ಸಂತಾಪವೆಸ್ಟ್‌ವಿಂಡೀಸ್‌ ಮಾಜಿ ಕೀಪರ್‌ ಡೇವಿಡ್‌ ಮರ್ರೆ ನಿಧನ

ವೆಸ್ಟ್‌ವಿಂಡೀಸ್‌ ಮಾಜಿ ಕೀಪರ್‌ ಡೇವಿಡ್‌ ಮರ್ರೆ ನಿಧನ

-

- Advertisment -spot_img
ಬಾರ್ಬಡೊಸ್‌: ಒಂದುಕಾಲದ ಬಲಿಷ್ಠ ಕ್ರಿಕೆಟ್ ತಂಡ ವೆಸ್ಟ್‌ ಇಂಡೀಸ್‌ನ ಭಯಾನಕ ಹಾಗೂ ಘಾತಕ ವೇಗಿಗಳ ಕಾಲಘಟ್ಟದಲ್ಲಿ ಅಮೋಘ ಕೀಪಿಂಗ್‌ ನಡೆಸಿ ವಿಶ್ವಖ್ಯಾತಿ ಪಡೆದಂತಹ ಶ್ರೇಷ್ಠ ಕ್ರಿಕೆಟ್ ಆಟಗಾರ ಡೇವಿಡ್‌ ಮರ್ರೆ (72) ಇನ್ನೂ ನೆನಪು ಮಾತ್ರ.
ಇವರ ನಿಧನವನ್ನು ವೆಸ್ಟ್‌ ಇಂಡೀಸ್‌ ಕ್ರಿಕೆಟ್‌ ಮಂಡಳಿ ಒಂದು ದಿನ ವಿಳಂಬವಾಗಿ ಘೋಷಿಸಿದೆ.
ಡೇವಿಡ್‌ ಆ್ಯಂಟನಿ ಮರ್ರೆ ವೆಸ್ಟ್ ಇಂಡೀಸ್‌ನ ಖ್ಯಾತ ತ್ರಿವಳಿ “ಡಬ್ಲ್ಯು’ ಗಳಲ್ಲಿ ಒಬ್ಬರಾದ ಎವರ್ಟನ್‌ ವೀಕ್ಸ್‌ ಅವರ ಪುತ್ರ. 1973ರ ಇಂಗ್ಲೆಂಡ್‌ ಪ್ರವಾಸದ ವೇಳೆ ವಿಂಡೀಸ್‌ ತಂಡಕ್ಕೆ ಆಯ್ಕೆಯಾದರು. ಆದರೆ ಟೆಸ್ಟ್‌ ಪಾದಾರ್ಪಣೆ  ಮಾಡಿದ್ದು 1978 ರಲ್ಲಿ ಅಂದು ಪ್ರವಾಸಿ ಆಸ್ಟ್ರೇಲಿಯಾ ತಂಡದ ಆಗಮನದ ವೇಳೆ. 19 ಟೆಸ್ಟ್‌, 10 ಏಕದಿನ ಪಂದ್ಯಗಳನ್ನು ಆಡಿದ್ದ ಮರ್ರೆ
ಮಾರ್ಷಲ್‌, ಹೋಲ್ಡಿಂಗ್‌ ಮೊದ ಲಾದ ವಿಂಡೀಸ್ ಬಲಿಷ್ಠ ವೇಗಿಗಳ ಎಸೆತಗಳನ್ನು ಯಾವುದೇ ಅಳುಕಿಲ್ಲದೆ ನಿರಾಯಾಸವಾಗಿ ಗ್ಲೌಸ್‌ಗೆ ಸೇರಿಸಿಕೊಳ್ಳುತ್ತಿದ್ದ ಹೆಗ್ಗಳಿಕೆ ಮರ್ರೆ ಅವರದಾಗಿತ್ತು.
ಆದರೆ ಹದಿಮೂರನೇ ವಯಸ್ಸಿನಲ್ಲೇ ಅಂಟಿಕೊಂಡ ಮರಿಜುವಾನಾ ಚಟ, 1983ರಲ್ಲಿ ದಕ್ಷಿಣ ಆಫ್ರಿಕಾಕ್ಕೆ ಬಂಡುಕೋರನಾಗಿ ತೆರಳಲು ದೊಡ್ಡ ಮೊತ್ತ ಪಡೆದದ್ದು ಮರ್ರೆ ಅವರ ಕ್ರಿಕೆಟ್‌ ಬದುಕನ್ನು ಬಹಳ ಬೇಗ ಮೊಟಕುಗೊಳಿಸಿತು. ಇನ್ನಷ್ಟು ಎತ್ತರಕ್ಕೆ ಬೆಳೆಯ ಬೇಕಾಗಿದ್ದ ಮರ್ರೆ ತಮ್ಮ ‌ಕೈಯಾರೆ ತಮ್ಮ ಉತ್ತಂಗ ಕ್ರಿಕೆಟ್ ಬದುಕನ್ನು ನಾಶಮಾಡಿಕೊಂಡಿದ್ದು ಮಾತ್ರ ದುರಂತವೆ ಹೌದು
ಇಂದು ಹೆಸರಾಂತ ಹಿರಿಯ ಕ್ರಿಕೆಟಿಗ ಮರ್ರೆ ತಮ್ಮ ಎಪ್ಪತ್ತೆರಡನೆ ವಯಸ್ಸಿನಲ್ಲಿ ತಮ್ಮ ‌ಬದುಕಿಗೆ ವಿಧಾಯ ಹೇಳಿ ಇಹಲೋಕ ತೆಜಿಸಿದ್ದಾರೆ. ಇವರ ಅಕಾಲಿಕ ಮರಣಕ್ಕೆ ಅಸಂಖ್ಯಾತ ಕ್ರಿಕೆಟ್ ಅಭಿಮಾನಿಗಳು ಕಂಬನಿ ಮಿಡಿದಿದ್ದಾರೆ
ಸುಧೀರ್ ವಿಧಾತ
ಸುಧೀರ್ ವಿಧಾತ
*- ಸುಧೀರ್ ವಿಧಾತ, ಭಾರತ್ ಕ್ರಿಕೆಟರ್ಸ್, ಶಿವಮೊಗ್ಗ*

LEAVE A REPLY

Please enter your comment!
Please enter your name here

eight + nineteen =

Latest news

ಉರ್ವಾ ಮೈದಾನದಲ್ಲಿ ಮಂಗಳಾಪುರ ಟ್ರೋಫಿ ಸಂಭ್ರಮ – ಕೊಂಕಣ್ ಎಕ್ಸ್‌ಪ್ರೆಸ್ ಚಾಂಪಿಯನ್

ಉರ್ವಾ ಮೈದಾನದಲ್ಲಿ ಮಂಗಳಾಪುರ ಟ್ರೋಫಿ ಸಂಭ್ರಮ – ಕೊಂಕಣ್ ಎಕ್ಸ್‌ಪ್ರೆಸ್ ಚಾಂಪಿಯನ್ ಮಂಗಳೂರು ಉರ್ವಾ ಮೈದಾನದಲ್ಲಿ ಎರಡು ದಿನಗಳ ಕಾಲ ಹೊನಲು ಬೆಳಕಿನಲ್ಲಿ ನಡೆದ “ಮಂಗಳಾಪುರ ಟ್ರೋಫಿ...

ಹೊಸಂಗಡಿಯಲ್ಲಿ ಕುಂಬ್ರಿ ಪ್ರೀಮಿಯರ್ ಲೀಗ್ – 2026 ‘HPL-2K26’ ಕ್ರಿಕೆಟ್ ಸಂಭ್ರಮ

ಹೊಸಂಗಡಿಯಲ್ಲಿ ಕುಂಬ್ರಿ ಪ್ರೀಮಿಯರ್ ಲೀಗ್ – 2026 'HPL-2K26’ ಕ್ರಿಕೆಟ್ ಸಂಭ್ರಮ ಫ್ರೆಂಡ್ಸ್ ಹೊಸಂಗಡಿ ವತಿಯಿಂದ ಮೇ 9 ಮತ್ತು 10 ರಂದು ಹೊಸಂಗಡಿಯ ಅಂಬೇಡ್ಕರ್ ಕ್ರೀಡಾಂಗಣದಲ್ಲಿ...

ಮಾರುತಿ ಆಶ್ರಯ ಹಸ್ತಾಂತರ ಕಾರ್ಯಕ್ರಮ: ಮಾನವೀಯ ಸೇವೆಯ ಉದಾತ್ತ ಉದಾಹರಣೆ

ಮಾರುತಿ ಆಶ್ರಯ ಹಸ್ತಾಂತರ ಕಾರ್ಯಕ್ರಮ: ಮಾನವೀಯ ಸೇವೆಯ ಉದಾತ್ತ ಉದಾಹರಣೆ ಉಳ್ಳಾಲ, ಮೇ 5: ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಮಾರುತಿ ಜನಸೇವಾ ಸಂಘ (ರಿ) ಹಾಗೂ...

ಎಸ್‌ವಿಎಸ್ ಮೈದಾನದಲ್ಲಿ ಚಾರಿಟಿ ಕ್ರಿಕೆಟ್: ವಿಜೇತರಿಂದ ದೇಣಿಗೆಯ ಮಹತ್ವದ ಹೆಜ್ಜೆ

  ಎಸ್‌ವಿಎಸ್ ಮೈದಾನದಲ್ಲಿ ಚಾರಿಟಿ ಕ್ರಿಕೆಟ್: ವಿಜೇತರಿಂದ ದೇಣಿಗೆಯ ಮಹತ್ವದ ಹೆಜ್ಜೆ ಬಂಟ್ವಾಳ: ಅರ್ಜುನ್ ಭಂಡಾರ್ಕರ್ ಅವರ ಸೇವ್ ಲೈಫ್ ಚಾರಿಟೇಬಲ್ ಟ್ರಸ್ಟ್ (ರಿ) ವತಿಯಿಂದ ಆಶಕ್ತ ಕುಟುಂಬಗಳಿಗೆ...
- Advertisement -spot_imgspot_img

ಕೌಡೂರು ಮೈದಾನದಲ್ಲಿ ಉಡುಪಿ ಅಂಡರ್-15 ಟಿ-20 ಕ್ರಿಕೆಟ್ ಟೂರ್ನಿ: ಅಕ್ಷಯ ಕ್ರಿಕೆಟ್ ಅಕಾಡೆಮಿ ಚಾಂಪಿಯನ್

ಕೌಡೂರು ಮೈದಾನದಲ್ಲಿ ಉಡುಪಿ ಅಂಡರ್-15 ಟಿ-20 ಕ್ರಿಕೆಟ್ ಟೂರ್ನಿ: ಅಕ್ಷಯ ಕ್ರಿಕೆಟ್ ಅಕಾಡೆಮಿ ಚಾಂಪಿಯನ್ ಮಟ್ಟು ಅಸೋಸಿಯೇಟ್ಸ್, ಉಡುಪಿ, ಇವರ ಪ್ರಾಯೋಜಕತ್ವದಲ್ಲಿ, ಅಕ್ಷಯ ಕ್ರಿಕೆಟ್ ಅಕಾಡೆಮಿ ಉಡುಪಿ...

ಉಡುಪಿಯಲ್ಲಿ ಸುಸಜ್ಜಿತ ಫುಟ್ಬಾಲ್ ಕ್ರೀಡಾಂಗಣ ನಿರ್ಮಾಣ-ಎಂ.ಗಫೂರ್

ಉಡುಪಿಯಲ್ಲಿ ಸುಸಜ್ಜಿತ ಫುಟ್ಬಾಲ್ ಕ್ರೀಡಾಂಗಣ ನಿರ್ಮಾಣ-ಎಂ.ಗಫೂರ್ ಉಡುಪಿ-ಶಿವಾಸ್ ಫುಟ್ಬಾಲ್ ಕ್ಲಬ್ ಇವರ ವತಿಯಿಂದ ಅಂಡರ್ 21 ಹೊನಲು ಬೆಳಕಿನ ಫುಟ್ಬಾಲ್ ಪಂದ್ಯಾಟದ ಉದ್ಘಾಟನಾ ಸಮಾರಂಭ ಸಿಟಿ ಅರೆನಾ...

Must read

- Advertisement -spot_imgspot_img

You might also likeRELATED
Recommended to you