Categories
ಭರವಸೆಯ ಬೆಳಕು

ಜೈಹಿಂದ್ ಪಡುಕರೆ ತಂಡದಿಂದ ಲಕ್ಷ್ಮೀ ಸೋಮ ಬಂಗೇರ ಸರಕಾರಿ ಕಾಲೇಜಿನ ಪೀಠೋಪಕರಣಕ್ಕೆ ಧನಸಹಾಯ

ಕಳೆದ ತಿಂಗಳಿನಲ್ಲಿ ಕರ್ನಾಟಕದ ಪ್ರಸಿದ್ಧ ವೇಗಿ ಪ್ರಶಾಂತ್ ಪಡುಕರೆ ಇವರ ಸಾರಥ್ಯದಲ್ಲಿ ಕೋಟ ಪಡುಕರೆಯಲ್ಲಿ, ಮೊತ್ತ ಮೊದಲ ಬಾರಿಗೆ ದಾಖಲೆಯ 4 ಪ್ರಾಕಾರಗಳಲ್ಲಿ  ಹೊನಲು ಬೆಳಕಿನ ಕ್ರಿಕೆಟ್ ಪಂದ್ಯಾಟ ಅತ್ಯಂತ ವಿಜೃಂಭಣೆಯಿಂದ ಜರುಗಿತ್ತು.
ಟೂರ್ನಮೆಂಟ್ ನ ಸಂದರ್ಭದಲ್ಲೂ ಬಡ,ಅಶಕ್ತರಿಗೆ ವೈದ್ಯಕೀಯ ಮತ್ತು ಶಿಕ್ಷಣಕ್ಕೆ ಧನಸಹಾಯ ನೀಡಿ ಮಾನವೀಯತೆ ಮೆರೆದ ಜೈಹಿಂದ್ ಪಡುಕರೆ ಸಂಸ್ಥೆ ಇದೀಗ ಪಂದ್ಯಾಟಕ್ಕಾಗಿ ಮೈದಾನವನ್ನು ನೀಡಿ ಸಹಕರಿಸಿದ ಲಕ್ಷ್ಮೀ ಸೋಮಬಂಗೇರ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಹೊಸದಾಗಿ ನಿರ್ಮಾಣವಾಗುತ್ತಿರುವ ಹಾಲ್ ನ ಪೀಠೋಪಕರಣಕ್ಕಾಗಿ 10000 ರೂ ಧನ್ಯಸಹಾಯವನ್ನು ನೀಡಿರುತ್ತಾರೆ.
ಈ ಸಂದರ್ಭ ಕಾಲೇಜಿನ ಪ್ರಾಂಶುಪಾಲರಾದ ನಿತ್ಯಾನಂದ ಗಾಂವ್ಕರ್,ದೈಹಿಕ ಶಿಕ್ಷಕರಾದ ಮನೋಜ್ ಕುಮಾರ್,ಕೃಷ್ಣ ಸಾಸ್ತಾನ ಮತ್ತು ಪ್ರಶಾಂತ್ ಪಡುಕರೆ ಉಪಸ್ಥಿತರಿದ್ದರು.
ಸದಾ ಸೇವಾ ಮನೋಭಾವದಿಂದ ಸಮಾಜಮುಖಿ ಕಾರ್ಯಗಳಲ್ಲಿ ತಮ್ಮನ್ನು ತೊಡಗಿಸಿಕೊಳ್ಳುವ ಜೈಹಿಂದ್ ಪಡುಕರೆ ಸಂಸ್ಥೆಗೆ ಸ್ಪೋರ್ಟ್ಸ್ ಕನ್ನಡ ವೆಬ್ಸೈಟ್ ವತಿಯಿಂದ ಧನ್ಯವಾದಗಳು ಹಾಗೂ ಅಭಿನಂದನೆಗಳು…

By ಕೋಟ ರಾಮಕೃಷ್ಣ ಆಚಾರ್ಯ

ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ
ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

Leave a Reply

Your email address will not be published.

seven + eighteen =