22.5 C
London
Sunday, May 19, 2024
Homeಸಂತಾಪವೆಂಕಟರಮಣ ಪಿತ್ರೋಡಿ ಸಂಸ್ಥೆಯ ಮಾಜಿ ಅಧ್ಯಕ್ಷ,ಕ್ರಿಕೆಟ್ ಪಟು CA ಮಲ್ಲೇಶ್ ಕುಮಾರ್ ನಿಧನ

ವೆಂಕಟರಮಣ ಪಿತ್ರೋಡಿ ಸಂಸ್ಥೆಯ ಮಾಜಿ ಅಧ್ಯಕ್ಷ,ಕ್ರಿಕೆಟ್ ಪಟು CA ಮಲ್ಲೇಶ್ ಕುಮಾರ್ ನಿಧನ

Date:

Related stories

ನಿನ್ನ ಟೈಮ್ ಬಂದೇ ಬರುವುದು, ಹೀಗೇ ಆಡುತ್ತಿರು ಕರುಣ್..!

1996ರಲ್ಲಿ ಅರ್ಜುನ ರಣತುಂಗ ನಾಯಕತ್ವದ ಶ್ರೀಲಂಕಾ ತಂಡ ಏಕದಿನ ವಿಶ್ವಕಪ್ ಗೆದ್ದಾಗ...

ದುಡ್ಡಿನ ಮದದಲ್ಲಿ ಕೊಬ್ಬಿರುವ ಈ business tycoonಗಳಿಗೆ ದೇಶದ ಕ್ರಿಕೆಟ್ ಹೀರೊಗಳ ಮೇಲೆ ಗೌರವ ಇರಲು ಹೇಗೆ ಸಾಧ್ಯ..?

17 ವರ್ಷಗಳ ಐಪಿಎಲ್ ಚರಿತ್ರೆಯಲ್ಲಿ ಸಾವಿರಕ್ಕೂ ಹೆಚ್ಚು ಪಂದ್ಯಗಳು ನಡೆದಿವೆ. ಆ...

Reject ಪೀಸ್‌ಗಳು ವಾಪಸ್ ಎದ್ದು ಬಂದ ಕಥೆ..!

ಒಬ್ಬ by mistake ಪಂಜಾಬ್ ಕಿಂಗ್ಸ್ ತಂಡ ಸೇರಿದ್ದವ. ಇನ್ನೊಬ್ಬ ತನ್ನ...

ಇಂದು ವಿಶ್ವದ ಅತ್ಯಂತ ಪ್ರೀತಿಪಾತ್ರ ಕ್ರಿಕೆಟಿಗ ಧೋನಿಯ ಕೊನೆಯ ಪಂದ್ಯ..

ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯಲಿರುವ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಮುಂಬೈ...

T20 ವಿಶ್ವಕಪ್‌ನಲ್ಲಿ ಭಾರತದ ವಿಕೆಟ್‌ಕೀಪರ್ ಯಾರು? 5 ಆಟಗಾರರು ರೇಸ್ ನಲ್ಲಿ

ಐಪಿಎಲ್  ನಂತರ ಟಿ20 ವಿಶ್ವಕಪ್ ಆಡಬೇಕಿದೆ. ಈ ಮೆಗಾ  ಟೂರ್ನಿಯನ್ನು ಜೂನ್‌ನಲ್ಲಿ...
spot_imgspot_img
ಉಡುಪಿ-ವೆಂಕಟರಮಣ ಸ್ಪೋರ್ಟ್ಸ್ & ಕಲ್ಚರಲ್ ಕ್ಲಬ್(ರಿ) ಪಿತ್ರೋಡಿ ಇದರ ಮಾಜಿ ಅಧ್ಯಕ್ಷರು,CA ಅಸೋಸಿಯೇಷನ್ ಕಾರ್ಯದರ್ಶಿಯಾಗಿದ್ದ ಮಲ್ಲೇಶ್ ಕುಮಾರ್ ಪಿತ್ರೋಡಿ(40) ಅಲ್ಪಕಾಲದ ಅಸೌಖ್ಯದಿಂದ ಬಳಲುತ್ತಿದ್ದು ಇಂದು ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.
ಅತ್ಯಂತ ಸರಳ ಸಜ್ಜನಿಕೆಯ ಸ್ವಭಾವದ ಮಲ್ಲೇಶ್ ಕುಮಾರ್ ಪಿತ್ರೋಡಿ ಇವರು ವೆಂಕಟರಮಣ ಪಿತ್ರೋಡಿ ತಂಡದ ಪ್ರಮುಖ ಆಟಗಾರರಾಗಿ ಹಲವಾರು ಜಿಲ್ಲಾ ಮತ್ತು ರಾಜ್ಯ ಮಟ್ಟದ ಪಂದ್ಯಾಟಗಳಲ್ಲಿ ಭಾಗವಹಿಸಿ ತನ್ನ ತಂಡಕ್ಕೆ ಪ್ರಶಸ್ತಿಯ ಗರಿ ಮೂಡಿಸಿದ್ದರು.ರಾಜ್ಯದ ಅತ್ಯಂತ ಶಿಸ್ತುಬದ್ಧ ತಂಡವಾಗಿ ಗುರುತಿಸಿಕೊಂಡ ವೆಂಕಟರಮಣ ಸ್ಪೋರ್ಟ್ಸ್ & ಕಲ್ಚರಲ್ ಕ್ಲಬ್ ನ ಶಿಸ್ತಿನ ಸಿಪಾಯಿಯಾಗಿ ಗುರುತಿಸಿಕೊಂಡ ಮಲ್ಲೇಶ್ ರವರು ಸಂಸ್ಥೆಯ ಅಧ್ಯಕ್ಷರಾಗಿ ಹಲವಾರು ಸಮಾಜಮುಖಿ ಕಾರ್ಯಕ್ರಮಗಳನ್ನು ಸಂಘಟಿಸಿದ್ದರು.ವಿ.ಎಸ್.ಸಿ ಬ್ಲಡ್ ಫಾರ್ ಲೈಫ್ ನ ರಕ್ತದಾನ ಸಂಘದ ಸದಸ್ಯರಾಗಿ ಹಲವು ಬಾರಿ ರಕ್ತದಾನ ಮಾಡುವ ಮೂಲಕ ಹಲವಾರು ಜೀವಗಳನ್ನು ರಕ್ಷಿಸುವಲ್ಲಿ ಸಹಕಾರಿಯಾಗಿದ್ದರು.
ಮಲ್ಲೇಶ್ ರವರು ಸಿ.ಎ ಉದ್ಯೋಗಿಯಾಗಿದ್ದು ಉಡುಪಿಯ ಬನ್ನಂಜೆಯಲ್ಲಿ ಕಛೇರಿಯನ್ನು ಹೊಂದಿದ್ದರು.ಸಿ.ಎ ಅಸೋಸಿಯೇಷನ್ ಕಾರ್ಯದರ್ಶಿಯಾಗಿ ಹಲವಾರು ಕಾರ್ಯಕ್ರಮಗಳನ್ನು ಸಂಘಟಿಸಿದ್ದರು.
ಮೃತರು ತಂದೆ,ತಾಯಿ,ಸೋದರಿ,ಪತ್ನಿ,ಪುತ್ರ ಹಾಗೂ ಇಬ್ಬರು ಪುಟ್ಟ ಮಕ್ಕಳ‌ ಸಹಿತ ಅಪಾರ ಬಂಧುಬಳಗ ಮತ್ತು ಸ್ನೇಹಿತ ವರ್ಗವನ್ನು ಅಗಲಿದ್ದಾರೆ.
ಅಗಲಿದ ದಿವ್ಯಾತ್ಮಕ್ಕೆ ಭಗವಂತ ಚಿರಶಾಂತಿ ಕರುಣಿಸಲಿ ಹಾಗೂ ಕುಟುಂಬ ವರ್ಗಕ್ಕೆ ಅಗಲಿಕೆಯ ನೋವನ್ನು ಮರೆಸುವ ಶಕ್ತಿ ನೀಡಲಿ ಎಂದು ರಾಜ್ಯ ಟೆನಿಸ್ ಕ್ರಿಕೆಟ್ ಮತ್ತು ಸ್ಪೋರ್ಟ್ಸ್ ಕನ್ನಡ ವೆಬ್ಸೈಟ್ ವತಿಯಿಂದ ಪ್ರಾರ್ಥಿಸುತ್ತೇವೆ…
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

Latest stories

LEAVE A REPLY

Please enter your comment!
Please enter your name here

four × three =