ಉಡುಪಿ ಜಿಲ್ಲಾ ಟೆನ್ನಿಸ್ಬಾಲ್ ಕ್ರಿಕೆಟ್ದುಬೈ: ನ. 12 ರಂದು ಅದ್ದೂರಿಯ ಯುನೈಟೆಡ್ ಕಾಪು ಟ್ರೋಫಿ ಸೀಸನ್...

ದುಬೈ: ನ. 12 ರಂದು ಅದ್ದೂರಿಯ ಯುನೈಟೆಡ್ ಕಾಪು ಟ್ರೋಫಿ ಸೀಸನ್ 4 ಕ್ರಿಕೆಟ್ ಟೂರ್ನಿ

-

- Advertisment -spot_img
ದುಬೈ-ಉಡುಪಿ, ದಕ್ಷಿಣ ಕನ್ನಡ ಮೂಲದ ಕ್ರೀಡಾ ಪ್ರೋತ್ಸಾಹಕರಾದ ಫೈಜಲ್ ಕಾಪು, ಆದಿಲ್ ಮುಲ್ಲಾ, ಶಾಫಿ,ಆಶಿಕ್ ಬೆಳಪು,  ಶಕೀರ್ ವಿಟ್ಲ ಇವರೆಲ್ಲರ ಸಂಯೋಜನೆಯಲ್ಲಿ ಸಮಾಜದಲ್ಲಿ “ಶಾಂತಿ-ಸೌಹಾರ್ದತೆಗಾಗಿ ಕ್ರಿಕೆಟ್”
ಅಭಿಯಾನದೊಂದಿಗೆ ಯಶಸ್ವಿ ಸತತ 4 ನೇ ಬಾರಿಗೆ  ಅದ್ಧೂರಿಯ “ಯುನೈಟೆಡ್ ಕಾಪು ಟ್ರೋಫಿ ಸೀಸನ್ 4” ಕ್ರಿಕೆಟ್ ಟೂರ್ನಿ ಯನ್ನು ಕರ್ನಾಟಕ ಮೂಲದ ತಂಡಗಳಿಗೆ ನವೆಂಬರ್ 12,2023 ರಂದು ಯುನೈಟೆಡ್ ಅರಬ್ ಎಮಿರೇಟ್ಸ್‌ನ ಅಜ್ಮಾನ್‌ ಓವಲ್ ನ ಹುಲ್ಲು ಹಾಸಿನ ಮೈದಾನ ಮತ್ತು  MCC2 ಕ್ರಿಕೆಟ್ ಮೈದಾನ ದಲ್ಲಿ ಆಯೋಜಿಸಲಿದೆ.
ದಿನದ ಪಂದ್ಯಾವಳಿಯು ಲೀಗ್ ಮತ್ತು ನಾಕೌಟ್ ಪಂದ್ಯಗಳನ್ನು ಒಳಗೊಂಡಿರುತ್ತದೆ. ಪ್ರತಿಷ್ಠಿತ
ಟ್ರೋಫಿಗಾಗಿ ಉಡುಪಿ ಫ್ರೆಂಡ್ಸ್, ಬ್ಲೂ ಫೋರ್ಸ್,ಕರಾವಳಿ ಆಟೋ ವರ್ಕ್ ಶಾಪ್,ಕಟೀಲ್ ಫ್ರೆಂಡ್ಸ್,ಕರ್ಮಾರ್ ಡಿ.ಜೆ ಚಾಲೆಂಜರ್ಸ್,ದುಬೈ ಬ್ರದರ್ಸ್,ಟೀಮ್ ಎಲಿಗೆಂಟ್ ಮತ್ತು ವಿದ್ವಾರ್ ಬಾಯ್ಸ್ ಈ ಎಂಟು ತಂಡಗಳ ಕದನವನ್ನು ಈ ಟೂರ್ನಮೆಂಟ್ನಲ್ಲಿ ವೀಕ್ಷಿಸಬಹುದು
ಯುನೈಟೆಡ್ ಕಾಪು ಟ್ರೋಫಿಯ ಪ್ರಶಸ್ತಿಯ ಒಟ್ಟು ಮೊತ್ತ AED 10000 ಮೌಲ್ಯದ್ದಾಗಿದ್ದು,
ಪಂದ್ಯಾವಳಿಯ ವಿಜೇತರು AED 5005 ಮತ್ತು ಟ್ರೋಫಿಯನ್ನು ಪಡೆಯಲಿದೆ. ರನ್ನರ್ಸ್ ಅಪ್  2505 AED ಮತ್ತು ಟ್ರೋಫಿಯನ್ನು ಪಡೆಯುತ್ತದೆ.
ಮ್ಯಾನ್ ಆಫ್ ದಿ ಮ್ಯಾಚ್, ಮ್ಯಾನ್ ಆಫ್ ದಿ ಸೀರೀಸ್, ಬೆಸ್ಟ್ ಬೌಲರ್ ಮತ್ತು ಬೆಸ್ಟ್ ಬ್ಯಾಟರ್ ಗಳಿಗೆ ಕೂಡಾ ಬಹುಮಾನವೂ ಇರುತ್ತದೆ.
 ಶೃಂಗೇರಿಯ ಪ್ರಸಿದ್ಧ ವೆರಿಕೋಸ್ ವೈನ್ ತಜ್ಞ ವೈದ್ಯರಾದ ವಾಸುದೇವ ಉರಾಳ ಇವರ “ಡಾ.ಉರಾಳ್ಸ್ ವೆರಿಕೋಸ್ ವೈನ್ಸ್ ಆಯುರ್ವೇದ ಕೇರ್” ಪಂದ್ಯಾವಳಿಯ ಮುಖ್ಯ ಪ್ರಾಯೋಜಕರಾಗಿರುತ್ತಾರೆ.ಡಾ.ವಾಸುದೇವ್ ಉರಾಳರು ಮೊತ್ತ ಮೊದಲ ಬಾರಿಗೆ ಪಂದ್ಯಾವಳಿಯ ಮುಖ್ಯ ಅತಿಥಿಯಾಗಿ ಭಾಗವಹಿಸಲು ದುಬೈಗೆ ಆಗಮಿಸಲಿದ್ದಾರೆ.
ಜೊತೆಯಲ್ಲಿ ಅತಿಥಿ ವೆಜಿಟೇರಿಯನ್ ರೆಸ್ಟೋರೆಂಟ್, ದುಬೈ ಸಹ ಪ್ರಾಯೋಜಕರಾಗಿರುತ್ತಾರೆ.
ಪಂದ್ಯಾವಳಿಯ ಇತರ ವಿವರಗಳಿಗಾಗಿ +971 50 628 8509  ,  + 971 52 799 9564 ಅಥವಾ + 971 52 829 1122  ಅನ್ನು ಸಂಪರ್ಕಿಸಬಹುದು.
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

LEAVE A REPLY

Please enter your comment!
Please enter your name here

ten − 8 =

Latest news

ವೆಂಕಟರಮಣ ಸ್ಪೋರ್ಟ್ಸ್&ಕಲ್ಚರಲ್ ಕ್ಲಬ್ ರಿ.ಪಿತ್ರೋಡಿ ಇವರ 19 ನೇ ವರ್ಷದ ಪಿ.ಪಿ‌‌.ಎಲ್ ಸಂಭ್ರಮ

ವೆಂಕಟರಮಣ ಸ್ಪೋರ್ಟ್ಸ್&ಕಲ್ಚರಲ್ ಕ್ಲಬ್ ರಿ.ಪಿತ್ರೋಡಿ ಇವರ 19 ನೇ ವರ್ಷದ ಪಿ.ಪಿ‌‌.ಎಲ್ ಸಂಭ್ರಮ ವೆಂಕಟರಮಣ ಸ್ಪೋರ್ಟ್ಸ್ & ಕಲ್ಚರಲ್ ಕ್ಲಬ್, ಪಿತ್ರೋಡಿ ಸಂಸ್ಥೆಯ ವತಿಯಿಂದ ಪ್ರತಿವರ್ಷದಂತೆ ಈ...

ಶ್ರೀ ಜಲವಿನಾಯಕ ಟ್ರೋಫಿ 2026: ಕ್ರಿಕೆಟ್ ಪಂದ್ಯಾವಳಿಗೆ ಸಜ್ಜಾದ ಹುಣಸವಳ್ಳಿ

ಶ್ರೀ ಜಲವಿನಾಯಕ ಟ್ರೋಫಿ 2026: ಕ್ರಿಕೆಟ್ ಪಂದ್ಯಾವಳಿಗೆ ಸಜ್ಜಾದ ಹುಣಸವಳ್ಳಿ ಹುಣಸವಳ್ಳಿ ಹಾಗೂ ಕುರುವಳ್ಳಿ ಪೋಸ್ಟ್, ತೀರ್ಥಹಳ್ಳಿ ತಾಲೂಕು ಕ್ರೀಡಾಭಿಮಾನಿಗಳಿಗೆ ಸಂತಸದ ಸುದ್ದಿ. ಆಗುಂಬೆ ಮತ್ತು ಮುತ್ತೂರು...

ಭಾರತೀಯ ತಂಡದಲ್ಲಿ ಸ್ಥಾನಕ್ಕಾಗಿ ಹೋರಾಡಿ ಹೀರೋ ಆದ ಸಂಜು ಸ್ಯಾಮ್ಸನ್ ಕಥೆ

  ಭಾರತೀಯ ತಂಡದಲ್ಲಿ ಸ್ಥಾನಕ್ಕಾಗಿ ಹೋರಾಡಿ ಹೀರೋ ಆದ ಸಂಜು ಸ್ಯಾಮ್ಸನ್ ಕಥೆ ಕ್ರಿಕೆಟ್ ಜೀವನದಲ್ಲಿ ಕೆಲ ಕ್ಷಣಗಳು ಆಟಗಾರನ ಜೀವನವನ್ನೇ ಬದಲಾಯಿಸುತ್ತವೆ. ಆ ಕ್ಷಣಗಳು ನೋವು,...

ಭಾರತ ವಿಶ್ವ ಚಾಂಪಿಯನ್: ಟಿ20 ವಿಶ್ವಕಪ್ ಮತ್ತೆ ಭಾರತಕ್ಕೇ!

  ಭಾರತ ವಿಶ್ವ ಚಾಂಪಿಯನ್: ಟಿ20 ವಿಶ್ವಕಪ್ ಮತ್ತೆ ಭಾರತಕ್ಕೇ! ಟೀಮ್ ಇಂಡಿಯಾ ಇತಿಹಾಸ ಸೃಷ್ಟಿಸಿದೆ. ಹಾಲಿ ಚಾಂಪಿಯನ್ ಆಗಿ ಟಿ20 ವಿಶ್ವಕಪ್ ಉಳಿಸಿಕೊಳ್ಳುವುದರ ಜೊತೆಗೆ, ತವರು ನೆಲದಲ್ಲಿ...
- Advertisement -spot_imgspot_img

ಭಾರತಕ್ಕೆ ಮೂರನೇ ಟಿ20 ವಿಶ್ವಕಪ್ ಕಿರೀಟ – ಐತಿಹಾಸಿಕ ಸಾಧನೆ

ಭಾರತಕ್ಕೆ ಮೂರನೇ ಟಿ20 ವಿಶ್ವಕಪ್ ಕಿರೀಟ – ಐತಿಹಾಸಿಕ ಸಾಧನೆ ಕ್ರಿಕೆಟ್ ಲೋಕದಲ್ಲಿ ಮತ್ತೊಮ್ಮೆ ಇತಿಹಾಸ ನಿರ್ಮಿಸಿದ Team India ತಂಡವು ಟಿ20 ವಿಶ್ವಕಪ್‌ನಲ್ಲಿ ತನ್ನ ಪ್ರಭಾವವನ್ನು...

NIPM ಕ್ರಿಕೆಟ್ ಎಕ್ಸ್‌ಪ್ಲೋಶನ್ ಕಾರ್ಪೊರೇಟ್ ಟೂರ್ನಮೆಂಟ್ 2026: NMPA ಚಾಂಪಿಯನ್

NIPM ಕ್ರಿಕೆಟ್ ಎಕ್ಸ್‌ಪ್ಲೋಶನ್ ಕಾರ್ಪೊರೇಟ್ ಟೂರ್ನಮೆಂಟ್ 2026: NMPA ಚಾಂಪಿಯನ್ **New Mangalore Port Authority (ಎನ್‌ಎಂಪಿಎ)** ತಂಡವು **NIPM Cricket Explosion Corporate Cricket Tournament...

Must read

- Advertisement -spot_imgspot_img

You might also likeRELATED
Recommended to you