14.1 C
London
Saturday, May 18, 2024
Homeಭರವಸೆಯ ಬೆಳಕುಸಾವಿರಾರು ಜನರ ಅನ್ನದಾತ ಗೋವಿಂದ ಬಾಬು ಪೂಜಾರಿ ಬೈಂದೂರು-'ಭಾರತ ಗೌರವ" ಪ್ರಶಸ್ತಿಗೆ ಆಯ್ಕೆ

ಸಾವಿರಾರು ಜನರ ಅನ್ನದಾತ ಗೋವಿಂದ ಬಾಬು ಪೂಜಾರಿ ಬೈಂದೂರು-‘ಭಾರತ ಗೌರವ” ಪ್ರಶಸ್ತಿಗೆ ಆಯ್ಕೆ

Date:

Related stories

ನಿನ್ನ ಟೈಮ್ ಬಂದೇ ಬರುವುದು, ಹೀಗೇ ಆಡುತ್ತಿರು ಕರುಣ್..!

1996ರಲ್ಲಿ ಅರ್ಜುನ ರಣತುಂಗ ನಾಯಕತ್ವದ ಶ್ರೀಲಂಕಾ ತಂಡ ಏಕದಿನ ವಿಶ್ವಕಪ್ ಗೆದ್ದಾಗ...

ದುಡ್ಡಿನ ಮದದಲ್ಲಿ ಕೊಬ್ಬಿರುವ ಈ business tycoonಗಳಿಗೆ ದೇಶದ ಕ್ರಿಕೆಟ್ ಹೀರೊಗಳ ಮೇಲೆ ಗೌರವ ಇರಲು ಹೇಗೆ ಸಾಧ್ಯ..?

17 ವರ್ಷಗಳ ಐಪಿಎಲ್ ಚರಿತ್ರೆಯಲ್ಲಿ ಸಾವಿರಕ್ಕೂ ಹೆಚ್ಚು ಪಂದ್ಯಗಳು ನಡೆದಿವೆ. ಆ...

Reject ಪೀಸ್‌ಗಳು ವಾಪಸ್ ಎದ್ದು ಬಂದ ಕಥೆ..!

ಒಬ್ಬ by mistake ಪಂಜಾಬ್ ಕಿಂಗ್ಸ್ ತಂಡ ಸೇರಿದ್ದವ. ಇನ್ನೊಬ್ಬ ತನ್ನ...

ಇಂದು ವಿಶ್ವದ ಅತ್ಯಂತ ಪ್ರೀತಿಪಾತ್ರ ಕ್ರಿಕೆಟಿಗ ಧೋನಿಯ ಕೊನೆಯ ಪಂದ್ಯ..

ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯಲಿರುವ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಮುಂಬೈ...

T20 ವಿಶ್ವಕಪ್‌ನಲ್ಲಿ ಭಾರತದ ವಿಕೆಟ್‌ಕೀಪರ್ ಯಾರು? 5 ಆಟಗಾರರು ರೇಸ್ ನಲ್ಲಿ

ಐಪಿಎಲ್  ನಂತರ ಟಿ20 ವಿಶ್ವಕಪ್ ಆಡಬೇಕಿದೆ. ಈ ಮೆಗಾ  ಟೂರ್ನಿಯನ್ನು ಜೂನ್‌ನಲ್ಲಿ...
spot_imgspot_img
ಉಡುಪಿ : ಕೆಲ ದಿನಗಳ ಹಿಂದೆ ತಮ್ಮ ಹುಟ್ಟುಹಬ್ಬದ ಸಂದರ್ಭದಲ್ಲಿ ಮನೆಯನ್ನೇ ಬಡವತಿಗೆ ದಾನ ಮಾಡಿ ಭಾರೀ ಸುದ್ದಿಯಾಗಿದ್ದ ಸಾಮಾಜಿಕ ಕಾರ್ಯಕರ್ತ, ಉದ್ಯಮಿ ಗೋವಿಂದಬಾಬು ಪೂಜಾರಿ ಅವರಿಗೆ ಇದೀಗ ‘ಭಾರತ ಗೌರವ ಪ್ರಶಸ್ತಿ’ ಸಿಕ್ಕಿದೆ.
ಆರು ಸಾವಿರಕ್ಕೂ ಹೆಚ್ಚು ಕುಟುಂಬಗಳಿಗೆ ಉದ್ಯೋಗ ನೀಡಿರುವ ಚೆಫ್ ಟಾಕ್ ಕಂಪನಿಯ ಮಾಲೀಕರಾದ ಗೋವಿಂದ ಬಾಬು ಪೂಜಾರಿ ಅವರು ಕೊರೋನಾ ಸಂಕಟ ಕಾಲದಲ್ಲಿ 8 ಸಾವಿರಕ್ಕೂ ಹೆಚ್ಚು ಬಡ ಕುಟುಂಬಗಳಿಗೆ ಆಹಾರ, ವೈದ್ಯಕೀಯ ಸಾಮಾಗ್ರಿಗಳನ್ನೊಳಗೊಂಡ ಕಿಟ್ ನೀಡಿದ್ದಾರೆ. ಕರಾವಳಿ, ಬೆಂಗಳೂರು, ಮಲೆನಾಡು ಸಹಿತ ವಿವಿಧ ಜಿಲ್ಲೆಗಳಲ್ಲಿ ಅವರು ಈ ಸೇವೆ ಮಾಡಿದ್ದಾರೆ.
ಶ್ರೀ ವರಲಕ್ಷ್ಮೀ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಕೈಗೊಂಡ ಈ ಮಾನವೀಯ ಸೇವೆಯನ್ನು ಗೌರವಿಸಿರುವ ಬೆಂಗಳೂರಿನ ಜನ್ಮಭೂಮಿ ಫೌಂಡೇಶನ್ ಸಂಸ್ಥೆಯು ಉದ್ಯಮಿ ಗೋವಿಂದ ಬಾಬು ಪೂಜಾರಿ ಅವರಿಗೆ ‘ಭಾರತ ಗೌರವ ಪ್ರಶಸ್ತಿ’ ಘೋಷಿಸಿದೆ.
ಈ ತಿಂಗಳ‌ 29ರಂದು, ಭಾನುವಾರ ಸಂಜೆ 5.00ಗಂಟೆಗೆ ಬೆಂಗಳೂರಿನ ಗಾಂಧೀನಗರದ ಸ್ಮಾಂಕ್ ಟಮ್ ಹೋಟೆಲ್‌ನಲ್ಲಿ ಈ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ.
ಕೊರೋನಾ ವಾರಿಯರ್ಸ್ ಹಾಗೂ ನಾಡಿನ ಸಾಧಕರಿಗಾಗಿ ಏರ್ಪಡಿಸಿರುವ ಅಭಿನಂದನಾ ಸಮಾರಂಭದಲ್ಲಿ ಗೋವಿಂದ ಬಾಬು ಪೂಜಾರಿ ಅವರಿಗೆ ‘ಭಾರತ ಗೌರವ ಪ್ರಶಸ್ತಿ’ ನೀಡಲಾಗುವುದೆಂದು ಜನ್ಮಭೂಮಿ ಫೌಂಡೇಷನ್ ಅಧ್ಯಕ್ಷ ರಘು  ಗಂಗೂರು ತಿಳಿಸಿದ್ದಾರೆ.
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

Latest stories

LEAVE A REPLY

Please enter your comment!
Please enter your name here

four × three =