Categories
ಕ್ರಿಕೆಟ್

ರಾಷ್ಟ್ರೀಯ ಮಟ್ಟದ ಟೆನ್ನಿಸ್ ಬಾಲ್ ಕ್ರಿಕೆಟ್ ಪಂದ್ಯಾಕೂಟದಲ್ಲಿ ಗುಜರಾತ್ ತಂಡ 5 ಲಕ್ಷ ನಗದು ಸಹಿತ ಆಕರ್ಷಕ ಟ್ರೋಫಿ

ಮಧ್ಯಪ್ರದೇಶದ ಭೋಪಾಲ್ ನಲ್ಲಿ ನಡೆದ ರಾಷ್ಟ್ರೀಯ ಮಟ್ಟದ ಟೆನ್ನಿಸ್ ಬಾಲ್ ಕ್ರಿಕೆಟ್ ಪಂದ್ಯಾಕೂಟದಲ್ಲಿ  ಚಾಂಪಿಯನ್ ತಂಡವಾಗಿ ಹೊರ ಹೊಮ್ಮಿದ ಗುಜರಾತ್ ತಂಡ 5 ಲಕ್ಷ ನಗದು ಸಹಿತ ಆಕರ್ಷಕ ಟ್ರೋಫಿಯನ್ನು ಪಡೆದುಕೊಂಡಿತು.

ಮುಂಬಯಿ,ನಾಗಪುರ,ವಿದರ್ಭ ಸಹಿತ ರಾಷ್ಟ್ರದ ನಾನಾಭಾಗಗಳಿಂದ ಪ್ರತಿಷ್ಠಿತ ತಂಡಗಳು ಹಣಾಹಣಿಗಿಳಿದಿದ್ದವು.

ಚಾಂಪಿಯನ್ ಗುಜರಾತ್ ತಂಡದಲ್ಲಿ ಕರ್ನಾಟಕದ ಪ್ರತಿಷ್ಠಿತ ತಂಡದ ಮೂವರು ಆಟಗಾರರಲ್ಲಿ ಡ್ಯಾಶಿಂಗ್ ಆಲ್ ರೌಂಡರ್ ಫ್ರೆಂಡ್ಸ್ ನ ಸಾಗರ್ ಭಂಡಾರಿ ಫೈನಲ್ ನಲ್ಲಿ ಅಮೂಲ್ಯ 21 ರನ್ ಗಳಿಸಿದರೆ, ಜೈ ಕರ್ನಾಟಕದ ಸ್ಪೀಡ್ ಸ್ಟಾರ್ ಮಾರ್ಕ್ ಮಹೇಶ್ 2 ಓವರ್ ನಲ್ಲಿ 1 ಮೇಡನ್ ಸಹಿತ 2 ವಿಕೆಟ್ ಹಾಗೂ ಮೈಟಿಯ ಸ್ಪಿನ್ ಗಾರುಡಿಗ ಈಲು 2 ವಿಕೆಟ್ ಪಡೆದು ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದ್ದರು.

ಆರ್.ಕೆ.ಆಚಾರ್ಯ ಕೋಟ

By ಕೋಟ ರಾಮಕೃಷ್ಣ ಆಚಾರ್ಯ

ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ
ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

Leave a Reply

Your email address will not be published.

one × 3 =