ಕ್ರಿಕೆಟ್GSB ಯ ಬಹು ನಿರೀಕ್ಷಿತ ಅತಿ ದೊಡ್ಡ ಟೆನಿಸ್ ಬಾಲ್...

GSB ಯ ಬಹು ನಿರೀಕ್ಷಿತ ಅತಿ ದೊಡ್ಡ ಟೆನಿಸ್ ಬಾಲ್ ಕ್ರಿಕೆಟ್ ಲೀಗ್. ಜಿ ಪಿ ಲ್ ಸೀಸನ್ 7ಕ್ಕೆ ಕೌಂಟ್‌ಡೌನ್ ಪ್ರಾರಂಭ

-

- Advertisment -spot_img
ಮಂಗಳೂರು:  ಮಂಗಳೂರಿನ ಕೊಡಿಯಾಲ್ ಸ್ಪೋರ್ಟ್ಸ್ ಅಸೋಸಿಯೇಷನ್  ವತಿಯಿಂದ ಹೊನಲು ಬೆಳಕಿನ ಟೆನಿಸ್ ಬಾಲ್ ಕ್ರಿಕೆಟ್ ಪಂದ್ಯಾವಳಿ ‘ ಜಿ.ಸ್.ಬಿ  ಪ್ರೀಮಿಯರ್ ಲೀಗ್ 2023  ಫೆ. 10,11  ಹಾಗೂ 12 ರಂದು ಮಂಗಳೂರಿನ ಸಹ್ಯಾದ್ರಿ ಕಾಲೇಜು ಮೈದಾನದಲ್ಲಿ ನಡೆಯಲಿದೆ. ಇದು GSB ಸಮಾಜ ಭಾಂದವರಿಗಾಗಿ ವಾರ್ಷಿಕವಾಗಿ ನಡೆಯುವ  ಹಗಲು ರಾತ್ರಿ  ಹರಾಜು ಆಧಾರಿತ ಜಿ ಪಿ ಲ್ ಕ್ರಿಕೆಟ್ ಪಂದ್ಯಾವಳಿ.  ಇದು GPL ನ 7ನೆಯ ಆವೃತ್ತಿಯ ಟೂರ್ನಮೆಂಟ್ ಆಗಿದ್ದು ಕ್ರಿಕೆಟ್ ಪಂದ್ಯಾಟಕ್ಕೆ ದಕ್ಷಿಣ ಕನ್ನಡ, ಉಡುಪಿ , ಉತ್ತರ ಕನ್ನಡ ಸಹಿತ ರಾಜ್ಯದ ವಿವಿಧೆಡೆ ಹಾಗೂ ಹೊರರಾಜ್ಯ ಮುಂಬೈನಿಂದ ತಂಡಗಳು ಹೆಸರು ನೊಂದಾಯಿಸಿದ್ದು 16 ತಂಡಗಳು ಆಗಮಿಸಲಿವೆ.
ಲೀಗ್ ಕಮ್ ನಾಕ್ ಔಟ್ ಮಾದರಿಯ ಪಂದ್ಯಾಕೂಟ ಇದಾಗಿದ್ದು ಪಂದ್ಯಾಕೂಟದ ಚಾಂಪಿಯನ್ ತಂಡಕ್ಕೆ ನಗದು ಹಾಗು ಪ್ರತಿಷ್ಠಿತ  ಜಿ ಪಿ ಲ್   ಟ್ರೋಫಿ ಸಿಗಲಿದೆ. ದ್ವಿತೀಯ ಸ್ಥಾನ ಪಡಕೊಳ್ಳುವ ತಂಡಕ್ಕೆ ನಗದು ಹಾಗು ರನ್ನರ್ ಅಪ್ ಟ್ರೋಫಿ ದೊರಕಲಿದೆ.ಸೆಮಿಫೈನಲ್ ಪರಾಜಿತ ತಂಡಗಳ ನಡುವೆ ತ್ರತೀಯ ಸ್ಥಾನಕ್ಕೆ ಮ್ಯಾಚ್ ನಡೆಯಲಿದೆ. ಬೆಸ್ಟ್ ಬೌಲರ್ , ಬೆಸ್ಟ್ ಬ್ಯಾಟ್ಸಮನ್  , ಮ್ಯಾನ್ ಆಫ್   ದಿ ಮ್ಯಾಚ್ ಇಂತಹ  ವೈಯುಕ್ತಿಕ ಪ್ರಶಸ್ತಿಗಳು ಸಿಗಲಿವೆ.   ಸರಣಿ ಶ್ರೇಷ್ಠ ಆಟಗಾರನಿಗೆ ಆಕರ್ಷಕ ಬೈಕ್ ನೀಡಲಾಗುವುದು.
ಆರ್ಚ್ ಫಾರ್ಮಲಾಬ್ಸ್ ಲಿಮಿಟೆಡ್ GPL 2023 ರ  ಶೀರ್ಷಿಕೆ ಪ್ರಾಯೋಜಕರು ಆಗಿರುತ್ತಾರೆ. ಯೂಥ್ ಆಫ್ ಜಿ.ಸ್.ಬಿ ಪಂದ್ಯಾಟದ ನೇರ ಪ್ರಸಾರವನ್ನು ಬಿತ್ತರಿಸಲಿದೆ. ಪಂದ್ಯಾಕೂಟದಲ್ಲಿ  ತೃತೀಯ ಅಂಪೈರ್ ತೀರ್ಮಾನದ ಸೌಲಭ್ಯವಿದೆ. ಪ್ರತೀ ಟೀಮಿಗೂ ಪ್ರತ್ಯೇಕ ಡ್ರೆಸ್ ಕೋಡ್ ಹಾಗೂ ಅನುಭವಿಗಳಿಂದ ಕೊಂಕಣಿ, ಹಿಂದಿ ಮತ್ತು ಇಂಗ್ಲಿಷ್ ಕಾಮೆಂಟರಿ, ಸುಸಜ್ಜಿತ ವೀಕ್ಷಕರ ಗ್ಯಾಲರಿ, ಎಲ್.ಇ.ಡಿ ಪರದೆ, ಅನಿಯಮಿತ ಆಹಾರ ಹಾಗೂ ಪಾರ್ಕಿಂಗ್ ವ್ಯವಸ್ಥೆಯಿರಲಿದೆ.  ಸಂಘಟಕರು ಕರಾವಳಿ ಕರ್ನಾಟಕದ ಅತ್ಯಂತ ವೈವಿಧ್ಯಮಯ ಖಾದ್ಯಗಳನ್ನು GSB  ಪ್ರೇಕ್ಷಕರಿಗೆ ಉಚಿತವಾಗಿ ನೀಡಲಿದ್ದಾರೆ.
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

LEAVE A REPLY

Please enter your comment!
Please enter your name here

5 × 4 =

Latest news

ಕರೂಣ್ ನಾಯರ್ ಗೆ ಕೋಸ್ಟಲ್ ಕಿಂಗ್ಸ್ ಮಂಗಳೂರು ತಂಡದ ನಾಯಕತ್ವ

ಕರೂಣ್ ನಾಯರ್ ಗೆ ಕೋಸ್ಟಲ್ ಕಿಂಗ್ಸ್ ಮಂಗಳೂರು ತಂಡದ ನಾಯಕತ್ವ ಮಹಾರಾಜ ಟ್ರೋಫಿ ಕೆಎಸ್ಸಿಎ ಟಿ20 ಸೀಸನ್-5ಕ್ಕೆ ಸಜ್ಜಾದ ಫ್ರಾಂಚೈಸಿ; ತಂಡದ ಜೆರ್ಸಿ, ಗೀತೆ ಹಾಗೂ ನಾಯಕತ್ವ...

ಮಹಿಳಾ ಟಿ20 ವಿಶ್ವಕಪ್: ಪಾಕಿಸ್ತಾನವನ್ನು 64 ರನ್‌ಗಳಿಂದ ಸೋಲಿಸಿದ ಭಾರತ – ಇತಿಹಾಸ ನಿರ್ಮಿಸಿದ ದೀಪ್ತಿ ಶರ್ಮಾ

  ಮಹಿಳಾ ಟಿ20 ವಿಶ್ವಕಪ್: ಪಾಕಿಸ್ತಾನವನ್ನು 64 ರನ್‌ಗಳಿಂದ ಸೋಲಿಸಿದ ಭಾರತ - ಇತಿಹಾಸ ನಿರ್ಮಿಸಿದ ದೀಪ್ತಿ ಶರ್ಮಾ ಬ್ರಿಟನ್‌ನ ಬರ್ಮಿಂಗ್‌ಹ್ಯಾಮ್‌ನ ಎಡ್ಜ್‌ಬಾಸ್ಟನ್‌ನಲ್ಲಿ ನಡೆದ ಈ ಪಂದ್ಯದಲ್ಲಿ, ಭಾರತ...

ವಿಶ್ವಕರ್ಮ ಪ್ರೀಮಿಯರ್ ಲೀಗ್ 2026ಕ್ಕೆ ಮಧು ಡೈಮಂಡ್ಸ್ ಟೈಟಲ್ ಸ್ಪಾನ್ಸರ್

ವಿಶ್ವಕರ್ಮ ಪ್ರೀಮಿಯರ್ ಲೀಗ್ 2026ಕ್ಕೆ ಮಧು ಡೈಮಂಡ್ಸ್ ಟೈಟಲ್ ಸ್ಪಾನ್ಸರ್ ಚಿತ್ರದುರ್ಗ: ಕರ್ನಾಟಕ ರಾಜ್ಯದ ವಿಶ್ವಕರ್ಮ ಸಮುದಾಯದ ಕ್ರೀಡಾ ಪ್ರತಿಭೆಗಳನ್ನು ಒಂದೇ ವೇದಿಕೆಯಲ್ಲಿ ಒಗ್ಗೂಡಿಸುವ ಮಹತ್ವಾಕಾಂಕ್ಷೆಯ ಕ್ರಿಕೆಟ್ ಮಹಾಕೂಟ ವಿಶ್ವಕರ್ಮ...

16 ವರ್ಷಗಳ ಸಾಹಸಗಾಥೆ ಅಂತ್ಯಗೊಂಡಿದೆ! ಡಬ್ಲ್ಯೂಟಿಸಿ ಹೀರೋ ಕೇನ್ ವಿಲಿಯಮ್ಸನ್ ಅಂತರರಾಷ್ಟ್ರೀಯ ಕ್ರಿಕೆಟ್‌ನಿಂದ ನಿವೃತ್ತಿ!

16 ವರ್ಷಗಳ ಸಾಹಸಗಾಥೆ ಅಂತ್ಯಗೊಂಡಿದೆ! ಡಬ್ಲ್ಯೂಟಿಸಿ ಹೀರೋ ಕೇನ್ ವಿಲಿಯಮ್ಸನ್ ಅಂತರರಾಷ್ಟ್ರೀಯ ಕ್ರಿಕೆಟ್‌ನಿಂದ ನಿವೃತ್ತಿ! ನ್ಯೂಜಿಲೆಂಡ್ ಕ್ರಿಕೆಟ್ ಇತಿಹಾಸದಲ್ಲಿ ಅತಿ ಹೆಚ್ಚು ರನ್ ಗಳಿಸಿದ ದಾಖಲೆಯನ್ನು ಕೇನ್...
- Advertisement -spot_imgspot_img

ಮಹಿಳಾ ಟಿ-20 ವಿಶ್ವಕಪ್‌ಗೆ ಕ್ಷಣಗಣನೆ: ವಿಶ್ವದ ಕಣ್ಣುಗಳು ಇಂಗ್ಲೆಂಡ್ ಕಡೆ

ಮಹಿಳಾ ಟಿ-20 ವಿಶ್ವಕಪ್‌ಗೆ ಕ್ಷಣಗಣನೆ: ವಿಶ್ವದ ಕಣ್ಣುಗಳು ಇಂಗ್ಲೆಂಡ್ ಕಡೆ ಕ್ರಿಕೆಟ್ ಅಭಿಮಾನಿಗಳು ಬಹು ನಿರೀಕ್ಷೆಯಿಂದ ಕಾಯುತ್ತಿರುವ ಐಸಿಸಿ ಮಹಿಳಾ ಟಿ-20 ವಿಶ್ವಕಪ್ 2026 ಟೂರ್ನಿಯು ಜೂನ್...

ಮಹಾರಾಜ ಟ್ರೋಫಿ 2026: ಕರ್ನಾಟಕ ಕ್ರಿಕೆಟ್‌ಗೆ ಮತ್ತೊಂದು ಹಬ್ಬ

  ಮಹಾರಾಜ ಟ್ರೋಫಿ 2026: ಕರ್ನಾಟಕ ಕ್ರಿಕೆಟ್‌ಗೆ ಮತ್ತೊಂದು ಹಬ್ಬ Maharaja Trophy: ಜೂನ್‌ 20 ರಿಂದ ಟೂರ್ನಿ ಆರಂಭ, ಬೆಂಗಳೂರು, ಮೈಸೂರು, ಹುಬ್ಬಳ್ಳಿಯಲ್ಲಿ ಪಂದ್ಯ ಆಯೋಜನೆ ಐದನೇ ಆವೃತ್ತಿಯ...

Must read

- Advertisement -spot_imgspot_img

You might also likeRELATED
Recommended to you