SportsKannada | ಸ್ಪೋರ್ಟ್ಸ್ ಕನ್ನಡ

ವೆಂಕಟರಮಣ ಪಿತ್ರೋಡಿ ಸಂಸ್ಥೆಯ ಮಾಜಿ ಅಧ್ಯಕ್ಷ,ಕ್ರಿಕೆಟ್ ಪಟು CA ಮಲ್ಲೇಶ್ ಕುಮಾರ್ ನಿಧನ

ಉಡುಪಿ-ವೆಂಕಟರಮಣ ಸ್ಪೋರ್ಟ್ಸ್ & ಕಲ್ಚರಲ್ ಕ್ಲಬ್(ರಿ) ಪಿತ್ರೋಡಿ ಇದರ ಮಾಜಿ ಅಧ್ಯಕ್ಷರು,CA ಅಸೋಸಿಯೇಷನ್ ಕಾರ್ಯದರ್ಶಿಯಾಗಿದ್ದ ಮಲ್ಲೇಶ್ ಕುಮಾರ್ ಪಿತ್ರೋಡಿ(40) ಅಲ್ಪಕಾಲದ ಅಸೌಖ್ಯದಿಂದ ಬಳಲುತ್ತಿದ್ದು ಇಂದು ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.
ಅತ್ಯಂತ ಸರಳ ಸಜ್ಜನಿಕೆಯ ಸ್ವಭಾವದ ಮಲ್ಲೇಶ್ ಕುಮಾರ್ ಪಿತ್ರೋಡಿ ಇವರು ವೆಂಕಟರಮಣ ಪಿತ್ರೋಡಿ ತಂಡದ ಪ್ರಮುಖ ಆಟಗಾರರಾಗಿ ಹಲವಾರು ಜಿಲ್ಲಾ ಮತ್ತು ರಾಜ್ಯ ಮಟ್ಟದ ಪಂದ್ಯಾಟಗಳಲ್ಲಿ ಭಾಗವಹಿಸಿ ತನ್ನ ತಂಡಕ್ಕೆ ಪ್ರಶಸ್ತಿಯ ಗರಿ ಮೂಡಿಸಿದ್ದರು.ರಾಜ್ಯದ ಅತ್ಯಂತ ಶಿಸ್ತುಬದ್ಧ ತಂಡವಾಗಿ ಗುರುತಿಸಿಕೊಂಡ ವೆಂಕಟರಮಣ ಸ್ಪೋರ್ಟ್ಸ್ & ಕಲ್ಚರಲ್ ಕ್ಲಬ್ ನ ಶಿಸ್ತಿನ ಸಿಪಾಯಿಯಾಗಿ ಗುರುತಿಸಿಕೊಂಡ ಮಲ್ಲೇಶ್ ರವರು ಸಂಸ್ಥೆಯ ಅಧ್ಯಕ್ಷರಾಗಿ ಹಲವಾರು ಸಮಾಜಮುಖಿ ಕಾರ್ಯಕ್ರಮಗಳನ್ನು ಸಂಘಟಿಸಿದ್ದರು.ವಿ.ಎಸ್.ಸಿ ಬ್ಲಡ್ ಫಾರ್ ಲೈಫ್ ನ ರಕ್ತದಾನ ಸಂಘದ ಸದಸ್ಯರಾಗಿ ಹಲವು ಬಾರಿ ರಕ್ತದಾನ ಮಾಡುವ ಮೂಲಕ ಹಲವಾರು ಜೀವಗಳನ್ನು ರಕ್ಷಿಸುವಲ್ಲಿ ಸಹಕಾರಿಯಾಗಿದ್ದರು.
ಮಲ್ಲೇಶ್ ರವರು ಸಿ.ಎ ಉದ್ಯೋಗಿಯಾಗಿದ್ದು ಉಡುಪಿಯ ಬನ್ನಂಜೆಯಲ್ಲಿ ಕಛೇರಿಯನ್ನು ಹೊಂದಿದ್ದರು.ಸಿ.ಎ ಅಸೋಸಿಯೇಷನ್ ಕಾರ್ಯದರ್ಶಿಯಾಗಿ ಹಲವಾರು ಕಾರ್ಯಕ್ರಮಗಳನ್ನು ಸಂಘಟಿಸಿದ್ದರು.
ಮೃತರು ತಂದೆ,ತಾಯಿ,ಸೋದರಿ,ಪತ್ನಿ,ಪುತ್ರ ಹಾಗೂ ಇಬ್ಬರು ಪುಟ್ಟ ಮಕ್ಕಳ‌ ಸಹಿತ ಅಪಾರ ಬಂಧುಬಳಗ ಮತ್ತು ಸ್ನೇಹಿತ ವರ್ಗವನ್ನು ಅಗಲಿದ್ದಾರೆ.
ಅಗಲಿದ ದಿವ್ಯಾತ್ಮಕ್ಕೆ ಭಗವಂತ ಚಿರಶಾಂತಿ ಕರುಣಿಸಲಿ ಹಾಗೂ ಕುಟುಂಬ ವರ್ಗಕ್ಕೆ ಅಗಲಿಕೆಯ ನೋವನ್ನು ಮರೆಸುವ ಶಕ್ತಿ ನೀಡಲಿ ಎಂದು ರಾಜ್ಯ ಟೆನಿಸ್ ಕ್ರಿಕೆಟ್ ಮತ್ತು ಸ್ಪೋರ್ಟ್ಸ್ ಕನ್ನಡ ವೆಬ್ಸೈಟ್ ವತಿಯಿಂದ ಪ್ರಾರ್ಥಿಸುತ್ತೇವೆ…
Exit mobile version