6.3 C
London
Tuesday, April 23, 2024
Homeಕಬಡ್ಡಿಕೊರವಡಿ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಕಬಡ್ಡಿ ತಂಡಕ್ಕೆಉಚಿತ ಶೂ ವಿತರಿಸಿದ ಗೌತಮ್ ಶೆಟ್ಟಿ

ಕೊರವಡಿ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಕಬಡ್ಡಿ ತಂಡಕ್ಕೆಉಚಿತ ಶೂ ವಿತರಿಸಿದ ಗೌತಮ್ ಶೆಟ್ಟಿ

Date:

Related stories

Reject ಪೀಸ್‌ಗಳು ವಾಪಸ್ ಎದ್ದು ಬಂದ ಕಥೆ..!

ಒಬ್ಬ by mistake ಪಂಜಾಬ್ ಕಿಂಗ್ಸ್ ತಂಡ ಸೇರಿದ್ದವ. ಇನ್ನೊಬ್ಬ ತನ್ನ...

ಇಂದು ವಿಶ್ವದ ಅತ್ಯಂತ ಪ್ರೀತಿಪಾತ್ರ ಕ್ರಿಕೆಟಿಗ ಧೋನಿಯ ಕೊನೆಯ ಪಂದ್ಯ..

ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯಲಿರುವ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಮುಂಬೈ...

T20 ವಿಶ್ವಕಪ್‌ನಲ್ಲಿ ಭಾರತದ ವಿಕೆಟ್‌ಕೀಪರ್ ಯಾರು? 5 ಆಟಗಾರರು ರೇಸ್ ನಲ್ಲಿ

ಐಪಿಎಲ್  ನಂತರ ಟಿ20 ವಿಶ್ವಕಪ್ ಆಡಬೇಕಿದೆ. ಈ ಮೆಗಾ  ಟೂರ್ನಿಯನ್ನು ಜೂನ್‌ನಲ್ಲಿ...

ಇಂತಹ ಒಬ್ಬ ಆಟಗಾರನನ್ನು RCB ತಯಾರು ಮಾಡಿದೆಯೇ..?

ರಿಯಾನ್ ಪರಾಗ್’ನಂಥವರು ಕರ್ನಾಟಕದಲ್ಲಿ ಅದೆಷ್ಟು ಹುಡುಗರಿದ್ದರು..! ಈಗಲೂ ಇದ್ದಾರೆ.. ಆದರೆ ಅವರೆಲ್ಲಾ ಐಪಿಎಲ್’ನಲ್ಲಿ...

RCB ಫ್ರಾಂಚೈಸಿಗೆ ಕನ್ನಡಿಗರ ಮೇಲಿರುವುದು ನಿರ್ಲಕ್ಷ್ಯವಲ್ಲ, ಅಲರ್ಜಿ..!

ನಾಲ್ಕೇ ನಾಲ್ಕು ದಿನಗಳ ಹಿಂದೆ..  4 ಓವರ್’ಗಳಲ್ಲಿ 23 ರನ್, ಒಂದು...
spot_imgspot_img
ಕುಂದಾಪುರ:ಇಲ್ಲಿನ ಕೊರವಡಿ ಸರ್ಕಾರಿ  ಹಿರಿಯ ಪ್ರಾಥಮಿಕ  ಶಾಲೆಯ ಕಬಡ್ಡಿ ತಂಡಕ್ಕೆ ಉಡುಪಿ ಜಿಲ್ಲಾ ಟೆನಿಸ್ ಬಾಲ್ ಕ್ರಿಕೆಟ್ ಅಸೋಸಿಯೇಷನ್ ಅಧ್ಯಕ್ಷ ಹಾಗೂ ಕರ್ನಾಟಕ ಟೇಬಲ್ ಟೆನಿಸ್ ಅಸೋಸಿಯೇಷನ್ ಉಪಾಧ್ಯಕ್ಷ ಗೌತಮ್ ಶೆಟ್ಟಿ ಕುಂದಾಪುರ 12 ಜೊತೆ ಶೂ ವಿತರಿಸಿದರು.
ಕೊರವಡಿ ಹಿರಿಯ ಪ್ರಾಥಮಿಕ ಶಾಲೆಯು ಕಬಡ್ಡಿ ಜಿಲ್ಲಾ ಮಟ್ಟದಲ್ಲಿ ಜಯಗಳಿಸಿ ನವೆಂಬರ್ 9 ರಂದು ಮಂಡ್ಯದಲ್ಲಿ ಮೈಸೂರು ವಿಭಾಗ ಮಟ್ಟದ ಪಂದ್ಯಾವಳಿಯಲ್ಲಿ ಭಾಗವಹಿಸಲು ಅರ್ಹತೆ ಪಡೆದಿದೆ. ಮೈಸೂರು ವಿಭಾಗ ಮಟ್ಟದಲ್ಲಿ ಭಾಗವಹಿಸಲು ತಂಡದ ಆಟಗಾರರಿಗೆ ಪ್ರಾಯೋಜಿತ 12 ಜೊತೆ ಕಬಡ್ಡಿ ಶೂಗಳನ್ನು ನೀಡಿದರು.
ಈ ಸಂದರ್ಭ ಕಬಡ್ಡಿ ಸ್ಪರ್ಧಿಗಳನ್ನು  ಉದ್ದೇಶಿಸಿ  ಮಾತನಾಡಿದ ಗೌತಮ್ ಶೆಟ್ಟಿ “ಕೊರವಡಿ ಹಿರಿಯ ಪ್ರಾಥಮಿಕ ಶಾಲೆಯು ಸೀಮಿತ ವಿದ್ಯಾರ್ಥಿಗಳನ್ನು ಹೊಂದಿರುವ ಗ್ರಾಮೀಣ ಸರ್ಕಾರಿ ಶಾಲೆಯಾದರೂ ಜಿಲ್ಲಾಮಟ್ಟದ ಕಬಡ್ಡಿ ಸ್ಪರ್ಧೆಯಲ್ಲಿ ಅಸಾಧಾರಣ ಪ್ರದರ್ಶನ ನೀಡಿದೆ. ವಿಭಾಗೀಯ ಮಟ್ಟದಲ್ಲಿ ಮತ್ತು ರಾಜ್ಯ ಮಟ್ಟದಲ್ಲಿ ಗೆಲ್ಲಲು  ನಿಮ್ಮ ಅತ್ಯುತ್ತಮವಾದ ಆಟವನ್ನು ಆಡಿ.  ನಿಮ್ಮಲ್ಲಿ ದೃಢತೆ ಮತ್ತು ಶಿಸ್ತು ಇರಲಿ.  ಅದಕ್ಕಿಂತ ಹೆಚ್ಚಾಗಿ ನೀವು ಆಟವನ್ನು ಪ್ರೀತಿಸಿ ಮತ್ತು ಆಟವನ್ನು ಆನಂದಿಸಿರಿ.  ಅತ್ಯುತ್ತಮ ತಂಡದ ಸಂಯೋಜನೆಯಿಂದಾಗಿ ಯಾವುದೇ ತಂಡವನ್ನು ಸೋಲಿಸಲು ನಿಮ್ಮ ತಂಡ ಸಾಕಷ್ಟು ಪ್ರಬಲವಾಗಿದೆ . ನಿಮಗೆಲ್ಲರಿಗೂ ಶುಭಾಶಯಗಳು,ದೇವರು ನಿಮ್ಮೆಲ್ಲರನ್ನು ಆಶೀರ್ವದಿಸಲಿ” ಎಂದು ಆಟಗಾರರನ್ನು ಹುರಿದುಂಬಿಸಿದರು‌.
ಶಾಲೆಯ ವತಿಯಿಂದ ಗೌತಮ್ ಶೆಟ್ಟಿ ಇವರನ್ನು ಗೌರವಿಸಲಾಯಿತು.ಈ ಸಂದರ್ಭ ಶಾಲಾ ಅಧ್ಯಾಪಕ ವರ್ಗದವರು,ಮಕ್ಕಳು  ಮತ್ತಿತರರು ಉಪಸ್ಥಿತರಿದ್ದರು.
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

Latest stories

LEAVE A REPLY

Please enter your comment!
Please enter your name here

12 − 12 =