ಕ್ರಿಕೆಟ್ಶಿವಮೊಗ್ಗ-2021-22 ಋತುವಿನ ಪ್ರಪ್ರಥಮ ರಾಜ್ಯಮಟ್ಟದ "ಸಹನಾ ಕಪ್" ಗೆದ್ದ ಫ್ರೆಂಡ್ಸ್ ಬೆಂಗಳೂರು

ಶಿವಮೊಗ್ಗ-2021-22 ಋತುವಿನ ಪ್ರಪ್ರಥಮ ರಾಜ್ಯಮಟ್ಟದ “ಸಹನಾ ಕಪ್” ಗೆದ್ದ ಫ್ರೆಂಡ್ಸ್ ಬೆಂಗಳೂರು

-

- Advertisment -spot_img
ಕೋವಿಡ್ ನಿಂದ ಮಂಕಾಗಿದ್ದ ಕ್ರೀಡಾಲೋಕಕ್ಕೆ ಪುನಶ್ಚೇತನದ ತುಂಬುವ ಪ್ರಯತ್ನದಲ್ಲಿ ಶಿವಮೊಗ್ಗದ ಹಿರಿಯ ಸಂಸ್ಥೆ ಸಹನಾ ಕ್ರಿಕೆಟ್ ಕ್ಲಬ್ ಯಶಸ್ವಿಯಾಗಿದೆ.
ಶಿವಮೊಗ್ಗದ ಗೋಪಾಲ ಬಡಾವಣೆಯ ಸಹನಾ ಕ್ರಿಕೆಟ್ ಕ್ಲಬ್ ಇವರು ಆಯೋಜಿಸಿದ 2021-22 ರ ಋತುವಿನ ಮೊದಲ  ರಾಜ್ಯಮಟ್ಟದ ಪಂದ್ಯಾಕೂಟ “ಸಹನಾ ಕಪ್-2021” ಪ್ರಶಸ್ತಿಯನ್ನು ರೇಣು ಗೌಡ ಮಾಲೀಕತ್ವದ ಫ್ರೆಂಡ್ಸ್ ಬೆಂಗಳೂರು ತಂಡ ಜಯಿಸಿದೆ.
ರಾಜ್ಯದ ನಾನಾಭಾಗಗಳಿಂದ ಒಟ್ಟು 16 ತಂಡಗಳು ಭಾಗವಹಿಸಿದ್ದು,ಲೀಗ್ ಹಂತದ ರೋಚಕ ಹಣಾಹಣಿಗಳ ಬಳಿಕ ಅಂತಿಮವಾಗಿ ಕುಮಾರ್ ಫ್ರೆಂಡ್ಸ್ ತಂಡ ನ್ಯಾಶ್ ಬೆಂಗಳೂರು ತಂಡವನ್ನು ಹಾಗೂ ಆರ್.ಕೆ‌ ಸ್ಪೋರ್ಟ್ಸ್ ತೀರ್ಥಹಳ್ಳಿ N.K ಲಯನ್ಸ್  ತಂಡವನ್ನು ಸೋಲಿಸಿ ಫೈನಲ್ ಗೆ ಲಗ್ಗೆ ಇಟ್ಟಿದ್ದರು.
ಫೈನಲ್ ನಲ್ಲಿ ಮೊದಲು ಬ್ಯಾಟಿಂಗ್ ನಡೆಸಿದ ಫ್ರೆಂಡ್ಸ್ ಬೆಂಗಳೂರು ಸೀನ ಸ್ಪೋಟಕ ಬ್ಯಾಟಿಂಗ್ ನೆರವಿನಿಂದ 6 ಓವರ್ ಗಳಲ್ಲಿ 48 ರನ್ ಗಳಿಸಿದರೆ,ಇದಕ್ಕುತ್ತರವಾಗಿ ಆರ್.ಕೆ.ತೀರ್ಥಹಳ್ಳಿ 30 ರನ್ ಗಳಿಸಲಷ್ಟೇ ಶಕ್ತವಾಯಿತು.
ವಿಜಯಿ ಫ್ರೆಂಡ್ಸ್ ಬೆಂಗಳೂರು ತಂಡ 1.5 ಲಕ್ಷ ನಗದು,ದ್ವಿತೀಯ ಸ್ಥಾನಿ ಆರ್.ಕೆ.ತೀರ್ಥಹಳ್ಳಿ 75 ಸಾವಿರ ನಗದು ಸಹಿತ ಆಕರ್ಷಕ ಟ್ರೋಫಿಗಳನ್ನು ತಮ್ಮದಾಗಿಸಿಕೊಂಡರೆ,ಪಂದ್ಯಾವಳಿಯುದ್ದಕ್ಕೂ ಶ್ರೇಷ್ಠ ಸವ್ಯಸಾಚಿ ಪ್ರದರ್ಶನ ನೀಡಿದ ಕವಿರಾಜ್ ಸರಣಿ ಶ್ರೇಷ್ಠ ಪ್ರಶಸ್ತಿಯನ್ನು,ಫ್ರೆಂಡ್ಸ್ ನ ನವೀನ್ ಉತ್ತಮ ದಾಂಡಿಗ,ತೀರ್ಥಹಳ್ಳಿಯ ನಿತಿನ್ ಹಾಗೂ ಸುಜಿತ್ ಉತ್ತಮ ಬೌಲರ್ ಪ್ರಶಸ್ತಿಯನ್ನು ತಮ್ಮದಾಗಿಸಿಕೊಂಡರು.
ವರ್ಣರಂಜಿತ ಸಮಾರೋಪ ಸಮಾರಂಭದಲ್ಲಿ ಪದವೀಧರ ಸಹಕಾರ ಸಂಘದ ಅಧ್ಯಕ್ಷರಾದ ಎಸ್.ಪಿ‌.ದಿನೇಶ್,ಶಿವ ಟಯರ್ಸ್ ನ ಮಾಲೀಕರಾದ ಶಿವಕುಮಾರ್,ಉದ್ಯಮಿ ಹೆವನ್-ಇನ್ ಹಬೀಬ್,
ಟೂರ್ನಮೆಂಟ್ ನ ಪ್ರಮುಖ ಆಯೋಜಕರು ಹಾಗೂ ಶಿವಮೊಗ್ಗ ಮಹಾನಗರ ಪಾಲಿಕೆಯ ಸದಸ್ಯರಾದ ಎನ್.ಎಸ್.ಮಂಜುನಾಥ್,ಸಹನಾ ಕ್ರಿಕೆಟರ್ಸ್ ನ ಸಂಸ್ಥಾಪಕ ಬಸವೇ ಗೌಡ,ಅಧ್ಯಕ್ಷ ಇಂದ್ರೇಶ್,ಉಪಾಧ್ಯಕ್ಷ ಫೈರೋಜ್ ಭಾಷಾ,ಖಜಾಂಚಿ ವೆಂಕಟೇಶ್ ಮತ್ತಿತರರು ಭಾಗವಹಿಸಿದ್ದರು.ರೋಹನ್ ಡಿಕೋಸ್ಟ ಬಹುಮಾನ ವಿತರಣೆ ಕಾರ್ಯಕ್ರಮ ನಡೆಸಿಕೊಟ್ಟರು.
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

LEAVE A REPLY

Please enter your comment!
Please enter your name here

9 + 13 =

Latest news

ಆರ್‌ಪಿ ಟ್ರೋಫಿಗೆ ಕರ್ನಾಟಕದ ಅಕುಲ್ ಟೂರಿಸಂ XI ತಂಡ ಘೋಷಣೆ

ಆರ್‌ಪಿ ಟ್ರೋಫಿಗೆ ಕರ್ನಾಟಕದ ಅಕುಲ್ ಟೂರಿಸಂ XI ತಂಡ ಘೋಷಣೆ ಮಂಗಳೂರು/ಬೆಂಗಳೂರು: ಪ್ರತಿಷ್ಠಿತ ಆರ್‌ಪಿ ಟ್ರೋಫಿ 2026 ರಾಜ್ಯ ಮಟ್ಟದ ಕ್ರಿಕೆಟ್ ಟೂರ್ನಿಗೆ ಕರ್ನಾಟಕದ ಅಕುಲ್ ಟೂರಿಸಂ...

ಬೈಂದೂರಿನಲ್ಲಿ “ವಿಕ್ರಂ ಟ್ರೋಫಿ–2026” ಅಂಡರ್-23 ಟಿ-20 ಕ್ರಿಕೆಟ್ ಟೂರ್ನಿಗೆ ಭರ್ಜರಿ ಸಿದ್ಧತೆ

ಬೈಂದೂರಿನಲ್ಲಿ “ವಿಕ್ರಂ ಟ್ರೋಫಿ–2026” ಅಂಡರ್-23 ಟಿ-20 ಕ್ರಿಕೆಟ್ ಟೂರ್ನಿಗೆ ಸಿದ್ಧತೆ ಬೈಂದೂರು: ಯುವ ಕ್ರಿಕೆಟ್ ಪ್ರತಿಭೆಗಳಿಗೆ ಉತ್ತೇಜನ ನೀಡುವ ಉದ್ದೇಶದಿಂದ ವಿಕ್ರಂ ಕ್ರಿಕೆಟ್ ಕ್ಲಬ್ ಬೈಂದೂರು ವತಿಯಿಂದ,...

ಉರ್ವಾ ಮೈದಾನದಲ್ಲಿ ಮಂಗಳಾಪುರ ಟ್ರೋಫಿ ಸಂಭ್ರಮ – ಕೊಂಕಣ್ ಎಕ್ಸ್‌ಪ್ರೆಸ್ ಚಾಂಪಿಯನ್

ಉರ್ವಾ ಮೈದಾನದಲ್ಲಿ ಮಂಗಳಾಪುರ ಟ್ರೋಫಿ ಸಂಭ್ರಮ – ಕೊಂಕಣ್ ಎಕ್ಸ್‌ಪ್ರೆಸ್ ಚಾಂಪಿಯನ್ ಮಂಗಳೂರು ಉರ್ವಾ ಮೈದಾನದಲ್ಲಿ ಎರಡು ದಿನಗಳ ಕಾಲ ಹೊನಲು ಬೆಳಕಿನಲ್ಲಿ ನಡೆದ “ಮಂಗಳಾಪುರ ಟ್ರೋಫಿ...

ಹೊಸಂಗಡಿಯಲ್ಲಿ ಕುಂಬ್ರಿ ಪ್ರೀಮಿಯರ್ ಲೀಗ್ – 2026 ‘HPL-2K26’ ಕ್ರಿಕೆಟ್ ಸಂಭ್ರಮ

ಹೊಸಂಗಡಿಯಲ್ಲಿ ಕುಂಬ್ರಿ ಪ್ರೀಮಿಯರ್ ಲೀಗ್ – 2026 'HPL-2K26’ ಕ್ರಿಕೆಟ್ ಸಂಭ್ರಮ ಫ್ರೆಂಡ್ಸ್ ಹೊಸಂಗಡಿ ವತಿಯಿಂದ ಮೇ 9 ಮತ್ತು 10 ರಂದು ಹೊಸಂಗಡಿಯ ಅಂಬೇಡ್ಕರ್ ಕ್ರೀಡಾಂಗಣದಲ್ಲಿ...
- Advertisement -spot_imgspot_img

ಮಾರುತಿ ಆಶ್ರಯ ಹಸ್ತಾಂತರ ಕಾರ್ಯಕ್ರಮ: ಮಾನವೀಯ ಸೇವೆಯ ಉದಾತ್ತ ಉದಾಹರಣೆ

ಮಾರುತಿ ಆಶ್ರಯ ಹಸ್ತಾಂತರ ಕಾರ್ಯಕ್ರಮ: ಮಾನವೀಯ ಸೇವೆಯ ಉದಾತ್ತ ಉದಾಹರಣೆ ಉಳ್ಳಾಲ, ಮೇ 5: ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಮಾರುತಿ ಜನಸೇವಾ ಸಂಘ (ರಿ) ಹಾಗೂ...

ಎಸ್‌ವಿಎಸ್ ಮೈದಾನದಲ್ಲಿ ಚಾರಿಟಿ ಕ್ರಿಕೆಟ್: ವಿಜೇತರಿಂದ ದೇಣಿಗೆಯ ಮಹತ್ವದ ಹೆಜ್ಜೆ

  ಎಸ್‌ವಿಎಸ್ ಮೈದಾನದಲ್ಲಿ ಚಾರಿಟಿ ಕ್ರಿಕೆಟ್: ವಿಜೇತರಿಂದ ದೇಣಿಗೆಯ ಮಹತ್ವದ ಹೆಜ್ಜೆ ಬಂಟ್ವಾಳ: ಅರ್ಜುನ್ ಭಂಡಾರ್ಕರ್ ಅವರ ಸೇವ್ ಲೈಫ್ ಚಾರಿಟೇಬಲ್ ಟ್ರಸ್ಟ್ (ರಿ) ವತಿಯಿಂದ ಆಶಕ್ತ ಕುಟುಂಬಗಳಿಗೆ...

Must read

- Advertisement -spot_imgspot_img

You might also likeRELATED
Recommended to you