ಕ್ರಿಕೆಟ್ಸಹನಾ ಟ್ರೋಫಿ ಸತತ ಎರಡನೇ ಬಾರಿಗೆ ಚಾಂಪಿಯನ್ಸ್-ವಿನೂತನ ಮೈಲಿಗಲ್ಲು ಸ್ಥಾಪಿಸಿದ ಫ್ರೆಂಡ್ಸ್...

ಸಹನಾ ಟ್ರೋಫಿ ಸತತ ಎರಡನೇ ಬಾರಿಗೆ ಚಾಂಪಿಯನ್ಸ್-ವಿನೂತನ ಮೈಲಿಗಲ್ಲು ಸ್ಥಾಪಿಸಿದ ಫ್ರೆಂಡ್ಸ್ ಬೆಂಗಳೂರು

-

- Advertisment -spot_img
ಶಿವಮೊಗ್ಗ-ಪರಿಸರದ ಹಿರಿಯ ಸಂಸ್ಥೆ ಸಹನಾ ಕ್ರಿಕೆಟ್ ಕ್ಲಬ್ ಇವರು ಶಿವಮೊಗ್ಗದ ಗೋಪಾಳದ ಮೈದಾನದಲ್ಲಿ ಸತತ ಎರಡನೇ ಬಾರಿಗೆ ಆಯೋಜಿಸಿದ ರಾಜ್ಯ ಮಟ್ಟದ ಕ್ರಿಕೆಟ್ ಪಂದ್ಯಾಟ ಸಹನಾ ಟ್ರೋಫಿ-2023 ಪ್ರಶಸ್ತಿಯನ್ನು ರೇಣು ಗೌಡರ ಮಾಲೀಕತ್ವದ ಫ್ರೆಂಡ್ಸ್ ಬೆಂಗಳೂರು ತಂಡ ಜಯಿಸಿದೆ.ಸಹನಾ ಟ್ರೋಫಿಯಲ್ಲಿ ಸತತ  ಎರಡನೇ ಬಾರಿಗೆ ಚಾಂಪಿಯನ್ಸ್ ಪಟ್ಟವನ್ನು ಅಲಂಕರಿಸುವುದರ ಮೂಲಕ ವಿನೂತನ‌ ಮೈಲಿಗಲ್ಲನ್ನು ಸ್ಥಾಪಿಸಿದೆ.
ರಾಜ್ಯ ಮಟ್ಟದ ತಂಡಗಳ ಜೊತೆ ಶಿವಮೊಗ್ಗ ಜಿಲ್ಲೆಯ ತಂಡಗಳಿಗೂ ಸಮಾನವಕಾಶ ಸಹನಾ ಕ್ರಿಕೆಟ್ ಕ್ಲಬ್ ಕಲ್ಪಿಸಿತ್ತು.ಶನಿವಾರ ಶಿವಮೊಗ್ಗ ಪರಿಸರದ 8 ತಂಡಗಳು ಭಾಗವಹಿಸಿದ್ದು,ರವಿವಾರದಂದು ರಾಜ್ಯದ 6 ಪ್ರತಿಷ್ಠಿತ ತಂಡಗಳ ನಡುವೆ ರೋಚಕ‌ ಹಣಾಹಣಿ ನಡೆಯಿತು.
ಬಹುತೇಕ ಏಕ ಪಕ್ಷೀಯವಾಗಿ ಗೆಲುವನ್ನು ಸಾಧಿಸಿದ ಫ್ರೆಂಡ್ಸ್ ಬೆಂಗಳೂರು ಅಂತಿಮವಾಗಿ ಶಿವಮೊಗ್ಗ ಲಯನ್ಸ್ ತಂಡವನ್ನು ಸೋಲಿಸಿ ಚಾಂಪಿಯನ್ಸ್ ಪಟ್ಟವನ್ನು ಅಲಂಕರಿಸಿತು.
ಪ್ರಥಮ ಪ್ರಶಸ್ತಿ ರೂಪದಲ್ಲಿ ಫ್ರೆಂಡ್ಸ್ ಬೆಂಗಳೂರು 2 ಲಕ್ಷ ನಗದು,ದ್ವಿತೀಯ ಸ್ಥಾನಿ ಶಿವಮೊಗ್ಗ ಲಯನ್ಸ್ 1 ಲಕ್ಷ ನಗದು ಸಹಿತ ಆಕರ್ಷಕ ಟ್ರೋಫಿಗಳನ್ನು ತಮ್ಮದಾಗಿಸಿಕೊಂಡರು.
ಫೈನಲ್ ಪಂದ್ಯಶ್ರೇಷ್ಟ ಮತ್ತು ಬೆಸ್ಟ್  ಬ್ಯಾಟರ್ ಫ್ರೆಂಡ್ಸ್ ಬೆಂಗಳೂರಿನ  ಗಿಳಿಯಾರು ನಾಗ,ಬೆಸ್ಟ್ ಬೌಲರ್ ಶಿವು ಲಷ್ಕರ್ ಬಾಯ್ಸ್ ಹಾಗೂ ಪಂದ್ಯಾಟದಲ್ಲಿ ಸರ್ವಾಂಗೀಣ ಆಟ ಪ್ರದರ್ಶಿಸಿದ ಎಸ್.ಕೆ‌ ಲಯನ್ಸ್ ನ ಸಚಿನ್ ಹಿರೇಸರ ಸರಣಿಶ್ರೇಷ್ಟ ಗೌರವಕ್ಕೆ ಭಾಜನರಾದರು.
ಸಮಾರೋಪ ಸಮಾರಂಭದ ವೇದಿಕೆಯಲ್ಲಿಸಹನಾ ಕ್ರಿಕೆಟ್ ಕ್ಲಬ್ ನ ಸಂಸ್ಥಾಪಕ ಬಸವೇಗೌಡ್ರು, ಶಿವ ಟೈರ್ ಮಾಲೀಕರು ಶಿವಕುಮಾರ್ ಎನ್, ಎನ್ ಎಸ್ ಮಂಜುನಾಥ್ ಆಯೋಜಕರು ಹಾಗೂ ಮಹಾನಗರ ಪಾಲಿಕೆ ಸದಸ್ಯರು, ಶ್ರೀನಾಥ್ ಅಧ್ಯಕ್ಷರು ದಯಾ ಫ್ರೆಂಡ್ಸ್ ಫುಟ್ಬಾಲ್ ಕ್ಲಬ್, ವರದರಾಜ ಹಿರಿಯ ಸಹನಾ ಕ್ರಿಕೆಟ್ ಕ್ಲಬ್ ಆಟಗಾರರು, ಇಂದ್ರೇಶ್, ಫೈರೋಜ್, ಮಂಜುನಾಥ್, ವೆಂಕಟೇಶ್ ಹಾಗೂ ಸಹನಾ ಕ್ರಿಕೆಟ್ ಕ್ಲಬ್ ಆಟಗಾರರು ಉಪಸ್ಥಿತರಿದ್ದರು.ರೋಹನ್ ಕಾರ್ಯಕ್ರಮ ನಿರೂಪಿಸಿದರು.
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

LEAVE A REPLY

Please enter your comment!
Please enter your name here

nine + fifteen =

Latest news

ಉಬರ್ ಚಾಲಕನಿಂದ ವಿಶ್ವಕಪ್ ಕನಸಿನವರೆಗೆ: ಜಸ್ಪ್ರೀತ್ ಸಿಂಗ್ ಕಥೆ

ಉಬರ್ ಚಾಲಕನಿಂದ ವಿಶ್ವಕಪ್ ಕನಸಿನವರೆಗೆ: ಜಸ್ಪ್ರೀತ್ ಸಿಂಗ್ ಕಥೆ ಪಂಜಾಬ್‌ನ ಸಣ್ಣ ಪಟ್ಟಣದಿಂದ ಆರಂಭವಾದ ಯುವ ಕ್ರಿಕೆಟಿಗ ಜಸ್ಪ್ರೀತ್ ಸಿಂಗ್ ಅವರ ಜೀವನಯಾನ ಇಂದು ಸಾವಿರಾರು ಯುವ...

ಕೊಲ್ನಾಡ್ ನಲ್ಲಿ LK ಕ್ರಿಕೆಟ್ ಪ್ರೀಮಿಯರ್ ಲೀಗ್ – ಸೀಸನ್ 2

ಕೊಲ್ನಾಡ್ ನಲ್ಲಿ LK ಕ್ರಿಕೆಟ್ ಪ್ರೀಮಿಯರ್ ಲೀಗ್  2026– ಸೀಸನ್ 2 ಕೊಲ್ನಾಡ್ ಮೈದಾನದಲ್ಲಿ ಫೆಬ್ರವರಿ 14 ಮತ್ತು 15ರಂದು LK ಕ್ರಿಕೆಟ್ ಪ್ರೀಮಿಯರ್ ಲೀಗ್ –...

ಮುಂಬೈ ನೆಲದಲ್ಲಿ ಕರ್ನಾಟಕದ ಐತಿಹಾಸಿಕ ವಿಜಯ

ಮುಂಬೈ ನೆಲದಲ್ಲಿ ಕರ್ನಾಟಕದ ಐತಿಹಾಸಿಕ ವಿಜಯ ರಣಜಿ ಟ್ರೋಫಿ ಕ್ರಿಕೆಟ್ ಎಂದರೆ ಮುಂಬೈಗೆ ಪ್ರತಿಷ್ಠೆಯ ಪ್ರಶ್ನೆ. 42 ಬಾರಿ ಚಾಂಪಿಯನ್ ಆಗಿರುವ ತಂಡದ ಎದುರು ಅವರದ್ದೇ ಮೈದಾನದಲ್ಲಿ...

ಟಿ20 ವಿಶ್ವಕಪ್‌ಗೆ ಭಾರತಕ್ಕೆ ಭರ್ಜರಿ ಆರಂಭ: ಅಮೆರಿಕ ವಿರುದ್ಧ 29 ರನ್ ಜಯ

ಟಿ20 ವಿಶ್ವಕಪ್‌ಗೆ ಭಾರತಕ್ಕೆ ಭರ್ಜರಿ ಆರಂಭ: ಅಮೆರಿಕ ವಿರುದ್ಧ 29 ರನ್ ಜಯ 2026ರ ಟಿ20 ವಿಶ್ವಕಪ್‌ನಲ್ಲಿ ಟೀಮ್ ಇಂಡಿಯಾ ತನ್ನ ಗೆಲುವಿನ ಅಭಿಯಾನವನ್ನು ಭರ್ಜರಿಯಾಗಿ ಆರಂಭಿಸಿದೆ....
- Advertisement -spot_imgspot_img

ಕರಾವಳಿ ಸ್ಪೋರ್ಟ್ಸ್ ಕ್ಲಬ್, ಕುಮಟಾ ಆಯೋಜನೆಯ MIDMAC ಟ್ರೋಫಿ ಸೀಸನ್–2 ಫೈನಲ್‌ನಲ್ಲಿ ಭಟ್ಕಲ್ ಫ್ರೆಂಡ್ಸ್ ಭರ್ಜರಿ ಜಯ; ನಿಹಾಲ್ XI ಮೇಲೆ 50 ರನ್‌ಗಳ ಗೆಲುವು

ಕರಾವಳಿ ಸ್ಪೋರ್ಟ್ಸ್ ಕ್ಲಬ್, ಕುಮಟಾ ಆಯೋಜನೆಯ MIDMAC ಟ್ರೋಫಿ ಸೀಸನ್–2 ಫೈನಲ್‌ನಲ್ಲಿ ಭಟ್ಕಲ್ ಫ್ರೆಂಡ್ಸ್ ಭರ್ಜರಿ ಜಯ; ನಿಹಾಲ್ XI ಮೇಲೆ 50 ರನ್‌ಗಳ ಗೆಲುವು ಕರಾವಳಿ...

ಕರಾವಳಿ ಸ್ಪೋರ್ಟ್ಸ್ ಕ್ಲಬ್ ಕುಮಟಾ ಅರ್ಪಿಸುವ MIDMAC TROPHY SEASON-2 ಸೆಮಿಫೈನಲ್ ಪಂದ್ಯಗಳಲ್ಲಿ ಭಟ್ಕಲ್ ಫ್ರೆಂಡ್ಸ್ ಹಾಗೂ ನಿಹಾಲ್ XI ಗೆ ಜಯ

ಕರಾವಳಿ ಸ್ಪೋರ್ಟ್ಸ್ ಕ್ಲಬ್ ಕುಮಟಾ ಅರ್ಪಿಸುವ MIDMAC TROPHY SEASON-2 ಸೆಮಿಫೈನಲ್ ಪಂದ್ಯಗಳಲ್ಲಿ ಭಟ್ಕಲ್ ಫ್ರೆಂಡ್ಸ್ ಹಾಗೂ ನಿಹಾಲ್ XI ಗೆ ಜಯ (Sports Kannada Live...

Must read

- Advertisement -spot_imgspot_img

You might also likeRELATED
Recommended to you