ಕ್ರಿಕೆಟ್ಸಹನಾ ಟ್ರೋಫಿ ಸತತ ಎರಡನೇ ಬಾರಿಗೆ ಚಾಂಪಿಯನ್ಸ್-ವಿನೂತನ ಮೈಲಿಗಲ್ಲು ಸ್ಥಾಪಿಸಿದ ಫ್ರೆಂಡ್ಸ್...

ಸಹನಾ ಟ್ರೋಫಿ ಸತತ ಎರಡನೇ ಬಾರಿಗೆ ಚಾಂಪಿಯನ್ಸ್-ವಿನೂತನ ಮೈಲಿಗಲ್ಲು ಸ್ಥಾಪಿಸಿದ ಫ್ರೆಂಡ್ಸ್ ಬೆಂಗಳೂರು

-

- Advertisment -spot_img
ಶಿವಮೊಗ್ಗ-ಪರಿಸರದ ಹಿರಿಯ ಸಂಸ್ಥೆ ಸಹನಾ ಕ್ರಿಕೆಟ್ ಕ್ಲಬ್ ಇವರು ಶಿವಮೊಗ್ಗದ ಗೋಪಾಳದ ಮೈದಾನದಲ್ಲಿ ಸತತ ಎರಡನೇ ಬಾರಿಗೆ ಆಯೋಜಿಸಿದ ರಾಜ್ಯ ಮಟ್ಟದ ಕ್ರಿಕೆಟ್ ಪಂದ್ಯಾಟ ಸಹನಾ ಟ್ರೋಫಿ-2023 ಪ್ರಶಸ್ತಿಯನ್ನು ರೇಣು ಗೌಡರ ಮಾಲೀಕತ್ವದ ಫ್ರೆಂಡ್ಸ್ ಬೆಂಗಳೂರು ತಂಡ ಜಯಿಸಿದೆ.ಸಹನಾ ಟ್ರೋಫಿಯಲ್ಲಿ ಸತತ  ಎರಡನೇ ಬಾರಿಗೆ ಚಾಂಪಿಯನ್ಸ್ ಪಟ್ಟವನ್ನು ಅಲಂಕರಿಸುವುದರ ಮೂಲಕ ವಿನೂತನ‌ ಮೈಲಿಗಲ್ಲನ್ನು ಸ್ಥಾಪಿಸಿದೆ.
ರಾಜ್ಯ ಮಟ್ಟದ ತಂಡಗಳ ಜೊತೆ ಶಿವಮೊಗ್ಗ ಜಿಲ್ಲೆಯ ತಂಡಗಳಿಗೂ ಸಮಾನವಕಾಶ ಸಹನಾ ಕ್ರಿಕೆಟ್ ಕ್ಲಬ್ ಕಲ್ಪಿಸಿತ್ತು.ಶನಿವಾರ ಶಿವಮೊಗ್ಗ ಪರಿಸರದ 8 ತಂಡಗಳು ಭಾಗವಹಿಸಿದ್ದು,ರವಿವಾರದಂದು ರಾಜ್ಯದ 6 ಪ್ರತಿಷ್ಠಿತ ತಂಡಗಳ ನಡುವೆ ರೋಚಕ‌ ಹಣಾಹಣಿ ನಡೆಯಿತು.
ಬಹುತೇಕ ಏಕ ಪಕ್ಷೀಯವಾಗಿ ಗೆಲುವನ್ನು ಸಾಧಿಸಿದ ಫ್ರೆಂಡ್ಸ್ ಬೆಂಗಳೂರು ಅಂತಿಮವಾಗಿ ಶಿವಮೊಗ್ಗ ಲಯನ್ಸ್ ತಂಡವನ್ನು ಸೋಲಿಸಿ ಚಾಂಪಿಯನ್ಸ್ ಪಟ್ಟವನ್ನು ಅಲಂಕರಿಸಿತು.
ಪ್ರಥಮ ಪ್ರಶಸ್ತಿ ರೂಪದಲ್ಲಿ ಫ್ರೆಂಡ್ಸ್ ಬೆಂಗಳೂರು 2 ಲಕ್ಷ ನಗದು,ದ್ವಿತೀಯ ಸ್ಥಾನಿ ಶಿವಮೊಗ್ಗ ಲಯನ್ಸ್ 1 ಲಕ್ಷ ನಗದು ಸಹಿತ ಆಕರ್ಷಕ ಟ್ರೋಫಿಗಳನ್ನು ತಮ್ಮದಾಗಿಸಿಕೊಂಡರು.
ಫೈನಲ್ ಪಂದ್ಯಶ್ರೇಷ್ಟ ಮತ್ತು ಬೆಸ್ಟ್  ಬ್ಯಾಟರ್ ಫ್ರೆಂಡ್ಸ್ ಬೆಂಗಳೂರಿನ  ಗಿಳಿಯಾರು ನಾಗ,ಬೆಸ್ಟ್ ಬೌಲರ್ ಶಿವು ಲಷ್ಕರ್ ಬಾಯ್ಸ್ ಹಾಗೂ ಪಂದ್ಯಾಟದಲ್ಲಿ ಸರ್ವಾಂಗೀಣ ಆಟ ಪ್ರದರ್ಶಿಸಿದ ಎಸ್.ಕೆ‌ ಲಯನ್ಸ್ ನ ಸಚಿನ್ ಹಿರೇಸರ ಸರಣಿಶ್ರೇಷ್ಟ ಗೌರವಕ್ಕೆ ಭಾಜನರಾದರು.
ಸಮಾರೋಪ ಸಮಾರಂಭದ ವೇದಿಕೆಯಲ್ಲಿಸಹನಾ ಕ್ರಿಕೆಟ್ ಕ್ಲಬ್ ನ ಸಂಸ್ಥಾಪಕ ಬಸವೇಗೌಡ್ರು, ಶಿವ ಟೈರ್ ಮಾಲೀಕರು ಶಿವಕುಮಾರ್ ಎನ್, ಎನ್ ಎಸ್ ಮಂಜುನಾಥ್ ಆಯೋಜಕರು ಹಾಗೂ ಮಹಾನಗರ ಪಾಲಿಕೆ ಸದಸ್ಯರು, ಶ್ರೀನಾಥ್ ಅಧ್ಯಕ್ಷರು ದಯಾ ಫ್ರೆಂಡ್ಸ್ ಫುಟ್ಬಾಲ್ ಕ್ಲಬ್, ವರದರಾಜ ಹಿರಿಯ ಸಹನಾ ಕ್ರಿಕೆಟ್ ಕ್ಲಬ್ ಆಟಗಾರರು, ಇಂದ್ರೇಶ್, ಫೈರೋಜ್, ಮಂಜುನಾಥ್, ವೆಂಕಟೇಶ್ ಹಾಗೂ ಸಹನಾ ಕ್ರಿಕೆಟ್ ಕ್ಲಬ್ ಆಟಗಾರರು ಉಪಸ್ಥಿತರಿದ್ದರು.ರೋಹನ್ ಕಾರ್ಯಕ್ರಮ ನಿರೂಪಿಸಿದರು.
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

LEAVE A REPLY

Please enter your comment!
Please enter your name here

eleven + fifteen =

Latest news

ಶಾಂಭವಿ ಟ್ರೋಫಿ 2026:ಚಾಂತಾರು  ಗ್ಲೋಬಲ್ ಕ್ರೀಡಾಂಗಣದಲ್ಲಿ ಬ್ರಹ್ಮಾವರ ವಲಯ ಮಟ್ಟದ ಕ್ರಿಕೆಟ್ ಟೂರ್ನಮೆಂಟ್

ಶಾಂಭವಿ ಟ್ರೋಫಿ 2026:ಚಾಂತಾರು ಗ್ಲೋಬಲ್ ಕ್ರೀಡಾಂಗಣದಲ್ಲಿ ಬ್ರಹ್ಮಾವರ ವಲಯ ಮಟ್ಟದ ಕ್ರಿಕೆಟ್ ಟೂರ್ನಮೆಂಟ್ ಚಾಂತಾರು: ಚಾಂತಾರು ಗ್ರಾಮದಲ್ಲಿ ಕ್ರಿಕೆಟ್ ಪ್ರೇಮಿಗಳಿಗೆ ಹಬ್ಬದ ವಾತಾವರಣ ಸೃಷ್ಟಿಸುವ ಉದ್ದೇಶದಿಂದ **ಶಾಂಭವಿ...

ಕರೂಣ್ ನಾಯರ್ ಗೆ ಕೋಸ್ಟಲ್ ಕಿಂಗ್ಸ್ ಮಂಗಳೂರು ತಂಡದ ನಾಯಕತ್ವ

ಕರೂಣ್ ನಾಯರ್ ಗೆ ಕೋಸ್ಟಲ್ ಕಿಂಗ್ಸ್ ಮಂಗಳೂರು ತಂಡದ ನಾಯಕತ್ವ ಮಹಾರಾಜ ಟ್ರೋಫಿ ಕೆಎಸ್ಸಿಎ ಟಿ20 ಸೀಸನ್-5ಕ್ಕೆ ಸಜ್ಜಾದ ಫ್ರಾಂಚೈಸಿ; ತಂಡದ ಜೆರ್ಸಿ, ಗೀತೆ ಹಾಗೂ ನಾಯಕತ್ವ...

ಮಹಿಳಾ ಟಿ20 ವಿಶ್ವಕಪ್: ಪಾಕಿಸ್ತಾನವನ್ನು 64 ರನ್‌ಗಳಿಂದ ಸೋಲಿಸಿದ ಭಾರತ – ಇತಿಹಾಸ ನಿರ್ಮಿಸಿದ ದೀಪ್ತಿ ಶರ್ಮಾ

  ಮಹಿಳಾ ಟಿ20 ವಿಶ್ವಕಪ್: ಪಾಕಿಸ್ತಾನವನ್ನು 64 ರನ್‌ಗಳಿಂದ ಸೋಲಿಸಿದ ಭಾರತ - ಇತಿಹಾಸ ನಿರ್ಮಿಸಿದ ದೀಪ್ತಿ ಶರ್ಮಾ ಬ್ರಿಟನ್‌ನ ಬರ್ಮಿಂಗ್‌ಹ್ಯಾಮ್‌ನ ಎಡ್ಜ್‌ಬಾಸ್ಟನ್‌ನಲ್ಲಿ ನಡೆದ ಈ ಪಂದ್ಯದಲ್ಲಿ, ಭಾರತ...

ವಿಶ್ವಕರ್ಮ ಪ್ರೀಮಿಯರ್ ಲೀಗ್ 2026ಕ್ಕೆ ಮಧು ಡೈಮಂಡ್ಸ್ ಟೈಟಲ್ ಸ್ಪಾನ್ಸರ್

ವಿಶ್ವಕರ್ಮ ಪ್ರೀಮಿಯರ್ ಲೀಗ್ 2026ಕ್ಕೆ ಮಧು ಡೈಮಂಡ್ಸ್ ಟೈಟಲ್ ಸ್ಪಾನ್ಸರ್ ಚಿತ್ರದುರ್ಗ: ಕರ್ನಾಟಕ ರಾಜ್ಯದ ವಿಶ್ವಕರ್ಮ ಸಮುದಾಯದ ಕ್ರೀಡಾ ಪ್ರತಿಭೆಗಳನ್ನು ಒಂದೇ ವೇದಿಕೆಯಲ್ಲಿ ಒಗ್ಗೂಡಿಸುವ ಮಹತ್ವಾಕಾಂಕ್ಷೆಯ ಕ್ರಿಕೆಟ್ ಮಹಾಕೂಟ ವಿಶ್ವಕರ್ಮ...
- Advertisement -spot_imgspot_img

16 ವರ್ಷಗಳ ಸಾಹಸಗಾಥೆ ಅಂತ್ಯಗೊಂಡಿದೆ! ಡಬ್ಲ್ಯೂಟಿಸಿ ಹೀರೋ ಕೇನ್ ವಿಲಿಯಮ್ಸನ್ ಅಂತರರಾಷ್ಟ್ರೀಯ ಕ್ರಿಕೆಟ್‌ನಿಂದ ನಿವೃತ್ತಿ!

16 ವರ್ಷಗಳ ಸಾಹಸಗಾಥೆ ಅಂತ್ಯಗೊಂಡಿದೆ! ಡಬ್ಲ್ಯೂಟಿಸಿ ಹೀರೋ ಕೇನ್ ವಿಲಿಯಮ್ಸನ್ ಅಂತರರಾಷ್ಟ್ರೀಯ ಕ್ರಿಕೆಟ್‌ನಿಂದ ನಿವೃತ್ತಿ! ನ್ಯೂಜಿಲೆಂಡ್ ಕ್ರಿಕೆಟ್ ಇತಿಹಾಸದಲ್ಲಿ ಅತಿ ಹೆಚ್ಚು ರನ್ ಗಳಿಸಿದ ದಾಖಲೆಯನ್ನು ಕೇನ್...

ಮಹಿಳಾ ಟಿ-20 ವಿಶ್ವಕಪ್‌ಗೆ ಕ್ಷಣಗಣನೆ: ವಿಶ್ವದ ಕಣ್ಣುಗಳು ಇಂಗ್ಲೆಂಡ್ ಕಡೆ

ಮಹಿಳಾ ಟಿ-20 ವಿಶ್ವಕಪ್‌ಗೆ ಕ್ಷಣಗಣನೆ: ವಿಶ್ವದ ಕಣ್ಣುಗಳು ಇಂಗ್ಲೆಂಡ್ ಕಡೆ ಕ್ರಿಕೆಟ್ ಅಭಿಮಾನಿಗಳು ಬಹು ನಿರೀಕ್ಷೆಯಿಂದ ಕಾಯುತ್ತಿರುವ ಐಸಿಸಿ ಮಹಿಳಾ ಟಿ-20 ವಿಶ್ವಕಪ್ 2026 ಟೂರ್ನಿಯು ಜೂನ್...

Must read

- Advertisement -spot_imgspot_img

You might also likeRELATED
Recommended to you