Site icon SportsKannada ಸ್ಪೋರ್ಟ್ಸ್ ಕನ್ನಡ

ವೆಂಕಟರಮಣ ಪಿತ್ರೋಡಿ ಸಂಸ್ಥೆಯಿಂದ ಉದ್ಯಾವರ ಸರಕಾರಿ ಶಾಲೆಗೆ ಶುದ್ಧ ಕುಡಿಯುವ ನೀರಿನ ಘಟಕ ಹಸ್ತಾಂತರ

ವೆಂಕಟರಮಣ ಪಿತ್ರೋಡಿ ಸಂಸ್ಥೆಯಿಂದ ಉದ್ಯಾವರ ಸರಕಾರಿ ಶಾಲೆಗೆ ಶುದ್ಧ ಕುಡಿಯುವ ನೀರಿನ ಘಟಕ ಹಸ್ತಾಂತರ

ಉಡುಪಿ-ವೆಂಕಟರಮಣ ಸ್ಪೋರ್ಟ್ಸ್ & ಕಲ್ಚರಲ್ ಕ್ಲಬ್ ಪಿತ್ರೋಡಿ(ರಿ) ಇವರ ವತಿಯಿಂದ ಉದ್ಯಾವರ ವೆಸ್ಟ್ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಗೆ CA ಮಲ್ಲೇಶ್ ಕುಮಾರ್ ಸ್ಮರಣಾರ್ಥ ಶುದ್ಧ ಕುಡಿಯುವ ನೀರಿನ ಘಟಕ ಹಸ್ತಾಂತರಿಸಲಾಯಿತು.

ತದ ನಂತರ ಶಾಲಾ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಸಂಸ್ಥೆಯ ಅಧ್ಯಕ್ಷ ಸಂದೀಪ್ ಕುಮಾರ್ “ವೆಂಕಟರಮಣ ಸಂಸ್ಥೆ ಕಳೆದ 37 ವರ್ಷಗಳಿಂದ ಕ್ರೀಡೆ,ಧಾರ್ಮಿಕ,ಸಾಂಸ್ಕೃತಿಕ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸುತ್ತಾ ಬಂದಿದೆ.ಮುಂದೆಯೂ ಕೂಡ ಸಮಾಜಕ್ಕೆ ಅಗತ್ಯ ಸೇವೆಗಳನ್ನು ಪೂರೈಸಲು ಸಿದ್ಧರಿದ್ದೇವೆ,ಶಾಲಾ ವಿದ್ಯಾರ್ಥಿಗಳು ಶುದ್ಧ ಕುಡಿಯುವ ನೀರಿನ ಘಟಕದ ಸದ್ವಿನಿಯೋಗ ಪಡಿಸಿಕೊಳ್ಳಬೇಕು,ಸಮಾಜದಲ್ಲಿ ಉತ್ತಮ ಪ್ರಜೆಗಳಾಗಿ ಬಾಳಬೇಕು” ಎಂದರು.

 

ಈ ಸಂದರ್ಭ GHS ಉದ್ಯಾವರ ಪ್ರಭಾರ ಮುಖ್ಯೋಪಾಧ್ಯಾಯರಾದ ಶ್ರೀಮತಿ ಪ್ರಭಾ,GJC ಉದ್ಯಾವರ ಪ್ರಭಾರ ಪ್ರಾಂಶುಪಾಲ ದಿನೇಶ್ ಕುಮಾರ್,ಉದ್ಯಾವರ ಗ್ರಾಮ ಪಂಚಾಯತ್ ಸದಸ್ಯರು ಹಾಗೂ ವೆಂಕಟರಮಣ ಸಂಸ್ಥೆ ಗೌರವ ಸಲಹೆಗಾರರಾದ ಜಿತೇಂದ್ರ ಶೆಟ್ಟಿ,
SDMC ಅಧ್ಯಕ್ಷರಾದ ಹರಿಶ್ಚಂದ್ರ, ಗೌರವಾಧ್ಯಕ್ಷ ಗೋಪಾಲ್ ಅಮೀನ್,ಸಂಸ್ಥೆಯ ಉಪಾಧ್ಯಕ್ಷ ವಿಜಯ್ ಕೋಟ್ಯಾ‌ನ್,ಗೌರವ ಸಲಹೆಗಾರರಾದ ಸತೀಶ್ ಕುಂದರ್,ಉಮೇಶ್ ಕರ್ಕೇರ,ಲೋಕೇಶ್,ಪ್ರಕಾಶ್ ಶೆಟ್ಟಿ,ಗಂಗಾಧರ ಕರ್ಕೇರ,ರತನ್ ಸುರಭಿ,ಸ್ಪೋರ್ಟ್ಸ್ ಕನ್ನಡ ಮುಖ್ಯಸ್ಥ ಕೋಟ ರಾಮಕೃಷ್ಣ ಆಚಾರ್ ಮತ್ತು ವೆಂಕಟರಮಣ ಸಂಸ್ಥೆಯ ಪದಾಧಿಕಾರಿಗಳು ಮತ್ತು ಸದಸ್ಯರು ಉಪಸ್ಥಿತರಿದ್ದರು.

ಶಿಕ್ಷಕಿ ಶ್ರೀಮತಿ ಸುಜಾತ ದಾನಿಗಳಿಗೆ ಸ್ಮರಣಿಕೆ ವಿತರಿಸಿದರೆ,ಸುಜಲಾ ಕಾರ್ಯಕ್ರಮ ನಿರೂಪಿಸಿದರು.

ಚಿತ್ರಕೃಪೆ-ರತನ್ ಸುರಭಿ.

Exit mobile version