14.1 C
London
Saturday, May 18, 2024
Homeಕ್ರಿಕೆಟ್ಸಹನಾ ಟ್ರೋಫಿ ಸತತ ಎರಡನೇ ಬಾರಿಗೆ ಚಾಂಪಿಯನ್ಸ್-ವಿನೂತನ ಮೈಲಿಗಲ್ಲು ಸ್ಥಾಪಿಸಿದ ಫ್ರೆಂಡ್ಸ್ ಬೆಂಗಳೂರು

ಸಹನಾ ಟ್ರೋಫಿ ಸತತ ಎರಡನೇ ಬಾರಿಗೆ ಚಾಂಪಿಯನ್ಸ್-ವಿನೂತನ ಮೈಲಿಗಲ್ಲು ಸ್ಥಾಪಿಸಿದ ಫ್ರೆಂಡ್ಸ್ ಬೆಂಗಳೂರು

Date:

Related stories

ನಿನ್ನ ಟೈಮ್ ಬಂದೇ ಬರುವುದು, ಹೀಗೇ ಆಡುತ್ತಿರು ಕರುಣ್..!

1996ರಲ್ಲಿ ಅರ್ಜುನ ರಣತುಂಗ ನಾಯಕತ್ವದ ಶ್ರೀಲಂಕಾ ತಂಡ ಏಕದಿನ ವಿಶ್ವಕಪ್ ಗೆದ್ದಾಗ...

ದುಡ್ಡಿನ ಮದದಲ್ಲಿ ಕೊಬ್ಬಿರುವ ಈ business tycoonಗಳಿಗೆ ದೇಶದ ಕ್ರಿಕೆಟ್ ಹೀರೊಗಳ ಮೇಲೆ ಗೌರವ ಇರಲು ಹೇಗೆ ಸಾಧ್ಯ..?

17 ವರ್ಷಗಳ ಐಪಿಎಲ್ ಚರಿತ್ರೆಯಲ್ಲಿ ಸಾವಿರಕ್ಕೂ ಹೆಚ್ಚು ಪಂದ್ಯಗಳು ನಡೆದಿವೆ. ಆ...

Reject ಪೀಸ್‌ಗಳು ವಾಪಸ್ ಎದ್ದು ಬಂದ ಕಥೆ..!

ಒಬ್ಬ by mistake ಪಂಜಾಬ್ ಕಿಂಗ್ಸ್ ತಂಡ ಸೇರಿದ್ದವ. ಇನ್ನೊಬ್ಬ ತನ್ನ...

ಇಂದು ವಿಶ್ವದ ಅತ್ಯಂತ ಪ್ರೀತಿಪಾತ್ರ ಕ್ರಿಕೆಟಿಗ ಧೋನಿಯ ಕೊನೆಯ ಪಂದ್ಯ..

ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯಲಿರುವ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಮುಂಬೈ...

T20 ವಿಶ್ವಕಪ್‌ನಲ್ಲಿ ಭಾರತದ ವಿಕೆಟ್‌ಕೀಪರ್ ಯಾರು? 5 ಆಟಗಾರರು ರೇಸ್ ನಲ್ಲಿ

ಐಪಿಎಲ್  ನಂತರ ಟಿ20 ವಿಶ್ವಕಪ್ ಆಡಬೇಕಿದೆ. ಈ ಮೆಗಾ  ಟೂರ್ನಿಯನ್ನು ಜೂನ್‌ನಲ್ಲಿ...
spot_imgspot_img
ಶಿವಮೊಗ್ಗ-ಪರಿಸರದ ಹಿರಿಯ ಸಂಸ್ಥೆ ಸಹನಾ ಕ್ರಿಕೆಟ್ ಕ್ಲಬ್ ಇವರು ಶಿವಮೊಗ್ಗದ ಗೋಪಾಳದ ಮೈದಾನದಲ್ಲಿ ಸತತ ಎರಡನೇ ಬಾರಿಗೆ ಆಯೋಜಿಸಿದ ರಾಜ್ಯ ಮಟ್ಟದ ಕ್ರಿಕೆಟ್ ಪಂದ್ಯಾಟ ಸಹನಾ ಟ್ರೋಫಿ-2023 ಪ್ರಶಸ್ತಿಯನ್ನು ರೇಣು ಗೌಡರ ಮಾಲೀಕತ್ವದ ಫ್ರೆಂಡ್ಸ್ ಬೆಂಗಳೂರು ತಂಡ ಜಯಿಸಿದೆ.ಸಹನಾ ಟ್ರೋಫಿಯಲ್ಲಿ ಸತತ  ಎರಡನೇ ಬಾರಿಗೆ ಚಾಂಪಿಯನ್ಸ್ ಪಟ್ಟವನ್ನು ಅಲಂಕರಿಸುವುದರ ಮೂಲಕ ವಿನೂತನ‌ ಮೈಲಿಗಲ್ಲನ್ನು ಸ್ಥಾಪಿಸಿದೆ.
ರಾಜ್ಯ ಮಟ್ಟದ ತಂಡಗಳ ಜೊತೆ ಶಿವಮೊಗ್ಗ ಜಿಲ್ಲೆಯ ತಂಡಗಳಿಗೂ ಸಮಾನವಕಾಶ ಸಹನಾ ಕ್ರಿಕೆಟ್ ಕ್ಲಬ್ ಕಲ್ಪಿಸಿತ್ತು.ಶನಿವಾರ ಶಿವಮೊಗ್ಗ ಪರಿಸರದ 8 ತಂಡಗಳು ಭಾಗವಹಿಸಿದ್ದು,ರವಿವಾರದಂದು ರಾಜ್ಯದ 6 ಪ್ರತಿಷ್ಠಿತ ತಂಡಗಳ ನಡುವೆ ರೋಚಕ‌ ಹಣಾಹಣಿ ನಡೆಯಿತು.
ಬಹುತೇಕ ಏಕ ಪಕ್ಷೀಯವಾಗಿ ಗೆಲುವನ್ನು ಸಾಧಿಸಿದ ಫ್ರೆಂಡ್ಸ್ ಬೆಂಗಳೂರು ಅಂತಿಮವಾಗಿ ಶಿವಮೊಗ್ಗ ಲಯನ್ಸ್ ತಂಡವನ್ನು ಸೋಲಿಸಿ ಚಾಂಪಿಯನ್ಸ್ ಪಟ್ಟವನ್ನು ಅಲಂಕರಿಸಿತು.
ಪ್ರಥಮ ಪ್ರಶಸ್ತಿ ರೂಪದಲ್ಲಿ ಫ್ರೆಂಡ್ಸ್ ಬೆಂಗಳೂರು 2 ಲಕ್ಷ ನಗದು,ದ್ವಿತೀಯ ಸ್ಥಾನಿ ಶಿವಮೊಗ್ಗ ಲಯನ್ಸ್ 1 ಲಕ್ಷ ನಗದು ಸಹಿತ ಆಕರ್ಷಕ ಟ್ರೋಫಿಗಳನ್ನು ತಮ್ಮದಾಗಿಸಿಕೊಂಡರು.
ಫೈನಲ್ ಪಂದ್ಯಶ್ರೇಷ್ಟ ಮತ್ತು ಬೆಸ್ಟ್  ಬ್ಯಾಟರ್ ಫ್ರೆಂಡ್ಸ್ ಬೆಂಗಳೂರಿನ  ಗಿಳಿಯಾರು ನಾಗ,ಬೆಸ್ಟ್ ಬೌಲರ್ ಶಿವು ಲಷ್ಕರ್ ಬಾಯ್ಸ್ ಹಾಗೂ ಪಂದ್ಯಾಟದಲ್ಲಿ ಸರ್ವಾಂಗೀಣ ಆಟ ಪ್ರದರ್ಶಿಸಿದ ಎಸ್.ಕೆ‌ ಲಯನ್ಸ್ ನ ಸಚಿನ್ ಹಿರೇಸರ ಸರಣಿಶ್ರೇಷ್ಟ ಗೌರವಕ್ಕೆ ಭಾಜನರಾದರು.
ಸಮಾರೋಪ ಸಮಾರಂಭದ ವೇದಿಕೆಯಲ್ಲಿಸಹನಾ ಕ್ರಿಕೆಟ್ ಕ್ಲಬ್ ನ ಸಂಸ್ಥಾಪಕ ಬಸವೇಗೌಡ್ರು, ಶಿವ ಟೈರ್ ಮಾಲೀಕರು ಶಿವಕುಮಾರ್ ಎನ್, ಎನ್ ಎಸ್ ಮಂಜುನಾಥ್ ಆಯೋಜಕರು ಹಾಗೂ ಮಹಾನಗರ ಪಾಲಿಕೆ ಸದಸ್ಯರು, ಶ್ರೀನಾಥ್ ಅಧ್ಯಕ್ಷರು ದಯಾ ಫ್ರೆಂಡ್ಸ್ ಫುಟ್ಬಾಲ್ ಕ್ಲಬ್, ವರದರಾಜ ಹಿರಿಯ ಸಹನಾ ಕ್ರಿಕೆಟ್ ಕ್ಲಬ್ ಆಟಗಾರರು, ಇಂದ್ರೇಶ್, ಫೈರೋಜ್, ಮಂಜುನಾಥ್, ವೆಂಕಟೇಶ್ ಹಾಗೂ ಸಹನಾ ಕ್ರಿಕೆಟ್ ಕ್ಲಬ್ ಆಟಗಾರರು ಉಪಸ್ಥಿತರಿದ್ದರು.ರೋಹನ್ ಕಾರ್ಯಕ್ರಮ ನಿರೂಪಿಸಿದರು.
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

Latest stories

LEAVE A REPLY

Please enter your comment!
Please enter your name here

nine + four =