ಸ್ಪೋರ್ಟ್ಸ್ಸಮಾಜಮುಖಿ ಕೆಲಸಕ್ಕಾಗಿ ಐಪಿಎಲ್‌ನಲ್ಲಿ ಕೆಲಸ ಮಾಡಿದೆ ಎಂದು ಹೇಳಿಕೊಳ್ಳಲು ನನಗೆ ನಾಚಿಕೆ...

ಸಮಾಜಮುಖಿ ಕೆಲಸಕ್ಕಾಗಿ ಐಪಿಎಲ್‌ನಲ್ಲಿ ಕೆಲಸ ಮಾಡಿದೆ ಎಂದು ಹೇಳಿಕೊಳ್ಳಲು ನನಗೆ ನಾಚಿಕೆ ಇಲ್ಲ: ಸಂಸದ ಗೌತಮ್ ಗಂಭೀರ್..!

-

- Advertisment -spot_img
“ಇಂಡಿಯನ್ ಪ್ರೀಮಿಯರ್ ಲೀಗ್ ಆವೃತ್ತಿಗಳಲ್ಲಿ ಲೋಕಸಭೆಯ ಸದಸ್ಯನಾದ ನಂತರವೂ ಸಹ ಕೆಲಸ ಮಾಡುವುದಕ್ಕೆ ಕಾರಣವೇನೆಂದರೆ ಪ್ರತಿ ತಿಂಗಳು 5000 ಜನಕ್ಕೆ ನಾನು ಆಹಾರ ವ್ಯವಸ್ಥೆ ಮಾಡಲು ಪಣತೊಟ್ಟಿದ್ದೇನೆ ಈ ಕಾರ್ಯಕ್ಕೆ 25 ಲಕ್ಷ ಹಣ ಬೇಕು. ಇದು ವರ್ಷಕ್ಕೆ ಸುಮಾರು 2.75 ಕೋಟಿ ರೂಪಾಯಿಗಳಾಗುತ್ತದೆ. ಹಾಗೂ ಗ್ರಂಥಾಲಯ ಕಟ್ಟಿಸಲು ನಾನು 25 ಲಕ್ಷ ಖರ್ಚು ಮಾಡಿದ್ದೇನೆ ಅದು ನನ್ನ ಸ್ವಂತ ಹಣದಲ್ಲಿ . ನನ್ನ ಕ್ಷೇತ್ರದಲ್ಲಿ ಸಾಕಷ್ಟು ಸಮಾಜಮುಖಿ ಕೆಲಸಕ್ಕಾಗಿ ಜನತೆಗೆ ಕೇಂದ್ರ ಸರ್ಕಾರದ ಅನುದಾನವಲ್ಲದೆ  ನಾನು ನನ್ನ ಸ್ವಂತ ಹಣವನ್ನು ಖರ್ಚು ಮಾಡುತ್ತಿದ್ದೇನೆ ಹೊರತು ಸರ್ಕಾರ ನೀಡುವ ಹಣವನ್ನೆ ನಂಬಿಕುಳಿತಿಲ್ಲ. ಇದಕ್ಕೆಲ್ಲಾ ಹಣ ಖರ್ಚು ಮಾಡಲು  ನಾನು ಮನೆಯಲ್ಲಿ ಹಣದ ಮರವನ್ನೂ ಬೆಳೆಸಿಲ್ಲ, ಹೀಗಾಗಿ ಐಪಿಎಲ್ ಟೂರ್ನಿಯಲ್ಲಿ ಕೆಲಸ ಮಾಡಿದೆ”
ಅವಕಾಶ ದೊರೆತಾಗ ಕ್ರಿಕೆಟ್ ಅಂಗಳದಲ್ಲಿ ಕೆಲಸ ಮಾಡಿ ನನ್ನನ್ನು ನಂಬಿ ಸಂಸದನಾಗಿ ಆಯ್ಕೆಮಾಡಿದ ಕ್ಷೇತ್ರದ ಜನತೆಯ ಜೋತೆಗೆ ನಿಲ್ಲುತ್ತೇನೆ ಎಂದು ಗೌತಮ್ ಗಂಭೀರ್ ಟೀಕಾಕಾರರಿಗೆ ಉತ್ತರವನ್ನು ನೀಡಿದ್ದಾರೆ.
ಈ ವಿಷಯವನ್ನು ಹೇಳಿಕೊಳ್ಳುವುದರಲ್ಲಿ ನನಗೆ ಯಾವುದೇ ಅಂಜಿಕೆ ಇಲ್ಲ ನನಗೆ ನನ್ನ ಕ್ಷೇತ್ರದ ಜನತೆ ಮುಖ್ಯ
ಇನ್ನೂ ಮುಂದುವರಿದು ಮಾತನಾಡಿರುವ ಗೌತಮ್ ಗಂಭೀರ್ ನಾನು ಕೆಲಸ ಮಾಡಿದರೆ ಮಾತ್ರ ಆ 5000 ಜನರಿಗೆ ಆಹಾರ ವ್ಯವಸ್ಥೆ ಮಾಡಲು ಸಾಧ್ಯ, ಅದಕ್ಕಾಗಿ ಐಪಿಎಲ್ ಟೂರ್ನಿಯಲ್ಲಿ ಕೆಲಸ ಮಾಡಿದ್ದೇನೆ ಎಂಬುದನ್ನು ಹೇಳಿಕೊಳ್ಳುವುದರಲ್ಲಿ ನನಗೆ ಯಾವುದೇ ನಾಚಿಕೆ ಇಲ್ಲ ಎಂದು ಹೇಳಿಕೆ ನೀಡಿದ್ದಾರೆ.
ಸಮಾಜಮುಖಿ ಕೆಲಸಗಳಲ್ಲಿ ಗಂಭೀರ್ ಎತ್ತಿದ ಕೈ ಎನ್ನುವುದು ಈಗಾಗಲೇ ಎಲ್ಲರಿಗೂ ತಿಳಿದ ವಿಷಯ
ಇನ್ನೂ ಕ್ರಿಕೆಟ್ ಹೊರತುಪಡಿಸಿ ಗಂಭೀರ್ ಜನನಾಯಕನಾಗಿ ಯಾವ ರೀತಿ ಕೆಲಸ ಮಾಡುತ್ತಿದ್ದಾರೆ ಎಂಬುದರ ಕುರಿತು ಕಣ್ಣಾಡಿಸಿದರೆ ಅವರ ಉತ್ತಮ ಕಾರ್ಯಗಳು ನಮಗೆ ಕಾಣಸಿಗಲಿವೆ. ಅವರ ಕ್ಷೇತ್ರದಲ್ಲಿ ಉಚಿತ ಭೋಜನ ವ್ಯವಸ್ಥೆ ಕೇವಲ ಒಂದು ರೂಪಾಯಿಗೆ ಹೊಟ್ಟೆ ತುಂಬಾ ಊಟ, ಉಚಿತ ಲೈಬ್ರರಿ ಹೀಗೆ ಹತ್ತು
ಹಲವಾರು ಸಮಾಜಮುಖಿ ಕೆಲಸಗಳು ಕಂಡುಬರುತ್ತವೆ
ಸಂಸದನಾಗಿ ತನ್ನ ಕ್ಷೇತ್ರದ ಜನತೆಯ ಸೇವೆಗೆ ಪಣತೋಟ್ಟ ವಿಶ್ವ ಕಂಡ ಖ್ಯಾತ ಕ್ರಿಕೆಟಿಗ ಗೌತಮ್ ಗಂಭೀರ್ ಅವರಿಗೆ ಶುಭವಾಗಲಿ ಅವರ ಬಡವರ ಮೇಲಿನ ಕಾಳಜಿಯ ಜೊತೆ ಜೋತೆಗೆ ಸಮಾಜಸೇವೆ ಕೂಡ ನಿರಂತರವಾಗಿ ಸಾಗಲಿ …..
ಸುಧೀರ್ ವಿಧಾತ
ಸುಧೀರ್ ವಿಧಾತ
*- ಸುಧೀರ್ ವಿಧಾತ, ಭಾರತ್ ಕ್ರಿಕೆಟರ್ಸ್, ಶಿವಮೊಗ್ಗ*

LEAVE A REPLY

Please enter your comment!
Please enter your name here

20 + 20 =

Latest news

ಭಾರತದ ‘ಬಿಗ್ ಗೇಮ್ ಪ್ಲೇಯರ್’ ಯುವರಾಜ್ ಸಿಂಗ್

ಭಾರತದ ‘ಬಿಗ್ ಗೇಮ್ ಪ್ಲೇಯರ್’ ಯುವರಾಜ್ ಸಿಂಗ್ ಭಾರತೀಯ ಕ್ರಿಕೆಟ್‌ನ ಅತ್ಯುತ್ತಮ ಆಲ್‌ರೌಂಡರ್‌ಗಳಲ್ಲಿ ಒಬ್ಬರಾದ ಯುವರಾಜ್ ಸಿಂಗ್, ದೊಡ್ಡ ವೇದಿಕೆಗಳಲ್ಲಿ ತಂಡಕ್ಕೆ ಜಯ ತಂದುಕೊಡುವ ಶಕ್ತಿಶಾಲಿ ಪ್ರದರ್ಶನಗಳಿಂದ...

ಹೊನಲುಬೆಳಕಿನ ರಾಜ್ಯಮಟ್ಟದ ‘K.M.S CUP ಸೀಸನ್–2’ ವಾಲಿಬಾಲ್ ಟೂರ್ನಿ ಡಿಸೆಂಬರ್ 29–30ರಂದು

ಹೊನಲುಬೆಳಕಿನ ರಾಜ್ಯಮಟ್ಟದ ‘K.M.S CUP ಸೀಸನ್–2’ ವಾಲಿಬಾಲ್ ಟೂರ್ನಿ ಡಿಸೆಂಬರ್ 29–30ರಂದು ಯಲಹಂಕ ತಾಲ್ಲೂಕಿನ ಕುದುರೆಗೆರೆ ಪ್ರದೇಶದಲ್ಲಿ ಕೆ.ಎಂ.ಶ್ರೀನಿವಾಸ್ ರವರ ಸ್ಮರಣಾರ್ಥ ಹಾಗೂ ಕೆ.ಎಂ. ಸುಬ್ರಮಣಿ ರವರ...

ಶಿವ ಬಿಗ್ ಬ್ಯಾಷ್ 2025: ಕೋಟ ಸಾಲಿಗ್ರಾಮದಲ್ಲಿ ಡಿಸೆಂಬರ್ 13-14ರಂದು

ಶಿವ ಬಿಗ್ ಬ್ಯಾಷ್ 2025: ಕೋಟ ಸಾಲಿಗ್ರಾಮದಲ್ಲಿ ಡಿಸೆಂಬರ್ 13-14ರಂದು ಶಿವ ಕ್ರೀಡಾ ಮತ್ತು ಸಾಂಸ್ಕೃತಿಕ ಸಂಸ್ಥೆ, ಕೋಟ ಸಾಲಿಗ್ರಾಮದ ಆಯೋಜನೆಯಲ್ಲಿ ನಡೆಯುವ ಪ್ರತಿಷ್ಠಿತ ಶಿವ ಬಿಗ್...

ಕೆಚ್ಚಿನ.. ಕಿಚ್ಚಿನ ಯುವರಾಜನ ಕಥೆ..!

ಕೆಚ್ಚಿನ.. ಕಿಚ್ಚಿನ ಯುವರಾಜನ ಕಥೆ..! ಪಂಜಾಬ್’ನ ಲೂಧಿಯಾನದ ಕೆನೆಚ್ ಎಂಬ ಹಳ್ಳಿ. ಅಲ್ಲೊಬ್ಬರು ಒಂದೊಮ್ಮೆ ಭಾರತ ಪರ ಆಡಿದ್ದ ಮಾಜಿ ಕ್ರಿಕೆಟಿಗ.. ಅವರಿಗೊಬ್ಬ ಮಗ.. ತನ್ನ ಕ್ರಿಕೆಟ್...
- Advertisement -spot_imgspot_img

ಅರಬ್ಬರ ನಾಡಿನಲ್ಲಿ ಕುಂದಗನ್ನಡಿಗರ ಸಮಾಗಮ

ಅರಬ್ಬರ ನಾಡಿನಲ್ಲಿ ಕುಂದಗನ್ನಡಿಗರ ಸಮಾಗಮ ನಮ್ಮ ಕುಂದಾಪ್ರ ಕನ್ನಡ ಬಳಗ ಗಲ್ಫ್ ವತಿಯಿಂದ ಯುಎಇ ನಲ್ಲಿ ನೆಲೆಸಿರುವ ಕುಂದಗನ್ನಡಿಗರಿಗಾಗಿ ವಿಹಾರ ಕೂಟ ಮತ್ತು ಗ್ರಾಮೀಣ ಆಟೋಟ ಸ್ಪರ್ದೆಗಳು...

ಕಂದಾಯೋತ್ಸವ 2025 : ಕಂದಾಯ ಇಲಾಖೆಯ ಸಾಂಸ್ಕೃತಿಕ – ಕ್ರೀಡಾ ಸಂಭ್ರಮ

ಕಂದಾಯೋತ್ಸವ 2025 : ಕಂದಾಯ ಇಲಾಖೆಯ ಸಾಂಸ್ಕೃತಿಕ – ಕ್ರೀಡಾ ಸಂಭ್ರಮ ಶಿವಮೊಗ್ಗ ಜಿಲ್ಲೆಯ ಕಂದಾಯ ಇಲಾಖೆಯ ವತಿಯಿಂದ **ಕಂದಾಯೋತ್ಸವ – 2025** ನ್ನು ವಿಜೃಂಭಣೆಯಿಂದ ಆಚರಿಸಲಾಗುತ್ತಿದೆ....

Must read

- Advertisement -spot_imgspot_img

You might also likeRELATED
Recommended to you