8.8 C
London
Tuesday, April 23, 2024
Homeಭರವಸೆಯ ಬೆಳಕುಆರು ಬಾರಿ ರಾಷ್ಟ್ರ ಮಟ್ಟವನ್ನು ಪ್ರತಿನಿಧಿಸಿರುವ ಹೆಮ್ಮೆಯ ಕ್ರೀಡಾ ಸಾಧಕಿ ಹರ್ಷಿಣಿ ಶೆಟ್ಟಿ ಬೆಳ್ತಂಗಡಿ

ಆರು ಬಾರಿ ರಾಷ್ಟ್ರ ಮಟ್ಟವನ್ನು ಪ್ರತಿನಿಧಿಸಿರುವ ಹೆಮ್ಮೆಯ ಕ್ರೀಡಾ ಸಾಧಕಿ ಹರ್ಷಿಣಿ ಶೆಟ್ಟಿ ಬೆಳ್ತಂಗಡಿ

Date:

Related stories

Reject ಪೀಸ್‌ಗಳು ವಾಪಸ್ ಎದ್ದು ಬಂದ ಕಥೆ..!

ಒಬ್ಬ by mistake ಪಂಜಾಬ್ ಕಿಂಗ್ಸ್ ತಂಡ ಸೇರಿದ್ದವ. ಇನ್ನೊಬ್ಬ ತನ್ನ...

ಇಂದು ವಿಶ್ವದ ಅತ್ಯಂತ ಪ್ರೀತಿಪಾತ್ರ ಕ್ರಿಕೆಟಿಗ ಧೋನಿಯ ಕೊನೆಯ ಪಂದ್ಯ..

ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯಲಿರುವ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಮುಂಬೈ...

T20 ವಿಶ್ವಕಪ್‌ನಲ್ಲಿ ಭಾರತದ ವಿಕೆಟ್‌ಕೀಪರ್ ಯಾರು? 5 ಆಟಗಾರರು ರೇಸ್ ನಲ್ಲಿ

ಐಪಿಎಲ್  ನಂತರ ಟಿ20 ವಿಶ್ವಕಪ್ ಆಡಬೇಕಿದೆ. ಈ ಮೆಗಾ  ಟೂರ್ನಿಯನ್ನು ಜೂನ್‌ನಲ್ಲಿ...

ಇಂತಹ ಒಬ್ಬ ಆಟಗಾರನನ್ನು RCB ತಯಾರು ಮಾಡಿದೆಯೇ..?

ರಿಯಾನ್ ಪರಾಗ್’ನಂಥವರು ಕರ್ನಾಟಕದಲ್ಲಿ ಅದೆಷ್ಟು ಹುಡುಗರಿದ್ದರು..! ಈಗಲೂ ಇದ್ದಾರೆ.. ಆದರೆ ಅವರೆಲ್ಲಾ ಐಪಿಎಲ್’ನಲ್ಲಿ...

RCB ಫ್ರಾಂಚೈಸಿಗೆ ಕನ್ನಡಿಗರ ಮೇಲಿರುವುದು ನಿರ್ಲಕ್ಷ್ಯವಲ್ಲ, ಅಲರ್ಜಿ..!

ನಾಲ್ಕೇ ನಾಲ್ಕು ದಿನಗಳ ಹಿಂದೆ..  4 ಓವರ್’ಗಳಲ್ಲಿ 23 ರನ್, ಒಂದು...
spot_imgspot_img
ಸಾಧಿಸಬೇಕೆಂಬ ಛಲವಿದ್ದವನು ಸಾಧನೆಯ ಹಾದಿಯಲ್ಲಿ ಕೇಳಿ ಬರುವ ಕೊಂಕು ಮಾತುಗಳ ಕಡೆಗೆ ಲಕ್ಷ್ಯ  ವಹಿಸದೆ ತಮ್ಮ ಗುರಿಯತ್ತ ಕಠಿಣ ಶ್ರಮ ವಹಿಸಬೇಕು.ಇದಕ್ಕೆ ಉದಾಹರಣೆಯಂತೆ ಸಾಧನೆಯ ಹಾದಿಯಲ್ಲಿ ಬೆಳಗುತ್ತಿರುವ ರಾಷ್ಟ್ರ ಮಟ್ಟದ ಪ್ರತಿಭೆ ಹರ್ಷಿಣಿ ಶೆಟ್ಟಿ ಬೆಳ್ತಂಗಡಿ.
           13-12-2000 ರಲ್ಲಿ ರವಿ ಶೆಟ್ಟಿ ಹಾಗೂ ಶಶಿಕಲಾ ಶೆಟ್ಟಿ ದಂಪತಿಗಳ ಪುತ್ರಿಯಾಗಿ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಶಕ್ತಿನಗರದಲ್ಲಿ ಜನಿಸಿದ ಹರ್ಷಿಣಿ ಶೆಟ್ಟಿ ತಮ್ಮ ಪ್ರಾಥಮಿಕ ಶಿಕ್ಷಣವನ್ನು ಸರ್ಕಾರಿ ಪ್ರಾಥಮಿಕ ಶಾಲೆ ಮಾಲಾಡಿಯಲ್ಲಿ ಪೂರ್ಣಗೊಳಿಸಿ ಎಂಟನೇ ತರಗತಿಯನ್ನು ಸರಕಾರಿ ಪ್ರೌಢಶಾಲೆ ಪುಂಜಾಲಕಟ್ಟೆ,ಒಂಭತ್ತನೇ ತರಗತಿ ಶಿಕ್ಷಣವನ್ನು ಎಸ್.ಡಿ.ಎಂ ಪ್ರೌಢಶಾಲೆ ಉಜಿರೆ ಹಾಗೂ ಹತ್ತನೇ ತರಗತಿಯನ್ನು ಪ್ರಗತಿ ವಿದ್ಯಾಸಂಸ್ಥೆ ಕಾಣಿಯೂರಿನಲ್ಲಿ ಪೂರ್ಣಗೊಳಿಸಿದರು.ನಂತರ ಪಿ‌.ಯು.ಸಿ ಶಿಕ್ಷಣವನ್ನು ಮಂಗಳೂರಿನ ವಿಕಾಸ್ ಕಾಲೇಜಿನಲ್ಲಿ ಪಡೆದು ಪ್ರಸ್ತುತ ಆಳ್ವಾಸ್ ಕಾಲೇಜು ಮೂಡುಬಿದಿರೆಯಲ್ಲಿ ಅಂತಿಮ ಬಿ.ಕಾಂ ಶಿಕ್ಷಣವನ್ನು ಪಡೆಯುತ್ತಿದ್ದಾರೆ.
           ಶಾಲಾ ದಿನಗಳಿಂದಲೂ ಕ್ರೀಡೆಯತ್ತ ಒಲವು ತುಂಬಿ ಅಥ್ಲೆಟಿಕ್ಸ್ ನಲ್ಲಿ ಭಾಗವಹಿಸುತ್ತಿದ್ದರು.ನಂತರದ ದಿನಗಳಲ್ಲಿ ಕಬಡ್ಡಿ ಆಟದತ್ತ ಹೆಚ್ಚಿನ ಆಸಕ್ತಿ ಹೊಂದಿ ಆರನೇ ತರಗತಿಯಿಂದಲೇ ಅಭ್ಯಸಿಸತೊಡಗಿದರು.ಪ್ರೌಢಶಿಕ್ಷಣದ ಹಂತದಲ್ಲಿ ದೊರೆತ ಮಾರ್ಗದರ್ಶನ ಹಾಗೂ ತರಬೇತಿಯಿಂದ ಕಬಡ್ಡಿ ಪಂದ್ಯಾಟಗಳಲ್ಲಿ ಭಾಗವಹಿಸಿ ಪ್ರಶಸ್ತಿಗಳನ್ನು ತಮ್ಮದಾಗಿಸಿಕೊಂಡು ಕ್ಯಾಚಿಂಗ್ ಪ್ರದರ್ಶನದಲ್ಲಿ ಮಿಂಚಿ ಶಹಬ್ಬಾಸ್ ಎನಿಸಿಕೊಂಡಿದ್ದಾರೆ.
            ಅಂತರಾಷ್ಟ್ರೀಯ ಮಟ್ಟದ ಆಟಗಾರ್ತಿಯಾದ ಮಮತಾ ಪೂಜಾರಿಯವರ ಆಟದ ಶೈಲಿ ಹೆಚ್ಚಿನ ಸಾಧನೆಗೆ ಪ್ರೇರಣೆಯಾಯಿತು ಎನ್ನುತ್ತಾರೆ ಹರ್ಷಿಣಿ.ಈವರೆಗೆ ಇವರು ಒಂಭತ್ತು ಬಾರಿ ರಾಜ್ಯ ಮಟ್ಟ ಹಾಗೂ ಆರು ಬಾರಿ ರಾಷ್ಟ್ರ ಮಟ್ಟವನ್ನು ಪ್ರತಿನಿಧಿಸಿರುವುದು ಹೆಮ್ಮೆಯ ವಿಷಯ.
            ಇವರ ರಾಜ್ಯ ಹಾಗೂ ರಾಷ್ಟ್ರ ಮಟ್ಟದ ಸಾಧನೆಗಳ ವವರ ಹೀಗಿದೆ:
*2012ರಲ್ಲಿ ಬಳ್ಳಾರಿಯಲ್ಲಿ ನಡೆದ ರಾಜ್ಯ ಮಟ್ಟದ ‘ಚಿನ್ನರ ಕ್ರೀಡಾ ಅಭಿಯಾನ’ದ ಕಬಡ್ಡಿ ಪಂದ್ಯಾಟದಲ್ಲಿ ಭಾಗವಹಿಸಿರುತ್ತಾರೆ.
*2013-14 ರಲ್ಲಿ ಚಾಮರಾಜನಗರದಲ್ಲಿ ನಡೆದ ರಾಜ್ಯ ಮಟ್ಟದ ಕಬಡ್ಡಿ ಪಂದ್ಯಾಟದಲ್ಲಿ ಭಾಗವಹಿಸಿರುತ್ತಾರೆ.
*2015-2016 ರಲ್ಲಿ.ಬೈಂದೂರು ಉಡುಪಿಯಲ್ಲಿ ನಡೆದ ರಾಜ್ಯ ಮಟ್ಟದ 17 ವರ್ಷ ಬಾಲಕಿಯರ ವಯೋಮಿತಿಯ ಕಬಡ್ಡಿ ಪಂದ್ಯಾಟದಲ್ಲಿ ಭಾಗವಹಿಸಿ ಪ್ರಥಮ ಸ್ಥಾನಕ್ಕೆ ಭಾಜನರಾಗಿರುತ್ತಾರೆ.
*2015-16ರಲ್ಲಿ ಚೆನ್ನಪಟ್ಟಣದಲ್ಲಿ ನಡೆದ 17ವರ್ಷ ವಯೋಮಿತಿಯ ಬಾಲಕಿಯರ ರಾಜ್ಯ ಮಟ್ಟದ ಕಬಡ್ಡಿ ಪಂದ್ಯಾಟದಲ್ಲಿ ಭಾಗವಹಿಸಿ ಪ್ರಥಮ ಸ್ಥಾನ ಪಡೆದುಕೊಂಡಿರುತ್ತಾರೆ.
*2014ರಲ್ಲಿ ತುಮಕೂರಿನಲ್ಲಿ ನಡೆದ ರಾಜ್ಯ ಮಟ್ಟದ ಕಬಡ್ಡಿ ಚಾಂಪಿಯನ್ ಶಿಪ್ ನಲ್ಲಿ ತಮ್ಮ ತಂಡದೊಂದಿಗೆ ಭಾಗವಹಿಸಿ ಪ್ರಥಮ ಸ್ಥಾನಿಯಾಗಿರುತ್ತಾರೆ.
*2015-16ರಲ್ಲಿ ಕಾರವಾರದಲ್ಲಿ ನಡೆದ ರಾಜ್ಯ ಮಟ್ಟದ ರಾಜೀವ್ ಗಾಂಧಿ ಖೇಲ್ ಅಭಿಯಾನದಲ್ಲಿ ಭಾಗವಹಿಸಿ ಪ್ರಥಮ ಸ್ಥಾನಿಯಾಗಿರುತ್ತಾರೆ.
*2016ರಲ್ಲಿ ಗದಗದಲ್ಲಿ ನಡೆದ ಐದನೇ ಜೂನಿಯರ್ ರಾಜ್ಯ ಮಟ್ಟದ ಕಬಡ್ಡಿ ಚಾಂಪಿಯನ್ ಶಿಪ್ ನಲ್ಲಿ ತಮ್ಮ ತಂಡದೊಂದಿಗೆ ಭಾಗವಹಿಸಿ ಪ್ರಥಮ ಸ್ಥಾನವನ್ನು ತಮ್ಮದಾಗಿಸಿಕೊಂಡಿರುತ್ತಾರೆ.
*2017-18 ರಲ್ಲಿ ವಿಜಯಪುರದಲ್ಲಿ ನಡೆದ ರಾಜ್ಯ ಮಟ್ಟದ ಕಬಡ್ಡಿ ಚಾಂಪಿಯನ್ ಶಿಪ್ ನಲ್ಲಿ ಭಾಗವಹಿಸಿ ಪ್ರಥಮ ಸ್ಥಾನಿಯಾಗಿರುತ್ತಾರೆ.
*2017ರಲ್ಲಿ ಮೈಸೂರಿನ ಚಾಮುಂಡಿ ವಿಹಾರ ಸ್ಟೇಡಿಯಂನಲ್ಲಿ ನಡೆದ ರಾಜ್ಯ ಮಟ್ಟದ ದಸರಾ ಕ್ರೀಡಾಕೂಟದಲ್ಲಿ ತಂಡದೊಂದಿಗೆ ಭಾಗವಹಿಸಿ ಪ್ರಥಮ ಸ್ಥಾನಿಯಾಗಿರುತ್ತಾರೆ.
*2015-16 ರಲ್ಲಿ ಹದಿನೇಳು ವರ್ಷ ವಯೋಮಿತಿಯ ಬಾಲಕಿಯರ ರಾಷ್ಟ್ರ ಮಟ್ಟದ ಕಬಡ್ಡಿ ಪಂದ್ಯಾಟದಲ್ಲಿ ಭಾಗವಹಿಸಿ ದ್ವಿತೀಯ ಸ್ಥಾನವನ್ನು ಪಡೆದುಕೊಂಡಿರುತ್ತಾರೆ.
*2016-17ರಲ್ಲಿ ಗುಜರಾತ್ನಲ್ಲಿ ನಡೆದ ರಾಷ್ಪ್ರ ಮಟ್ಟದ ರಾಜೀವ್ ಗಾಂಧಿ ಖೇಲ್ ಅಭಿಯಾನದ ಕಬಡ್ಡಿ ಪಂದ್ಯಾಟದಲ್ಲಿ ತಮ್ಮ.ತಂಡದೊಂದಿಗೆ ಭಾಗವಹಿಸಿರುತ್ತಾರೆ.
*2018-19 ರಲ್ಲಿ.ಹೈದರಾಬಾದ್ ನ ಒಳಾಂಗಣ ಸ್ಟೇಡಿಯಂನಲ್ಲಿ ನಡೆದ ಅರುವತ್ತೈದನೇ ಸೀನಿಯರ್ ನ್ಯಾಷನಲ್ ಕಬಡ್ಡಿ ಚಾಂಪಿಯನ್ ಶಿಪ್ ನಲ್ಲಿ ಭಾಗವಹಿಸಿರುತ್ತಾರೆ.
*ಹರಿಯಾಣದಲ್ಲಿ ನಡೆದ ನಲ್ವತ್ತಾರನೇ ಜೂನಿಯರ್ ಚಾಂಪಿಯನ್ ಶಿಪ್ ನಲ್ಲಿ ಭಾಗವಹಿಸಿರುತ್ತಾರೆ.
*2020-21 ರಲ್ಲಿ ಜೈಪುರ,ರಾಜಸ್ಥಾನದಲ್ಲಿ ನಡೆದ ರಾಷ್ಟ್ರಮಟ್ಟದ ಅರುವತ್ತೇಳನೇ ಸೀನಿಯರ್ ಕಬಡ್ಡಿ ಪಂದ್ಯಾಟದಲ್ಲಿ ಭಾಗವಹಿಸಿರುತ್ತಾರೆ.
         ರಾಜ್ಯ,ರಾಷ್ಟ್ರ ಮಟ್ಟವನ್ನು ಪ್ರತಿನಿಧಿಸಿ ಕ್ರೀಡಾ ಕ್ಷೇತ್ರದಲ್ಲಿ ಬೆಳಗುತ್ತಿರುವ ಈ ಸಾಧಕಿಯ ಸಾಧನೆಯನ್ನು ಗುರುತಿಸಿ ಅನೇಕ ಸಂಘ ಸಂಸ್ಥೆಗಳು ಗೌರವಿಸಿದೆ.
           “ಬಾಲ್ಯದಿಂದಲೇ ಕಬಡ್ಡಿ ಕಡೆಗೆ ಆಸಕ್ತಿ ಹೊಂದಿದ್ದ ನನಗೆ ಶೂನ್ಯದಿಂದ ಸಾಧನೆಯ ಹಾದಿಗೆ ತಲುಪಲು ಮಾರ್ಗದರ್ಶನ ಹಾಗೂ ಪ್ರೋತ್ಸಾಹ ನೀಡಿದ ಹೆತ್ತವರು,ಗುರುಗಳಿಗೆ ನಾನು ಚಿರ ಋಣಿ.ಮುಂದೆ ಮಹಿಳಾ ಪ್ರೋ ಕಬಡ್ಡಿ ಆಟಗಾರ್ತಿಯಾಗಿ ಗುರುತಿಸಿಕೊಳ್ಳಬೇಕೆಂಬ ಗುರಿಯಿದೆ”ಎನ್ನುತ್ತಾರೆ ಹರ್ಷಿಣಿ ಶೆಟ್ಟಿ.
           ರಾಜ್ಯ ಮತ್ತು ರಾಷ್ಟ್ರ ಮಟ್ಟದಲ್ಲಿ ಗುರುತಿಸಿಕೊಳ್ಳುತ್ತಿರುವ ಈ ಸಾಧಕಿ ಅಂತರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಿಕೊಂಡು ಕೀರ್ತಿ ಪತಾಕೆ ಬಾನೆತ್ತರಕ್ಕೆ ಹಾರಲಿ.ಇವರ ಸಾಧನೆಯ ಹಾದಿಗೆ ಇನ್ನಷ್ಟು ಪ್ರಶಸ್ತಿಗಳು ಅರಸಿ ಬರಲಿ.ಸಕಲ ದೈವ ದೇವರುಗಳ ಆಶೀರ್ವಾದ ಇವರ ಮೇಲಿರಲಿ.ಇವರ ಈ ಸಾಧನೆಯ ಹಾದಿ ಇತರರಿಗೂ ಪ್ರೇರಣೆಯಾಗಲೆಂದು ಸ್ಪೋರ್ಟ್ಸ್ ಕನ್ನಡ ವೆಬ್ಸೈಟ್ ನ ಆಶಯ.

Latest stories

LEAVE A REPLY

Please enter your comment!
Please enter your name here

five × 1 =