ಉಡುಪಿ ಜಿಲ್ಲಾ ಟೆನ್ನಿಸ್ಬಾಲ್ ಕ್ರಿಕೆಟ್ವಿಶಿಷ್ಟ-ವಿನೂತನ ಚಿಂತನೆಯೊಂದಿಗೆ ಫ್ರೆಂಡ್ಸ್ ಕಪ್ 2024-ಆಯೋಜಕರೇ ಇಲ್ಲಿ ಪ್ರಾಯೋಜಕರು-ವ್ಯವಸ್ಥಾಪಕರಿಗಿಲ್ಲ ಖರ್ಚು ವೆಚ್ಚದ...

ವಿಶಿಷ್ಟ-ವಿನೂತನ ಚಿಂತನೆಯೊಂದಿಗೆ ಫ್ರೆಂಡ್ಸ್ ಕಪ್ 2024-ಆಯೋಜಕರೇ ಇಲ್ಲಿ ಪ್ರಾಯೋಜಕರು-ವ್ಯವಸ್ಥಾಪಕರಿಗಿಲ್ಲ ಖರ್ಚು ವೆಚ್ಚದ ಚಿಂತೆ….!!!

-

- Advertisment -spot_img
ಟೆನಿಸ್ಬಾಲ್ ಕ್ರಿಕೆಟ್ ಶ್ರೇಯೋಭಿವೃದ್ಧಿಗಾಗಿ ಫ್ರೆಂಡ್ಸ್ ಬೆಂಗಳೂರು ವಿಭಿನ್ನ ಚಿಂತನೆ
ಬೆಂಗಳೂರು-ಟೆನಿಸ್ಬಾಲ್ ಕ್ರಿಕೆಟ್ ಶ್ರೇಯೋಭಿವೃದ್ಧಿ ಚಿಂತನೆಯೊಂದಿಗೆ,ತಂಡಗಳನ್ನು ಕಟ್ಟಿ ಬೆಳೆಸಲು ಕಷ್ಟ ಸಾಧ್ಯವಾದ ಈ ಕಾಲ ಘಟ್ಟದಲ್ಲೂ ಪ್ರಚಲಿತವಿರುವ ತಂಡಗಳನ್ನು ಪ್ರೋತ್ಸಾಹಿಸುವ ಸಲುವಾಗಿ
ಬೆಂಗಳೂರು ಫ್ರೆಂಡ್ಸ್ ಸ್ಪೋರ್ಟ್ಸ್ & ಕಲ್ಚರಲ್ಸ್ ಅಸೋಸಿಯೇಷನ್(ರಿ) ಇವರ ಆಶ್ರಯದಲ್ಲಿ ಸತತ ಎರಡನೇ ಬಾರಿಗೆ ಅಂತರಾಷ್ಟ್ರೀಯ ಮಟ್ಟದ ಹೊನಲು ಬೆಳಕಿನ ಕ್ರಿಕೆಟ್ ಹಬ್ಬ “ಫ್ರೆಂಡ್ಸ್ ಕಪ್-2024” ಆಯೋಜಿಸಲಾಗಿದೆ.
ಪೀಣ್ಯ ಎರಡನೇ ಹಂತದ ಬಳಿ ಪಾಳು ಬಿದ್ದ ಜಮೀನನ್ನು ಸತತ ಐದಾರು ತಿಂಗಳ ಶ್ರಮದಿಂದ ಅತ್ಯಂತ ಸುಂದರ ಕ್ರೀಡಾಂಗಣವಾಗಿ ನಿರ್ಮಿಸಿ,ಫ್ರೆಂಡ್ಸ್ ಕಪ್-2023 ಅಂತರಾಷ್ಟ್ರೀಯ ಮಟ್ಟದ ಕ್ರಿಕೆಟ್ ಪಂದ್ಯಾಟವನ್ನು,
ಉಚಿತ ಎಂಟ್ರಿಯೊಂದಿಗೆ ಆಯೋಜಿಸಿ ಯಶಸ್ಸು ಸಾಧಿಸಿದ್ದು ಅಪಾರ ಜನಮನ್ನಣೆಗೆ ಪಾತ್ರವಾಗಿತ್ತು.ಕಳೆದ ಮೂರು ವರ್ಷಗಳಿಂದ ಗೆಲುವಿನ ಲಯದಲ್ಲಿ ಇದ್ದ ಫ್ರೆಂಡ್ಸ್ ಬೆಂಗಳೂರು 2023 ಫ್ರೆಂಡ್ಸ್ ಕಪ್ ಪಂದ್ಯಾಟದ ಬಳಿಕದ ಋತುವಿನಲ್ಲಿ ಸತತ 8 ರಾಜ್ಯ ಮಟ್ಟದ ಪ್ರಶಸ್ತಿಗಳನ್ನು ಗೆದ್ದು ಬೀಗಿದೆ.
ರೇಣುಗೌಡ ಸಾರಥ್ಯದ ಫ್ರೆಂಡ್ಸ್ ಬೆಂಗಳೂರು ತಂಡ ಇದೀಗ ಅದೇ ಮೈದಾನದಲ್ಲಿ ಮತ್ತೊಮ್ಮೆ ಅಂತಾರಾಷ್ಟ್ರೀಯ ಮಟ್ಟದ ಹೊನಲು ಬೆಳಕಿನ ಕ್ರಿಕೆಟ್ ಪಂದ್ಯಾಟ ಇದೇ ಬರುವ ಮಾರ್ಚ್ 22,23 ಮತ್ತು 24 ರಂದು ಆಯೋಜಿಸಿದೆ.
16 ತಂಡಗಳ ನಡುವಿನ ಸೆಣಸಾಟ-ವಿದೇಶದ 2 ತಂಡಗಳು-ಹೊರ ರಾಜ್ಯದ 4 ತಂಡಗಳು ಭಾಗಿ
ಫ್ರೆಂಡ್ಸ್ ಬೆಂಗಳೂರು ತಂಡ 2023 ರಲ್ಲಿ ಆಯೋಜಿಸಿದ್ದ ಪಂದ್ಯಾಟದಲ್ಲಿ ಶ್ರೀಲಂಕಾ,ಲಕ್ನೋ,ಮಧ್ಯಪ್ರದೇಶ,
ಮುಂಬಯಿ ಸಹಿತ ಒಟ್ಟು 49 ತಂಡಗಳು ಭಾಗವಹಿಸಿದ್ದು,
ಈ ಬಾರಿ ವಿದೇಶದ 2 ತಂಡ,ಹೊರ ರಾಜ್ಯದ 4 ತಂಡ ಹಾಗೂ 2023-24 ಕ್ರಿಕೆಟ್ ಋತುವಿನಲ್ಲಿ ಅತೀ ಹೆಚ್ಚು ಪಂದ್ಯಾಟಗಳಲ್ಲಿ ಭಾಗವಹಿಸಿದ ಕರ್ನಾಟಕದ 10 ತಂಡಗಳಿಗೆ ಅವಕಾಶ ನೀಡಲಾಗಿದ್ದು,ದೇಶ ವಿದೇಶಗಳಲ್ಲಿ ಅಪಾರ ಸಾಧನೆಗೈದ ಟೆನಿಸ್ಬಾಲ್ ಕ್ರಿಕೆಟ್ ನ ಖ್ಯಾತನಾಮ‌ ಆಟಗಾರರು ಈ ಪಂದ್ಯಾವಳಿಯಲ್ಲಿ ಭಾಗವಹಿಸಲಿದ್ದಾರೆ.
ಫ್ರೆಂಡ್ಸ್ ಕಪ್ ನ ವಿಜೇತ ತಂಡ 5,05,000 ರೂ,ದ್ವಿತೀಯ ಸ್ಥಾನಿ 2,50,000 ರೂ ನಗದು ಸಹಿತ ಮಿನುಗುವ ಆಕರ್ಷಕ ಫ್ರೆಂಡ್ಸ್ ಕಪ್ ಗಳನ್ನು ಪಡೆಯಲಿದ್ದಾರೆ.
ಫ್ರೆಂಡ್ಸ್ ಬೆಂಗಳೂರು ವಿನೂತನ ಪ್ರಯೋಗ-ಆಯೋಜಕರಿಂದಲೇ ಪ್ರಾಯೋಜಕರ ವ್ಯವಸ್ಥೆ-ವ್ಯವಸ್ಥಾಪಕರಿಗಿಲ್ಲ ಖರ್ಚು ವೆಚ್ಚದ ಚಿಂತೆ
ಇತ್ತೀಚಿನ ದಿನಗಳಲ್ಲಿ ತಂಡಗಳನ್ನು ಕಟ್ಟಿ ಬೆಳೆಸಲು ಅತ್ಯಂತ ಕಷ್ಟ ಸಾಧ್ಯವಾದ ಈ ಕಾಲ ಘಟ್ಟದಲ್ಲಿ
ಫ್ರೆಂಡ್ಸ್ ಬೆಂಗಳೂರು ತಂಡ ಈ ಬಗ್ಗೆ ವಿನೂತನ ಚಿಂತನೆ ನಡೆಸಿ ಫ್ರೆಂಡ್ಸ್ ಕಪ್ ನಲ್ಲಿ ಕಾರ್ಯರೂಪಕ್ಕೆ ತರಲಿದ್ದಾರೆ‌
ಫ್ರೆಂಡ್ಸ್ ಕಪ್-2024 ರಲ್ಲಿ ಭಾಗವಹಿಸುವ ಎಲ್ಲಾ 16 ತಂಡಗಳಿಗೂ ಆಯೋಜಕರೇ ಪ್ರಾಯೋಜಕರನ್ನು ನೀಡುತ್ತಿರುವುದು ಟೆನಿಸ್ಬಾಲ್ ಕ್ರಿಕೆಟ್ ಕ್ಷೇತದಲ್ಲೆ ಇದೇ ಮೊದಲಾಗಿದೆ‌.
“ಅಳಿವಿನಂಚಿನಲ್ಲಿರುವ ಕ್ರಿಕೆಟ್ ಉಳಿಸಿ ಬೆಳೆಸುವುದು ಈ ಪಂದ್ಯಾಟದ ಮುಖ್ಯ ಉದ್ದೇಶ” ಎಂದು ಫ್ರೆಂಡ್ಸ್ ಬೆಂಗಳೂರು ತಂಡದ ಪ್ರವರ್ತಕರಾದ ರೇಣು ಗೌಡ ಇವರು ಸ್ಪೋರ್ಟ್ಸ್ ಕನ್ನಡ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

LEAVE A REPLY

Please enter your comment!
Please enter your name here

4 + eight =

Latest news

ಕರೂಣ್ ನಾಯರ್ ಗೆ ಕೋಸ್ಟಲ್ ಕಿಂಗ್ಸ್ ಮಂಗಳೂರು ತಂಡದ ನಾಯಕತ್ವ

ಕರೂಣ್ ನಾಯರ್ ಗೆ ಕೋಸ್ಟಲ್ ಕಿಂಗ್ಸ್ ಮಂಗಳೂರು ತಂಡದ ನಾಯಕತ್ವ ಮಹಾರಾಜ ಟ್ರೋಫಿ ಕೆಎಸ್ಸಿಎ ಟಿ20 ಸೀಸನ್-5ಕ್ಕೆ ಸಜ್ಜಾದ ಫ್ರಾಂಚೈಸಿ; ತಂಡದ ಜೆರ್ಸಿ, ಗೀತೆ ಹಾಗೂ ನಾಯಕತ್ವ...

ಮಹಿಳಾ ಟಿ20 ವಿಶ್ವಕಪ್: ಪಾಕಿಸ್ತಾನವನ್ನು 64 ರನ್‌ಗಳಿಂದ ಸೋಲಿಸಿದ ಭಾರತ – ಇತಿಹಾಸ ನಿರ್ಮಿಸಿದ ದೀಪ್ತಿ ಶರ್ಮಾ

  ಮಹಿಳಾ ಟಿ20 ವಿಶ್ವಕಪ್: ಪಾಕಿಸ್ತಾನವನ್ನು 64 ರನ್‌ಗಳಿಂದ ಸೋಲಿಸಿದ ಭಾರತ - ಇತಿಹಾಸ ನಿರ್ಮಿಸಿದ ದೀಪ್ತಿ ಶರ್ಮಾ ಬ್ರಿಟನ್‌ನ ಬರ್ಮಿಂಗ್‌ಹ್ಯಾಮ್‌ನ ಎಡ್ಜ್‌ಬಾಸ್ಟನ್‌ನಲ್ಲಿ ನಡೆದ ಈ ಪಂದ್ಯದಲ್ಲಿ, ಭಾರತ...

ವಿಶ್ವಕರ್ಮ ಪ್ರೀಮಿಯರ್ ಲೀಗ್ 2026ಕ್ಕೆ ಮಧು ಡೈಮಂಡ್ಸ್ ಟೈಟಲ್ ಸ್ಪಾನ್ಸರ್

ವಿಶ್ವಕರ್ಮ ಪ್ರೀಮಿಯರ್ ಲೀಗ್ 2026ಕ್ಕೆ ಮಧು ಡೈಮಂಡ್ಸ್ ಟೈಟಲ್ ಸ್ಪಾನ್ಸರ್ ಚಿತ್ರದುರ್ಗ: ಕರ್ನಾಟಕ ರಾಜ್ಯದ ವಿಶ್ವಕರ್ಮ ಸಮುದಾಯದ ಕ್ರೀಡಾ ಪ್ರತಿಭೆಗಳನ್ನು ಒಂದೇ ವೇದಿಕೆಯಲ್ಲಿ ಒಗ್ಗೂಡಿಸುವ ಮಹತ್ವಾಕಾಂಕ್ಷೆಯ ಕ್ರಿಕೆಟ್ ಮಹಾಕೂಟ ವಿಶ್ವಕರ್ಮ...

16 ವರ್ಷಗಳ ಸಾಹಸಗಾಥೆ ಅಂತ್ಯಗೊಂಡಿದೆ! ಡಬ್ಲ್ಯೂಟಿಸಿ ಹೀರೋ ಕೇನ್ ವಿಲಿಯಮ್ಸನ್ ಅಂತರರಾಷ್ಟ್ರೀಯ ಕ್ರಿಕೆಟ್‌ನಿಂದ ನಿವೃತ್ತಿ!

16 ವರ್ಷಗಳ ಸಾಹಸಗಾಥೆ ಅಂತ್ಯಗೊಂಡಿದೆ! ಡಬ್ಲ್ಯೂಟಿಸಿ ಹೀರೋ ಕೇನ್ ವಿಲಿಯಮ್ಸನ್ ಅಂತರರಾಷ್ಟ್ರೀಯ ಕ್ರಿಕೆಟ್‌ನಿಂದ ನಿವೃತ್ತಿ! ನ್ಯೂಜಿಲೆಂಡ್ ಕ್ರಿಕೆಟ್ ಇತಿಹಾಸದಲ್ಲಿ ಅತಿ ಹೆಚ್ಚು ರನ್ ಗಳಿಸಿದ ದಾಖಲೆಯನ್ನು ಕೇನ್...
- Advertisement -spot_imgspot_img

ಮಹಿಳಾ ಟಿ-20 ವಿಶ್ವಕಪ್‌ಗೆ ಕ್ಷಣಗಣನೆ: ವಿಶ್ವದ ಕಣ್ಣುಗಳು ಇಂಗ್ಲೆಂಡ್ ಕಡೆ

ಮಹಿಳಾ ಟಿ-20 ವಿಶ್ವಕಪ್‌ಗೆ ಕ್ಷಣಗಣನೆ: ವಿಶ್ವದ ಕಣ್ಣುಗಳು ಇಂಗ್ಲೆಂಡ್ ಕಡೆ ಕ್ರಿಕೆಟ್ ಅಭಿಮಾನಿಗಳು ಬಹು ನಿರೀಕ್ಷೆಯಿಂದ ಕಾಯುತ್ತಿರುವ ಐಸಿಸಿ ಮಹಿಳಾ ಟಿ-20 ವಿಶ್ವಕಪ್ 2026 ಟೂರ್ನಿಯು ಜೂನ್...

ಮಹಾರಾಜ ಟ್ರೋಫಿ 2026: ಕರ್ನಾಟಕ ಕ್ರಿಕೆಟ್‌ಗೆ ಮತ್ತೊಂದು ಹಬ್ಬ

  ಮಹಾರಾಜ ಟ್ರೋಫಿ 2026: ಕರ್ನಾಟಕ ಕ್ರಿಕೆಟ್‌ಗೆ ಮತ್ತೊಂದು ಹಬ್ಬ Maharaja Trophy: ಜೂನ್‌ 20 ರಿಂದ ಟೂರ್ನಿ ಆರಂಭ, ಬೆಂಗಳೂರು, ಮೈಸೂರು, ಹುಬ್ಬಳ್ಳಿಯಲ್ಲಿ ಪಂದ್ಯ ಆಯೋಜನೆ ಐದನೇ ಆವೃತ್ತಿಯ...

Must read

- Advertisement -spot_imgspot_img

You might also likeRELATED
Recommended to you