ಸಂತಾಪವೆಂಕಟರಮಣ ಪಿತ್ರೋಡಿ ಸಂಸ್ಥೆಯ ಮಾಜಿ ಅಧ್ಯಕ್ಷ,ಕ್ರಿಕೆಟ್ ಪಟು CA ಮಲ್ಲೇಶ್ ಕುಮಾರ್...

ವೆಂಕಟರಮಣ ಪಿತ್ರೋಡಿ ಸಂಸ್ಥೆಯ ಮಾಜಿ ಅಧ್ಯಕ್ಷ,ಕ್ರಿಕೆಟ್ ಪಟು CA ಮಲ್ಲೇಶ್ ಕುಮಾರ್ ನಿಧನ

-

- Advertisment -spot_img
ಉಡುಪಿ-ವೆಂಕಟರಮಣ ಸ್ಪೋರ್ಟ್ಸ್ & ಕಲ್ಚರಲ್ ಕ್ಲಬ್(ರಿ) ಪಿತ್ರೋಡಿ ಇದರ ಮಾಜಿ ಅಧ್ಯಕ್ಷರು,CA ಅಸೋಸಿಯೇಷನ್ ಕಾರ್ಯದರ್ಶಿಯಾಗಿದ್ದ ಮಲ್ಲೇಶ್ ಕುಮಾರ್ ಪಿತ್ರೋಡಿ(40) ಅಲ್ಪಕಾಲದ ಅಸೌಖ್ಯದಿಂದ ಬಳಲುತ್ತಿದ್ದು ಇಂದು ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.
ಅತ್ಯಂತ ಸರಳ ಸಜ್ಜನಿಕೆಯ ಸ್ವಭಾವದ ಮಲ್ಲೇಶ್ ಕುಮಾರ್ ಪಿತ್ರೋಡಿ ಇವರು ವೆಂಕಟರಮಣ ಪಿತ್ರೋಡಿ ತಂಡದ ಪ್ರಮುಖ ಆಟಗಾರರಾಗಿ ಹಲವಾರು ಜಿಲ್ಲಾ ಮತ್ತು ರಾಜ್ಯ ಮಟ್ಟದ ಪಂದ್ಯಾಟಗಳಲ್ಲಿ ಭಾಗವಹಿಸಿ ತನ್ನ ತಂಡಕ್ಕೆ ಪ್ರಶಸ್ತಿಯ ಗರಿ ಮೂಡಿಸಿದ್ದರು.ರಾಜ್ಯದ ಅತ್ಯಂತ ಶಿಸ್ತುಬದ್ಧ ತಂಡವಾಗಿ ಗುರುತಿಸಿಕೊಂಡ ವೆಂಕಟರಮಣ ಸ್ಪೋರ್ಟ್ಸ್ & ಕಲ್ಚರಲ್ ಕ್ಲಬ್ ನ ಶಿಸ್ತಿನ ಸಿಪಾಯಿಯಾಗಿ ಗುರುತಿಸಿಕೊಂಡ ಮಲ್ಲೇಶ್ ರವರು ಸಂಸ್ಥೆಯ ಅಧ್ಯಕ್ಷರಾಗಿ ಹಲವಾರು ಸಮಾಜಮುಖಿ ಕಾರ್ಯಕ್ರಮಗಳನ್ನು ಸಂಘಟಿಸಿದ್ದರು.ವಿ.ಎಸ್.ಸಿ ಬ್ಲಡ್ ಫಾರ್ ಲೈಫ್ ನ ರಕ್ತದಾನ ಸಂಘದ ಸದಸ್ಯರಾಗಿ ಹಲವು ಬಾರಿ ರಕ್ತದಾನ ಮಾಡುವ ಮೂಲಕ ಹಲವಾರು ಜೀವಗಳನ್ನು ರಕ್ಷಿಸುವಲ್ಲಿ ಸಹಕಾರಿಯಾಗಿದ್ದರು.
ಮಲ್ಲೇಶ್ ರವರು ಸಿ.ಎ ಉದ್ಯೋಗಿಯಾಗಿದ್ದು ಉಡುಪಿಯ ಬನ್ನಂಜೆಯಲ್ಲಿ ಕಛೇರಿಯನ್ನು ಹೊಂದಿದ್ದರು.ಸಿ.ಎ ಅಸೋಸಿಯೇಷನ್ ಕಾರ್ಯದರ್ಶಿಯಾಗಿ ಹಲವಾರು ಕಾರ್ಯಕ್ರಮಗಳನ್ನು ಸಂಘಟಿಸಿದ್ದರು.
ಮೃತರು ತಂದೆ,ತಾಯಿ,ಸೋದರಿ,ಪತ್ನಿ,ಪುತ್ರ ಹಾಗೂ ಇಬ್ಬರು ಪುಟ್ಟ ಮಕ್ಕಳ‌ ಸಹಿತ ಅಪಾರ ಬಂಧುಬಳಗ ಮತ್ತು ಸ್ನೇಹಿತ ವರ್ಗವನ್ನು ಅಗಲಿದ್ದಾರೆ.
ಅಗಲಿದ ದಿವ್ಯಾತ್ಮಕ್ಕೆ ಭಗವಂತ ಚಿರಶಾಂತಿ ಕರುಣಿಸಲಿ ಹಾಗೂ ಕುಟುಂಬ ವರ್ಗಕ್ಕೆ ಅಗಲಿಕೆಯ ನೋವನ್ನು ಮರೆಸುವ ಶಕ್ತಿ ನೀಡಲಿ ಎಂದು ರಾಜ್ಯ ಟೆನಿಸ್ ಕ್ರಿಕೆಟ್ ಮತ್ತು ಸ್ಪೋರ್ಟ್ಸ್ ಕನ್ನಡ ವೆಬ್ಸೈಟ್ ವತಿಯಿಂದ ಪ್ರಾರ್ಥಿಸುತ್ತೇವೆ…
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

LEAVE A REPLY

Please enter your comment!
Please enter your name here

18 + twelve =

Latest news

ಉಡುಪಿ ಜಿಲ್ಲಾಮಟ್ಟದ ಅಂಡರ್-15 ಲೆದರ್ ಬಾಲ್ ಕ್ರಿಕೆಟ್ ಟೂರ್ನಿ – 2026

ಉಡುಪಿ ಜಿಲ್ಲಾಮಟ್ಟದ ಅಂಡರ್-15 ಲೆದರ್ ಬಾಲ್ ಕ್ರಿಕೆಟ್ ಟೂರ್ನಿ – 2026 ಉಡುಪಿ: ಅಕ್ಷಯ ಕ್ರಿಕೆಟ್ ಅಕಾಡೆಮಿ, ಉಡುಪಿ ಮತ್ತು ಸನ್‌ರೈಸ್ ಕ್ರಿಕೆಟ್ ಅಕಾಡೆಮಿ, ರಂಗನಪಾಲ್ಕೆ ಇವರ...

ಗುರುಗಣೇಶ್ ನೇಜಾರು ಫ್ರೆಂಡ್ಶಿಫ್ ಟ್ರೋಫಿ-2026 ಚಾಂಪಿಯನ್ಸ್

ಗುರುಗಣೇಶ್ ನೇಜಾರು ಫ್ರೆಂಡ್ಶಿಫ್ ಟ್ರೋಫಿ-2026 ಚಾಂಪಿಯನ್ಸ್ ಕುಂದಾಪುರ-ಇಲ್ಲಿನ ಫ್ರೆಂಡ್ಸ್ ಕೆದೂರು ಮೊತ್ತ ಮೊದಲ ಬಾರಿಗೆ ಆಯೋಜಿಸಿದ 60 ಗಜಗಳ ಮುಕ್ತ ಟೆನಿಸ್ಬಾಲ್ ಕ್ರಿಕೆಟ್ ಪಂದ್ಯಾಟ ಫ್ರೆಂಡ್ಶಿಫ್ ಟ್ರೋಫಿ-2026...

ಕರ್ನಾಟಕ ರಾಜ್ಯ ಗ್ರಾಮ ಆಡಳಿತ ಅಧಿಕಾರಿ ಸಂಘ (ರಿ) ಮತ್ತು ಜಿಲ್ಲಾ ಘಟಕ ಶಿವಮೊಗ್ಗ ವತಿಯಿಂದ ರಾಜ್ಯಮಟ್ಟದ ಕ್ರೀಡಾಕೂಟ 2026

ಕರ್ನಾಟಕ ರಾಜ್ಯ ಗ್ರಾಮ ಆಡಳಿತ ಅಧಿಕಾರಿ ಸಂಘ (ರಿ) ಮತ್ತು ಜಿಲ್ಲಾ ಘಟಕ ಶಿವಮೊಗ್ಗ ವತಿಯಿಂದ ರಾಜ್ಯಮಟ್ಟದ ಕ್ರೀಡಾಕೂಟ 2026 ಕಂದಾಯ ಇಲಾಖೆ ಕರ್ನಾಟಕ ರಾಜ್ಯ ಗ್ರಾಮ...

ಮಣಿಪಾಲದಲ್ಲಿ ಅಂಡರ್-21 ಫ್ಲಡ್‌ಲೈಟ್ ಫುಟ್‌ಬಾಲ್ ಟೂರ್ನಿ – CHIVAS ಕಪ್ 2026

ಮಣಿಪಾಲದಲ್ಲಿ ಅಂಡರ್-21 ಫ್ಲಡ್‌ಲೈಟ್ ಫುಟ್‌ಬಾಲ್ ಟೂರ್ನಿ – CHIVAS CUP 2026 CHIVAS ಎಫ್‌ಸಿ ವತಿಯಿಂದ ಅಂಡರ್-21 ಫ್ಲಡ್‌ಲೈಟ್ ಟರ್ಫ್ ಲೀಗ್ ಟೂರ್ನಮೆಂಟ್ “CHIVAS ಕಪ್ 2026”...
- Advertisement -spot_imgspot_img

ಸುರತ್ಕಲ್‌ನಲ್ಲಿ ಮತ್ತೆ ಕ್ರಿಕೆಟ್ ಸಂಭ್ರಮ – ಲೆಜೆಂಡ್ಸ್ ಕ್ರಿಕೆಟ್ ಲೀಗ್ ಸೀಸನ್-5

ಸುರತ್ಕಲ್‌ನಲ್ಲಿ ಮತ್ತೆ ಕ್ರಿಕೆಟ್ ಸಂಭ್ರಮ – ಲೆಜೆಂಡ್ಸ್ ಕ್ರಿಕೆಟ್ ಲೀಗ್ ಸೀಸನ್-5 ಸುರತ್ಕಲ್ ಸ್ಪೋರ್ಟ್ಸ್ & ಕಲ್ಚರಲ್ ಕ್ಲಬ್ (ರಿ.) ಹಾಗೂ ಸುರತ್ಕಲ್ ಸ್ಪೋರ್ಟ್ಸ್ & ಕಲ್ಚರಲ್...

ಆಜ್ಮಾ ಟ್ರೋಫಿ – 2026 ಕ್ರಿಕೆಟ್ ಟೂರ್ನಿಗೆ ಭರ್ಜರಿ ಸಿದ್ಧತೆ

ಆಜ್ಮಾಟ್ರೋಫಿ – 2026 ಕ್ರಿಕೆಟ್ ಟೂರ್ನಿಗೆ ಭರ್ಜರಿ ಸಿದ್ಧತೆ ಪ್ರೆಂಡ್ಸ್ ನೇಜಾರ್ ಮತ್ತು ಇಸಾಕ್ ನೇಜಾರ್ ಇವರ ನೇತೃತ್ವದಲ್ಲಿ ನಡೆಯಲಿರುವ **ಆಜ್ಮಾ ಟ್ರೋಫಿ – 2026**...

Must read

- Advertisement -spot_imgspot_img

You might also likeRELATED
Recommended to you