15.8 C
London
Saturday, May 18, 2024
HomeAction Replayಕುಂದಾಪುರ : ಟೊರ್ಪೆಡೋಸ್ 80,90 ರ ದಶಕ ಯುವ ಪ್ರತಿಭೆಗಳ ಆರ್ಭಟ ಅನಾವರಣಗೊಂಡ ಸುವರ್ಣಯುಗ

ಕುಂದಾಪುರ : ಟೊರ್ಪೆಡೋಸ್ 80,90 ರ ದಶಕ ಯುವ ಪ್ರತಿಭೆಗಳ ಆರ್ಭಟ ಅನಾವರಣಗೊಂಡ ಸುವರ್ಣಯುಗ

Date:

Related stories

ನಿನ್ನ ಟೈಮ್ ಬಂದೇ ಬರುವುದು, ಹೀಗೇ ಆಡುತ್ತಿರು ಕರುಣ್..!

1996ರಲ್ಲಿ ಅರ್ಜುನ ರಣತುಂಗ ನಾಯಕತ್ವದ ಶ್ರೀಲಂಕಾ ತಂಡ ಏಕದಿನ ವಿಶ್ವಕಪ್ ಗೆದ್ದಾಗ...

ದುಡ್ಡಿನ ಮದದಲ್ಲಿ ಕೊಬ್ಬಿರುವ ಈ business tycoonಗಳಿಗೆ ದೇಶದ ಕ್ರಿಕೆಟ್ ಹೀರೊಗಳ ಮೇಲೆ ಗೌರವ ಇರಲು ಹೇಗೆ ಸಾಧ್ಯ..?

17 ವರ್ಷಗಳ ಐಪಿಎಲ್ ಚರಿತ್ರೆಯಲ್ಲಿ ಸಾವಿರಕ್ಕೂ ಹೆಚ್ಚು ಪಂದ್ಯಗಳು ನಡೆದಿವೆ. ಆ...

Reject ಪೀಸ್‌ಗಳು ವಾಪಸ್ ಎದ್ದು ಬಂದ ಕಥೆ..!

ಒಬ್ಬ by mistake ಪಂಜಾಬ್ ಕಿಂಗ್ಸ್ ತಂಡ ಸೇರಿದ್ದವ. ಇನ್ನೊಬ್ಬ ತನ್ನ...

ಇಂದು ವಿಶ್ವದ ಅತ್ಯಂತ ಪ್ರೀತಿಪಾತ್ರ ಕ್ರಿಕೆಟಿಗ ಧೋನಿಯ ಕೊನೆಯ ಪಂದ್ಯ..

ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯಲಿರುವ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಮುಂಬೈ...

T20 ವಿಶ್ವಕಪ್‌ನಲ್ಲಿ ಭಾರತದ ವಿಕೆಟ್‌ಕೀಪರ್ ಯಾರು? 5 ಆಟಗಾರರು ರೇಸ್ ನಲ್ಲಿ

ಐಪಿಎಲ್  ನಂತರ ಟಿ20 ವಿಶ್ವಕಪ್ ಆಡಬೇಕಿದೆ. ಈ ಮೆಗಾ  ಟೂರ್ನಿಯನ್ನು ಜೂನ್‌ನಲ್ಲಿ...
spot_imgspot_img

ರಾಜ್ಯ ಟೆನ್ನಿಸ್ ಕ್ರಿಕೆಟ್ ವಲಯದಲ್ಲಿ ವಿಶಿಷ್ಟ ಅಧ್ಯಾಯ ಬರೆದ ತಂಡ ಟೊರ್ಪೆಡೋಸ್ ಕುಂದಾಪುರ, 80,90 ರ ದಶಕ ಯುವ ಪ್ರತಿಭೆಗಳ ಜೊತೆ,ಕುಂದಾಪುರ ಪರಿಸರದ ದೈತ್ಯ ಪ್ರತಿಭೆಗಳ ಆರ್ಭಟ ಅನಾವರಣಗೊಂಡ ಸುವರ್ಣಯುಗ.

ಕ್ರೀಡಾ ಕ್ಷೇತ್ರದ ಸಾಧನೆಗಾಗಿ ಇತ್ತೀಚೆಗಷ್ಟೇ “ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ” ಪುರಸ್ಕೃತ ,ರಾಷ್ಟ್ರೀಯ ಕ್ರೀಡಾಪಟು,ಕ್ರೀಡಾ ಶಿಕ್ಷಕ ನಾಯಕ ಗೌತಮ್ ಶೆಟ್ಟಿ ಯವರ ನೇತೃತ್ವದಲ್ಲಿ ಹಲವಾರು ರಾಷ್ಟ್ರೀಯ ಮಟ್ಟದ ಕ್ರಿಕೆಟ್ ಪಂದ್ಯಾಕೂಟಗಳ ಜೊತೆ ಅಂತರಾಷ್ಟ್ರೀಯ ಮಟ್ಟದ ಪಂದ್ಯಾಕೂಟ ಸಂಘಟಿಸಿ, ಇತ್ತೀಚೆಗಷ್ಟೇ ಯಶಸ್ವಿ ಟಿ‌.ಪಿ.ಎಲ್ ಪಂದ್ಯಾಕೂಟ ಸಂಘಟಿಸಿರುವುದು ಟೊರ್ಪೆಡೋಸ್ ನ ಹಿರಿಮೆಗೆ ಗರಿಮೆಯಿದ್ದಂತೆ.

ಉದ್ಯೋಗ ನಿಮಿತ್ತ ತಂಡದ ಆಟಗಾರರು ದೂರದೂರಿಗೆ ತೆರಳಬೇಕಾದ ಸಂದರ್ಭದಲ್ಲಿಯೂ, ಟೊರ್ಪೆಡೋಸ್ ತಂಡವನ್ನು ಏಕಾಂಗಿಯಾಗಿ ಮುಂದುವರೆಸಿಕೊಂಡು  ಬಂದಿರುವ ಗೌತಮ್ ಶೆಟ್ಟಿಯವರು ಮಂಗಳೂರಿನ ಹಳೆಯಂಗಡಿಯ ಲೈಟ್ ಹೌಸ್ ಬಳಿ “ಟೊರ್ಪೆಡೋಸ್ ಸ್ಪೋರ್ಟ್ಸ್ ಕ್ಲಬ್” ಸ್ಥಾಪಿಸಿ ಯುವ ಕ್ರೀಡಾ ಪ್ರತಿಭೆಗಳನ್ನು ರಾಷ್ಟ್ರೀಯ, ಅಂತರಾಷ್ಟ್ರೀಯ ಮಟ್ಟಕ್ಕೆ ಪರಿಚಯಿಸುವ ಕಾಯಕದಲ್ಲಿ ತೊಡಗಿದ್ದಾರೆ.

ವಿದ್ಯಾರ್ಥಿಗಳಿಂದ ಪ್ರಾರಂಭವಾಗಿ ವೃತ್ತಿಪರವಕೀಲರು,ವೈದ್ಯರು,ಇಂಜಿನಿಯರ್ಸ್ ಹೀಗೆ ಹಲವಾರು ಕ್ಷೇತ್ರಗಳಲ್ಲಿ ತೊಡಗಿಸಿ ಕೊಂಡ ಹಿರಿಯ ಕ್ರೀಡಾ ಪ್ರತಿಭೆಗಳನ್ನು ಗುರುತಿಸಿ,ಪ್ರೋತ್ಸಾಹಿಸುತ್ತಿರುವ ಟೊರ್ಪೆಡೋಸ್ ಸಂಸ್ಥೆ ನಾಳೆ ಆಗಸ್ಟ್ 18 ರವಿವಾರದಂದು ಅಂತರ್ ಜಿಲ್ಲಾ ಮಟ್ಟದ ಶಿಕ್ಷಕರಿಗಾಗಿ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಕೂಟವನ್ನು ಸಂಘಟಿಸಲಿದೆ.

ಪುರುಷ ಶಿಕ್ಷಕರಿಗಾಗಿ ಓಪನ್ ಮೆನ್ಸ್ ಸಿಂಗಲ್ಸ್ ಹಾಗೂ ಡಬಲ್ಸ್ ಹಾಗೂ ಮಹಿಳಾ ಶಿಕ್ಷಕಿಯರಿಗಾಗಿ ಓಪನ್ ವುಮೆನ್ ಸಿಂಗಲ್ಸ್ ಹಾಗೂ ಡಬಲ್ಸ್ ಪಂದ್ಯಾಕೂಟಗಳು ನಡೆಯಲಿದೆ. ವಿಜೇತರನ್ನು ಅತ್ಯಾಕರ್ಷಕ ಟ್ರೋಫಿಗಳನ್ನು ನೀಡಿ ಪುರಸ್ಕರಿಸಲಿದ್ದಾರೆ.

– ಆರ್.ಕೆ.ಆಚಾರ್ಯ ಕೋಟ.

ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

Latest stories

LEAVE A REPLY

Please enter your comment!
Please enter your name here

10 − nine =