ಕ್ರಿಕೆಟ್ಅರ್ಧ ಆಯಸ್ಸನ್ನು RCBಯಲ್ಲೇ ಕಳೆದವನಿಗೆ.. ಆಯಸ್ಸಿನ ಕೊನೆಯವರೆಗೂ ಆರ್.ಸಿ.ಬಿ ಮೇಲೆ ನನ್ನ ನಿಯತ್ತು...

ಅರ್ಧ ಆಯಸ್ಸನ್ನು RCBಯಲ್ಲೇ ಕಳೆದವನಿಗೆ.. ಆಯಸ್ಸಿನ ಕೊನೆಯವರೆಗೂ ಆರ್.ಸಿ.ಬಿ ಮೇಲೆ ನನ್ನ ನಿಯತ್ತು ಎಂದವನಿಗೆ..ಕೊನೆಗೂ ಒಲಿಯಿತು ಆ ಮಾಯಾಜಿಂಕೆ..!  

-

- Advertisment -spot_img

ಅರ್ಧ ಆಯಸ್ಸನ್ನು RCBಯಲ್ಲೇ ಕಳೆದವನಿಗೆ.. ಆಯಸ್ಸಿನ ಕೊನೆಯವರೆಗೂ ಆರ್.ಸಿ.ಬಿ ಮೇಲೆ ನನ್ನ ನಿಯತ್ತು ಎಂದವನಿಗೆ..ಕೊನೆಗೂ ಒಲಿಯಿತು ಆ ಮಾಯಾಜಿಂಕೆ..!  

18 ವರ್ಷ.. ಅದೆಷ್ಟು ಮೂದಲಿಕೆಗಳು.. ಅದೆಷ್ಟು ನಿಂದನೆಗಳು.. ಅದೆಷ್ಟು ಅವಮಾನಗಳು..! 

ಪ್ರಿಯ ವಿರಾಟ್.., 

ಅದೊಂದು ಕಪ್ ವಿಚಾರದಲ್ಲಿ ನಿನ್ನನ್ನು ಹೀಯಾಳಿಸಿದವರೆಷ್ಟೋ.. ನಿನಗೆಂದೂ ಐಪಿಎಲ್ ಕಪ್ ಸಿಗದು ಎಂದು ಷರಾ ಬರೆದವರೆಷ್ಟೋ.. ಆ ಟ್ರೋಫಿ ನಿನ್ನ ಪಾಲಿಗೆ ಎಂದೂ ಸಿಗದು ಎಂದವರೆಷ್ಟೋ.. 

ಕೊನೆಗೆ..? 

18 ವರ್ಷಗಳ ನಂತರ ನಿನ್ನ ಕೈಯಲ್ಲಿ ಐಪಿಎಲ್ ಕಪ್ ಮಿನುಗುತ್ತಿದೆ ಎಂದರೆ ಅದು ನಿನ್ನ ನಿಯತ್ತಿಗೆ ಸಂದ ಗೆಲುವು. 

‘’ನಾನು ಬ್ಯಾಟ್ ಹಿಡಿಯುವ ಕೊನೆಯ ಕ್ಷಣದವರೆಗೂ RCB ಪರ ಆಡುತ್ತಲೇ ಇರುತ್ತೇನೆ. ನನ್ನ ದೇಹದ ಮೇಲೆ ಆರ್.ಸಿ.ಬಿ ಜರ್ಸಿ ಹೊರತಾಗಿ ಮತ್ತೊಂದು ಬಟ್ಟೆಯನ್ನು ಕಲ್ಪಿಸಿಕೊಳ್ಳಲೂ ಸಾಧ್ಯವಿಲ್ಲ’’ ಎಂದಿದ್ದ ವಿರಾಟ್.. ಇವತ್ತಿಗೂ ಅದನ್ನೇ ಹೇಳುತ್ತಿದ್ದಾನೆ.. ಎಂಥಾ ನಿಯತ್ತು..! 

‘ನಾನು ಆರ್.ಸಿ.ಬಿಯಿಂದ ಹೊರ ಬರುತ್ತೇನೆ’ ಎಂದು ವಿರಾಟ್ ಒಂದು ಮಾತು ಹೇಳಿದ್ದರೆ ಸಾಕಿತ್ತು.. ಐಪಿಎಲ್ ಚರಿತ್ರೆಯೇ ಬೆರಗಾಗುವಷ್ಟರ ಮಟ್ಟಿಗೆ ಕೋಟಿಗಳ ಲೆಕ್ಕದಲ್ಲಿ ಬೆಲೆ ಕಟ್ಟಲು ಸಿದ್ಧರಿದ್ದರು, ರೆಡ್ ಕಾರ್ಪೆಟ್ ಸ್ವಾಗತದೊಂದಿಗೆ.. 

ಆದರೆ ‘ನಾನೆಂದಿಗೂ ಆರ್.ಸಿ.ಬಿ ಬಿಟ್ಟು ಹೋಗಲಾರೆ’ ಎಂದು ಬಿಟ್ಟ ವಿರಾಟ್. 

ದುಡ್ಡಿಗಿಂತ ಕ್ರಿಕೆಟ್ ಬದುಕು ಕಟ್ಟಿಕೊಟ್ಟ.., 

ಅವನು ಏನೂ ಅಲ್ಲದಿದ್ದಾಗ ಅವಕಾಶ ಕೊಟ್ಟ.., 

ನಿರೀಕ್ಷೆಗಳನ್ನು ಹುಸಿಗೊಳಿಸಿ ಎಡವಿ ಬಿದ್ದಾಗ ಕೈ ಹಿಡಿದು ಮೇಲೆತ್ತಿದ.., 

‘ನೀನು ನನ್ಮ ಹೆಮ್ಮೆ, ನೀನು ನಮ್ಮ ಗರ್ವ, ನೀನು ನಮ್ಮ ಕಿರೀಟ’ ಎಂದು ತಲೆಯ ಮೇಲೆ ಹೊತ್ತು ಮೆರೆಸಿದ ಫ್ರಾಂಚೈಸಿಯನ್ನು ತೊರೆಯಲು ಬಿಡಲಿಲ್ಲ ಆ ನಿಯತ್ತು. 

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಬಗ್ಗೆ ವಿರಾಟ್ ಕೊಹ್ಲಿ ಎದೆಯಲ್ಲಿ ಇಂಥಾ ನಿಯತ್ತನ್ನು ತಂದವರು ಆ ತಂಡದ ನಿಯತ್ತಿನ ಅಭಿಮಾನಿಗಳು.. ವಿರಾಟ್ ಕೊಹ್ಲಿ ಆಡಿದ್ದು, ಆಡುತ್ತಿರುವುದು ಆ ಅಭಿಮಾನಿಗಳಿಗಾಗಿ. ಇಂಥಾ ಅಭಿಮಾನಿಗಳು ಯಾವ ತಂಡಕ್ಕೂ ಸಿಗಲಾರರು. ಅಷ್ಟರ ಮಟ್ಟಿಗೆ ಆರ್.ಸಿ.ಬಿ ಧನ್ಯ.. 

 ಮಹಾಭಾರತ ಯುದ್ಧ ನಡೆದದ್ದು 18 ದಿನ.. 18ನೇ ದಿನ ಕುರುಕ್ಷೇತ್ರದಲ್ಲಿ ಕೌರವರ ವಿರುದ್ಧ ಪಾಂಡವರ ವಿಜಯ ದುಂಧುಬಿ ಮೊಳಗಿತ್ತು.. ರಾಯಲ್ ಚಾಲೆಂಜರ್ಸ್  ಅರ್ಜುನನಿಗೆ ಅದೊಂದು ಮಹಾ ಗೆಲುವು ಸಿಕ್ಕಿರುವುದು 18 ವರ್ಷಗಳ ನಂತರ..

ಹುಡುಗನಾಗಿ ಬೆಂಗಳೂರು ತಂಡಕ್ಕೆ ಕಾಲಿಟ್ಟಿದ್ದವನು ಇವತ್ತು ಕ್ರಿಕೆಟ್ ಲೋಕದ ದಿಗ್ಗಜನಾಗಿ ಕ್ರಿಕೆಟ್ ಜಗತ್ತಿನ ಅತೀ ದೊಡ್ಡ ಟಿ20 ಲೀಗ್’ನ ಟ್ರೋಫಿಯನ್ನು ಎತ್ತಿ ಹಿಡಿದಿದ್ದಾನೆ.  

ವಿರಾಟ್ ಕೊಹ್ಲಿಗೆ ಈ ಟ್ರೋಫಿ ಅದೆಷ್ಟು ಮುಖ್ಯವಾಗಿತ್ತು ಎಂಬುದಕ್ಕೆ ಸಾಕ್ಷಿ ಅವನು ಹಾಕಿದ ಕಣ್ಣೀರು. ವಿರಾಟ್ ಕೊಹ್ಲಿಯ ಗೆಲುವು ಐಪಿಎಲ್ ಗೆಲುವು.. ಕೊಹ್ಲಿ ಕೈಯಲ್ಲಿ ಆ ಕಪ್ ಇಲ್ಲದೆ ಐಪಿಎಲ್ ಚರಿತ್ರೆಯೇ ಅಪೂರ್ಣವಾಗುತ್ತಿತ್ತು. 

2008: ಅಂಡರ್-19 ವಿಶ್ವಕಪ್

2011: ಏಕದಿನ ವಿಶ್ವಕಪ್

2017, 2018, 2019: ಟೆಸ್ಟ್ ಕಿರೀಟ

2013, 2025: ಚಾಂಪಿಯನ್ಸ್ ಟ್ರೋಫಿ

2024:ಟಿ20 ವಿಶ್ವಕಪ್

2025: ಐಪಿಎಲ್ ಕಪ್

ಕ್ರಿಕೆಟ್’ಗೆ ಘನತೆ ತಂದು ಕೊಟ್ಟ ವಿರಾಟ್ ಕೊಹ್ಲಿ ಗೆದ್ದಿದ್ದಾನೆ.. ಎಲ್ಲವನ್ನೂ.. ಎಲ್ಲರ ಹೃದಯವನ್ನು. ಕೊಹ್ಲಿ ಗೆಲುವು ಕ್ರಿಕೆಟ್’ನ ಗೆಲುವು. 

LEAVE A REPLY

Please enter your comment!
Please enter your name here

three + twelve =

Latest news

ಶಾಂಭವಿ ಟ್ರೋಫಿ 2026:ಚಾಂತಾರು  ಗ್ಲೋಬಲ್ ಕ್ರೀಡಾಂಗಣದಲ್ಲಿ ಬ್ರಹ್ಮಾವರ ವಲಯ ಮಟ್ಟದ ಕ್ರಿಕೆಟ್ ಟೂರ್ನಮೆಂಟ್

ಶಾಂಭವಿ ಟ್ರೋಫಿ 2026:ಚಾಂತಾರು ಗ್ಲೋಬಲ್ ಕ್ರೀಡಾಂಗಣದಲ್ಲಿ ಬ್ರಹ್ಮಾವರ ವಲಯ ಮಟ್ಟದ ಕ್ರಿಕೆಟ್ ಟೂರ್ನಮೆಂಟ್ ಚಾಂತಾರು: ಚಾಂತಾರು ಗ್ರಾಮದಲ್ಲಿ ಕ್ರಿಕೆಟ್ ಪ್ರೇಮಿಗಳಿಗೆ ಹಬ್ಬದ ವಾತಾವರಣ ಸೃಷ್ಟಿಸುವ ಉದ್ದೇಶದಿಂದ **ಶಾಂಭವಿ...

Retro Bet Online Casino: Quick Wins for the Busy Player

Retro Bet has carved out a niche for those who crave instant gratification and fast-paced gaming. If you’re someone...

Spinch Casino: Quick Spin Thrills für Fans des schnellen Spiels

1. Quick Burst Gaming: Warum kurze Sessions wichtig sindWenn die Uhr runterzählt, steigt der Adrenalinspiegel. Spieler, die kurze, hochintensive...

LevelUp Casino: Schnelle Gewinne und rasantes Action für den modernen Spieler

In der heutigen schnelllebigen Welt ist ein Casino, das Ihre Zeit respektiert, ein echtes Juwel. LevelUp Casino hat sich...
- Advertisement -spot_imgspot_img

BildBet Casino: Fast‑Track Slots für schnelle Gewinne

Wenn Sie unterwegs sind—zwischen Meetings, beim Zugfahren oder einfach während einer Mittagspause—bietet BildBet eine Möglichkeit, das Casino-Feeling zu erleben,...

ಕರೂಣ್ ನಾಯರ್ ಗೆ ಕೋಸ್ಟಲ್ ಕಿಂಗ್ಸ್ ಮಂಗಳೂರು ತಂಡದ ನಾಯಕತ್ವ

ಕರೂಣ್ ನಾಯರ್ ಗೆ ಕೋಸ್ಟಲ್ ಕಿಂಗ್ಸ್ ಮಂಗಳೂರು ತಂಡದ ನಾಯಕತ್ವ ಮಹಾರಾಜ ಟ್ರೋಫಿ ಕೆಎಸ್ಸಿಎ ಟಿ20 ಸೀಸನ್-5ಕ್ಕೆ ಸಜ್ಜಾದ ಫ್ರಾಂಚೈಸಿ; ತಂಡದ ಜೆರ್ಸಿ, ಗೀತೆ ಹಾಗೂ ನಾಯಕತ್ವ...

Must read

- Advertisement -spot_imgspot_img

You might also likeRELATED
Recommended to you