ಕ್ರಿಕೆಟ್ವಿಶ್ವಜೀತ್ ಸಾಹಸ-10pl "ಫ್ರೆಂಡ್ಸ್ ಕುವೈಟ್" ವಿಶ್ವ ವಿಜೇತ.

ವಿಶ್ವಜೀತ್ ಸಾಹಸ-10pl “ಫ್ರೆಂಡ್ಸ್ ಕುವೈಟ್” ವಿಶ್ವ ವಿಜೇತ.

-

- Advertisment -spot_img

 

ಯು ಎ ಇ ಮೂಲದ ತೈಲ ಮತ್ತು ಅನಿಲ ಉತ್ಪಾದನಾ ಘಟಕ ಪೆಟ್ರೋಮ್ಯಾನ್ ಸಂಸ್ಥೆ ಮತ್ತು ಶಾರ್ಜಾದ ಕ್ರಿಕೆಟ್ ಕೌನ್ಸಿಲ್ ಸಹಭಾಗಿತ್ವದಲ್ಲಿ ನಡೆದ ಟೆನ್ನಿಸ್ ಕ್ರಿಕೆಟ್ ವಿಶ್ವಕಪ್ 10pl ಸೀಸನ್ 3 ಚಾಂಪಿಯನ್ ಪಟ್ಟವನ್ನು ಮೂಲ್ಕಿ ಮೂಲದ ಕುವೈಟ್ ನ ಉದ್ಯಮಿ
ಅಮಿತ್ ಫುರ್ಟಾಡೋ ಮಾಲೀಕತ್ವದ “ಫ್ರೆಂಡ್ಸ್ ಕುವೈಟ್” ಅಲಂಕರಿಸಿತು.

ಶಾರ್ಜಾ ಅಂಗಣದಲ್ಲಿ ಹೊನಲು ಬೆಳಕಿನಡಿಯಲ್ಲಿ ಸಾಗಿದ ಈ ಅದ್ಧೂರಿಯ ಪಂದ್ಯಾವಳಿಯಲ್ಲಿ 16 ಪ್ರಸಿದ್ಧ ತಂಡಗಳು ಭಾಗವಹಿಸಿದ್ದವು.

ಲೀಗ್ ಹಂತದ ರೋಚಕ ಹಣಾಹಣಿಗಳ ಬಳಿಕ,
ಸೆಮಿಫೈನಲ್ ನಲ್ಲಿ
ಫ್ರೆಂಡ್ಸ್ ಕುವೈಟ್ ತಂಡ ಎಸ್.ಜೆ‌.ಎ ಗ್ರೂಪ್ ಆಫ್ ಕಂಪೆನೀಸ್ ತಂಡವನ್ನು ಹಾಗೂ ಗ್ಲೋಬಲಿಂಕ್ ವೆಸ್ಟರ್ನ್ ಶಿಪ್ಪಿಂಗ್ ತಂಡ,ಪೆಟ್ರೋಮ್ಯಾನ್ ತಂಡವನ್ನು ಸೋಲಿಸಿ ಫೈನಲ್ ಗೆ ಲಗ್ಗೆಯಿಟ್ಟಿದ್ದರು.

ಫೈನಲ್ ನಲ್ಲಿ ಮೊದಲು ಬ್ಯಾಟಿಂಗ್ ನಡೆಸಿದ ಫ್ರೆಂಡ್ಸ್ ಕುವೈಟ್ ತಂಡ ಯೋಗೇಶ್ ಪವಾರ್ ಸಿಡಿಸಿದ 31ರನ್ ಗಳ ನೆರವಿನಿಂದ 10 ಓವರ್ ನಲ್ಲಿ 8 ವಿಕೆಟ್ ನಷ್ಟಕ್ಕೆ 72 ರನ್ ಗೆಲುವಿನ ಗುರಿಯನ್ನು ಎದುರಾಳಿ ತಂಡಕ್ಕೆ ನೀಡಿತ್ತು.
ಸ್ಪರ್ಧಾತ್ಮಕ ಮೊತ್ತವನ್ನು ಬೆನ್ನತ್ತಿದ ಗ್ಲೋಬಲಿಂಕ್ ತಂಡ ಫ್ರೆಂಡ್ಸ್ ಕುವೈಟ್ ನ ವೇಗಿಗಳಾದ ವಿಶ್ವಜೀತ್ ಹಾಗೂ ಅಂಕುರ್ ಸಿಂಗ್ ಮೊನಚಾದ ದಾಳಿಗೆ 8 ವಿಕೆಟ್ ನಷ್ಟಕ್ಕೆ ಕೇವಲ 61 ರನ್ ಗಳಿಸಲಷ್ಟೇ ಶಕ್ತವಾಗಿ ಸೋಲೋಪ್ಪಿಕೊಂಡಿತ್ತು.

ವಿಜೇತ ಫ್ರೆಂಡ್ಸ್ ಕುವೈಟ್ ಹಾಗೂ ರನ್ನರ್ಸ್ ಗ್ಲೋಬಲಿಂಕ್ ವೆಸ್ಟರ್ನ್ ತಂಡಗಳು ಆಕರ್ಷಕ ಟ್ರೋಫಿಯೊಂದಿಗೆ ಗರಿಷ್ಠ ನಗದು ಬಹುಮಾನಗಳನ್ನು ಪಡೆದುಕೊಂಡರು.

ವೈಯಕ್ತಿಕ ಶ್ರೇಷ್ಠ ನಿರ್ವಹಣೆಗಾಗಿ ನೀಡಿದ ಪ್ರಶಸ್ತಿಗಳನ್ನು ಕ್ರಮವಾಗಿ,
ಟೂರ್ನಮೆಂಟ್ ನ ಬೆಸ್ಟ್ ಬ್ಯಾಟ್ಸ್‌ಮನ್ ಪ್ರಶಸ್ತಿ


ಫ್ರೆಂಡ್ಸ್ ಕುವೈಟ್ ನ ಥಾಮಸ್ ಡಯಾಸ್,ಅತ್ಯಧಿಕ ಸಿಕ್ಸರ್ ಪ್ರಶಸ್ತಿ ಯೋಗೀಶ್ ಪವಾರ್,ಬೆಸ್ಟ್ ಫೀಲ್ಡರ್ ಅಂಕುರ್ ಸಿಂಗ್,
ಬೆಸ್ಟ್ ಬೌಲರ್ ಪೆಟ್ರೋಮ್ಯಾನ್ ತಂಡದ ಸರೋಜ್ ಹಾಗೂ 10pl ಸರಣಿಯುದ್ದಕ್ಕೂ ತನ್ನ ಬ್ಯಾಟಿಂಗ್ ಹಾಗೂ ಬೌಲಿಂಗ್ ಮೂಲಕ ಶ್ರೇಷ್ಠ ನಿರ್ವಹಣೆ ನೀಡಿದ ರಾಯಗಡ್ ವಿಶ್ವಜೀತ್ (ಮೋಟ್ಯಾ)ಅರ್ಹವಾಗಿ
ಸರಣಿ ಶ್ರೇಷ್ಠ ಹಾಗೂ ಫೈನಲ್ ನ ಪಂದ್ಯಶ್ರೇಷ್ಟ ಪ್ರಶಸ್ತಿ ಪಡೆದುಕೊಂಡರು.

ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

LEAVE A REPLY

Please enter your comment!
Please enter your name here

three × 4 =

Latest news

ಸಿರ್ಸಿಯಲ್ಲಿ ‘ಶ್ರೀ ಮಾರಿಕಾಂಬಾ ಟ್ರೋಫಿ’ ಕ್ರಿಕೆಟ್ ಟೂರ್ನಮೆಂಟ್‌ಗೆ ಭರ್ಜರಿ ಸಿದ್ಧತೆ

ಸಿರ್ಸಿಯಲ್ಲಿ ‘ಶ್ರೀ ಮಾರಿಕಾಂಬಾ ಟ್ರೋಫಿ’ ಕ್ರಿಕೆಟ್ ಟೂರ್ನಮೆಂಟ್‌ಗೆ ಭರ್ಜರಿ ಸಿದ್ಧತೆ ಸಿರ್ಸಿಯ ಶ್ರೀ ಮಾರಿಕಾಂಬಾ ಜಿಲ್ಲಾ ಕ್ರೀಡಾಂಗಣದಲ್ಲಿ Shri Marikamba Trophy ಓಪನ್ ಹಾರ್ಡ್ ಟೆನಿಸ್ ಕ್ರಿಕೆಟ್...

ಹೆಜಮಾಡಿಯಲ್ಲಿ ಸಂಭ್ರಮದೊಂದಿಗೆ ಯಶಸ್ವಿಯಾಗಿ ನಡೆದ “ಅಭರಣ್ GPL ಉತ್ಸವ 2026” – ಸಿಡಿಲಿನ ಸಮರದಲ್ಲಿ Temple Square Puttur ಗೆ ಚಾಂಪಿಯನ್ ಪಟ್ಟ!

ಹೆಜಮಾಡಿಯಲ್ಲಿ ಸಂಭ್ರಮದೊಂದಿಗೆ ಯಶಸ್ವಿಯಾಗಿ ನಡೆದ “ಅಭರಣ್ GPL ಉತ್ಸವ 2026” – ಸಿಡಿಲಿನ ಸಮರದಲ್ಲಿ Temple Square Puttur ಗೆ ಚಾಂಪಿಯನ್ ಪಟ್ಟ! ಹೆಜಮಾಡಿ ಸಮೀಪದ ಶಾನುಭಾಗ...

ಕಟಪಾಡಿಯಲ್ಲಿ ಕ್ರಿಕೆಟ್ ಪ್ರೇರಿತ ಮಿಯಾವಾಕಿ ಅರಣ್ಯ ಯೋಜನೆ ಉದ್ಘಾಟನೆ

ಕಟಪಾಡಿಯಲ್ಲಿ ಕ್ರಿಕೆಟ್ ಪ್ರೇರಿತ ಮಿಯಾವಾಕಿ ಅರಣ್ಯ ಯೋಜನೆ ಉದ್ಘಾಟನೆ ಉಡುಪಿ, ಏಪ್ರಿಲ್ 5, 2026: ಪರಿಸರ ಸಂರಕ್ಷಣೆಗೆ ಹೊಸ ದಿಕ್ಕು ತೋರಿಸುವ ವಿಶಿಷ್ಟ ಪ್ರಯತ್ನವಾಗಿ, ಕ್ರಿಕೆಟ್ ದಂತಕಥೆ...

ಅಮ್ಗೆಲೆ ಅಭರಣ್ GPL ಉತ್ಸವ – 2026: ತಂಡಗಳ ಫಿಕ್ಸ್ಚರ್ಸ್ ಬಿಡುಗಡೆ, ಕಾದಿದ್ದ ಕ್ಷಣಕ್ಕೆ ತೆರೆ

ಅಮ್ಗೆಲೆ ಅಭರಣ್ GPL– 2026: ತಂಡಗಳ ಫಿಕ್ಸ್ಚರ್ಸ್ ಬಿಡುಗಡೆ, ಕಾದಿದ್ದ ಕ್ಷಣಕ್ಕೆ ತೆರೆ ಜಿಎಸ್‌ಬಿ ಕ್ರೀಡಾಭಿಮಾನಿಗಳು ಆತುರದಿಂದ ಕಾಯುತ್ತಿದ್ದ ಕ್ಷಣ ಕೊನೆಗೂ ಬಂದಿದೆ. *ಅಮ್ಗೆಲೆ ಅಭರಣ್ GPL...
- Advertisement -spot_imgspot_img

ಮುಂಬೈಯಲ್ಲಿ ಮಾಜಿ ರಣಜಿ ಕ್ರಿಕೆಟಿಗ ಪ್ರಕಾಶ್ ಕರ್ಕೇರಾ ನಿಧನ

ಮುಂಬೈಯಲ್ಲಿ ಮಾಜಿ ರಣಜಿ ಕ್ರಿಕೆಟಿಗ ಪ್ರಕಾಶ್ ಕರ್ಕೇರಾ ನಿಧನ ರೈಲ್ವೇಸ್ ಪರವಾಗಿ ರಣಜಿ ಟ್ರೋಫಿಯಲ್ಲಿ ಪ್ರತಿನಿಧಿಸಿದ್ದ ಮಾಜಿ ಕ್ರಿಕೆಟಿಗ ಪ್ರಕಾಶ್ ಕರ್ಕೇರಾ ಅವರು ಹೃದಯಾಘಾತದಿಂದ ಮುಂಬೈನ ಮುಲುಂಡ್‌ನಲ್ಲಿರುವ...

ಅಳಿಯೂರು ಪ್ರೀಮಿಯರ್ ಲೀಗ್ (APL-2026) ಗೆ ಸಜ್ಜಾಗಿದೆ ಅಳಿಯೂರು

ಅಳಿಯೂರು ಪ್ರೀಮಿಯರ್ ಲೀಗ್ (APL-2026) ಗೆ ಸಜ್ಜಾಗಿದೆ ಅಳಿಯೂರು ಫ್ರೆಂಡ್ಸ್ ಅಳಿಯೂರು ವತಿಯಿಂದ ಮೊದಲ ಬಾರಿಗೆ ಅಳಿಯೂರು ಪ್ರೀಮಿಯರ್ ಲೀಗ್ (APL-2026) – ಸೀಸನ್ 1 ಆಯೋಜಿಸಲಾಗಿದೆ....

Must read

- Advertisement -spot_imgspot_img

You might also likeRELATED
Recommended to you