19.7 C
London
Saturday, May 18, 2024
Homeಭರವಸೆಯ ಬೆಳಕುಸ್ಟಾರ್ ವರ್ಟೆಕ್ಸ್ ಕಂಪೆನಿಯ ಸಂಸ್ಥಾಪಕಿ ಸಮಾಜಮುಖಿ ಚಿಂತನೆಯ ಕೋಲಾರದ ಗಾಯತ್ರಿ ಮುತ್ತಪ್ಪ ಇವರಿಗೆ ಗೌರವ...

ಸ್ಟಾರ್ ವರ್ಟೆಕ್ಸ್ ಕಂಪೆನಿಯ ಸಂಸ್ಥಾಪಕಿ ಸಮಾಜಮುಖಿ ಚಿಂತನೆಯ ಕೋಲಾರದ ಗಾಯತ್ರಿ ಮುತ್ತಪ್ಪ ಇವರಿಗೆ ಗೌರವ ಡಾಕ್ಟರೇಟ್ ಪದವಿ ಪ್ರದಾನ

Date:

Related stories

ನಿನ್ನ ಟೈಮ್ ಬಂದೇ ಬರುವುದು, ಹೀಗೇ ಆಡುತ್ತಿರು ಕರುಣ್..!

1996ರಲ್ಲಿ ಅರ್ಜುನ ರಣತುಂಗ ನಾಯಕತ್ವದ ಶ್ರೀಲಂಕಾ ತಂಡ ಏಕದಿನ ವಿಶ್ವಕಪ್ ಗೆದ್ದಾಗ...

ದುಡ್ಡಿನ ಮದದಲ್ಲಿ ಕೊಬ್ಬಿರುವ ಈ business tycoonಗಳಿಗೆ ದೇಶದ ಕ್ರಿಕೆಟ್ ಹೀರೊಗಳ ಮೇಲೆ ಗೌರವ ಇರಲು ಹೇಗೆ ಸಾಧ್ಯ..?

17 ವರ್ಷಗಳ ಐಪಿಎಲ್ ಚರಿತ್ರೆಯಲ್ಲಿ ಸಾವಿರಕ್ಕೂ ಹೆಚ್ಚು ಪಂದ್ಯಗಳು ನಡೆದಿವೆ. ಆ...

Reject ಪೀಸ್‌ಗಳು ವಾಪಸ್ ಎದ್ದು ಬಂದ ಕಥೆ..!

ಒಬ್ಬ by mistake ಪಂಜಾಬ್ ಕಿಂಗ್ಸ್ ತಂಡ ಸೇರಿದ್ದವ. ಇನ್ನೊಬ್ಬ ತನ್ನ...

ಇಂದು ವಿಶ್ವದ ಅತ್ಯಂತ ಪ್ರೀತಿಪಾತ್ರ ಕ್ರಿಕೆಟಿಗ ಧೋನಿಯ ಕೊನೆಯ ಪಂದ್ಯ..

ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯಲಿರುವ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಮುಂಬೈ...

T20 ವಿಶ್ವಕಪ್‌ನಲ್ಲಿ ಭಾರತದ ವಿಕೆಟ್‌ಕೀಪರ್ ಯಾರು? 5 ಆಟಗಾರರು ರೇಸ್ ನಲ್ಲಿ

ಐಪಿಎಲ್  ನಂತರ ಟಿ20 ವಿಶ್ವಕಪ್ ಆಡಬೇಕಿದೆ. ಈ ಮೆಗಾ  ಟೂರ್ನಿಯನ್ನು ಜೂನ್‌ನಲ್ಲಿ...
spot_imgspot_img
ನಾಳಿನ ಉತ್ತಮ ಬದುಕಿನ ನಿರೀಕ್ಷೆ ಮತ್ತು ನಂಬಿಕೆಯೇ ನಮ್ಮ ಬದುಕಿಗೆ ಅರ್ಥ ಕೊಡುವ ಬೆಳಕು, ಆ ಬೆಳಕನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಂಡರೆ ನಾವು ಸಾಗಿಬಂದ ಜೀವನದ ದಾರಿಗೆ ಒಳ್ಳೆಯ ಅರ್ಥ ಬರುತ್ತದೆ
ಇದು ಡಾ. ಗಾಯತ್ರಿ ಮುತ್ತಪ್ಪ ಇವರಿಗೆ ಸಲ್ಲುತ್ತದೆ.
ಕೋಲಾರದ ಗಣಿನಾಡಿನ ಶ್ರೀನಿವಾಸಪುರ ತಾಲ್ಲೂಕಿನ ಮಣಿಗಾನಹಳ್ಳಿಯಲ್ಲಿ ಹುಟ್ಟಿ. ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣವನ್ನು ಶ್ರೀನಿವಾಸಪುರದಲ್ಲಿ ಪೂರೈಸಿ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ ಬೆಳಗಾಂ ಇಲ್ಲಿ ಇಂಜಿನಿಯರಿಂಗ್ ಪೂರೈಸಿ, 2011 ರಲ್ಲಿ ಕಾರ್ಯನಿರ್ವಾಹಕ ಹುದ್ದೆಯಲ್ಲಿ ತೊಡಗಿಸಿಕೊಂಡ ಇವರು 2016 ರಲ್ಲಿ ತನ್ನದೇ ನಾಯಕತ್ವದಲ್ಲಿ “ಸ್ಟಾರ್ ವರ್ಟೆಕ್ಸ್” ಅನ್ನುವ ಸ್ವಂತ ಸಂಸ್ಥೆಯನ್ನು ಹುಟ್ಟು ಹಾಕಿ ಅದರಲ್ಲಿ ತನ್ನನ್ನು ತಾನು ತೊಡಗಿಸಿಕೊಂಡರು.
ಕ್ರೀಡೆ ಹಾಗೂ ಸಮಾಜ ಸೇವೆಯಲ್ಲಿ
 ನಿರಂತರವಾಗಿ ತನ್ನನ್ನು ತಾನು ತೊಡಗಿಸಿಕೊಂಡ ಇವರು ಕೊರೋನದ ಸಂಕಷ್ಟದ ನಡುವೆಯೂ ಮನೆ ಮನೆಗೆ ತೆರಳಿ ದಿನ ನಿತ್ಯದ ರೇಷನ್ ಸಾಮಗ್ರಿಗಳನ್ನು ನೀಡಿ ಮಾನವೀಯತೆ ಮೆರೆದಿದ್ದಾರೆ.2019 ರಲ್ಲಿ ಬಾದಾಮಿಯ ನೆರಪೀಡಿತ ಪ್ರದೇಶಕ್ಕೆ ತೆರಳಿ ಸಂತ್ರಸ್ತರಿಗೆ ಸಹಾಯಹಸ್ತ ನೀಡಿರುತ್ತಾರೆ.
ಇತ್ತೀಚೆಗೆ ಟಿ. ವಿ. 9 ರಲ್ಲಿ ಪ್ರಸಾರವಾದ ನೆಲಮಂಗಲದ ಗೌರಮ್ಮ ಎನ್ನುವ ಮಹಿಳೆಯ ಸಂಕಷ್ಟಕ್ಕೆ ಮರುಗಿ 3 ತಿಂಗಳ ರೇಷನ್ ಸಾಮಗ್ರಿಗಳನ್ನು ನೀಡಿದ್ದು ಅಲ್ಲದೆ ಅನೇಕ ನೊಂದ ಬಡವರಿಗೆ ಸಹಾಯ ನೀಡುತ್ತಿರುವ ಇವರು ಪ್ರಚಾರ ಬಯಸದೆ ತೆರೆಮರೆಯಲ್ಲಿಯೇ ಕೆಲಸವನ್ನು ಪ್ರೀತಿಯಿಂದ ನಡೆಸಿಕೊಂಡು ಬರುತ್ತಿದ್ದಾರೆ.
ಸರಕಾರಿ ಶಾಲೆಗಳಿಗೆ ಭೇಟಿ ನೀಡಿ ವಿದ್ಯಾರ್ಥಿಗಳಿಗೆ ಬೇಕಾಗುವ ಪುಸ್ತಕ ಮತ್ತು ಕ್ರೀಡಾ ಪರಿಕರಗಳನ್ನು ನೀಡಿ ಸಹಕರಿಸಿದ್ದಾರೆ. ಇವೆಲ್ಲದರ ಜೊತೆಗೆ ನೊಂದ ಅನೇಕರಿಗೆ ತನ್ನ ಸಂಸ್ಥೆಯಲ್ಲಿ ಕೆಲಸ ನೀಡುವ ಮೂಲಕ ಅವರ ಭವಿಷ್ಯಕ್ಕೆ ಸಹಕಾರಿಯಾಗಿದ್ದಾರೆ.
ಇತ್ತೀಚೆಗೆ ಇವರ ಸಮಾಜಮುಖಿ ಕೆಲಸ ಮತ್ತು ತೊಡಗುವಿಕೆಯನ್ನು ಗಮನಿಸಿ “UNIVERSAL DEVELOPMENT COUNCIL ” ಇವರಿಗೆ ಗೌರವ ಡಾಕ್ಟರೇಟ್ ಪದವಿ ನೀಡಲು ನಿರ್ಧರಿಸಿದ್ದು ಇದೇ ಜುಲೈ ತಿಂಗಳ 10ನೇ ತಾರೀಖಿನಂದು ಅದರ ಪದವಿ ಪ್ರದಾನ ಸಮಾರಂಭ ನಡೆಯಲಿದೆ .
ನಿರಂತರವಾಗಿ ತನ್ನನ್ನು ತಾನು ಸಮಾಜಮುಖಿಯಾಗಿ ತೊಡಗಿಸಿಕೊಂಡಿರುವ ಇವರು ಶ್ರೀನಿವಾಸಪುರದ ದಿ‌.ಲಕ್ಷ್ಮಿ ನರಸಮ್ಮ ಮತ್ತು  ಶ್ರೀಯುತ ಮುತ್ತಪ್ಪ ಇವರ ಪುತ್ರಿ.
ಸಮಾಜದಲ್ಲಿ ಇನ್ನೂ ಹೆಚ್ಚಿನ ನಿಮ್ಮ ಸೇವೆಗಳು ಸಿಗುವಂತಾಗಲಿ ಅನ್ನುವ ಶುಭ ಹಾರೈಕೆಯೊಂದಿಗೆ
ಡಾ. ಗಾಯತ್ರಿ ಮುತ್ತಪ್ಪ ಇವರಿಗೆ ರಾಜ್ಯ ಟೆನಿಸ್ ಕ್ರಿಕೆಟ್ ಮತ್ತು ಸ್ಪೋರ್ಟ್ಸ್ ಕನ್ನಡ ಜಾಲತಾಣದ ವತಿಯಿಂದ ಹಾರ್ದಿಕ ಶುಭಾಶಯಗಳು.
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

Latest stories

LEAVE A REPLY

Please enter your comment!
Please enter your name here

two × 3 =