Action Replayಕುಂದಾಪುರ : ಟೊರ್ಪೆಡೋಸ್ 80,90 ರ ದಶಕ ಯುವ ಪ್ರತಿಭೆಗಳ ಆರ್ಭಟ...

ಕುಂದಾಪುರ : ಟೊರ್ಪೆಡೋಸ್ 80,90 ರ ದಶಕ ಯುವ ಪ್ರತಿಭೆಗಳ ಆರ್ಭಟ ಅನಾವರಣಗೊಂಡ ಸುವರ್ಣಯುಗ

-

- Advertisment -spot_img

ರಾಜ್ಯ ಟೆನ್ನಿಸ್ ಕ್ರಿಕೆಟ್ ವಲಯದಲ್ಲಿ ವಿಶಿಷ್ಟ ಅಧ್ಯಾಯ ಬರೆದ ತಂಡ ಟೊರ್ಪೆಡೋಸ್ ಕುಂದಾಪುರ, 80,90 ರ ದಶಕ ಯುವ ಪ್ರತಿಭೆಗಳ ಜೊತೆ,ಕುಂದಾಪುರ ಪರಿಸರದ ದೈತ್ಯ ಪ್ರತಿಭೆಗಳ ಆರ್ಭಟ ಅನಾವರಣಗೊಂಡ ಸುವರ್ಣಯುಗ.

ಕ್ರೀಡಾ ಕ್ಷೇತ್ರದ ಸಾಧನೆಗಾಗಿ ಇತ್ತೀಚೆಗಷ್ಟೇ “ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ” ಪುರಸ್ಕೃತ ,ರಾಷ್ಟ್ರೀಯ ಕ್ರೀಡಾಪಟು,ಕ್ರೀಡಾ ಶಿಕ್ಷಕ ನಾಯಕ ಗೌತಮ್ ಶೆಟ್ಟಿ ಯವರ ನೇತೃತ್ವದಲ್ಲಿ ಹಲವಾರು ರಾಷ್ಟ್ರೀಯ ಮಟ್ಟದ ಕ್ರಿಕೆಟ್ ಪಂದ್ಯಾಕೂಟಗಳ ಜೊತೆ ಅಂತರಾಷ್ಟ್ರೀಯ ಮಟ್ಟದ ಪಂದ್ಯಾಕೂಟ ಸಂಘಟಿಸಿ, ಇತ್ತೀಚೆಗಷ್ಟೇ ಯಶಸ್ವಿ ಟಿ‌.ಪಿ.ಎಲ್ ಪಂದ್ಯಾಕೂಟ ಸಂಘಟಿಸಿರುವುದು ಟೊರ್ಪೆಡೋಸ್ ನ ಹಿರಿಮೆಗೆ ಗರಿಮೆಯಿದ್ದಂತೆ.

ಉದ್ಯೋಗ ನಿಮಿತ್ತ ತಂಡದ ಆಟಗಾರರು ದೂರದೂರಿಗೆ ತೆರಳಬೇಕಾದ ಸಂದರ್ಭದಲ್ಲಿಯೂ, ಟೊರ್ಪೆಡೋಸ್ ತಂಡವನ್ನು ಏಕಾಂಗಿಯಾಗಿ ಮುಂದುವರೆಸಿಕೊಂಡು  ಬಂದಿರುವ ಗೌತಮ್ ಶೆಟ್ಟಿಯವರು ಮಂಗಳೂರಿನ ಹಳೆಯಂಗಡಿಯ ಲೈಟ್ ಹೌಸ್ ಬಳಿ “ಟೊರ್ಪೆಡೋಸ್ ಸ್ಪೋರ್ಟ್ಸ್ ಕ್ಲಬ್” ಸ್ಥಾಪಿಸಿ ಯುವ ಕ್ರೀಡಾ ಪ್ರತಿಭೆಗಳನ್ನು ರಾಷ್ಟ್ರೀಯ, ಅಂತರಾಷ್ಟ್ರೀಯ ಮಟ್ಟಕ್ಕೆ ಪರಿಚಯಿಸುವ ಕಾಯಕದಲ್ಲಿ ತೊಡಗಿದ್ದಾರೆ.

ವಿದ್ಯಾರ್ಥಿಗಳಿಂದ ಪ್ರಾರಂಭವಾಗಿ ವೃತ್ತಿಪರವಕೀಲರು,ವೈದ್ಯರು,ಇಂಜಿನಿಯರ್ಸ್ ಹೀಗೆ ಹಲವಾರು ಕ್ಷೇತ್ರಗಳಲ್ಲಿ ತೊಡಗಿಸಿ ಕೊಂಡ ಹಿರಿಯ ಕ್ರೀಡಾ ಪ್ರತಿಭೆಗಳನ್ನು ಗುರುತಿಸಿ,ಪ್ರೋತ್ಸಾಹಿಸುತ್ತಿರುವ ಟೊರ್ಪೆಡೋಸ್ ಸಂಸ್ಥೆ ನಾಳೆ ಆಗಸ್ಟ್ 18 ರವಿವಾರದಂದು ಅಂತರ್ ಜಿಲ್ಲಾ ಮಟ್ಟದ ಶಿಕ್ಷಕರಿಗಾಗಿ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಕೂಟವನ್ನು ಸಂಘಟಿಸಲಿದೆ.

ಪುರುಷ ಶಿಕ್ಷಕರಿಗಾಗಿ ಓಪನ್ ಮೆನ್ಸ್ ಸಿಂಗಲ್ಸ್ ಹಾಗೂ ಡಬಲ್ಸ್ ಹಾಗೂ ಮಹಿಳಾ ಶಿಕ್ಷಕಿಯರಿಗಾಗಿ ಓಪನ್ ವುಮೆನ್ ಸಿಂಗಲ್ಸ್ ಹಾಗೂ ಡಬಲ್ಸ್ ಪಂದ್ಯಾಕೂಟಗಳು ನಡೆಯಲಿದೆ. ವಿಜೇತರನ್ನು ಅತ್ಯಾಕರ್ಷಕ ಟ್ರೋಫಿಗಳನ್ನು ನೀಡಿ ಪುರಸ್ಕರಿಸಲಿದ್ದಾರೆ.

– ಆರ್.ಕೆ.ಆಚಾರ್ಯ ಕೋಟ.

ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

LEAVE A REPLY

Please enter your comment!
Please enter your name here

seventeen + 17 =

Latest news

Instant Casino : Jouez Rapidement où que vous soyez – Une expérience Mobile‑First

Instant Casino prospère en offrant des sensations instantanées aux joueurs qui valorisent la portabilité et la rapidité. Si vous...

Chicken Road: Gioco Crash a Quick‑Play per Vincitori dal Ritmo Veloce

IntroduzioneNel mondo dei giochi da casinò online, molti titoli cercano di catturare i giocatori con rulli appariscenti o trame...

ಉರ್ವಾ ಮೈದಾನದಲ್ಲಿ ಡಿಸೆಂಬರ್ 5 ಮತ್ತು 6 ರಂದು ಪ್ಯಾಂಥರ್ಸ್ ಸೂಪರ್ ಲೀಗ್ 2026

ಉರ್ವಾ ಮೈದಾನದಲ್ಲಿ ಡಿಸೆಂಬರ್ 5 ಮತ್ತು 6 ರಂದು ಪ್ಯಾಂಥರ್ಸ್ ಸೂಪರ್ ಲೀಗ್ 2026 ಮಂಗಳೂರು: ಜಿಎಸ್‌ಬಿ ಸಮುದಾಯದ ಕ್ರಿಕೆಟ್ ಪ್ರತಿಭೆಗಳಿಗೆ ವೇದಿಕೆಯಾಗಿರುವ ಪ್ರತಿಷ್ಠಿತ **ಪ್ಯಾಂಥರ್ಸ್ ಸೂಪರ್...

ಟೀಕೆಗೆ ಬ್ಯಾಟ್‌ನಲ್ಲೇ ಉತ್ತರ: ಫೈನಲ್‌ನಲ್ಲಿ ಮಿಂಚಿದ ವೈಭವ್ ಸೂರ್ಯವಂಶಿ

ಟೀಕೆಗೆ ಬ್ಯಾಟ್‌ನಲ್ಲೇ ಉತ್ತರ: ಫೈನಲ್‌ನಲ್ಲಿ ಮಿಂಚಿದ ವೈಭವ್ ಸೂರ್ಯವಂಶಿ ಕೇವಲ 29 ಎಸೆತಗಳಲ್ಲಿ 96 ರನ್: ವೈಭವ್ ಸೂರ್ಯವಂಶಿಯ ಸ್ಫೋಟಕ ಪ್ರತಿಭೆಗೆ ಕ್ರಿಕೆಟ್ ಲೋಕ ಫಿದಾ 15 ವರ್ಷದ...
- Advertisement -spot_imgspot_img

ಬೆಳಪು ಸ್ಪೋರ್ಟ್ಸ್ ಕ್ಲಬ್ (ರಿ.) ಬೆಳಪು, 12ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆ 2026

ಬೆಳಪು ಸ್ಪೋರ್ಟ್ಸ್ ಕ್ಲಬ್ (ರಿ.) ಬೆಳಪು, 12ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆ 2026 ಭಾರತ ಸರ್ಕಾರ ಯುವ ಕಾರ್ಯ ಕ್ರೀಡಾ ಸಚಿವಾಲಯ ಮೇರಾ ಯುವ ಭಾರತ್, ಉಡುಪಿ...

ಶಾಂಭವಿ ಟ್ರೋಫಿ 2026:ಚಾಂತಾರು  ಗ್ಲೋಬಲ್ ಕ್ರೀಡಾಂಗಣದಲ್ಲಿ ಬ್ರಹ್ಮಾವರ ವಲಯ ಮಟ್ಟದ ಕ್ರಿಕೆಟ್ ಟೂರ್ನಮೆಂಟ್

ಶಾಂಭವಿ ಟ್ರೋಫಿ 2026:ಚಾಂತಾರು ಗ್ಲೋಬಲ್ ಕ್ರೀಡಾಂಗಣದಲ್ಲಿ ಬ್ರಹ್ಮಾವರ ವಲಯ ಮಟ್ಟದ ಕ್ರಿಕೆಟ್ ಟೂರ್ನಮೆಂಟ್ ಚಾಂತಾರು: ಚಾಂತಾರು ಗ್ರಾಮದಲ್ಲಿ ಕ್ರಿಕೆಟ್ ಪ್ರೇಮಿಗಳಿಗೆ ಹಬ್ಬದ ವಾತಾವರಣ ಸೃಷ್ಟಿಸುವ ಉದ್ದೇಶದಿಂದ **ಶಾಂಭವಿ...

Must read

- Advertisement -spot_imgspot_img

You might also likeRELATED
Recommended to you