಾಪುರ ಪ್ರೆಸ್‍ಕ್ಲಬ್‍ನಲ್ಲಿ ನಡೆಸಲಾದ ಪತ್ರಿಕಾಗೋಷ್ಠಿಯಲ್ಲಿ ಅವರು ಈ ಬಗ್ಗೆ ಮಾಹಿತಿ ನೀಡಿದರು.
ಪಂದ್ಯಾಟದ ಎರಡನೇ ದಿನವಾದ ಡಿಸೆಂಬರ್ 30ರ ಶುಕ್ರವಾರ ಸಂಜೆ 7 ಗಂಟೆಗೆ ಬೈಂದೂರು ವಿಧಾನಸಭಾ ಕ್ಷೇತ್ರದ ಶಾಸಕ ಬಿ.ಎಮ್ ಸುಕುಮಾರ್ ಶೆಟ್ಟಿ ಉದ್ಘಾಟಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ, ದಿನೇಶ್ ಹೆಗ್ಡೆ ಮೊಳಹಳ್ಳಿ, ಉದ್ಯಮಿ ಸುರೇಂದ್ರ ಶೆಟ್ಟಿ, ಜಯಶೀಲ ಶೆಟ್ಟಿ, ಅನ್ಸಾಫ್, ವಿಶ್ವಾಸ್ ಮೆಲ್ವಿನ್ ಡಿಸೋಜಾ, ವೀಣಾ ಭಾಸ್ಕರ್, ಸಂಪತ್ ಶೆಟ್ಟಿ, ರತ್ನಾಕರ್ ಶೆಟ್ಟಿ, ಸುಜಯ್ ಶೆಟ್ಟಿ ತೆಕ್ಕಟ್ಟೆ, ಸುಭಾಶ್ ಶೆಟ್ಟಿ ಹೊಳ್ಮಗೆ, ಪ್ರವೀಣ್ ಶೆಟ್ಟಿ ವಂಡಾರ್, ಲಕ್ಷ್ಮೀ ಮಂಜು ಬಿಲ್ಲವ, ಶ್ರೀಪಾದ್ ಉಪಾಧ್ಯ, ಸತೀಶ್ ಕೋಟ್ಯಾನ್ ಮೊದಲಾದವರು ಉಪಸ್ಥಿತರಿರಲಿದ್ದಾರೆ.
ಡಿಸೆಂಬರ್ 29 ರಿಂದ ಜನವರಿ 1 ರ ತನಕ ನಾಲ್ಕು ದಿನಗಳ ಕಾಲ ನಡೆಯಲಿರುವ ಲೀಗ್ ಕಮ್ ನಾಕೌಟ್ ಮಾದರಿಯ ಪಂದ್ಯಾಟವು ದೇಶದ ವಿವಿಧ ರಾಜ್ಯಗಳಿಂದ ಆಗಮಿಸುವ ಪ್ರತಿಷ್ಠಿತ 28 ತಂಡಗಳ ನಡುವೆ ನಡೆಯಲಿದೆ ಎಂದರು.
*ಜಿಲ್ಲೆಯ ಇತಿಹಾದಲ್ಲೇ ಮೊದಲ ಬಾರಿಗೆ:*
ಜಿಲ್ಲೆಯಲ್ಲೇ ಮೊದಲ ಬಾರಿಗೆ 4 ಲಕ್ಷ ನಗದಿನ ಅಂತರಾಷ್ಟ್ರೀಯ ಮಟ್ಟದ ಪಂದ್ಯಾಟ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಪ್ರತೀ ತಂಡಕ್ಕೂ 30,000 ಪ್ರವೇಶ ಶುಲ್ಕ ನಿಗಧಿಪಡಿಸಲಾಗಿದ್ದು, ಪಂದ್ಯಾಟದ ಪ್ರಥಮ ಬಹುಮಾನ 4,04,000 ಹಾಗೂ ಶಾಶ್ವತ ಫಲಕ, ದ್ವಿತೀಯ ಬಹುಮಾನವಾಗಿ 2,02,000 ಹಾಗೂ ಶಾಶ್ವತ ಫಲಕ, ಸರಣಿಯಲ್ಲಿ ಉತ್ತಮ ಪ್ರದರ್ಶನ ನೀಡಿದ ಆಟಗಾರನಿಗೆ ಎಲೆಕ್ಟ್ರಿಕ್ ದ್ವಿಚಕ್ರ ಬೈಕ್ ಅನ್ನು ಸರಣಿ ಶ್ರೇಷ್ಠ ಪ್ರಶಸ್ತಿಯಾಗಿ ನೀಡಿ ಗೌರವಿಸಲಾಗುವುದು ಎಂದವರು ಮಾಹಿತಿ ನೀಡಿದರು.
*ವಿಶೇಷ ಆಕರ್ಷಣೆ:*
ರಾಜ್ಯದ ಪ್ರತಿಷ್ಠಿತ M9 ಸ್ಪೋರ್ಟ್ಸ್ ಯೂಟ್ಯೂಬ್ ಚಾನೆಲ್ ಪಂದ್ಯಾಟದ ನೇರ ಪ್ರಸಾರವನ್ನು ಭಿತ್ತರಿಸಲಿದೆ. ಕ್ರೀಡಾಂಗಣದ ಹೊರಭಾಗದಲ್ಲಿ ಎಲ್‍ಇಡಿ ಟಿವಿ ಪರದೆ ಅಳವಡಿಸಲಾಗಿದ್ದು, ಕೆಲವು ತೀರ್ಮಾನಗಳು ಮೂರನೇ ಅಂಪೈರ್ ಮೂಲಕ ಟಿವಿ ಪರದೆಯಲ್ಲಿ ಭಿತ್ತರಿಸುವ ವ್ಯವಸ್ಥೆ ಕಲ್ಪಿಸಲಾಗಿದೆ. ಬೆಂಗಳೂರು, ಚೆನ್ನೈ, ದಾವಣಗೆರೆ, ಚಿತ್ರದುರ್ಗಾ, ತೀರ್ಥಹಳ್ಳಿ, ಮಂಡ್ಯ, ಮೈಸೂರು, ಗೋವಾ, ಭದ್ರಾವತಿ ಸೇರಿದಂತೆ ವಿವಿಧ ಭಾಗಗಳಿಂದ ಒಟ್ಟು 28 ತಂಡಗಳು ಜಾನ್ಸನ್ ಟ್ರೋಫಿಗಾಗಿ ಸೆಣಸಾಟ ನಡೆಸಲಿದೆ.
ಪತ್ರಿಕಾಗೋಷ್ಠಿಯಲ್ಲಿ ಜಾನ್ಸನ್ ಕ್ರಿಕೆಟರ್ಸ್‍ನ ಕಾರ್ಯದರ್ಶಿ ಮನೋಜ್ ನಾಯರ್, ನಾಯಕ ರಾಜಾ ಸಾಲಿಗ್ರಾಮ, ಪ್ರದೀಪ್ ಹೆಗ್ಡೆ ಇದ್ದರು.
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

LEAVE A REPLY

Please enter your comment!
Please enter your name here

three × four =

Latest news

ಹೊಸಂಗಡಿಯಲ್ಲಿ ಕುಂಬ್ರಿ ಪ್ರೀಮಿಯರ್ ಲೀಗ್ – 2026 ‘HPL-2K26’ ಕ್ರಿಕೆಟ್ ಸಂಭ್ರಮ

ಹೊಸಂಗಡಿಯಲ್ಲಿ ಕುಂಬ್ರಿ ಪ್ರೀಮಿಯರ್ ಲೀಗ್ – 2026 'HPL-2K26’ ಕ್ರಿಕೆಟ್ ಸಂಭ್ರಮ ಫ್ರೆಂಡ್ಸ್ ಹೊಸಂಗಡಿ ವತಿಯಿಂದ ಮೇ 9 ಮತ್ತು 10 ರಂದು ಹೊಸಂಗಡಿಯ ಅಂಬೇಡ್ಕರ್ ಕ್ರೀಡಾಂಗಣದಲ್ಲಿ...

ಮಾರುತಿ ಆಶ್ರಯ ಹಸ್ತಾಂತರ ಕಾರ್ಯಕ್ರಮ: ಮಾನವೀಯ ಸೇವೆಯ ಉದಾತ್ತ ಉದಾಹರಣೆ

ಮಾರುತಿ ಆಶ್ರಯ ಹಸ್ತಾಂತರ ಕಾರ್ಯಕ್ರಮ: ಮಾನವೀಯ ಸೇವೆಯ ಉದಾತ್ತ ಉದಾಹರಣೆ ಉಳ್ಳಾಲ, ಮೇ 5: ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಮಾರುತಿ ಜನಸೇವಾ ಸಂಘ (ರಿ) ಹಾಗೂ...

ಎಸ್‌ವಿಎಸ್ ಮೈದಾನದಲ್ಲಿ ಚಾರಿಟಿ ಕ್ರಿಕೆಟ್: ವಿಜೇತರಿಂದ ದೇಣಿಗೆಯ ಮಹತ್ವದ ಹೆಜ್ಜೆ

  ಎಸ್‌ವಿಎಸ್ ಮೈದಾನದಲ್ಲಿ ಚಾರಿಟಿ ಕ್ರಿಕೆಟ್: ವಿಜೇತರಿಂದ ದೇಣಿಗೆಯ ಮಹತ್ವದ ಹೆಜ್ಜೆ ಬಂಟ್ವಾಳ: ಅರ್ಜುನ್ ಭಂಡಾರ್ಕರ್ ಅವರ ಸೇವ್ ಲೈಫ್ ಚಾರಿಟೇಬಲ್ ಟ್ರಸ್ಟ್ (ರಿ) ವತಿಯಿಂದ ಆಶಕ್ತ ಕುಟುಂಬಗಳಿಗೆ...

ಕೌಡೂರು ಮೈದಾನದಲ್ಲಿ ಉಡುಪಿ ಅಂಡರ್-15 ಟಿ-20 ಕ್ರಿಕೆಟ್ ಟೂರ್ನಿ: ಅಕ್ಷಯ ಕ್ರಿಕೆಟ್ ಅಕಾಡೆಮಿ ಚಾಂಪಿಯನ್

ಕೌಡೂರು ಮೈದಾನದಲ್ಲಿ ಉಡುಪಿ ಅಂಡರ್-15 ಟಿ-20 ಕ್ರಿಕೆಟ್ ಟೂರ್ನಿ: ಅಕ್ಷಯ ಕ್ರಿಕೆಟ್ ಅಕಾಡೆಮಿ ಚಾಂಪಿಯನ್ ಮಟ್ಟು ಅಸೋಸಿಯೇಟ್ಸ್, ಉಡುಪಿ, ಇವರ ಪ್ರಾಯೋಜಕತ್ವದಲ್ಲಿ, ಅಕ್ಷಯ ಕ್ರಿಕೆಟ್ ಅಕಾಡೆಮಿ ಉಡುಪಿ...
- Advertisement -spot_imgspot_img

ಉಡುಪಿಯಲ್ಲಿ ಸುಸಜ್ಜಿತ ಫುಟ್ಬಾಲ್ ಕ್ರೀಡಾಂಗಣ ನಿರ್ಮಾಣ-ಎಂ.ಗಫೂರ್

ಉಡುಪಿಯಲ್ಲಿ ಸುಸಜ್ಜಿತ ಫುಟ್ಬಾಲ್ ಕ್ರೀಡಾಂಗಣ ನಿರ್ಮಾಣ-ಎಂ.ಗಫೂರ್ ಉಡುಪಿ-ಶಿವಾಸ್ ಫುಟ್ಬಾಲ್ ಕ್ಲಬ್ ಇವರ ವತಿಯಿಂದ ಅಂಡರ್ 21 ಹೊನಲು ಬೆಳಕಿನ ಫುಟ್ಬಾಲ್ ಪಂದ್ಯಾಟದ ಉದ್ಘಾಟನಾ ಸಮಾರಂಭ ಸಿಟಿ ಅರೆನಾ...

ಮಂಗಳಾಪುರ ಟ್ರೋಫಿ: ಮೇ 9–10ರಂದು ರೋಚಕ ಪಂದ್ಯಗಳ ಕಾದಾಟ 

ಮಂಗಳಾಪುರ ಟ್ರೋಫಿ: ಮೇ 9–10ರಂದು ರೋಚಕ ಪಂದ್ಯಗಳ ಕಾದಾಟ  ಮಂಗಳೂರು: ಮಂಗಳೂರು ನಗರದಲ್ಲಿ ಜಿಎಸ್‌ಬಿ ಕ್ರಿಕೆಟ್ ಅಭಿಮಾನಿಗಳಿಗೆ ಮತ್ತೊಂದು ಭರ್ಜರಿ ಕ್ರೀಡಾ ಹಬ್ಬವಾಗಿ **ಮಂಗಳಾಪುರ ಟ್ರೋಫಿ 2026**ಕ್ಕೆ ಕೌಂಟ್‌ಡೌನ್...

Must read

- Advertisement -spot_imgspot_img

You might also likeRELATED
Recommended to you