#covid19ಶ್ರೀ ವರಲಕ್ಷ್ಮೀ ಚಾರಿಟೇಬಲ್ ಟ್ರಸ್ಟ್ ನಿಂದ ಕೊರೋನಾ ವಾರಿಯರ್ಸ್ ಯವರಿಗೆ ದಿನಸಿ...

ಶ್ರೀ ವರಲಕ್ಷ್ಮೀ ಚಾರಿಟೇಬಲ್ ಟ್ರಸ್ಟ್ ನಿಂದ ಕೊರೋನಾ ವಾರಿಯರ್ಸ್ ಯವರಿಗೆ ದಿನಸಿ ಕಿಟ್, ಮಾಸ್ಕ್, ಸ್ಯಾನಿಟೈಸರ್ ವಿತರಣೆ

-

- Advertisment -spot_img
ಬೈಂದೂರು : ಇಲ್ಲಿನ ಉಪ್ಪುಂದ ಶ್ರೀ ವರಲಕ್ಷ್ಮೀ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಬೈಂದೂರು ಭಾಗದ ಆಶಾ ಕಾರ್ಯಕರ್ತರು, ಆರೋಗ್ಯ ಕಾರ್ಯಕರ್ತರು, ಅಂಗನವಾಡಿ ನೌಕರರು ಹಾಗೂ ಪೌರಕಾರ್ಮಿಕರಿಗೆ ದಿನಸಿ ಸಾಮಾಗ್ರಿಗಳು, ಸ್ಯಾನಿಟೈಸರ್ ಹಾಗೂ ಮಾಸ್ಕ್ ವಿತರಿಸಲಾಯಿತು.
ಭಾನುವಾರು ಬೈಂದೂರು ರೋಟರಿ ಕ್ಲಬ್’ನಲ್ಲಿ ಕಿಟ್ ವಿತರಿಸಿ  ಉಡುಪಿ ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು ದಿನಸಿ ಸಾಮಾಗ್ರಿಗಳ ಕಿಟ್ ವಿತರಿಸಿ ಮಾತನಾಡಿ ಕೋವಿಡ್ ಸಂಕಷ್ಟದ ಸಮಯದಲ್ಲಿ ಜನರಿಗೆ ಸ್ಪಂದಿಸುತ್ತಿರುವುದು ಬಹುದೊಡ್ಡ ಕಾರ್ಯ. ಟ್ರಸ್ಟ್ ಮೂಲಕ ಮನೆ ನಿರ್ಮಾಣ, ಆರ್ಥಿಕ ಸಹಕಾರವನ್ನು ನಿರಂತರವಾಗಿ ಮಾಡುತ್ತಿರುವುದು ಶ್ಲಾಘನೀಯವಾದುದು. ಆಶಾ ಕಾರ್ಯಕರ್ತರು ಹಾಗೂ ಆರೋಗ್ಯ ಕಾರ್ಯಕರ್ತರು ನಿರಂತರವಾಗಿ ಕೋವಿಡ್ ನಿಯಂತ್ರಣದಲ್ಲಿ ಶ್ರಮಿಸುತ್ತಿದ್ದಾರೆ.
ಶ್ರೀ ವರಲಕ್ಷ್ಮೀ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಗೋವಿಂದ ಬಾಬು ಪೂಜಾರಿ ಅವರು ಮಾತನಾಡಿ ಟ್ರಸ್ಟ್ ಮೂಲಕ ಹತ್ತಾರು ಸೇವಾ ಕಾರ್ಯಗಳನ್ನು ಮಾಡಿಕೊಂಡು ಬರಲಾಗುತ್ತಿದೆ. ಕೋವಿಡ್ ಸಮಯದಲ್ಲಿ ಸಂಕಷ್ಟದಲ್ಲಿರುವವರಿಗೆ ಸ್ಪಂದಿಸುವುದು ನಮ್ಮ ಕರ್ತವ್ಯವಾಗಿದ್ದು ಇಂದಿನಿಂದ ಕೆಲವು ದಿನಗಳ ಕಾಲ ಪ್ರತಿ ಗ್ರಾಮದಲ್ಲಿಯೂ ದಿನಸಿ ಕಿಟ್ ವಿತರಿಸಲಿದ್ದೇವೆ ಎಂದರು.
100ಕ್ಕೂ ಅಧಿಕ ಕಿಟ್ ವಿತರಿಸಲಾಯಿತು.
ಈ ಸಂದರ್ಭ ಬೈಂದೂರು ತಹಶಿಲ್ದಾರ್ ಶೋಭಾಲಕ್ಷ್ಮೀ ಎಚ್. ಎಸ್., ಬೈಂದೂರು ಎಸ್ಐ ಸಂಗೀತಾ, ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ ನವೀನ್, ಗುರುರಾಜ ಪಂಜು ಪೂಜಾರಿ ಮೊದಲಾದವರು ಇದ್ದರು.
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

LEAVE A REPLY

Please enter your comment!
Please enter your name here

twenty − nine =

Latest news

ಕೋಲ್ನಾಡ್‌ನಲ್ಲಿ LK ಕ್ರಿಕೆಟ್ ಪ್ರೀಮಿಯರ್ ಲೀಗ್ – ಸೀಸನ್ 2

ಕೋಲ್ನಾಡ್‌ನಲ್ಲಿ LK ಕ್ರಿಕೆಟ್ ಪ್ರೀಮಿಯರ್ ಲೀಗ್ – ಸೀಸನ್ 2 ಕೋಲ್ನಾಡ್ ಮೈದಾನದಲ್ಲಿ ಫೆಬ್ರವರಿ 14 ಮತ್ತು 15ರಂದು LK ಕ್ರಿಕೆಟ್ ಪ್ರೀಮಿಯರ್ ಲೀಗ್ – ಸೀಸನ್...

ಮುಂಬೈ ನೆಲದಲ್ಲಿ ಕರ್ನಾಟಕದ ಐತಿಹಾಸಿಕ ವಿಜಯ

ಮುಂಬೈ ನೆಲದಲ್ಲಿ ಕರ್ನಾಟಕದ ಐತಿಹಾಸಿಕ ವಿಜಯ ರಣಜಿ ಟ್ರೋಫಿ ಕ್ರಿಕೆಟ್ ಎಂದರೆ ಮುಂಬೈಗೆ ಪ್ರತಿಷ್ಠೆಯ ಪ್ರಶ್ನೆ. 42 ಬಾರಿ ಚಾಂಪಿಯನ್ ಆಗಿರುವ ತಂಡದ ಎದುರು ಅವರದ್ದೇ ಮೈದಾನದಲ್ಲಿ...

ಟಿ20 ವಿಶ್ವಕಪ್‌ಗೆ ಭಾರತಕ್ಕೆ ಭರ್ಜರಿ ಆರಂಭ: ಅಮೆರಿಕ ವಿರುದ್ಧ 29 ರನ್ ಜಯ

ಟಿ20 ವಿಶ್ವಕಪ್‌ಗೆ ಭಾರತಕ್ಕೆ ಭರ್ಜರಿ ಆರಂಭ: ಅಮೆರಿಕ ವಿರುದ್ಧ 29 ರನ್ ಜಯ 2026ರ ಟಿ20 ವಿಶ್ವಕಪ್‌ನಲ್ಲಿ ಟೀಮ್ ಇಂಡಿಯಾ ತನ್ನ ಗೆಲುವಿನ ಅಭಿಯಾನವನ್ನು ಭರ್ಜರಿಯಾಗಿ ಆರಂಭಿಸಿದೆ....

ಕರಾವಳಿ ಸ್ಪೋರ್ಟ್ಸ್ ಕ್ಲಬ್, ಕುಮಟಾ ಆಯೋಜನೆಯ MIDMAC ಟ್ರೋಫಿ ಸೀಸನ್–2 ಫೈನಲ್‌ನಲ್ಲಿ ಭಟ್ಕಲ್ ಫ್ರೆಂಡ್ಸ್ ಭರ್ಜರಿ ಜಯ; ನಿಹಾಲ್ XI ಮೇಲೆ 50 ರನ್‌ಗಳ ಗೆಲುವು

ಕರಾವಳಿ ಸ್ಪೋರ್ಟ್ಸ್ ಕ್ಲಬ್, ಕುಮಟಾ ಆಯೋಜನೆಯ MIDMAC ಟ್ರೋಫಿ ಸೀಸನ್–2 ಫೈನಲ್‌ನಲ್ಲಿ ಭಟ್ಕಲ್ ಫ್ರೆಂಡ್ಸ್ ಭರ್ಜರಿ ಜಯ; ನಿಹಾಲ್ XI ಮೇಲೆ 50 ರನ್‌ಗಳ ಗೆಲುವು ಕರಾವಳಿ...
- Advertisement -spot_imgspot_img

ಕರಾವಳಿ ಸ್ಪೋರ್ಟ್ಸ್ ಕ್ಲಬ್ ಕುಮಟಾ ಅರ್ಪಿಸುವ MIDMAC TROPHY SEASON-2 ಸೆಮಿಫೈನಲ್ ಪಂದ್ಯಗಳಲ್ಲಿ ಭಟ್ಕಲ್ ಫ್ರೆಂಡ್ಸ್ ಹಾಗೂ ನಿಹಾಲ್ XI ಗೆ ಜಯ

ಕರಾವಳಿ ಸ್ಪೋರ್ಟ್ಸ್ ಕ್ಲಬ್ ಕುಮಟಾ ಅರ್ಪಿಸುವ MIDMAC TROPHY SEASON-2 ಸೆಮಿಫೈನಲ್ ಪಂದ್ಯಗಳಲ್ಲಿ ಭಟ್ಕಲ್ ಫ್ರೆಂಡ್ಸ್ ಹಾಗೂ ನಿಹಾಲ್ XI ಗೆ ಜಯ (Sports Kannada Live...

ಶಿರಾಲಿಯಲ್ಲಿ ನಡೆಯಲಿದೆ ನಾಮಧಾರಿ ಪ್ರೀಮಿಯರ್ ಲೀಗ್–2026 ಕ್ರಿಕೆಟ್ ಪಂದ್ಯಾಟ

ಶಿರಾಲಿಯಲ್ಲಿ ನಡೆಯಲಿದೆ ನಾಮಧಾರಿ ಪ್ರೀಮಿಯರ್ ಲೀಗ್–2026 ಕ್ರಿಕೆಟ್ ಪಂದ್ಯಾಟ ನಾಮಧಾರಿ ಸಮುದಾಯದ ಕ್ರೀಡಾಭಿಮಾನಿಗಳಿಗೆ ವಿಶೇಷ ಉತ್ಸವವಾಗಿ ರೂಪುಗೊಂಡಿರುವ ನಾಮಧಾರಿ ಪ್ರೀಮಿಯರ್ ಲೀಗ್ – 2026 (NPL-2026) ಕ್ರಿಕೆಟ್...

Must read

- Advertisement -spot_imgspot_img

You might also likeRELATED
Recommended to you