ಕ್ರಿಕೆಟ್ಫ್ರೆಂಡ್ಸ್ ಬೆಂಗಳೂರು ಕಪ್-2023 ಅಂತರಾಷ್ಟ್ರೀಯ ಮಟ್ಟದ ಪಂದ್ಯಾಟಕ್ಕೆ ಅದ್ದೂರಿ ಚಾಲನೆ

ಫ್ರೆಂಡ್ಸ್ ಬೆಂಗಳೂರು ಕಪ್-2023 ಅಂತರಾಷ್ಟ್ರೀಯ ಮಟ್ಟದ ಪಂದ್ಯಾಟಕ್ಕೆ ಅದ್ದೂರಿ ಚಾಲನೆ

-

- Advertisment -spot_img
ಬೆಂಗಳೂರು-ಪೀಣ್ಯ 2 ನೇ ಹಂತದಲ್ಲಿ,ಫ್ರೆಂಡ್ಸ್ ಬೆಂಗಳೂರು ತಂಡ ಸುಮಾರು 25 ಲಕ್ಷ ರೂ ವೆಚ್ಚದಲ್ಲಿ ಸಜ್ಜುಗೊಳಿಸಿದ  ಮೈದಾನದಲ್ಲಿ ಅಂತರಾಷ್ಟ್ರೀಯ ಮಟ್ಟದ ಫ್ರೆಂಡ್ಸ್ ಬೆಂಗಳೂರು ಕಪ್-2023 ಬುಧವಾರದಂದು ಅದ್ಧೂರಿಯ ಚಾಲನೆ ದೊರಕಿದೆ.
ಕರ್ನಾಟಕ ರಾಜ್ಯ ಟೆನಿಸ್ಬಾಲ್ ಕ್ರಿಕೆಟ್ ಇತಿಹಾಸದಲ್ಲೇ  ಮೊತ್ತಮೊದಲ ಬಾರಿಗೆ ಉಚಿತ ಪ್ರವೇಶಾತಿ ಮತ್ತು 5 ಲಕ್ಷ ನಗದು ಬಹುಮಾನದ ಜೊತೆಗೆ ಆಕರ್ಷಕ ಉಡುಗೊರೆಗಳ ಮಹಾಪೂರವನ್ನೇ ಹರಿಸಲಾಗುತ್ತಿದ್ದು,ಮೊದಲ ಬಾರಿಗೆ ಶ್ರೀಲಂಕಾ ತಂಡ ಸಾಫ್ಟ್ ಟೆನಿಸ್ಬಾಲ್ ಕ್ರಿಕೆಟ್ ಪಂದ್ಯಾಟದಲ್ಲಿ ಭಾಗವಹಿಸುತ್ತಿದ್ದು,ಇತರ ರಾಜ್ಯಗಳ ಒಟ್ಟು 8 ತಂಡಗಳು ಸೇರಿದಂತೆ ಒಟ್ಟು 49 ತಂಡಗಳು ಭಾಗವಹಿಸುತ್ತಿದ್ದು ದಾಖಲೆಯ ಪಂದ್ಯಾಟವಾಗಿ ಹೊರಹೊಮ್ಮಿದೆ.
ಬುಧವಾರದಂದು ಬೆಂಗಳೂರಿನ ತಂಡಗಳಿಗೆ ಅವಕಾಶ ನೀಡಲಾಗಿದ್ದು ಒಟ್ಟು 11 ಪಂದ್ಯಗಳು ನಡೆಯಿತು.
ಎಸ್.ಝಡ್‌‌‌.ಸಿ.ಸಿ ಬೆಂಗಳೂರು
ಸತತ 2 ಗೆಲುವನ್ನು ದಾಖಲಿಸಿದೆ‌.ಇನ್ನುಳಿದ ವಿಜೇತ ತಂಡಗಳ ಭವಿಷ್ಯ ಶುಕ್ರವಾರ ನಿರ್ಧಾರವಾಗಲಿದೆ.ಇಂದು ಗುರುವಾರ ಹೊರ ಜಿಲ್ಲೆಯ ತಂಡಗಳು ಸ್ಪರ್ಧಿಸಲಿದೆ.
 25 ಬುಧವಾರ ಸಂಜೆ ನಡೆದ ಉದ್ಘಾಟನಾ ಕಾರ್ಯಕ್ರಮದಲ್ಲಿ ದಾಸರಹಳ್ಳಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಆರ್.ಮಂಜುನಾಥ್ ರವರು ದೀಪ ಬೆಳಗಿಸಿದರು.ಈ ಸಂದರ್ಭ ರಾಮೇಗೌಡರು,ಸಮಾಜ ಸೇವಕಿ ಹಾಗೂ ಕ್ರೀಡಾ ಪ್ರೋತ್ಸಾಹಕಿ ಡಾ.ಗಾಯತ್ರಿ ಮುತ್ತಪ್ಪ,ರೇಣು ಗೌಡ,ಕಿರಣ್ ಗೌಡ,ಫ್ರೆಂಡ್ಸ್ ಬೆಂಗಳೂರು ತಂಡದ ಸರ್ವ ಸದಸ್ಯರು ಉಪಸ್ಥಿತರಿದ್ದರು…
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

LEAVE A REPLY

Please enter your comment!
Please enter your name here

two × four =

Latest news

CCLನಲ್ಲಿ ರಾಜೀವ್ ಹನು ಶತಕ – ತೆಲುಗು ವಾರಿಯರ್ಸ್ ವಿರುದ್ಧ ಸಾಧನೆ

CCLನಲ್ಲಿ ರಾಜೀವ್ ಹನು ಶತಕ – ತೆಲುಗು ವಾರಿಯರ್ಸ್ ವಿರುದ್ಧ ಸಾಧನೆ ಸೆಲೆಬ್ರಿಟಿ ಕ್ರಿಕೆಟ್ ಲೀಗ್ (CCL) ಟೂರ್ನಿಯ ಇತ್ತೀಚೆಗೆ ನಡೆದ ಪಂದ್ಯದಲ್ಲಿ ಕರ್ನಾಟಕ ಬುಲ್ಡೋಜರ್ಸ್ ತಂಡದ...

ಶ್ರೀ ಲಕ್ಷ್ಮೀವರತೀರ್ಥಶ್ರೀ ಲೆಜೆಂಡ್ಸ್ ಕಪ್–2026: ಕ್ರೀಡಾ ಹಬ್ಬಕ್ಕೆ ಸಜ್ಜಾದ ಶ್ರೀ ಕೃಷ್ಣ ಕ್ಷೇತ್ರ.

ಶ್ರೀ ಲಕ್ಷ್ಮೀವರತೀರ್ಥಶ್ರೀ ಲೆಜೆಂಡ್ಸ್ ಕಪ್–2026: ಕ್ರೀಡಾ ಹಬ್ಬಕ್ಕೆ ಸಜ್ಜಾದ  ಶ್ರೀ ಕೃಷ್ಣ ಕ್ಷೇತ್ರ. ಧರ್ಮ ಕ್ರೀಡೆ ಸಾಹಿತ್ಯ ಸಂಸ್ಕೃತಿಯ ಮಹಾಪೋಷಕರಾಗಿದ್ದ ಶ್ರೀಶಿರೂರುಮಠದ ಪೀಠಾಧಿಪತಿ ಕೀರ್ತಿಶೇಷ ಶ್ರೀಲಕ್ಷ್ಮೀವರತೀರ್ಥಶ್ರೀಪಾದರ ಸ್ಮರಣಾರ್ಥ...

HMC ಯುನೈಟೆಡ್ ಟ್ರೋಫಿ–2026: ಪೂಲ್ ‘ಎ’ ಪಂದ್ಯಗಳ ವೇಳಾಪಟ್ಟಿ ಪ್ರಕಟ

HMC ಯುನೈಟೆಡ್ ಟ್ರೋಫಿ–2026: ಪೂಲ್ ‘ಎ’ ಪಂದ್ಯಗಳ ವೇಳಾಪಟ್ಟಿ ಪ್ರಕಟ ಅಂತರರಾಷ್ಟ್ರೀಯ ಮಟ್ಟದ ಟೆನಿಸ್ ಬಾಲ್ ಕ್ರಿಕೆಟ್ ಮಹೋತ್ಸವವಾಗಿರುವ HMC ಯುನೈಟೆಡ್ ಟ್ರೋಫಿ–2026ಗೆ ಭರ್ಜರಿ ಚಾಲನೆ ದೊರೆತಿದ್ದು,...

ಕಿದಿಯೂರಿನಲ್ಲಿ ಎಸ್‌ಎನ್‌ಜಿ ಪ್ರೀಮಿಯರ್ ಲೀಗ್ – ‘ಎಸ್‌ಎನ್‌ಜಿ ಟ್ರೋಫಿ 2026’ ಕ್ರಿಕೆಟ್ ಪಂದ್ಯಾವಳಿ

  ಕಿದಿಯೂರಿನಲ್ಲಿ ಎಸ್‌ಎನ್‌ಜಿ ಪ್ರೀಮಿಯರ್ ಲೀಗ್ – ‘ಎಸ್‌ಎನ್‌ಜಿ ಟ್ರೋಫಿ 2026’ ಕ್ರಿಕೆಟ್ ಪಂದ್ಯಾವಳಿ   ಕಿದಿಯೂರಿನ ಎಸ್‌ಎನ್‌ಜಿ ಸ್ಪೋರ್ಟ್ಸ್ ಕ್ಲಬ್ ತನ್ನ 12ನೇ ವಾರ್ಷಿಕೋತ್ಸವದ ಅಂಗವಾಗಿ ಕ್ರಿಕೆಟ್ ಪಂದ್ಯಾವಳಿ...
- Advertisement -spot_imgspot_img

HMC ಯುನೈಟೆಡ್ ಟ್ರೋಫಿ 2026-ಅಂತರರಾಷ್ಟ್ರೀಯಸಾಫ್ಟ್ ಟೆನಿಸ್ಬಾಲ್ ಕ್ರಿಕೆಟ್ ಹಬ್ಬಕ್ಕೆ ಕ್ಷಣಗಣನೆ ಪ್ರಾರಂಭ.

HMC ಯುನೈಟೆಡ್ ಟ್ರೋಫಿ 2026-ಅಂತರರಾಷ್ಟ್ರೀಯಸಾಫ್ಟ್ ಟೆನಿಸ್ಬಾಲ್ ಕ್ರಿಕೆಟ್ ಹಬ್ಬಕ್ಕೆ ಕ್ಷಣಗಣನೆ ಪ್ರಾರಂಭ. HMC ಸಂಸ್ಥೆಯ 15ನೇ ವಾರ್ಷಿಕೋತ್ಸವದ ಅಂಗವಾಗಿ ಆಯೋಜಿಸಲಾಗುತ್ತಿರುವ HMC ಯುನೈಟೆಡ್ ಟ್ರೋಫಿ 2026 ಅಂತರರಾಷ್ಟ್ರೀಯ...

ಫ್ರೆಂಡ್ಸ್ ಕ್ರಿಕೆಟ್ ಲೀಗ್ ಸೀಸನ್–1ಕ್ಕೆ ಸಿದ್ಧತೆ ; ಬಕ್ಕರ್ ಮೆಮೋರಿಯಲ್ ಕ್ರಿಕೆಟ್ ಟೂರ್ನಮೆಂಟ್‌ಗೆ ಶ್ರೀನಿವಾಸಪುರ ಸಜ್ಜು

ಫ್ರೆಂಡ್ಸ್ ಕ್ರಿಕೆಟ್ ಲೀಗ್ ಸೀಸನ್–1ಕ್ಕೆ ಸಿದ್ಧತೆ ; ಬಕ್ಕರ್ ಮೆಮೋರಿಯಲ್ ಕ್ರಿಕೆಟ್ ಟೂರ್ನಮೆಂಟ್‌ಗೆ ಶ್ರೀನಿವಾಸಪುರ ಸಜ್ಜು ಶ್ರೀನಿವಾಸಪುರ: ಶ್ರೀನಿವಾಸಪುರದ ಕ್ರಿಕೆಟ್ ಅಭಿಮಾನಿಗಳ ನಿರೀಕ್ಷೆ ಹೆಚ್ಚಿಸುತ್ತಿರುವ ಫ್ರೆಂಡ್ಸ್ ಕ್ರಿಕೆಟ್ ಲೀಗ್...

Must read

- Advertisement -spot_imgspot_img

You might also likeRELATED
Recommended to you