ಕ್ರಿಕೆಟ್ರಿಯಲ್ ಫೈಟರ್ಸ್ ಮಲ್ಪೆ ತಂಡಕ್ಕೆ ಗಣೇಶ್ ಮೆಮೋರಿಯಲ್ ಕಪ್-2019

ರಿಯಲ್ ಫೈಟರ್ಸ್ ಮಲ್ಪೆ ತಂಡಕ್ಕೆ ಗಣೇಶ್ ಮೆಮೋರಿಯಲ್ ಕಪ್-2019

-

- Advertisment -spot_img

ಕರುನಾಡು ಕ್ರಿಕೆಟರ್ಸ್ ಬೆಂಗಳೂರು ಇವರ ಆಶ್ರಯದಲ್ಲಿ ಅಗಲಿದ ಗೆಳೆಯ ದಿ|ಗಣೇಶ್ ಸ್ಮರಣಾರ್ಥ, ಬೆಂಗಳೂರಿನ ಬಿ.ಟಿ.ಎಮ್ ಲೇಯೌಟ್ 2nd ಸ್ಟೇಜ್ ನ ಉಡುಪಿ ಗಾರ್ಡನ್ ಅಂಕಣದಲ್ಲಿ ನಡೆದ ಎರಡು ದಿನಗಳ ಹಗಲಿನ ರಾಷ್ಟ್ರೀಯ ಮಟ್ಟದ ಪಂದ್ಯಾಕೂಟ “ಗಣೇಶ್ ಮೆಮೋರಿಯಲ್ ಕಪ್-2019” ಉಡುಪಿಯ “ಪ್ರಕೃತಿ ರಿಯಲ್ ಫೈಟರ್ಸ್” ಮಲ್ಪೆ ತಂಡ ಗೆದ್ದುಕೊಂಡಿತು.

16 ತಂಡಗಳು ಭಾಗವಹಿಸಿದ್ದ ಈ ಪಂದ್ಯಾಕೂಟದ ಲೀಗ್ ಹಂತದ ಕುತೂಹಲಕಾರಿ ಕಾದಾಟದ ಬಳಿಕ ಸೆಮಿಫೈನಲ್ಸ್ ನಲ್ಲಿ ನ್ಯಾಶ್ ತಂಡ ಜೈ ಕರ್ನಾಟಕವನ್ನು ಹಾಗೂ ರಿಯಲ್ ಫೈಟರ್ಸ್, ಹಾಸನಾಂಬಾ ತಂಡವನ್ನು ಸೋಲಿಸಿ ಫೈನಲ್ ಪ್ರವೇಶಿಸಿದ್ದವು.

ಫೈನಲ್ ನಲ್ಲಿ ಮೊದಲು ಬ್ಯಾಟಿಂಗ್ ನಡೆಸಿದ ರಿಯಲ್ ಫೈಟರ್ಸ್ ತಂಡ, ಆರಂಭಿಕ ಆಟಗಾರ ಡೆರಿನ್ 13 ರನ್ ಹಾಗೂ ಮಧ್ಯಮ ಸರದಿಯಲ್ಲಿ ದಾಂಡಿಗತನಕ್ಕಿಳಿದ ಸಂಪತ್ 12 ಎಸೆತಗಳಲ್ಲಿ ಬಿರುಸಿನ 2 ಸಿಕ್ಸ್ ಹಾಗೂ 1ಬೌಂಡರಿಗಳ ನೆರವಿನಿಂದ 23 ರನ್ ಗಳ ನೆರವಿನಿಂದ ಎದುರಾಳಿ ನ್ಯಾಶ್ ತಂಡಕ್ಕೆ 72 ರನ್ ಗಳ ಸವಾಲಿನ ಗುರಿಯನ್ನು ನೀಡಿತ್ತು.

ರನ್ ಚೇಸಿಂಗ್ ನಲ್ಲಿ ಎಡವಿದ ನ್ಯಾಶ್,ರಿಯಲ್ ಫೈಟರ್ಸ್ ತಂಡದ ತೀಕ್ಷ್ಣ ದಾಳಿಗೆ ಸಿಲುಕಿ 8 ವಿಕೆಟ್ ಕಳೆದುಕೊಂಡು 59 ರನ್ ಗಳಿಸಲಷ್ಟೇ ಶಕ್ತವಾಯಿತು.

ರಿಯಲ್ ಫೈಟರ್ಸ್ ತಂಡ ಪ್ರಥಮ ಪ್ರಶಸ್ತಿಯಾಗಿ 1ಲಕ್ಷ ನಗದು ಹಾಗೂ ಆಕರ್ಷಕ ಟ್ರೋಫಿ ಹಾಗೂ ರನ್ನರ್ಸ್ ನ್ಯಾಶ್ ತಂಡ 50,000 ನಗದು ಹಾಗೂ ಆಕರ್ಷಕ ಟ್ರೋಫಿಯನ್ನು ಪಡೆದುಕೊಂಡಿತು.

ಫೈನಲ್ ನ ಪಂದ್ಯಶ್ರೇಷ್ಟ ಪ್ರಶಸ್ತಿಯನ್ನು ಅರ್ಹವಾಗಿ ಸಂಪತ್ ಪಡೆದುಕೊಂಡರೆ,ಬೆಸ್ಟ್ ಬ್ಯಾಟ್ಸ್‌ಮನ್ ಪ್ರಶಸ್ತಿಯನ್ನು ಅಕ್ಷಯ್ ಸಿ.ಕೆ,ಬೆಸ್ಟ್ ಬೌಲರ್ ಶ್ರೀರಾಮ್ ಕ್ರಿಕೆಟರ್ಸ್ ನ‌ ನಿತೀಶ್ ಹಾಗೂ ಸರಣಿ ಶ್ರೇಷ್ಠ ಪ್ರಶಸ್ತಿಯನ್ನು ಆಶಿಷ್ ಅಲೆವೂರು ಪಾಲಾಯಿತು.

ವಿಶೇಷವಾಗಿ ಈ ಟೂರ್ನಿಯ ಎಲ್ಲಾ ಪಂದ್ಯಗಳು 8 ಓವರ್ ಗಳಲ್ಲಿ ಸಾಗಿದ್ದು,ವರ್ಷಗಳ ಬಳಿಕ ಪರಿಪೂರ್ಣ ಪಂದ್ಯಾಕೂಟವೆನಿಸಿ ಕ್ರಿಕೆಟ್ ವಿಶ್ಲೇಷಕರ ಮೆಚ್ಚುಗೆಗೆ ಪಾತ್ರವಾಯಿತು.

ಈ ಪಂದ್ಯಾಕೂಟದ ನೇರ ಪ್ರಸಾರವನ್ನು ಗಿರೀಶ್ ರಾವ್ ಮಾಲೀಕತ್ವದ “ಕ್ರಿಕ್ ಸೇ” ಬಿತ್ತರಿಸಿದರೆ,ವೀಕ್ಷಕ ವಿವರಣೆಯನ್ನು ಪ್ರಶಾಂತ್ ಅಂಬಲಪಾಡಿ ನಿರ್ವಹಿಸಿದ್ದರು.
‌‌‌‌‌‌‌‌‌‌
ಆರ್.ಕೆ.ಆಚಾರ್ಯ ಕೋಟ

ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

LEAVE A REPLY

Please enter your comment!
Please enter your name here

1 × two =

Latest news

ವಿಶ್ವಕರ್ಮ ಸಮುದಾಯದ ಇತಿಹಾಸದಲ್ಲೇ ಅತಿದೊಡ್ಡ ಕ್ರಿಕೆಟ್ ಟೂರ್ನಮೆಂಟ್ : ಚಿತ್ರದುರ್ಗದಲ್ಲಿ ‘ವಿಶ್ವಕರ್ಮ ಪ್ರೀಮಿಯರ್ ಲೀಗ್ 2026’

ವಿಶ್ವಕರ್ಮ ಸಮುದಾಯದ ಇತಿಹಾಸದಲ್ಲೇ ಅತಿದೊಡ್ಡ ಕ್ರಿಕೆಟ್ ಟೂರ್ನಮೆಂಟ್ : ಚಿತ್ರದುರ್ಗದಲ್ಲಿ ‘ವಿಶ್ವಕರ್ಮ ಪ್ರೀಮಿಯರ್ ಲೀಗ್ 2026’   ಜಿಲ್ಲಾ ವಿಶ್ವಕರ್ಮ ಸೇವಾ ಸಮಿತಿ ಚಿತ್ರದುರ್ಗ ಇವರ ವತಿಯಿಂದ ಕರ್ನಾಟಕ...

ಯಲಹಂಕದಲ್ಲಿ ಮೇ 29ರಿಂದ ‘ರಾಕರ್ಸ್ ಟ್ರೋಫಿ 2026’ ಕ್ರಿಕೆಟ್ ಟೂರ್ನಿ

ಯಲಹಂಕದಲ್ಲಿ ಮೇ 29ರಿಂದ ‘ರಾಕರ್ಸ್ ಟ್ರೋಫಿ 2026’ ಕ್ರಿಕೆಟ್ ಟೂರ್ನಿ ಬೆಂಗಳೂರು ಉತ್ತರದ ಯಲಹಂಕ ನ್ಯೂಟೌನ್‌ನ ಹೊಯ್ಸಳ ಮೈದಾನದಲ್ಲಿ ಮೇ 29, 30 ಮತ್ತು 31ರಂದು “ಯಲಹಂಕ...

ಕಡಿಯಾಳಿಯಲ್ಲಿ ‘ಸೈಮಂಡ್ಸ್ ಪ್ರೀಮಿಯರ್ ಲೀಗ್’ ಕ್ರಿಕೆಟ್ : ಮೇ 24ರಂದು ಟೂರ್ನಿ

ಕಡಿಯಾಳಿಯಲ್ಲಿ ‘ಸೈಮಂಡ್ಸ್ ಪ್ರೀಮಿಯರ್ ಲೀಗ್’ ಕ್ರಿಕೆಟ್ : ಮೇ 24ರಂದು ಟೂರ್ನಿ ಉಡುಪಿ ಜಿಲ್ಲೆಯ ಕಡಿಯಾಳಿ ಶಾಲಾ ಮೈದಾನದಲ್ಲಿ ಮೇ 24, 2026ರಂದು “ಸೈಮಂಡ್ಸ್ ಪ್ರೀಮಿಯರ್ ಲೀಗ್...

ಕಟಪಾಡಿಯಲ್ಲಿ ಜರುಗಿದ ವಿಶ್ವಕರ್ಮ ಸಮಾಜದ ಕ್ರಿಕೆಟ್ ಟೂರ್ನಮೆಂಟ್ : ರತನ್ ರಾಕರ್ಸ್ ಕುಂದಾಪುರ ಚಾಂಪಿಯನ್

ಕಟಪಾಡಿಯಲ್ಲಿ ಜರುಗಿದ ವಿಶ್ವಕರ್ಮ ಸಮಾಜದ ಕ್ರಿಕೆಟ್ ಟೂರ್ನಮೆಂಟ್ : ರತನ್ ರಾಕರ್ಸ್ ಕುಂದಾಪುರ ಚಾಂಪಿಯನ್ ಕಟಪಾಡಿ : ಯುವಕ ಸೇವಾದಳ ವೇಣುಗಿರಿ ಶ್ರೀ ಕಾಳಿಕಾಂಬಾ ವಿಶ್ವಕರ್ಮೇಶ್ವರ ದೇವಸ್ಥಾನ,...
- Advertisement -spot_imgspot_img

ಬೈಂದೂರಿನಲ್ಲಿ ಆರಂಭವಾದ “ವಿಕ್ರಂ ಟ್ರೋಫಿ-2026” ಕ್ರಿಕೆಟ್ ಸಂಭ್ರಮ;  ಇಂದು ಸೆಮಿಫೈನಲ್ ಹಾಗೂ ಫೈನಲ್ ಪಂದ್ಯಗಳು

ಬೈಂದೂರಿನಲ್ಲಿ ಆರಂಭವಾದ “ವಿಕ್ರಂ ಟ್ರೋಫಿ-2026” ಕ್ರಿಕೆಟ್ ಸಂಭ್ರಮ;  ಇಂದು ಸೆಮಿಫೈನಲ್ ಹಾಗೂ ಫೈನಲ್ ಪಂದ್ಯಗಳು ಬೈಂದೂರು : ವಿಕ್ರಂ ಕ್ರಿಕೆಟ್ ಕ್ಲಬ್ ಆಶ್ರಯದಲ್ಲಿ ಹಾಗೂ ಉಡುಪಿ ಜಿಲ್ಲಾ...

ಮಹಿಳಾ ಅಂಡರ್-15 ಕ್ರಿಕೆಟ್ ತಂಡಕ್ಕೆ ಸಮೃದ್ಧಿ ಆಯ್ಕೆ

ಮಹಿಳಾ ಅಂಡರ್-15 ಕ್ರಿಕೆಟ್ ತಂಡಕ್ಕೆ ಸಮೃದ್ಧಿ ಆಯ್ಕೆ ಉಡುಪಿ ಜಿಲ್ಲೆಯ ಪ್ರತಿಭಾವಂತ ಕ್ರಿಕೆಟಿಗೆಯಾದ ಸಮೃದ್ಧಿ ಅವರು ಮಹಿಳಾ ಅಂಡರ್-15 ಲೆದರ್ ಬಾಲ್ ಕ್ರಿಕೆಟ್ ಅಸೋಸಿಯೇಷನ್ ತಂಡಕ್ಕೆ ಆಲ್‌ರೌಂಡರ್‌...

Must read

- Advertisement -spot_imgspot_img

You might also likeRELATED
Recommended to you