11.4 C
London
Wednesday, May 1, 2024
Homeಕ್ರಿಕೆಟ್ರಿಯಲ್ ಫೈಟರ್ಸ್ ಮಲ್ಪೆ ತಂಡಕ್ಕೆ ಗಣೇಶ್ ಮೆಮೋರಿಯಲ್ ಕಪ್-2019

ರಿಯಲ್ ಫೈಟರ್ಸ್ ಮಲ್ಪೆ ತಂಡಕ್ಕೆ ಗಣೇಶ್ ಮೆಮೋರಿಯಲ್ ಕಪ್-2019

Date:

Related stories

Reject ಪೀಸ್‌ಗಳು ವಾಪಸ್ ಎದ್ದು ಬಂದ ಕಥೆ..!

ಒಬ್ಬ by mistake ಪಂಜಾಬ್ ಕಿಂಗ್ಸ್ ತಂಡ ಸೇರಿದ್ದವ. ಇನ್ನೊಬ್ಬ ತನ್ನ...

ಇಂದು ವಿಶ್ವದ ಅತ್ಯಂತ ಪ್ರೀತಿಪಾತ್ರ ಕ್ರಿಕೆಟಿಗ ಧೋನಿಯ ಕೊನೆಯ ಪಂದ್ಯ..

ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯಲಿರುವ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಮುಂಬೈ...

T20 ವಿಶ್ವಕಪ್‌ನಲ್ಲಿ ಭಾರತದ ವಿಕೆಟ್‌ಕೀಪರ್ ಯಾರು? 5 ಆಟಗಾರರು ರೇಸ್ ನಲ್ಲಿ

ಐಪಿಎಲ್  ನಂತರ ಟಿ20 ವಿಶ್ವಕಪ್ ಆಡಬೇಕಿದೆ. ಈ ಮೆಗಾ  ಟೂರ್ನಿಯನ್ನು ಜೂನ್‌ನಲ್ಲಿ...

ಇಂತಹ ಒಬ್ಬ ಆಟಗಾರನನ್ನು RCB ತಯಾರು ಮಾಡಿದೆಯೇ..?

ರಿಯಾನ್ ಪರಾಗ್’ನಂಥವರು ಕರ್ನಾಟಕದಲ್ಲಿ ಅದೆಷ್ಟು ಹುಡುಗರಿದ್ದರು..! ಈಗಲೂ ಇದ್ದಾರೆ.. ಆದರೆ ಅವರೆಲ್ಲಾ ಐಪಿಎಲ್’ನಲ್ಲಿ...

RCB ಫ್ರಾಂಚೈಸಿಗೆ ಕನ್ನಡಿಗರ ಮೇಲಿರುವುದು ನಿರ್ಲಕ್ಷ್ಯವಲ್ಲ, ಅಲರ್ಜಿ..!

ನಾಲ್ಕೇ ನಾಲ್ಕು ದಿನಗಳ ಹಿಂದೆ..  4 ಓವರ್’ಗಳಲ್ಲಿ 23 ರನ್, ಒಂದು...
spot_imgspot_img

ಕರುನಾಡು ಕ್ರಿಕೆಟರ್ಸ್ ಬೆಂಗಳೂರು ಇವರ ಆಶ್ರಯದಲ್ಲಿ ಅಗಲಿದ ಗೆಳೆಯ ದಿ|ಗಣೇಶ್ ಸ್ಮರಣಾರ್ಥ, ಬೆಂಗಳೂರಿನ ಬಿ.ಟಿ.ಎಮ್ ಲೇಯೌಟ್ 2nd ಸ್ಟೇಜ್ ನ ಉಡುಪಿ ಗಾರ್ಡನ್ ಅಂಕಣದಲ್ಲಿ ನಡೆದ ಎರಡು ದಿನಗಳ ಹಗಲಿನ ರಾಷ್ಟ್ರೀಯ ಮಟ್ಟದ ಪಂದ್ಯಾಕೂಟ “ಗಣೇಶ್ ಮೆಮೋರಿಯಲ್ ಕಪ್-2019” ಉಡುಪಿಯ “ಪ್ರಕೃತಿ ರಿಯಲ್ ಫೈಟರ್ಸ್” ಮಲ್ಪೆ ತಂಡ ಗೆದ್ದುಕೊಂಡಿತು.

16 ತಂಡಗಳು ಭಾಗವಹಿಸಿದ್ದ ಈ ಪಂದ್ಯಾಕೂಟದ ಲೀಗ್ ಹಂತದ ಕುತೂಹಲಕಾರಿ ಕಾದಾಟದ ಬಳಿಕ ಸೆಮಿಫೈನಲ್ಸ್ ನಲ್ಲಿ ನ್ಯಾಶ್ ತಂಡ ಜೈ ಕರ್ನಾಟಕವನ್ನು ಹಾಗೂ ರಿಯಲ್ ಫೈಟರ್ಸ್, ಹಾಸನಾಂಬಾ ತಂಡವನ್ನು ಸೋಲಿಸಿ ಫೈನಲ್ ಪ್ರವೇಶಿಸಿದ್ದವು.

ಫೈನಲ್ ನಲ್ಲಿ ಮೊದಲು ಬ್ಯಾಟಿಂಗ್ ನಡೆಸಿದ ರಿಯಲ್ ಫೈಟರ್ಸ್ ತಂಡ, ಆರಂಭಿಕ ಆಟಗಾರ ಡೆರಿನ್ 13 ರನ್ ಹಾಗೂ ಮಧ್ಯಮ ಸರದಿಯಲ್ಲಿ ದಾಂಡಿಗತನಕ್ಕಿಳಿದ ಸಂಪತ್ 12 ಎಸೆತಗಳಲ್ಲಿ ಬಿರುಸಿನ 2 ಸಿಕ್ಸ್ ಹಾಗೂ 1ಬೌಂಡರಿಗಳ ನೆರವಿನಿಂದ 23 ರನ್ ಗಳ ನೆರವಿನಿಂದ ಎದುರಾಳಿ ನ್ಯಾಶ್ ತಂಡಕ್ಕೆ 72 ರನ್ ಗಳ ಸವಾಲಿನ ಗುರಿಯನ್ನು ನೀಡಿತ್ತು.

ರನ್ ಚೇಸಿಂಗ್ ನಲ್ಲಿ ಎಡವಿದ ನ್ಯಾಶ್,ರಿಯಲ್ ಫೈಟರ್ಸ್ ತಂಡದ ತೀಕ್ಷ್ಣ ದಾಳಿಗೆ ಸಿಲುಕಿ 8 ವಿಕೆಟ್ ಕಳೆದುಕೊಂಡು 59 ರನ್ ಗಳಿಸಲಷ್ಟೇ ಶಕ್ತವಾಯಿತು.

ರಿಯಲ್ ಫೈಟರ್ಸ್ ತಂಡ ಪ್ರಥಮ ಪ್ರಶಸ್ತಿಯಾಗಿ 1ಲಕ್ಷ ನಗದು ಹಾಗೂ ಆಕರ್ಷಕ ಟ್ರೋಫಿ ಹಾಗೂ ರನ್ನರ್ಸ್ ನ್ಯಾಶ್ ತಂಡ 50,000 ನಗದು ಹಾಗೂ ಆಕರ್ಷಕ ಟ್ರೋಫಿಯನ್ನು ಪಡೆದುಕೊಂಡಿತು.

ಫೈನಲ್ ನ ಪಂದ್ಯಶ್ರೇಷ್ಟ ಪ್ರಶಸ್ತಿಯನ್ನು ಅರ್ಹವಾಗಿ ಸಂಪತ್ ಪಡೆದುಕೊಂಡರೆ,ಬೆಸ್ಟ್ ಬ್ಯಾಟ್ಸ್‌ಮನ್ ಪ್ರಶಸ್ತಿಯನ್ನು ಅಕ್ಷಯ್ ಸಿ.ಕೆ,ಬೆಸ್ಟ್ ಬೌಲರ್ ಶ್ರೀರಾಮ್ ಕ್ರಿಕೆಟರ್ಸ್ ನ‌ ನಿತೀಶ್ ಹಾಗೂ ಸರಣಿ ಶ್ರೇಷ್ಠ ಪ್ರಶಸ್ತಿಯನ್ನು ಆಶಿಷ್ ಅಲೆವೂರು ಪಾಲಾಯಿತು.

ವಿಶೇಷವಾಗಿ ಈ ಟೂರ್ನಿಯ ಎಲ್ಲಾ ಪಂದ್ಯಗಳು 8 ಓವರ್ ಗಳಲ್ಲಿ ಸಾಗಿದ್ದು,ವರ್ಷಗಳ ಬಳಿಕ ಪರಿಪೂರ್ಣ ಪಂದ್ಯಾಕೂಟವೆನಿಸಿ ಕ್ರಿಕೆಟ್ ವಿಶ್ಲೇಷಕರ ಮೆಚ್ಚುಗೆಗೆ ಪಾತ್ರವಾಯಿತು.

ಈ ಪಂದ್ಯಾಕೂಟದ ನೇರ ಪ್ರಸಾರವನ್ನು ಗಿರೀಶ್ ರಾವ್ ಮಾಲೀಕತ್ವದ “ಕ್ರಿಕ್ ಸೇ” ಬಿತ್ತರಿಸಿದರೆ,ವೀಕ್ಷಕ ವಿವರಣೆಯನ್ನು ಪ್ರಶಾಂತ್ ಅಂಬಲಪಾಡಿ ನಿರ್ವಹಿಸಿದ್ದರು.
‌‌‌‌‌‌‌‌‌‌
ಆರ್.ಕೆ.ಆಚಾರ್ಯ ಕೋಟ

ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

Latest stories

LEAVE A REPLY

Please enter your comment!
Please enter your name here

5 − 1 =