Action Replayಕುಂದಾಪುರ : ಟೊರ್ಪೆಡೋಸ್ 80,90 ರ ದಶಕ ಯುವ ಪ್ರತಿಭೆಗಳ ಆರ್ಭಟ...

ಕುಂದಾಪುರ : ಟೊರ್ಪೆಡೋಸ್ 80,90 ರ ದಶಕ ಯುವ ಪ್ರತಿಭೆಗಳ ಆರ್ಭಟ ಅನಾವರಣಗೊಂಡ ಸುವರ್ಣಯುಗ

-

- Advertisment -spot_img

ರಾಜ್ಯ ಟೆನ್ನಿಸ್ ಕ್ರಿಕೆಟ್ ವಲಯದಲ್ಲಿ ವಿಶಿಷ್ಟ ಅಧ್ಯಾಯ ಬರೆದ ತಂಡ ಟೊರ್ಪೆಡೋಸ್ ಕುಂದಾಪುರ, 80,90 ರ ದಶಕ ಯುವ ಪ್ರತಿಭೆಗಳ ಜೊತೆ,ಕುಂದಾಪುರ ಪರಿಸರದ ದೈತ್ಯ ಪ್ರತಿಭೆಗಳ ಆರ್ಭಟ ಅನಾವರಣಗೊಂಡ ಸುವರ್ಣಯುಗ.

ಕ್ರೀಡಾ ಕ್ಷೇತ್ರದ ಸಾಧನೆಗಾಗಿ ಇತ್ತೀಚೆಗಷ್ಟೇ “ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ” ಪುರಸ್ಕೃತ ,ರಾಷ್ಟ್ರೀಯ ಕ್ರೀಡಾಪಟು,ಕ್ರೀಡಾ ಶಿಕ್ಷಕ ನಾಯಕ ಗೌತಮ್ ಶೆಟ್ಟಿ ಯವರ ನೇತೃತ್ವದಲ್ಲಿ ಹಲವಾರು ರಾಷ್ಟ್ರೀಯ ಮಟ್ಟದ ಕ್ರಿಕೆಟ್ ಪಂದ್ಯಾಕೂಟಗಳ ಜೊತೆ ಅಂತರಾಷ್ಟ್ರೀಯ ಮಟ್ಟದ ಪಂದ್ಯಾಕೂಟ ಸಂಘಟಿಸಿ, ಇತ್ತೀಚೆಗಷ್ಟೇ ಯಶಸ್ವಿ ಟಿ‌.ಪಿ.ಎಲ್ ಪಂದ್ಯಾಕೂಟ ಸಂಘಟಿಸಿರುವುದು ಟೊರ್ಪೆಡೋಸ್ ನ ಹಿರಿಮೆಗೆ ಗರಿಮೆಯಿದ್ದಂತೆ.

ಉದ್ಯೋಗ ನಿಮಿತ್ತ ತಂಡದ ಆಟಗಾರರು ದೂರದೂರಿಗೆ ತೆರಳಬೇಕಾದ ಸಂದರ್ಭದಲ್ಲಿಯೂ, ಟೊರ್ಪೆಡೋಸ್ ತಂಡವನ್ನು ಏಕಾಂಗಿಯಾಗಿ ಮುಂದುವರೆಸಿಕೊಂಡು  ಬಂದಿರುವ ಗೌತಮ್ ಶೆಟ್ಟಿಯವರು ಮಂಗಳೂರಿನ ಹಳೆಯಂಗಡಿಯ ಲೈಟ್ ಹೌಸ್ ಬಳಿ “ಟೊರ್ಪೆಡೋಸ್ ಸ್ಪೋರ್ಟ್ಸ್ ಕ್ಲಬ್” ಸ್ಥಾಪಿಸಿ ಯುವ ಕ್ರೀಡಾ ಪ್ರತಿಭೆಗಳನ್ನು ರಾಷ್ಟ್ರೀಯ, ಅಂತರಾಷ್ಟ್ರೀಯ ಮಟ್ಟಕ್ಕೆ ಪರಿಚಯಿಸುವ ಕಾಯಕದಲ್ಲಿ ತೊಡಗಿದ್ದಾರೆ.

ವಿದ್ಯಾರ್ಥಿಗಳಿಂದ ಪ್ರಾರಂಭವಾಗಿ ವೃತ್ತಿಪರವಕೀಲರು,ವೈದ್ಯರು,ಇಂಜಿನಿಯರ್ಸ್ ಹೀಗೆ ಹಲವಾರು ಕ್ಷೇತ್ರಗಳಲ್ಲಿ ತೊಡಗಿಸಿ ಕೊಂಡ ಹಿರಿಯ ಕ್ರೀಡಾ ಪ್ರತಿಭೆಗಳನ್ನು ಗುರುತಿಸಿ,ಪ್ರೋತ್ಸಾಹಿಸುತ್ತಿರುವ ಟೊರ್ಪೆಡೋಸ್ ಸಂಸ್ಥೆ ನಾಳೆ ಆಗಸ್ಟ್ 18 ರವಿವಾರದಂದು ಅಂತರ್ ಜಿಲ್ಲಾ ಮಟ್ಟದ ಶಿಕ್ಷಕರಿಗಾಗಿ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಕೂಟವನ್ನು ಸಂಘಟಿಸಲಿದೆ.

ಪುರುಷ ಶಿಕ್ಷಕರಿಗಾಗಿ ಓಪನ್ ಮೆನ್ಸ್ ಸಿಂಗಲ್ಸ್ ಹಾಗೂ ಡಬಲ್ಸ್ ಹಾಗೂ ಮಹಿಳಾ ಶಿಕ್ಷಕಿಯರಿಗಾಗಿ ಓಪನ್ ವುಮೆನ್ ಸಿಂಗಲ್ಸ್ ಹಾಗೂ ಡಬಲ್ಸ್ ಪಂದ್ಯಾಕೂಟಗಳು ನಡೆಯಲಿದೆ. ವಿಜೇತರನ್ನು ಅತ್ಯಾಕರ್ಷಕ ಟ್ರೋಫಿಗಳನ್ನು ನೀಡಿ ಪುರಸ್ಕರಿಸಲಿದ್ದಾರೆ.

– ಆರ್.ಕೆ.ಆಚಾರ್ಯ ಕೋಟ.

ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

LEAVE A REPLY

Please enter your comment!
Please enter your name here

11 + thirteen =

Latest news

ಉಡುಪಿಯಲ್ಲಿ ಸುಸಜ್ಜಿತ ಫುಟ್ಬಾಲ್ ಕ್ರೀಡಾಂಗಣ ನಿರ್ಮಾಣ-ಎಂ.ಗಫೂರ್

ಉಡುಪಿಯಲ್ಲಿ ಸುಸಜ್ಜಿತ ಫುಟ್ಬಾಲ್ ಕ್ರೀಡಾಂಗಣ ನಿರ್ಮಾಣ-ಎಂ.ಗಫೂರ್ ಉಡುಪಿ-ಶಿವಾಸ್ ಫುಟ್ಬಾಲ್ ಕ್ಲಬ್ ಇವರ ವತಿಯಿಂದ ಅಂಡರ್ 21 ಹೊನಲು ಬೆಳಕಿನ ಫುಟ್ಬಾಲ್ ಪಂದ್ಯಾಟದ ಉದ್ಘಾಟನಾ ಸಮಾರಂಭ ಸಿಟಿ ಅರೆನಾ...

ಮಂಗಳಾಪುರ ಟ್ರೋಫಿ: ಮೇ 9–10ರಂದು ರೋಚಕ ಪಂದ್ಯಗಳ ಕಾದಾಟ 

ಮಂಗಳಾಪುರ ಟ್ರೋಫಿ: ಮೇ 9–10ರಂದು ರೋಚಕ ಪಂದ್ಯಗಳ ಕಾದಾಟ  ಮಂಗಳೂರು: ಮಂಗಳೂರು ನಗರದಲ್ಲಿ ಜಿಎಸ್‌ಬಿ ಕ್ರಿಕೆಟ್ ಅಭಿಮಾನಿಗಳಿಗೆ ಮತ್ತೊಂದು ಭರ್ಜರಿ ಕ್ರೀಡಾ ಹಬ್ಬವಾಗಿ **ಮಂಗಳಾಪುರ ಟ್ರೋಫಿ 2026**ಕ್ಕೆ ಕೌಂಟ್‌ಡೌನ್...

ಅಂಬಾಗಿಲು ಜಿಎಸ್‌ಬಿ ಕ್ರಿಕೆಟ್ ಟೂರ್ನಿ:  ವಿಹಾನ್ ಫೈಟರ್ಸ್ ಚಾಂಪಿಯನ್

ಅಂಬಾಗಿಲು ಜಿಎಸ್‌ಬಿ ಕ್ರಿಕೆಟ್ ಟೂರ್ನಿ:  ವಿಹಾನ್ ಫೈಟರ್ಸ್ ಚಾಂಪಿಯನ್ ಅಂಬಾಗಿಲು: ಅಂಬಾಗಿಲು ಎಆರ್ ಫ್ರೆಂಡ್ಸ್ (AR Friends) ವತಿಯಿಂದ ಜಿಎಸ್‌ಬಿ ಟ್ರೋಫಿ ಅಂಬಾಗಿಲು 2026 ಕ್ರಿಕೆಟ್ ಟೂರ್ನಿಯನ್ನು ಇಂದು...

ಅಕ್ಷಯ ಟಿ 20 ಕಪ್-2026 ಪಂದ್ಯಾಟಕ್ಕೆ ಅದ್ಧೂರಿ ಚಾಲನೆ

  ಅಕ್ಷಯ ಟಿ 20 ಕಪ್-2026 ಪಂದ್ಯಾಟಕ್ಕೆ ಅದ್ಧೂರಿ ಚಾಲನೆ ಅಕ್ಷಯ ಕ್ರಿಕೆಟ್ ಅಕಾಡೆಮಿ ಉಡುಪಿ ವತಿಯಿಂದ, ಉಡುಪಿ ಕ್ರಿಕೆಟ್ ಅಸೋಸಿಯೇಷನ್ ಉಡುಪಿ ಹಾಗೂ ಸನ್‌ರೈಸ್ ಕ್ರಿಕೆಟ್ ಅಕಾಡೆಮಿ...
- Advertisement -spot_imgspot_img

ಉಡುಪಿ ಜಿಲ್ಲಾಮಟ್ಟದ ಅಂಡರ್-15 ಲೆದರ್ ಬಾಲ್ ಕ್ರಿಕೆಟ್ ಟೂರ್ನಿ – 2026

ಉಡುಪಿ ಜಿಲ್ಲಾಮಟ್ಟದ ಅಂಡರ್-15 ಲೆದರ್ ಬಾಲ್ ಕ್ರಿಕೆಟ್ ಟೂರ್ನಿ – 2026 ಉಡುಪಿ: ಅಕ್ಷಯ ಕ್ರಿಕೆಟ್ ಅಕಾಡೆಮಿ, ಉಡುಪಿ ಮತ್ತು ಸನ್‌ರೈಸ್ ಕ್ರಿಕೆಟ್ ಅಕಾಡೆಮಿ, ರಂಗನಪಾಲ್ಕೆ ಇವರ...

ಗುರುಗಣೇಶ್ ನೇಜಾರು ಫ್ರೆಂಡ್ಶಿಫ್ ಟ್ರೋಫಿ-2026 ಚಾಂಪಿಯನ್ಸ್

ಗುರುಗಣೇಶ್ ನೇಜಾರು ಫ್ರೆಂಡ್ಶಿಫ್ ಟ್ರೋಫಿ-2026 ಚಾಂಪಿಯನ್ಸ್ ಕುಂದಾಪುರ-ಇಲ್ಲಿನ ಫ್ರೆಂಡ್ಸ್ ಕೆದೂರು ಮೊತ್ತ ಮೊದಲ ಬಾರಿಗೆ ಆಯೋಜಿಸಿದ 60 ಗಜಗಳ ಮುಕ್ತ ಟೆನಿಸ್ಬಾಲ್ ಕ್ರಿಕೆಟ್ ಪಂದ್ಯಾಟ ಫ್ರೆಂಡ್ಶಿಫ್ ಟ್ರೋಫಿ-2026...

Must read

- Advertisement -spot_imgspot_img

You might also likeRELATED
Recommended to you