#covid19ವೀರಕೇಸರಿ (ರಿ) ತಡಂಬೈಲ್ ಸುರತ್ಕಲ್ ವತಿಯಿಂದ ದಿನ ಬಳಕೆಯ ಸಾಮಗ್ರಿಗಳನ್ನು ಒಳಗೊಂಡ...

ವೀರಕೇಸರಿ (ರಿ) ತಡಂಬೈಲ್ ಸುರತ್ಕಲ್ ವತಿಯಿಂದ ದಿನ ಬಳಕೆಯ ಸಾಮಗ್ರಿಗಳನ್ನು ಒಳಗೊಂಡ ಆಹಾರ ಕಿಟ್ ವಿತರಣೆ

-

- Advertisment -spot_img
ಕೊರೋನ ಲಾಕ್ ಡೌನ್ ಹಿನ್ನೆಲೆಯಲ್ಲಿ ತಡಂಬೈಲ್ ನ ವೀರಕೇಸರಿ ತಂಡದಿಂದ 170 ಕ್ಕೂ ಹೆಚ್ಚು ಸ್ಥಳೀಯ ಕುಟುಂಬಗಳಿಗೆ ಆಹಾರದ ಕಿಟ್ ವಿತರಣೆ ಮಾಡಲಾಯಿತು.
ದಿನ ನಿತ್ಯದ ಬಳಕೆಯ ಸಾಮಗ್ರಿಗಳಾದ ಅಕ್ಕಿ ಸಕ್ಕರೆ ತರಕಾರಿಗಳನ್ನು ತಂಡದ ವತಿಯಿಂದ ವಿತರಿಸಲಾಯಿತು.
ಈ ಸಂದರ್ಭದಲ್ಲಿ ಸಂಸ್ಥೆಯ ಸಂಚಾಲಕ ಮಹಾಬಲ ಪೂಜಾರಿ ಕಡಂಬೋಡಿ, ಸಂಘದ ಅಧ್ಯಕ್ಷರು ಪದಾಧಿಕಾರಿಗಳು ಹಾಗೂ ಸದಸ್ಯರು ಉಪಸ್ಥಿತರಿದ್ದರು.
1979 ರಲ್ಲಿ ಒಂದೊಳ್ಳೆಯ ಉದ್ದೇಶದಿಂದ ಆರಂಭವಾದ ಈ ಸಂಸ್ಥೆ ಪ್ರಾರಂಭದ ಹಂತದಲ್ಲಿ ಕಬಡ್ಡಿ ಮತ್ತು ಕ್ರಿಕೆಟ್ ಪಂದ್ಯಾವಳಿಯನ್ನು ಸಂಘಟಿಸುತ್ತಾ ಬಂದಿದ್ದು ನಂತರದ ದಿನಗಳಲ್ಲಿ ಸುಧಾಕರ್ ಅವರ ಸಾರಥ್ಯ ದಲ್ಲಿ ರಾಜ್ಯ ಮಟ್ಟದಲ್ಲಿ ಕ್ರಿಕೆಟ್ ತಂಡವನ್ನು ಕಟ್ಟಿ ರಾಜ್ಯದ ಮೂಲೆ ಮೂಲೆಗಳಲ್ಲಿ ವೀರ ಕೇಸರಿ ತನ್ನ ಶೌರ್ಯ ಮೆರೆಯುವಲ್ಲಿ ಯಶಸ್ವಿಯಾಗಿತ್ತು.
ಸಾಗರದಲ್ಲಿ 1 ಪ್ರಥಮ ಪ್ರಶಸ್ತಿ ಸಹಿತ 2 ಸಲ ದ್ವಿತೀಯ ಪ್ರಶಸ್ತಿ,
ಹೊಸನಗರದಲ್ಲಿ 2  ದ್ವಿತೀಯ,ಗಂಗೊಳ್ಳಿಯಲ್ಲಿ 2 ದ್ವಿತೀಯ,ಉದ್ಯಾವರ,ಬೆಳಪು, ಚಕ್ರವರ್ತಿ ಕುಂದಾಪುರ, ಉಳ್ಳಾಲ, ಮಲ್ಪೆ ಸೇರಿ ಹಲವಾರು ಕಡೆಗಳಲ್ಲಿ ರನ್ನರ್ ಅಪ್ ಪ್ರಶಸ್ತಿಯನ್ನು ಪಡೆದದ್ದು ಪ್ರಮುಖವಾಗಿದೆ.
90 ರ ದಶಕದಲ್ಲಿ ರಾಜ್ಯಮಟ್ಟದಲ್ಲಿ ಅದ್ಭುತ ಪ್ರದರ್ಶನ ನೀಡಿ ಯಶಸ್ಸು ಕಂಡ ವೀರಕೇಸರಿ ಪಡೆ ಸುಧಾಕರ್ ರವರ ಮಾರ್ಗದರ್ಶನದಲ್ಲಿ ತೇಜಪಾಲ್ ಪುತ್ರನ್, ವಿಶ್ವನಾಥ್ ಬೈಕಂಪಾಡಿ, ಪದ್ಮನಾಭ್, ಪುಂಡಲೀಕ ಹೊಸಬೆಟ್ಟು,
ವಿಶ್ವನಾಥ್ ಮಂಗಳೂರು,ಜುಲ್ಫಿಕರ್ ಆಲಿ ಭುಟ್ಟೋ,ಯಶ್ ಪಾಲ್,ಕಿರಣ್,ಪಿ.ವಿ‌.ದಿನೇಶ್,
ರಮೇಶ್,ಶರೀಫ್,
ಕಣ್ಣನ್ ನಾಯರ್, ಉಮೇಶ್, ದಯಾನಂದ್, ಅಶ್ವಥ್, ಶ್ರೀಕಾಂತ್, ಸೂರಜ್, ಸುರೇಂದ್ರ, ಶೈಲೇಶ್ ಹೆಜಮಾಡಿ,ಪುನೀತ್,ಪ್ರಮಿತ್,
ರಾಘು ಕಾಪು, ಹರೀಶ್ ಬೈಕಂಪಾಡಿ, ವೆಂಕಪ್ಪ, ಸಂಪತ್ ಶೆಟ್ಟಿ,ಸುಧೀರ್,
ದಿನೇಶ್‌.ಆರ್.ಶೆಟ್ಟಿ,ನರೇಶ್ ಬಜ್ಪೆ ಮತ್ತು ಸಂದೇಶ್ ಈ ತಂಡದಲ್ಲಿ ಪ್ರಮುಖ ಆಟಗಾರರಾಗಿದ್ದರು.
ಕಳೆದ 10 ವರ್ಷಗಳಿಂದ ಕ್ರಿಕೆಟ್ ನಿಂದ ಸಂಸ್ಥೆಯು ದೂರ ಸರಿದಿದ್ದರೂ ಸಾಮಾಜಿಕ ಧಾರ್ಮಿಕ ಸೇವೆಗಳಲ್ಲಿ ತನ್ನನ್ನು ತಾನು ಸಕ್ರಿಯವಾಗಿ ತೊಡಗಿಸಿಕೊಂಡು ಜನಹಿತ ಕಾರ್ಯಗಳನ್ನು ಮಾಡುತ್ತಾ ಬಂದಿದ್ದು ಅತ್ಯಂತ ಶಿಸ್ತಿನ ತಂಡ ಎಂಬ ಹಿರಿಮೆಯನ್ನು ಗಳಿಸಿದ್ದಾರೆ. ಸ್ಥಳೀಯ ಹಲವಾರು ಪಂದ್ಯದಲ್ಲಿ ಗೆಲುವು ಸಾಧಿಸಿ ಮೆರೆದ ಈ ತಂಡ
1998 ರಲ್ಲಿ ರಾಜ್ಯ ಮಟ್ಟದ ಪಂದ್ಯಾವಳಿ ಸಹಿತ ಕಬಡ್ಡಿ,ಹಗ್ಗಜಗ್ಗಾಟ ಹೀಗೆ ಅನೇಕ ಕ್ರೀಡಾ ಸ್ಪರ್ಧೆಗಳನ್ನು ಪ್ರಾಯೋಜಿಸಿದ್ದಾರೆ.
ಈ ಸೇವೆಯನ್ನು ಮುಂದಿನ ಎರಡು ವಾರಗಳ ನಂತರವೂ ನೀಡುವ ಆಶಯ ವ್ಯಕ್ತಪಡಿಸಿದ್ದಾರೆ.
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

LEAVE A REPLY

Please enter your comment!
Please enter your name here

fourteen − ten =

Latest news

ಸಿರ್ಸಿಯಲ್ಲಿ ‘ಶ್ರೀ ಮಾರಿಕಾಂಬಾ ಟ್ರೋಫಿ’ ಕ್ರಿಕೆಟ್ ಟೂರ್ನಮೆಂಟ್‌ಗೆ ಭರ್ಜರಿ ಸಿದ್ಧತೆ

ಸಿರ್ಸಿಯಲ್ಲಿ ‘ಶ್ರೀ ಮಾರಿಕಾಂಬಾ ಟ್ರೋಫಿ’ ಕ್ರಿಕೆಟ್ ಟೂರ್ನಮೆಂಟ್‌ಗೆ ಭರ್ಜರಿ ಸಿದ್ಧತೆ ಸಿರ್ಸಿಯ ಶ್ರೀ ಮಾರಿಕಾಂಬಾ ಜಿಲ್ಲಾ ಕ್ರೀಡಾಂಗಣದಲ್ಲಿ Shri Marikamba Trophy ಓಪನ್ ಹಾರ್ಡ್ ಟೆನಿಸ್ ಕ್ರಿಕೆಟ್...

ಹೆಜಮಾಡಿಯಲ್ಲಿ ಸಂಭ್ರಮದೊಂದಿಗೆ ಯಶಸ್ವಿಯಾಗಿ ನಡೆದ “ಅಭರಣ್ GPL ಉತ್ಸವ 2026” – ಸಿಡಿಲಿನ ಸಮರದಲ್ಲಿ Temple Square Puttur ಗೆ ಚಾಂಪಿಯನ್ ಪಟ್ಟ!

ಹೆಜಮಾಡಿಯಲ್ಲಿ ಸಂಭ್ರಮದೊಂದಿಗೆ ಯಶಸ್ವಿಯಾಗಿ ನಡೆದ “ಅಭರಣ್ GPL ಉತ್ಸವ 2026” – ಸಿಡಿಲಿನ ಸಮರದಲ್ಲಿ Temple Square Puttur ಗೆ ಚಾಂಪಿಯನ್ ಪಟ್ಟ! ಹೆಜಮಾಡಿ ಸಮೀಪದ ಶಾನುಭಾಗ...

ಕಟಪಾಡಿಯಲ್ಲಿ ಕ್ರಿಕೆಟ್ ಪ್ರೇರಿತ ಮಿಯಾವಾಕಿ ಅರಣ್ಯ ಯೋಜನೆ ಉದ್ಘಾಟನೆ

ಕಟಪಾಡಿಯಲ್ಲಿ ಕ್ರಿಕೆಟ್ ಪ್ರೇರಿತ ಮಿಯಾವಾಕಿ ಅರಣ್ಯ ಯೋಜನೆ ಉದ್ಘಾಟನೆ ಉಡುಪಿ, ಏಪ್ರಿಲ್ 5, 2026: ಪರಿಸರ ಸಂರಕ್ಷಣೆಗೆ ಹೊಸ ದಿಕ್ಕು ತೋರಿಸುವ ವಿಶಿಷ್ಟ ಪ್ರಯತ್ನವಾಗಿ, ಕ್ರಿಕೆಟ್ ದಂತಕಥೆ...

ಅಮ್ಗೆಲೆ ಅಭರಣ್ GPL ಉತ್ಸವ – 2026: ತಂಡಗಳ ಫಿಕ್ಸ್ಚರ್ಸ್ ಬಿಡುಗಡೆ, ಕಾದಿದ್ದ ಕ್ಷಣಕ್ಕೆ ತೆರೆ

ಅಮ್ಗೆಲೆ ಅಭರಣ್ GPL– 2026: ತಂಡಗಳ ಫಿಕ್ಸ್ಚರ್ಸ್ ಬಿಡುಗಡೆ, ಕಾದಿದ್ದ ಕ್ಷಣಕ್ಕೆ ತೆರೆ ಜಿಎಸ್‌ಬಿ ಕ್ರೀಡಾಭಿಮಾನಿಗಳು ಆತುರದಿಂದ ಕಾಯುತ್ತಿದ್ದ ಕ್ಷಣ ಕೊನೆಗೂ ಬಂದಿದೆ. *ಅಮ್ಗೆಲೆ ಅಭರಣ್ GPL...
- Advertisement -spot_imgspot_img

ಮುಂಬೈಯಲ್ಲಿ ಮಾಜಿ ರಣಜಿ ಕ್ರಿಕೆಟಿಗ ಪ್ರಕಾಶ್ ಕರ್ಕೇರಾ ನಿಧನ

ಮುಂಬೈಯಲ್ಲಿ ಮಾಜಿ ರಣಜಿ ಕ್ರಿಕೆಟಿಗ ಪ್ರಕಾಶ್ ಕರ್ಕೇರಾ ನಿಧನ ರೈಲ್ವೇಸ್ ಪರವಾಗಿ ರಣಜಿ ಟ್ರೋಫಿಯಲ್ಲಿ ಪ್ರತಿನಿಧಿಸಿದ್ದ ಮಾಜಿ ಕ್ರಿಕೆಟಿಗ ಪ್ರಕಾಶ್ ಕರ್ಕೇರಾ ಅವರು ಹೃದಯಾಘಾತದಿಂದ ಮುಂಬೈನ ಮುಲುಂಡ್‌ನಲ್ಲಿರುವ...

ಅಳಿಯೂರು ಪ್ರೀಮಿಯರ್ ಲೀಗ್ (APL-2026) ಗೆ ಸಜ್ಜಾಗಿದೆ ಅಳಿಯೂರು

ಅಳಿಯೂರು ಪ್ರೀಮಿಯರ್ ಲೀಗ್ (APL-2026) ಗೆ ಸಜ್ಜಾಗಿದೆ ಅಳಿಯೂರು ಫ್ರೆಂಡ್ಸ್ ಅಳಿಯೂರು ವತಿಯಿಂದ ಮೊದಲ ಬಾರಿಗೆ ಅಳಿಯೂರು ಪ್ರೀಮಿಯರ್ ಲೀಗ್ (APL-2026) – ಸೀಸನ್ 1 ಆಯೋಜಿಸಲಾಗಿದೆ....

Must read

- Advertisement -spot_imgspot_img

You might also likeRELATED
Recommended to you