SportsKannada | ಸ್ಪೋರ್ಟ್ಸ್ ಕನ್ನಡ

ಚಾಲೆಂಜ್ ರಾಷ್ಟ್ರೀಯ ಮಟ್ಟದ ಪಂದ್ಯಾಟದಲ್ಲಿ ಗೌತಮ್ ಶೆಟ್ಟಿಯವರಿಗೆ ಸನ್ಮಾನ

ಕುಂದಾಪುರ-ಇಲ್ಲಿನ ಗಾಂಧಿಮೈದಾನದಲ್ಲಿ ನಡೆದ ರಾಷ್ಟ್ರೀಯ ಮಟ್ಟದ ಹೊನಲುಬೆಳಕಿನ ಕ್ರಿಕೆಟ್ ಪಂದ್ಯಾಟದ ಸಮಾರೋಪ ಸಮಾರಂಭದಲ್ಲಿ ಉಡುಪಿ ಜಿಲ್ಲಾ ಟೆನಿಸ್ಬಾಲ್ ಕ್ರಿಕೆಟ್ ಅಸೋಸಿಯೇಷನ್ ಅಧ್ಯಕ್ಷರಾದ ಗೌತಮ್ ಶೆಟ್ಟಿ ಟೊರ್ಪೆಡೋಸ್ ಇವರನ್ನು ಸನ್ಮಾನಿಸಲಾಯಿತು.
ಸನ್ಮಾನ ಸ್ವೀಕರಿಸಿ ಮಾತನಾಡಿದ ಗೌತಮ್ ಶೆಟ್ಟಿಯವರು “ಕ್ರೀಡಾಪಟುಗಳು ಸೋಲು,ಗೆಲುವನ್ನು ಸಮಾನವಾಗಿ ಸ್ವೀಕರಿಸಬೇಕು,ಚಾಲೆಂಜ್ ಕ್ರಿಕೆಟ್ ಕ್ಲಬ್ ಹಲವಾರು ವರ್ಷಗಳಿಂದ ಕ್ರೀಡೆ ಮಾತ್ರವಲ್ಲದೇ ಸಮಾಜಸೇವೆಯಲ್ಲಿ ತಮ್ಮನ್ನು ತೊಡಗಿಸಿಕೊಂಡು ಮಾದರಿ ಸಂಸ್ಥೆಯಾಗಿದೆ” ಎಂದರು.
ಸಮಾರೋಪ ಸಮಾರಂಭದ ಮುಖ್ಯ ಅತಿಥಿಗಳಾಗಿ ರಾಜ್ಯ ಬಿ.ಜೆ.ಪಿ ಹಿಂದುಳಿದ ವರ್ಗಗಳ ಮೋರ್ಚಾ ರಾಷ್ಟ್ರೀಯ ಕಾರ್ಯದರ್ಶಿ ಯಶಪಾಲ್ ಸುವರ್ಣ,ನ್ಯೂ ಮೆಡಿಕಲ್ ಸೆಂಟರ್ ಡಾ.ರಂಜನ್, ಜಪ್ತಿ ಪ್ರಥಮ್ ಇನ್ ರೆಸಾರ್ಟ್ ಮರತ್ತೂರು ಸುರೇಶ್ ಶೆಟ್ಟಿ,ಸಿವಿಲ್ ಕಂಟ್ರಾಕ್ಟರ್ ಸಚಿತ್ ಪೈ,ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ಕೃಷ್ಣೇ ಗೌಡ್ರು,ಶ್ರೀ ವರಲಕ್ಷ್ಮೀ ಚಾರಿಟೇಬಲ್ ಟ್ರಸ್ಟ್(ರಿ) ಸಂಸ್ಥಾಪಕರು ಡಾ.ಗೋವಿಂದ ಬಾಬು ಪೂಜಾರಿ,ಸಹನಾ ಗ್ರೂಪ್ಸ್ ನ‌‌ ಸುರೇಂದ್ರ ಶೆಟ್ಟಿ,ಯುವಜನ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಕುಸುಮಾಕರ್ ಶೆಟ್ಟಿ, ಉಡುಪಿ ಕಾಂಗ್ರೆಸ್ ಉಪಾಧ್ಯಕ್ಷ ಕಿಶನ್ ಹೆಗ್ಡೆ ಕೊಳ್ಕೆಬೈಲ್,ಚಾಲೆಂಜ್ ಚಂದ್ರ,ಪಂದ್ಯಾಟ ಸಮಿತಿಯ ಪದಾಧಿಕಾರಿಗಳು,ತಂಡದ ಸದಸ್ಯರು ಉಪಸ್ಥಿತರಿದ್ದರು ‌.
Exit mobile version