ಕ್ರಿಕೆಟ್ಹೆಟ್ಮಾಯರ್ ಆರ್ಭಟ! ಗೆಲುವಿನ ಅಲೆಯಲ್ಲಿ ವಿಂಡೀಸ್

ಹೆಟ್ಮಾಯರ್ ಆರ್ಭಟ! ಗೆಲುವಿನ ಅಲೆಯಲ್ಲಿ ವಿಂಡೀಸ್

-

- Advertisment -spot_img

ಆತಿಥೇಯ ಭಾರತ ವಿರುದ್ಧ ಮೊದಲ ಏಕದಿನ ಪಂದ್ಯದಲ್ಲಿ ಆತಿಥೇಯ ವೆಸ್ಟ್ ಇಂಡೀಸ್ 8 ವಿಕೆಟ್ ಗಳ ಭರ್ಜರಿ ಜಯ ಗಳಿಸಿದೆ.ಟಾಸ್ ಗೆದ್ದು ಮೊದಲು ಫೀಲ್ಡಿಂಗ್ ಆಯ್ದುಕೊಂಡ ಪೊಲಾರ್ಡ್ ಬಳಗ ಉತ್ತಮ ಯೋಜನೆಯನ್ನೇ ರೂಪಿಸಿತ್ತು. ಭಾರತ ತಂಡದ ಮೊತ್ತ 21 ರನ್ ಆಗುವಷ್ಟರಲ್ಲೇ ಲೋಕೇಶ್ ರಾಹುಲ್ ವಿಕೆಟ್ ಪತನವಾಯಿತು. ಮತ್ತೆ 4 ರನ್ ಅಂತರದಲ್ಲೇ ಭಾರತಕ್ಕೆ ಮತ್ತೊಂದು ಆಘಾತವಾಯಿತು, ನಾಯಕ ವಿರಾಟ್ ಕೊಹ್ಲಿ 4 ರನ್ ಗಳಿಸಿ ಪೆವಿಲಿಯನ್ ಸೇರಿಕೊಂಡರು. ಆರಂಭಿಕ 3 ಅಗ್ರ ಬ್ಯಾಟ್ಸ್ ಮನ್ ಗಳು 80 ರನ್ ಗಳಾಗುವಸ್ಟರಲ್ಲೇ ಪೆವಿಲಿಯನ್ ಹಾದಿ ಹಿಡಿದರು. ತದನಂತರ ತಂಡಕ್ಕೆ ಅಸರೆಯಾದ ಶ್ರೇಯಸ್ ಅಯ್ಯರ್ ಮತ್ತು ರಿಷಬ್ ಪಂತ್ 114 ರನ್ ಗಳ ಭರ್ಜರಿ ಜೊತೆಯಾಟ ಅಡಿ ತಂಡವನ್ನು 200 ರನ್ ಗಳ ಗಡಿಗೆ ತಂದು ನಿಲ್ಲಿಸಿದರು.
194 ರನ್ ಆಗುವಷ್ಟರಲ್ಲೇ ಅಯ್ಯರ್ ಜೋಸೆಫ್ ಗೆ ವಿಕೆಟ್ ಒಪ್ಪಿಸಿ ಹೊರನೆಡೆದರು. ಒಂದೆಡೆ ಉತ್ತಮವಾಗಿ ಇನ್ನಿಂಗ್ಸ್ ಕಟ್ಟಿದ್ದ ಪಂತ್ 71 ರನ್ ಗಳಿಸಿ ಔಟಾದರು.

ತದನಂತರ ಕ್ರೀಸ್ ಗೆ ಆಗಮಿಸಿದ ಜಡೇಜಾ 21 ಮತ್ತು ಶಿವಂ ದುಬೆ 40 ರನ್ ನೆರವಿನಿಂದ ಭಾರತ ತಂಡ ಅಂತಿಮವಾಗಿ 50 ಓವರ್ ಗಳಲ್ಲಿ 8 ವಿಕೆಟ್ ನಷ್ಟಕ್ಕೆ 287 ರನ್ ಗಳಿಸಿತು. ವೆಸ್ಟ್ ಇಂಡೀಸ್ ಪರ ಶೆಲ್ಡನ್ ಕಾಟ್ರೆಲ್ 4 ವಿಕೆಟ್ ಪಡೆದರು. ಹಾಗೆ ಕೀಮೊ ಪಾಲ್ ಮತ್ತು ಜೋಸೆಫ್ ತಲಾ 3 ವಿಕೆಟ್ ಗಳಿಸಿದರು.ಮತ್ತು ಹೋಲ್ಡರ್ 1 ವಿಕೆಟ್ ಕಬಲಿಸಿದರು. 287 ರನ್ ಗಳ ಬೃಹತ್ ಮೊತ್ತ ಬೆನ್ನತ್ತಿದ ವಿಂಡೀಸ್ ತಂಡ 11 ರನ್ ಗಳಾಗುವಸ್ಟರಲ್ಲೇ 1 ವಿಕೆಟ್ ಕಳೆದುಕೊಂಡಿತು. ಆದರೆ ಆರಂಭಿಕ ಆಟಗಾರ ಹೋಪ್ ಮತ್ತು ಶಿಮ್ರಾನ್ ಹೆಟ್ಮಾಯರ್ ಅಕ್ಷರಶಃ ಭಾರತೀಯ ಬೌಲರ್ ಗಳನ್ನು ಚೆಂಡಾಡಿದರು. ಇವರಿಬ್ಬರ ಜೊತೆಯಾಟದಲ್ಲಿ ವೆಸ್ಟ್ ವಿಂಡೀಸ್ ಗೆ 218 ರನ್ ಗಳ ಬೃಹತ್ ಜೊತೆಯಾಟ ನೆರವಿನಿಂದ ವಿಂಡೀಸ್ ಗೆಲುವಿನ ಸನಿಹಕ್ಕೆ ಬಂದಿತ್ತು. ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದ
ಹೆಟ್ಮಾಯರ್ 139 ರನ್ ಗಳಿಸಿ ಮಹಮದ್ ಶಮಿಗೆ ವಿಕೆಟ್ ಒಪ್ಪಿಸಿದರು.ತದನಂತರ ಹೋಪ್ ಗೆ ಜೊತೆಯಾದ ಪೂರನ್ 29 ರನ್ ಗಳಿಸಿ ಗೆಲುವಿನ ದಡ ಸೇರಿಸಿದರು.

ಭಾರತ ಪರ ದೀಪಕ್ ಚಾಹರ್ ಮತ್ತು ಶಮಿ ತಲಾ ಒಂದು ವಿಕೆಟ್ ಪಡೆದುಕೊಂಡರು. ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದ  ಹೆಟ್ಮಾಯರ್ 106 ಎಸೆತಗಳನ್ನು ಎದುರಿಸಿದ್ದು 11ಪೋರ್ ಮತ್ತು 7 ಆಕರ್ಷಕ ಸಿಕ್ಸರ್ ಸಿಡಿಸಿ ಪಂದ್ಯ ಪುರುಷೋತ್ತಮ ಪ್ರಶಸ್ತಿಗೆ ಆಯ್ಕೆಯಾದರು. ಈ ಗೆಲುವಿನಿಂದ ವಿಂಡೀಸ್ 3 ಪಂದ್ಯಗಳ ಸರಣಿಯಲ್ಲಿ 1-0 ಇಂದ ಮುನ್ನಡೆ ಸಾಧಿಸಿದರು.

ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

LEAVE A REPLY

Please enter your comment!
Please enter your name here

nineteen − two =

Latest news

ಭಾರತ ವಿಶ್ವ ಚಾಂಪಿಯನ್: ಟಿ20 ವಿಶ್ವಕಪ್ ಮತ್ತೆ ಭಾರತಕ್ಕೇ!

  ಭಾರತ ವಿಶ್ವ ಚಾಂಪಿಯನ್: ಟಿ20 ವಿಶ್ವಕಪ್ ಮತ್ತೆ ಭಾರತಕ್ಕೇ! ಟೀಮ್ ಇಂಡಿಯಾ ಇತಿಹಾಸ ಸೃಷ್ಟಿಸಿದೆ. ಹಾಲಿ ಚಾಂಪಿಯನ್ ಆಗಿ ಟಿ20 ವಿಶ್ವಕಪ್ ಉಳಿಸಿಕೊಳ್ಳುವುದರ ಜೊತೆಗೆ, ತವರು ನೆಲದಲ್ಲಿ...

ಭಾರತಕ್ಕೆ ಮೂರನೇ ಟಿ20 ವಿಶ್ವಕಪ್ ಕಿರೀಟ – ಐತಿಹಾಸಿಕ ಸಾಧನೆ

ಭಾರತಕ್ಕೆ ಮೂರನೇ ಟಿ20 ವಿಶ್ವಕಪ್ ಕಿರೀಟ – ಐತಿಹಾಸಿಕ ಸಾಧನೆ ಕ್ರಿಕೆಟ್ ಲೋಕದಲ್ಲಿ ಮತ್ತೊಮ್ಮೆ ಇತಿಹಾಸ ನಿರ್ಮಿಸಿದ Team India ತಂಡವು ಟಿ20 ವಿಶ್ವಕಪ್‌ನಲ್ಲಿ ತನ್ನ ಪ್ರಭಾವವನ್ನು...

NIPM ಕ್ರಿಕೆಟ್ ಎಕ್ಸ್‌ಪ್ಲೋಶನ್ ಕಾರ್ಪೊರೇಟ್ ಟೂರ್ನಮೆಂಟ್ 2026: NMPA ಚಾಂಪಿಯನ್

NIPM ಕ್ರಿಕೆಟ್ ಎಕ್ಸ್‌ಪ್ಲೋಶನ್ ಕಾರ್ಪೊರೇಟ್ ಟೂರ್ನಮೆಂಟ್ 2026: NMPA ಚಾಂಪಿಯನ್ **New Mangalore Port Authority (ಎನ್‌ಎಂಪಿಎ)** ತಂಡವು **NIPM Cricket Explosion Corporate Cricket Tournament...

ಮಂಗಳೂರಿನಲ್ಲಿ ಕಾರ್ಪೊರೇಟ್ ಕ್ರಿಕೆಟ್ ಹಬ್ಬಕ್ಕೆ ಚಾಲನೆ; NIPM ಮಂಗಳೂರು ಚಾಪ್ಟರ್‌ನಿಂದ “ಕ್ರಿಕೆಟ್ ಎಕ್ಸ್‌ಪ್ಲೋಷನ್” ಟೂರ್ನಿ

ಮಂಗಳೂರಿನಲ್ಲಿ ಕಾರ್ಪೊರೇಟ್ ಕ್ರಿಕೆಟ್ ಹಬ್ಬಕ್ಕೆ ಚಾಲನೆ NIPM ಮಂಗಳೂರು ಚಾಪ್ಟರ್‌ನಿಂದ “ಕ್ರಿಕೆಟ್ ಎಕ್ಸ್‌ಪ್ಲೋಷನ್” ಟೂರ್ನಿ ಮಂಗಳೂರು: ಮಾನವ ಸಂಪನ್ಮೂಲ ಕ್ಷೇತ್ರದ ಪ್ರಮುಖ ಸಂಘಟನೆಯಾದ ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಪರ್ಸನಲ್ ಮ್ಯಾನೇಜ್‌ಮೆಂಟ್ (NIPM)...
- Advertisement -spot_imgspot_img

ಸಾಲಿಗ್ರಾಮದಲ್ಲಿ “ವಿಶ್ವ ವೃಷ್ಠಿ ಟ್ರೋಫಿ 2026” ಕ್ರಿಕೆಟ್ ಪಂದ್ಯಾಟ – ಮಾರ್ಚ್ 14 ಮತ್ತು 15 ರಂದು ಭರ್ಜರಿ ಆಯೋಜನೆ

ಸಾಲಿಗ್ರಾಮದಲ್ಲಿ “ ವಿಶ್ವ ವೃಷ್ಠಿ ಟ್ರೋಫಿ 2026” ಕ್ರಿಕೆಟ್ ಪಂದ್ಯಾಟ – ಮಾರ್ಚ್ 14 ಮತ್ತು 15 ರಂದು ಭರ್ಜರಿ ಆಯೋಜನೆ ಕ್ರೀಡಾಭಿಮಾನಿಗಳಿಗೆ ರೋಮಾಂಚನ ಮೂಡಿಸುವ ಕ್ರಿಕೆಟ್...

ಅಮ್ಗೆಲೆ ಅಭರಣ GPL ಉತ್ಸವ 2026 – ದಶಕದ ಸಂಭ್ರಮಕ್ಕೆ ಸಜ್ಜಾದ ಕ್ರೀಡಾ ಮಹೋತ್ಸವ

ಅಮ್ಗೆಲೆ ಅಭರಣ GPL ಉತ್ಸವ 2026 – ದಶಕದ ಸಂಭ್ರಮಕ್ಕೆ ಸಜ್ಜಾದ ಕ್ರೀಡಾ ಮಹೋತ್ಸವ ಕ್ರೀಡೆ, ಸಂಸ್ಕೃತಿ ಮತ್ತು ಸಮುದಾಯ ಒಗ್ಗಟ್ಟನ್ನು ಒಂದೇ ವೇದಿಕೆಯಲ್ಲಿ ಆಚರಿಸುವ ಮಹತ್ವದ...

Must read

- Advertisement -spot_imgspot_img

You might also likeRELATED
Recommended to you