ಕ್ರಿಕೆಟ್ಪಡುಬಿದ್ರಿ-ಪಾದೆಬೆಟ್ಟು ಶಶಿಕಲಾ ಆಚಾರ್ಯ ಕುಟುಂಬಕ್ಕೆ ನೆರವಿನ ಹಸ್ತದ ಸದುದ್ದೇಶ-ಶ್ರೀವಿಕಾ ಕಪ್-2022

ಪಡುಬಿದ್ರಿ-ಪಾದೆಬೆಟ್ಟು ಶಶಿಕಲಾ ಆಚಾರ್ಯ ಕುಟುಂಬಕ್ಕೆ ನೆರವಿನ ಹಸ್ತದ ಸದುದ್ದೇಶ-ಶ್ರೀವಿಕಾ ಕಪ್-2022

-

- Advertisment -spot_img
ಪಾದೆಬೆಟ್ಟು ಗ್ರಾಮದ ಶಶಿಕಲಾ ಆಚಾರ್ಯ ಇವರ ತಂದೆ ಲಕ್ಷ್ಮಣ ಆಚಾರ್ಯ ಹಾಗೂ ತಾಯಿ ಶಾರದಾ ಆಚಾರ್ಯ ಇವರು ಸುಮಾರು 12 ವರ್ಷಗಳಿಂದ ಅನಾರೋಗ್ಯ ಪೀಡಿತರಾಗಿದ್ದು ಯಾವುದೇ ಚಲನವಲನಗಳಿಲ್ಲದೇ ಹಾಸಿಗೆಯಲ್ಲೇ ಮಲಗಿಕೊಂಡಿದ್ದು ಈ ದಂಪತಿಗಳ ಮಗನಾದ ಸುಬ್ರಹ್ಮಣ್ಯ ಆಚಾರ್ಯ ಇವರು ವೃತ್ತಿಯಲ್ಲಿ ಮರದ ಕೆಲಸ ಮಾಡಿಕೊಂಡು ಈ ಕುಟುಂಬಕ್ಕೆ ಬೆನ್ನೆಲುಬಾಗಿದ್ದರು.
ಆದರೆ ಮಗನ ಅಕಾಲಿಕ ಮರಣದಿಂದ ಈ ಕುಟುಂಬಕ್ಕೆ ಜೀವನ ನಡೆಸಲು ಅಸಾಧ್ಯವಾಗಿರುತ್ತದೆ.ಇದನ್ನು ಮನಗಂಡು,ಶಶಿಕಲಾ ಆಚಾರ್ಯ ಕುಟುಂಬಕ್ಕೆ ನೆರವಿನ ಹಸ್ತ ನೀಡುವ ಸದುದ್ದೇಶದಿಂದ ಶ್ರೀವಿಕಾ ಕ್ರಿಕೆಟ್ ಕ್ಲಬ್ ಪಾದೆಬೆಟ್ಟು “ಶ್ರೀವಿಕಾ ಕಪ್-2022” ಆಯೋಜಿಸಿದ್ದಾರೆ.
ಏಪ್ರಿಲ್ ದಿನಾಂಕ 9 ಮತ್ತು 10 ರಂದು ಪಡುಬಿದ್ರಿ ಬೋರ್ಡ್ ಶಾಲಾ ಮೈದಾನದಲ್ಲಿ ಈ ಪಂದ್ಯಾವಳಿ ನಡೆಯಲಿದ್ದು,ಗ್ರೂಪ್ ಎ ವಿಭಾಗದಲ್ಲಿ ವಿಶ್ವಕರ್ಮ ಸಮಾಜ ಬಾಂಧವರ ಪಂದ್ಯಾಕೂಟ(ರಾಜ್ಯ ಮಟ್ಟದ ಆಟಗಾರರಿಗೆ ಅವಕಾಶವಿಲ್ಲ),ಗ್ರೂಪ್ ಬಿ ವಿಭಾಗದಲ್ಲಿ ಉಡುಪಿ,ದ.ಕ ಜಿಲ್ಲಾ ಮಟ್ಟದ ಆಟಗಾರರಿಗೆ ಅವಕಾಶ ಕಲ್ಪಿಸಲಾಗಿದೆ.
ಪ್ರಥಮ ಬಹುಮಾನ 30 ಸಾವಿರ ರೂ ಮತ್ತು ದ್ವಿತೀಯ ಬಹುಮಾನ 15 ಸಾವಿರ ನಗದು ಸಹಿತ ಆಕರ್ಷಕ ಟ್ರೋಫಿಗಳನ್ನು ನೀಡಲಾಗುತ್ತಿದೆ.
ಹೆಚ್ಚಿನ ವಿವರಗಳಿಗಾಗಿ 9008857100,8073536342,
8618756075 ಈ ನಂಬರ್ ಗಳನ್ನು ಸಂಪರ್ಕಿಸಬಹುದು.
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

LEAVE A REPLY

Please enter your comment!
Please enter your name here

15 − 12 =

Latest news

ಆರ್‌ಪಿ ಟ್ರೋಫಿಗೆ ಕರ್ನಾಟಕದ ಅಕುಲ್ ಟೂರಿಸಂ XI ತಂಡ ಘೋಷಣೆ

ಆರ್‌ಪಿ ಟ್ರೋಫಿಗೆ ಕರ್ನಾಟಕದ ಅಕುಲ್ ಟೂರಿಸಂ XI ತಂಡ ಘೋಷಣೆ ಮಂಗಳೂರು/ಬೆಂಗಳೂರು: ಪ್ರತಿಷ್ಠಿತ ಆರ್‌ಪಿ ಟ್ರೋಫಿ 2026 ರಾಜ್ಯ ಮಟ್ಟದ ಕ್ರಿಕೆಟ್ ಟೂರ್ನಿಗೆ ಕರ್ನಾಟಕದ ಅಕುಲ್ ಟೂರಿಸಂ...

ಬೈಂದೂರಿನಲ್ಲಿ “ವಿಕ್ರಂ ಟ್ರೋಫಿ–2026” ಅಂಡರ್-23 ಟಿ-20 ಕ್ರಿಕೆಟ್ ಟೂರ್ನಿಗೆ ಭರ್ಜರಿ ಸಿದ್ಧತೆ

ಬೈಂದೂರಿನಲ್ಲಿ “ವಿಕ್ರಂ ಟ್ರೋಫಿ–2026” ಅಂಡರ್-23 ಟಿ-20 ಕ್ರಿಕೆಟ್ ಟೂರ್ನಿಗೆ ಸಿದ್ಧತೆ ಬೈಂದೂರು: ಯುವ ಕ್ರಿಕೆಟ್ ಪ್ರತಿಭೆಗಳಿಗೆ ಉತ್ತೇಜನ ನೀಡುವ ಉದ್ದೇಶದಿಂದ ವಿಕ್ರಂ ಕ್ರಿಕೆಟ್ ಕ್ಲಬ್ ಬೈಂದೂರು ವತಿಯಿಂದ,...

ಉರ್ವಾ ಮೈದಾನದಲ್ಲಿ ಮಂಗಳಾಪುರ ಟ್ರೋಫಿ ಸಂಭ್ರಮ – ಕೊಂಕಣ್ ಎಕ್ಸ್‌ಪ್ರೆಸ್ ಚಾಂಪಿಯನ್

ಉರ್ವಾ ಮೈದಾನದಲ್ಲಿ ಮಂಗಳಾಪುರ ಟ್ರೋಫಿ ಸಂಭ್ರಮ – ಕೊಂಕಣ್ ಎಕ್ಸ್‌ಪ್ರೆಸ್ ಚಾಂಪಿಯನ್ ಮಂಗಳೂರು ಉರ್ವಾ ಮೈದಾನದಲ್ಲಿ ಎರಡು ದಿನಗಳ ಕಾಲ ಹೊನಲು ಬೆಳಕಿನಲ್ಲಿ ನಡೆದ “ಮಂಗಳಾಪುರ ಟ್ರೋಫಿ...

ಹೊಸಂಗಡಿಯಲ್ಲಿ ಕುಂಬ್ರಿ ಪ್ರೀಮಿಯರ್ ಲೀಗ್ – 2026 ‘HPL-2K26’ ಕ್ರಿಕೆಟ್ ಸಂಭ್ರಮ

ಹೊಸಂಗಡಿಯಲ್ಲಿ ಕುಂಬ್ರಿ ಪ್ರೀಮಿಯರ್ ಲೀಗ್ – 2026 'HPL-2K26’ ಕ್ರಿಕೆಟ್ ಸಂಭ್ರಮ ಫ್ರೆಂಡ್ಸ್ ಹೊಸಂಗಡಿ ವತಿಯಿಂದ ಮೇ 9 ಮತ್ತು 10 ರಂದು ಹೊಸಂಗಡಿಯ ಅಂಬೇಡ್ಕರ್ ಕ್ರೀಡಾಂಗಣದಲ್ಲಿ...
- Advertisement -spot_imgspot_img

ಮಾರುತಿ ಆಶ್ರಯ ಹಸ್ತಾಂತರ ಕಾರ್ಯಕ್ರಮ: ಮಾನವೀಯ ಸೇವೆಯ ಉದಾತ್ತ ಉದಾಹರಣೆ

ಮಾರುತಿ ಆಶ್ರಯ ಹಸ್ತಾಂತರ ಕಾರ್ಯಕ್ರಮ: ಮಾನವೀಯ ಸೇವೆಯ ಉದಾತ್ತ ಉದಾಹರಣೆ ಉಳ್ಳಾಲ, ಮೇ 5: ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಮಾರುತಿ ಜನಸೇವಾ ಸಂಘ (ರಿ) ಹಾಗೂ...

ಎಸ್‌ವಿಎಸ್ ಮೈದಾನದಲ್ಲಿ ಚಾರಿಟಿ ಕ್ರಿಕೆಟ್: ವಿಜೇತರಿಂದ ದೇಣಿಗೆಯ ಮಹತ್ವದ ಹೆಜ್ಜೆ

  ಎಸ್‌ವಿಎಸ್ ಮೈದಾನದಲ್ಲಿ ಚಾರಿಟಿ ಕ್ರಿಕೆಟ್: ವಿಜೇತರಿಂದ ದೇಣಿಗೆಯ ಮಹತ್ವದ ಹೆಜ್ಜೆ ಬಂಟ್ವಾಳ: ಅರ್ಜುನ್ ಭಂಡಾರ್ಕರ್ ಅವರ ಸೇವ್ ಲೈಫ್ ಚಾರಿಟೇಬಲ್ ಟ್ರಸ್ಟ್ (ರಿ) ವತಿಯಿಂದ ಆಶಕ್ತ ಕುಟುಂಬಗಳಿಗೆ...

Must read

- Advertisement -spot_imgspot_img

You might also likeRELATED
Recommended to you