ಕ್ರಿಕೆಟ್ಒಂದೇ ಓವರಿನಲ್ಲಿ ಏಳು ಸಿಕ್ಸರ್‌ ಜೋತೆಗೆ ದ್ವಿಶತಕ ಸಿಡಿಸಿ ವಿಶ್ವ ದಾಖಲೆ...

ಒಂದೇ ಓವರಿನಲ್ಲಿ ಏಳು ಸಿಕ್ಸರ್‌ ಜೋತೆಗೆ ದ್ವಿಶತಕ ಸಿಡಿಸಿ ವಿಶ್ವ ದಾಖಲೆ ಬರೆದ ಯುವ ಕ್ರಿಕೆಟಿಗ ಋತುರಾಜ್ ಗಾಯಕ್ವಾಡ್

-

- Advertisment -spot_img
ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯುತ್ತಿರುವ ವಿಜಯ್ ಹಜಾರೆ 2022 ಎರಡನೇ ಕ್ವಾರ್ಟರ್ ಫೈನಲ್ ಪಂದ್ಯದಲ್ಲಿ ಮಹಾರಾಷ್ಟ್ರ ತಂಡದ ನಾಯಕ ಋತುರಾಜ್ ಗಾಯಕ್ವಾಡ್ ಬ್ಯಾಟಿಂಗ್ ನಲ್ಲಿ ಅಬ್ಬರಿಸುವುದರ ಜೋತೆಗೆ ವಿಶ್ವದಾಖಲೆ ನಿರ್ಮಿಸಿದ್ದಾರೆ. ಒಂದೇ ಓವರ್‌ನಲ್ಲಿನ ಸತತ ಏಳು ಸಿಕ್ಸರ್ ಸಿಡಿಸಿದ್ದಲ್ಲದೆ ಅಜೇಯ ದ್ವಿಶತಕ ದಾಖಲಿಸಿ ಅಬ್ಬರಿಸಿದ್ದಾರೆ.
ಉತ್ತರ ಪ್ರದೇಶ ವಿರುದ್ಧ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡುವ ಅವಕಾಶ ಪಡೆದ ಮಹಾರಾಷ್ಟ್ರ ಪರ ನಾಯಕ ಮತ್ತು  ಓಪನರ್ ಋತುರಾಜ್ ಗಾಯಕ್ವಾಡ್ ಏಕಾಂಗಿಯಾಗಿ ಅಬ್ಬರಿಸಿ ಶ್ರೇಷ್ಠ ಮಟ್ಟದ ಬ್ಯಾಟಿಂಗ್ ಪ್ರದರ್ಶಿಸಿದ್ದಾರೆ.
ಒಂದು ತುದಿಯಲ್ಲಿ ವಿಕೆಟ್ ಉರುಳುತ್ತಿದ್ದರೆ ಮತ್ತೊಂದು ತುದಿಯಲ್ಲಿ ಭದ್ರವಾಗಿ ನೆಲ ಕಚ್ಚಿದ ಮಹಾರಾಷ್ಟ್ರ ನಾಯಕ ಋತುರಾಜ್  159 ಎಸೆತಗಳಲ್ಲಿ ಅಜೇಯ 220 ರನ್‌ ಕಲೆಹಾಕುವ ಮೂಲಕ ಮಿಂಚಿದರು. 138.36 ಸರಾಸರಿಯಲ್ಲಿ ಬ್ಯಾಟ್‌ ಬೀಸಿದ ರುತುರಾಜ್‌ ಇನ್ನಿಂಗ್ಸ್‌ನಲ್ಲಿ 10 ಬೌಂಡರಿ ಮತ್ತು ಭರ್ಜರಿ 16 ಸಿಕ್ಸರ್‌ ಬಾರಿಸಿದ್ದರು
49ನೇ ಓವರ್‌ನಲ್ಲಿ ಯಾರೂ ಊಹಿಸದ ರೀತಿಯಲ್ಲಿ ಬ್ಯಾಟಿಂಗ್ ಮಾಡಿದ ಋತುರಾಜ್ ಗಾಯಕ್ವಾಡ್ ಬರೋಬ್ಬರಿ 7 ಸಿಕ್ಸರ್ ಸಿಡಿಸುವ ಮೂಲಕ ವಿಶ್ವ ದಾಖಲೆ ಮಾಡಿದ್ದಾರೆ. ಶಿವ ಸಿಂಗ್‌ ಬೌಲಿಂಗ್‌ನಲ್ಲಿ ಒಂದರ ಹಿಂದೆ ಮತ್ತೊಂದರಂತೆ ಸಿಕ್ಸರ್ ಸಿಡಿಸಿದ ಗಾಯಕ್ವಾಡ್‌, ನೋ ಬಾಲ್‌ ಎಸೆತದಲ್ಲೂ ಚೆಂಡನ್ನು ಬೌಂಡರಿ ಗೆರೆ ದಾಟಿಸುವ ಮೂಲಕ ಓವರ್‌ನಲ್ಲಿ ಏಳು ಸಿಕ್ಸರ್ ಸಿಡಿಸಿದ ಮೊದಲ ಬ್ಯಾಟ್ಸ್ ಮನ್ ಎಂಬ ಸಾಧನೆ ಮಾಡಿ ದಾಖಲೆ ಮಾಡಿದ್ದಾರೆ.
*ವೀಡಿಯೋ ವೀಕ್ಷಿಸಲು ಈ ಕೆಳಗಿನ ಲಿಂಕ್ ಕ್ಲಿಕ್ ಮಾಡಿ*
ಇನ್ನೂ ಒಂದು ಓವರ್‌ನಲ್ಲಿ ಅತಿ ಹೆಚ್ಚು ರನ್ ದಾಖಲಿಸಿದ ದಾಖಲೆಯು ವಿಜರ್ ಹಜಾರೆ ಟ್ರೋಫಿಯಲ್ಲಿ ದಾಖಲಾಗಿದೆ. 49ನೇ ಓವರ್‌ನಲ್ಲಿ 43 ರನ್‌ ದಾಖಲಾಗುವ ಮೂಲಕ ಅತ್ಯಂತ ದುಬಾರಿ ಓವರ್‌ ಎಂಬ ಪಟ್ಟಿಗೆ ಸೇರಿದೆ.
ಋತುರಾಜ್ ಗಾಯಕ್ವಾಡ್ ಅಜೇಯ 220 ರನ್‌ಗಳ ನೆರವಿನಿಂದ ಮಹಾರಾಷ್ಟ್ರ ನಿಗದಿತ 50 ಓವರ್‌ಗಳಲ್ಲಿ 5 ವಿಕೆಟ್ ನಷ್ಟಕ್ಕೆ 330 ರನ್ ಕಲೆಹಾಕಿದೆ. ಉತ್ತರ ಪ್ರದೇಶ ತಂಡಕ್ಕೆ 331ರನ್ ಗುರಿ ನೀಡಿದೆ.
ಸುಧೀರ್ ವಿಧಾತ
ಸುಧೀರ್ ವಿಧಾತ
*- ಸುಧೀರ್ ವಿಧಾತ, ಭಾರತ್ ಕ್ರಿಕೆಟರ್ಸ್, ಶಿವಮೊಗ್ಗ*

LEAVE A REPLY

Please enter your comment!
Please enter your name here

seventeen − eight =

Latest news

ಕಾಂಗ್ರೆಸ್ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ನಿಧನ: ರಾಜಕೀಯದ ಜೊತೆಗೆ ಕ್ರೀಡಾ ಕ್ಷೇತ್ರಕ್ಕೂ ಅನನ್ಯ ಕೊಡುಗೆ

  ಕಾಂಗ್ರೆಸ್ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ನಿಧನ: ರಾಜಕೀಯದ ಜೊತೆಗೆ ಕ್ರೀಡಾ ಕ್ಷೇತ್ರಕ್ಕೂ ಅನನ್ಯ ಕೊಡುಗೆ ದಾವಣಗೆರೆ ದಕ್ಷಿಣ ಕ್ಷೇತ್ರದ ಕಾಂಗ್ರೆಸ್ ಶಾಸಕ ಹಾಗೂ ಅಖಿಲ ಭಾರತ...

ಕ್ರೀಡಾ ಕ್ಷೇತ್ರಕ್ಕೆ ಶಿವನಾರಾಯಣ ಐತಾಳ್ ಕೋಟ ಕೊಡುಗೆ ಅಪಾರ-ಡಾ.ಕೃಷ್ಣಪ್ರಸಾದ್.ಕೆ

ಕ್ರೀಡಾ ಕ್ಷೇತ್ರಕ್ಕೆ ಶಿವನಾರಾಯಣ ಐತಾಳ್ ಕೋಟ ಕೊಡುಗೆ ಅಪಾರ-ಡಾ.ಕೃಷ್ಣಪ್ರಸಾದ್.ಕೆ ಶಿವ ಬಿಗ್ ಬ್ಯಾಶ್ ಲೀಗ್ ಗೆ ಅದ್ಧೂರಿಯ ಚಾಲನೆ ಕೋಟ-ಶಿವ ಕ್ರೀಡಾ ಮತ್ತು ಸಾಂಸ್ಕೃತಿಕ ಸಂಘ ಕೋಟ ಸಾಲಿಗ್ರಾಮ...

ಬೀಜಾಯ್ಸ್ ಗ್ರೂಪ್ ಆಯೋಜನೆಯಲ್ಲಿ ಬಿಸಿಸಿ ಚಾಂಪಿಯನ್ಸ್ ಕಪ್–2025

ಬೀಜಾಯ್ಸ್ ಗ್ರೂಪ್ ಆಯೋಜನೆಯಲ್ಲಿ ಬಿಸಿಸಿ ಚಾಂಪಿಯನ್ಸ್ ಕಪ್–2025 ಶಾರ್ಜಾದಲ್ಲಿ ಕಾರ್ಪೊರೇಟ್ ಕ್ರಿಕೆಟ್‌ಗೆ ಭರ್ಜರಿ ವೇದಿಕೆ ಬೀಜಾಯ್ಸ್ ಗ್ರೂಪ್ ಆಫ್ ಕಂಪನೀಸ್‌ಗಳ ಆಯೋಜನೆಯಲ್ಲಿ ಬಿಸಿಸಿ ಚಾಂಪಿಯನ್ಸ್ ಕಪ್–2025 ಕ್ರಿಕೆಟ್ ಟೂರ್ನಮೆಂಟ್...

ಭಾರತದ ‘ಬಿಗ್ ಗೇಮ್ ಪ್ಲೇಯರ್’ ಯುವರಾಜ್ ಸಿಂಗ್

ಭಾರತದ ‘ಬಿಗ್ ಗೇಮ್ ಪ್ಲೇಯರ್’ ಯುವರಾಜ್ ಸಿಂಗ್ ಭಾರತೀಯ ಕ್ರಿಕೆಟ್‌ನ ಅತ್ಯುತ್ತಮ ಆಲ್‌ರೌಂಡರ್‌ಗಳಲ್ಲಿ ಒಬ್ಬರಾದ ಯುವರಾಜ್ ಸಿಂಗ್, ದೊಡ್ಡ ವೇದಿಕೆಗಳಲ್ಲಿ ತಂಡಕ್ಕೆ ಜಯ ತಂದುಕೊಡುವ ಶಕ್ತಿಶಾಲಿ ಪ್ರದರ್ಶನಗಳಿಂದ...
- Advertisement -spot_imgspot_img

ಹೊನಲುಬೆಳಕಿನ ರಾಜ್ಯಮಟ್ಟದ ‘K.M.S CUP ಸೀಸನ್–2’ ವಾಲಿಬಾಲ್ ಟೂರ್ನಿ ಡಿಸೆಂಬರ್ 29–30ರಂದು

ಹೊನಲುಬೆಳಕಿನ ರಾಜ್ಯಮಟ್ಟದ ‘K.M.S CUP ಸೀಸನ್–2’ ವಾಲಿಬಾಲ್ ಟೂರ್ನಿ ಡಿಸೆಂಬರ್ 29–30ರಂದು ಯಲಹಂಕ ತಾಲ್ಲೂಕಿನ ಕುದುರೆಗೆರೆ ಪ್ರದೇಶದಲ್ಲಿ ಕೆ.ಎಂ.ಶ್ರೀನಿವಾಸ್ ರವರ ಸ್ಮರಣಾರ್ಥ ಹಾಗೂ ಕೆ.ಎಂ. ಸುಬ್ರಮಣಿ ರವರ...

ಶಿವ ಬಿಗ್ ಬ್ಯಾಷ್ 2025: ಕೋಟ ಸಾಲಿಗ್ರಾಮದಲ್ಲಿ ಡಿಸೆಂಬರ್ 13-14ರಂದು

ಶಿವ ಬಿಗ್ ಬ್ಯಾಷ್ 2025: ಕೋಟ ಸಾಲಿಗ್ರಾಮದಲ್ಲಿ ಡಿಸೆಂಬರ್ 13-14ರಂದು ಶಿವ ಕ್ರೀಡಾ ಮತ್ತು ಸಾಂಸ್ಕೃತಿಕ ಸಂಸ್ಥೆ, ಕೋಟ ಸಾಲಿಗ್ರಾಮದ ಆಯೋಜನೆಯಲ್ಲಿ ನಡೆಯುವ ಪ್ರತಿಷ್ಠಿತ ಶಿವ ಬಿಗ್...

Must read

- Advertisement -spot_imgspot_img

You might also likeRELATED
Recommended to you