ಕ್ರಿಕೆಟ್ಒಂದೇ ಓವರಿನಲ್ಲಿ ಏಳು ಸಿಕ್ಸರ್‌ ಜೋತೆಗೆ ದ್ವಿಶತಕ ಸಿಡಿಸಿ ವಿಶ್ವ ದಾಖಲೆ...

ಒಂದೇ ಓವರಿನಲ್ಲಿ ಏಳು ಸಿಕ್ಸರ್‌ ಜೋತೆಗೆ ದ್ವಿಶತಕ ಸಿಡಿಸಿ ವಿಶ್ವ ದಾಖಲೆ ಬರೆದ ಯುವ ಕ್ರಿಕೆಟಿಗ ಋತುರಾಜ್ ಗಾಯಕ್ವಾಡ್

-

- Advertisment -spot_img
ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯುತ್ತಿರುವ ವಿಜಯ್ ಹಜಾರೆ 2022 ಎರಡನೇ ಕ್ವಾರ್ಟರ್ ಫೈನಲ್ ಪಂದ್ಯದಲ್ಲಿ ಮಹಾರಾಷ್ಟ್ರ ತಂಡದ ನಾಯಕ ಋತುರಾಜ್ ಗಾಯಕ್ವಾಡ್ ಬ್ಯಾಟಿಂಗ್ ನಲ್ಲಿ ಅಬ್ಬರಿಸುವುದರ ಜೋತೆಗೆ ವಿಶ್ವದಾಖಲೆ ನಿರ್ಮಿಸಿದ್ದಾರೆ. ಒಂದೇ ಓವರ್‌ನಲ್ಲಿನ ಸತತ ಏಳು ಸಿಕ್ಸರ್ ಸಿಡಿಸಿದ್ದಲ್ಲದೆ ಅಜೇಯ ದ್ವಿಶತಕ ದಾಖಲಿಸಿ ಅಬ್ಬರಿಸಿದ್ದಾರೆ.
ಉತ್ತರ ಪ್ರದೇಶ ವಿರುದ್ಧ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡುವ ಅವಕಾಶ ಪಡೆದ ಮಹಾರಾಷ್ಟ್ರ ಪರ ನಾಯಕ ಮತ್ತು  ಓಪನರ್ ಋತುರಾಜ್ ಗಾಯಕ್ವಾಡ್ ಏಕಾಂಗಿಯಾಗಿ ಅಬ್ಬರಿಸಿ ಶ್ರೇಷ್ಠ ಮಟ್ಟದ ಬ್ಯಾಟಿಂಗ್ ಪ್ರದರ್ಶಿಸಿದ್ದಾರೆ.
ಒಂದು ತುದಿಯಲ್ಲಿ ವಿಕೆಟ್ ಉರುಳುತ್ತಿದ್ದರೆ ಮತ್ತೊಂದು ತುದಿಯಲ್ಲಿ ಭದ್ರವಾಗಿ ನೆಲ ಕಚ್ಚಿದ ಮಹಾರಾಷ್ಟ್ರ ನಾಯಕ ಋತುರಾಜ್  159 ಎಸೆತಗಳಲ್ಲಿ ಅಜೇಯ 220 ರನ್‌ ಕಲೆಹಾಕುವ ಮೂಲಕ ಮಿಂಚಿದರು. 138.36 ಸರಾಸರಿಯಲ್ಲಿ ಬ್ಯಾಟ್‌ ಬೀಸಿದ ರುತುರಾಜ್‌ ಇನ್ನಿಂಗ್ಸ್‌ನಲ್ಲಿ 10 ಬೌಂಡರಿ ಮತ್ತು ಭರ್ಜರಿ 16 ಸಿಕ್ಸರ್‌ ಬಾರಿಸಿದ್ದರು
49ನೇ ಓವರ್‌ನಲ್ಲಿ ಯಾರೂ ಊಹಿಸದ ರೀತಿಯಲ್ಲಿ ಬ್ಯಾಟಿಂಗ್ ಮಾಡಿದ ಋತುರಾಜ್ ಗಾಯಕ್ವಾಡ್ ಬರೋಬ್ಬರಿ 7 ಸಿಕ್ಸರ್ ಸಿಡಿಸುವ ಮೂಲಕ ವಿಶ್ವ ದಾಖಲೆ ಮಾಡಿದ್ದಾರೆ. ಶಿವ ಸಿಂಗ್‌ ಬೌಲಿಂಗ್‌ನಲ್ಲಿ ಒಂದರ ಹಿಂದೆ ಮತ್ತೊಂದರಂತೆ ಸಿಕ್ಸರ್ ಸಿಡಿಸಿದ ಗಾಯಕ್ವಾಡ್‌, ನೋ ಬಾಲ್‌ ಎಸೆತದಲ್ಲೂ ಚೆಂಡನ್ನು ಬೌಂಡರಿ ಗೆರೆ ದಾಟಿಸುವ ಮೂಲಕ ಓವರ್‌ನಲ್ಲಿ ಏಳು ಸಿಕ್ಸರ್ ಸಿಡಿಸಿದ ಮೊದಲ ಬ್ಯಾಟ್ಸ್ ಮನ್ ಎಂಬ ಸಾಧನೆ ಮಾಡಿ ದಾಖಲೆ ಮಾಡಿದ್ದಾರೆ.
*ವೀಡಿಯೋ ವೀಕ್ಷಿಸಲು ಈ ಕೆಳಗಿನ ಲಿಂಕ್ ಕ್ಲಿಕ್ ಮಾಡಿ*
ಇನ್ನೂ ಒಂದು ಓವರ್‌ನಲ್ಲಿ ಅತಿ ಹೆಚ್ಚು ರನ್ ದಾಖಲಿಸಿದ ದಾಖಲೆಯು ವಿಜರ್ ಹಜಾರೆ ಟ್ರೋಫಿಯಲ್ಲಿ ದಾಖಲಾಗಿದೆ. 49ನೇ ಓವರ್‌ನಲ್ಲಿ 43 ರನ್‌ ದಾಖಲಾಗುವ ಮೂಲಕ ಅತ್ಯಂತ ದುಬಾರಿ ಓವರ್‌ ಎಂಬ ಪಟ್ಟಿಗೆ ಸೇರಿದೆ.
ಋತುರಾಜ್ ಗಾಯಕ್ವಾಡ್ ಅಜೇಯ 220 ರನ್‌ಗಳ ನೆರವಿನಿಂದ ಮಹಾರಾಷ್ಟ್ರ ನಿಗದಿತ 50 ಓವರ್‌ಗಳಲ್ಲಿ 5 ವಿಕೆಟ್ ನಷ್ಟಕ್ಕೆ 330 ರನ್ ಕಲೆಹಾಕಿದೆ. ಉತ್ತರ ಪ್ರದೇಶ ತಂಡಕ್ಕೆ 331ರನ್ ಗುರಿ ನೀಡಿದೆ.
ಸುಧೀರ್ ವಿಧಾತ
ಸುಧೀರ್ ವಿಧಾತ
*- ಸುಧೀರ್ ವಿಧಾತ, ಭಾರತ್ ಕ್ರಿಕೆಟರ್ಸ್, ಶಿವಮೊಗ್ಗ*

LEAVE A REPLY

Please enter your comment!
Please enter your name here

18 − seven =

Latest news

ಸಿರ್ಸಿಯಲ್ಲಿ ‘ಶ್ರೀ ಮಾರಿಕಾಂಬಾ ಟ್ರೋಫಿ’ ಕ್ರಿಕೆಟ್ ಟೂರ್ನಮೆಂಟ್‌ಗೆ ಭರ್ಜರಿ ಸಿದ್ಧತೆ

ಸಿರ್ಸಿಯಲ್ಲಿ ‘ಶ್ರೀ ಮಾರಿಕಾಂಬಾ ಟ್ರೋಫಿ’ ಕ್ರಿಕೆಟ್ ಟೂರ್ನಮೆಂಟ್‌ಗೆ ಭರ್ಜರಿ ಸಿದ್ಧತೆ ಸಿರ್ಸಿಯ ಶ್ರೀ ಮಾರಿಕಾಂಬಾ ಜಿಲ್ಲಾ ಕ್ರೀಡಾಂಗಣದಲ್ಲಿ Shri Marikamba Trophy ಓಪನ್ ಹಾರ್ಡ್ ಟೆನಿಸ್ ಕ್ರಿಕೆಟ್...

ಹೆಜಮಾಡಿಯಲ್ಲಿ ಸಂಭ್ರಮದೊಂದಿಗೆ ಯಶಸ್ವಿಯಾಗಿ ನಡೆದ “ಅಭರಣ್ GPL ಉತ್ಸವ 2026” – ಸಿಡಿಲಿನ ಸಮರದಲ್ಲಿ Temple Square Puttur ಗೆ ಚಾಂಪಿಯನ್ ಪಟ್ಟ!

ಹೆಜಮಾಡಿಯಲ್ಲಿ ಸಂಭ್ರಮದೊಂದಿಗೆ ಯಶಸ್ವಿಯಾಗಿ ನಡೆದ “ಅಭರಣ್ GPL ಉತ್ಸವ 2026” – ಸಿಡಿಲಿನ ಸಮರದಲ್ಲಿ Temple Square Puttur ಗೆ ಚಾಂಪಿಯನ್ ಪಟ್ಟ! ಹೆಜಮಾಡಿ ಸಮೀಪದ ಶಾನುಭಾಗ...

ಕಟಪಾಡಿಯಲ್ಲಿ ಕ್ರಿಕೆಟ್ ಪ್ರೇರಿತ ಮಿಯಾವಾಕಿ ಅರಣ್ಯ ಯೋಜನೆ ಉದ್ಘಾಟನೆ

ಕಟಪಾಡಿಯಲ್ಲಿ ಕ್ರಿಕೆಟ್ ಪ್ರೇರಿತ ಮಿಯಾವಾಕಿ ಅರಣ್ಯ ಯೋಜನೆ ಉದ್ಘಾಟನೆ ಉಡುಪಿ, ಏಪ್ರಿಲ್ 5, 2026: ಪರಿಸರ ಸಂರಕ್ಷಣೆಗೆ ಹೊಸ ದಿಕ್ಕು ತೋರಿಸುವ ವಿಶಿಷ್ಟ ಪ್ರಯತ್ನವಾಗಿ, ಕ್ರಿಕೆಟ್ ದಂತಕಥೆ...

ಅಮ್ಗೆಲೆ ಅಭರಣ್ GPL ಉತ್ಸವ – 2026: ತಂಡಗಳ ಫಿಕ್ಸ್ಚರ್ಸ್ ಬಿಡುಗಡೆ, ಕಾದಿದ್ದ ಕ್ಷಣಕ್ಕೆ ತೆರೆ

ಅಮ್ಗೆಲೆ ಅಭರಣ್ GPL– 2026: ತಂಡಗಳ ಫಿಕ್ಸ್ಚರ್ಸ್ ಬಿಡುಗಡೆ, ಕಾದಿದ್ದ ಕ್ಷಣಕ್ಕೆ ತೆರೆ ಜಿಎಸ್‌ಬಿ ಕ್ರೀಡಾಭಿಮಾನಿಗಳು ಆತುರದಿಂದ ಕಾಯುತ್ತಿದ್ದ ಕ್ಷಣ ಕೊನೆಗೂ ಬಂದಿದೆ. *ಅಮ್ಗೆಲೆ ಅಭರಣ್ GPL...
- Advertisement -spot_imgspot_img

ಮುಂಬೈಯಲ್ಲಿ ಮಾಜಿ ರಣಜಿ ಕ್ರಿಕೆಟಿಗ ಪ್ರಕಾಶ್ ಕರ್ಕೇರಾ ನಿಧನ

ಮುಂಬೈಯಲ್ಲಿ ಮಾಜಿ ರಣಜಿ ಕ್ರಿಕೆಟಿಗ ಪ್ರಕಾಶ್ ಕರ್ಕೇರಾ ನಿಧನ ರೈಲ್ವೇಸ್ ಪರವಾಗಿ ರಣಜಿ ಟ್ರೋಫಿಯಲ್ಲಿ ಪ್ರತಿನಿಧಿಸಿದ್ದ ಮಾಜಿ ಕ್ರಿಕೆಟಿಗ ಪ್ರಕಾಶ್ ಕರ್ಕೇರಾ ಅವರು ಹೃದಯಾಘಾತದಿಂದ ಮುಂಬೈನ ಮುಲುಂಡ್‌ನಲ್ಲಿರುವ...

ಅಳಿಯೂರು ಪ್ರೀಮಿಯರ್ ಲೀಗ್ (APL-2026) ಗೆ ಸಜ್ಜಾಗಿದೆ ಅಳಿಯೂರು

ಅಳಿಯೂರು ಪ್ರೀಮಿಯರ್ ಲೀಗ್ (APL-2026) ಗೆ ಸಜ್ಜಾಗಿದೆ ಅಳಿಯೂರು ಫ್ರೆಂಡ್ಸ್ ಅಳಿಯೂರು ವತಿಯಿಂದ ಮೊದಲ ಬಾರಿಗೆ ಅಳಿಯೂರು ಪ್ರೀಮಿಯರ್ ಲೀಗ್ (APL-2026) – ಸೀಸನ್ 1 ಆಯೋಜಿಸಲಾಗಿದೆ....

Must read

- Advertisement -spot_imgspot_img

You might also likeRELATED
Recommended to you