9.9 C
London
Friday, May 17, 2024
Homeಕ್ರಿಕೆಟ್ಹೆಟ್ಮಾಯರ್ ಆರ್ಭಟ! ಗೆಲುವಿನ ಅಲೆಯಲ್ಲಿ ವಿಂಡೀಸ್

ಹೆಟ್ಮಾಯರ್ ಆರ್ಭಟ! ಗೆಲುವಿನ ಅಲೆಯಲ್ಲಿ ವಿಂಡೀಸ್

Date:

Related stories

ನಿನ್ನ ಟೈಮ್ ಬಂದೇ ಬರುವುದು, ಹೀಗೇ ಆಡುತ್ತಿರು ಕರುಣ್..!

1996ರಲ್ಲಿ ಅರ್ಜುನ ರಣತುಂಗ ನಾಯಕತ್ವದ ಶ್ರೀಲಂಕಾ ತಂಡ ಏಕದಿನ ವಿಶ್ವಕಪ್ ಗೆದ್ದಾಗ...

ದುಡ್ಡಿನ ಮದದಲ್ಲಿ ಕೊಬ್ಬಿರುವ ಈ business tycoonಗಳಿಗೆ ದೇಶದ ಕ್ರಿಕೆಟ್ ಹೀರೊಗಳ ಮೇಲೆ ಗೌರವ ಇರಲು ಹೇಗೆ ಸಾಧ್ಯ..?

17 ವರ್ಷಗಳ ಐಪಿಎಲ್ ಚರಿತ್ರೆಯಲ್ಲಿ ಸಾವಿರಕ್ಕೂ ಹೆಚ್ಚು ಪಂದ್ಯಗಳು ನಡೆದಿವೆ. ಆ...

Reject ಪೀಸ್‌ಗಳು ವಾಪಸ್ ಎದ್ದು ಬಂದ ಕಥೆ..!

ಒಬ್ಬ by mistake ಪಂಜಾಬ್ ಕಿಂಗ್ಸ್ ತಂಡ ಸೇರಿದ್ದವ. ಇನ್ನೊಬ್ಬ ತನ್ನ...

ಇಂದು ವಿಶ್ವದ ಅತ್ಯಂತ ಪ್ರೀತಿಪಾತ್ರ ಕ್ರಿಕೆಟಿಗ ಧೋನಿಯ ಕೊನೆಯ ಪಂದ್ಯ..

ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯಲಿರುವ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಮುಂಬೈ...

T20 ವಿಶ್ವಕಪ್‌ನಲ್ಲಿ ಭಾರತದ ವಿಕೆಟ್‌ಕೀಪರ್ ಯಾರು? 5 ಆಟಗಾರರು ರೇಸ್ ನಲ್ಲಿ

ಐಪಿಎಲ್  ನಂತರ ಟಿ20 ವಿಶ್ವಕಪ್ ಆಡಬೇಕಿದೆ. ಈ ಮೆಗಾ  ಟೂರ್ನಿಯನ್ನು ಜೂನ್‌ನಲ್ಲಿ...
spot_imgspot_img

ಆತಿಥೇಯ ಭಾರತ ವಿರುದ್ಧ ಮೊದಲ ಏಕದಿನ ಪಂದ್ಯದಲ್ಲಿ ಆತಿಥೇಯ ವೆಸ್ಟ್ ಇಂಡೀಸ್ 8 ವಿಕೆಟ್ ಗಳ ಭರ್ಜರಿ ಜಯ ಗಳಿಸಿದೆ.ಟಾಸ್ ಗೆದ್ದು ಮೊದಲು ಫೀಲ್ಡಿಂಗ್ ಆಯ್ದುಕೊಂಡ ಪೊಲಾರ್ಡ್ ಬಳಗ ಉತ್ತಮ ಯೋಜನೆಯನ್ನೇ ರೂಪಿಸಿತ್ತು. ಭಾರತ ತಂಡದ ಮೊತ್ತ 21 ರನ್ ಆಗುವಷ್ಟರಲ್ಲೇ ಲೋಕೇಶ್ ರಾಹುಲ್ ವಿಕೆಟ್ ಪತನವಾಯಿತು. ಮತ್ತೆ 4 ರನ್ ಅಂತರದಲ್ಲೇ ಭಾರತಕ್ಕೆ ಮತ್ತೊಂದು ಆಘಾತವಾಯಿತು, ನಾಯಕ ವಿರಾಟ್ ಕೊಹ್ಲಿ 4 ರನ್ ಗಳಿಸಿ ಪೆವಿಲಿಯನ್ ಸೇರಿಕೊಂಡರು. ಆರಂಭಿಕ 3 ಅಗ್ರ ಬ್ಯಾಟ್ಸ್ ಮನ್ ಗಳು 80 ರನ್ ಗಳಾಗುವಸ್ಟರಲ್ಲೇ ಪೆವಿಲಿಯನ್ ಹಾದಿ ಹಿಡಿದರು. ತದನಂತರ ತಂಡಕ್ಕೆ ಅಸರೆಯಾದ ಶ್ರೇಯಸ್ ಅಯ್ಯರ್ ಮತ್ತು ರಿಷಬ್ ಪಂತ್ 114 ರನ್ ಗಳ ಭರ್ಜರಿ ಜೊತೆಯಾಟ ಅಡಿ ತಂಡವನ್ನು 200 ರನ್ ಗಳ ಗಡಿಗೆ ತಂದು ನಿಲ್ಲಿಸಿದರು.
194 ರನ್ ಆಗುವಷ್ಟರಲ್ಲೇ ಅಯ್ಯರ್ ಜೋಸೆಫ್ ಗೆ ವಿಕೆಟ್ ಒಪ್ಪಿಸಿ ಹೊರನೆಡೆದರು. ಒಂದೆಡೆ ಉತ್ತಮವಾಗಿ ಇನ್ನಿಂಗ್ಸ್ ಕಟ್ಟಿದ್ದ ಪಂತ್ 71 ರನ್ ಗಳಿಸಿ ಔಟಾದರು.

ತದನಂತರ ಕ್ರೀಸ್ ಗೆ ಆಗಮಿಸಿದ ಜಡೇಜಾ 21 ಮತ್ತು ಶಿವಂ ದುಬೆ 40 ರನ್ ನೆರವಿನಿಂದ ಭಾರತ ತಂಡ ಅಂತಿಮವಾಗಿ 50 ಓವರ್ ಗಳಲ್ಲಿ 8 ವಿಕೆಟ್ ನಷ್ಟಕ್ಕೆ 287 ರನ್ ಗಳಿಸಿತು. ವೆಸ್ಟ್ ಇಂಡೀಸ್ ಪರ ಶೆಲ್ಡನ್ ಕಾಟ್ರೆಲ್ 4 ವಿಕೆಟ್ ಪಡೆದರು. ಹಾಗೆ ಕೀಮೊ ಪಾಲ್ ಮತ್ತು ಜೋಸೆಫ್ ತಲಾ 3 ವಿಕೆಟ್ ಗಳಿಸಿದರು.ಮತ್ತು ಹೋಲ್ಡರ್ 1 ವಿಕೆಟ್ ಕಬಲಿಸಿದರು. 287 ರನ್ ಗಳ ಬೃಹತ್ ಮೊತ್ತ ಬೆನ್ನತ್ತಿದ ವಿಂಡೀಸ್ ತಂಡ 11 ರನ್ ಗಳಾಗುವಸ್ಟರಲ್ಲೇ 1 ವಿಕೆಟ್ ಕಳೆದುಕೊಂಡಿತು. ಆದರೆ ಆರಂಭಿಕ ಆಟಗಾರ ಹೋಪ್ ಮತ್ತು ಶಿಮ್ರಾನ್ ಹೆಟ್ಮಾಯರ್ ಅಕ್ಷರಶಃ ಭಾರತೀಯ ಬೌಲರ್ ಗಳನ್ನು ಚೆಂಡಾಡಿದರು. ಇವರಿಬ್ಬರ ಜೊತೆಯಾಟದಲ್ಲಿ ವೆಸ್ಟ್ ವಿಂಡೀಸ್ ಗೆ 218 ರನ್ ಗಳ ಬೃಹತ್ ಜೊತೆಯಾಟ ನೆರವಿನಿಂದ ವಿಂಡೀಸ್ ಗೆಲುವಿನ ಸನಿಹಕ್ಕೆ ಬಂದಿತ್ತು. ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದ
ಹೆಟ್ಮಾಯರ್ 139 ರನ್ ಗಳಿಸಿ ಮಹಮದ್ ಶಮಿಗೆ ವಿಕೆಟ್ ಒಪ್ಪಿಸಿದರು.ತದನಂತರ ಹೋಪ್ ಗೆ ಜೊತೆಯಾದ ಪೂರನ್ 29 ರನ್ ಗಳಿಸಿ ಗೆಲುವಿನ ದಡ ಸೇರಿಸಿದರು.

ಭಾರತ ಪರ ದೀಪಕ್ ಚಾಹರ್ ಮತ್ತು ಶಮಿ ತಲಾ ಒಂದು ವಿಕೆಟ್ ಪಡೆದುಕೊಂಡರು. ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದ  ಹೆಟ್ಮಾಯರ್ 106 ಎಸೆತಗಳನ್ನು ಎದುರಿಸಿದ್ದು 11ಪೋರ್ ಮತ್ತು 7 ಆಕರ್ಷಕ ಸಿಕ್ಸರ್ ಸಿಡಿಸಿ ಪಂದ್ಯ ಪುರುಷೋತ್ತಮ ಪ್ರಶಸ್ತಿಗೆ ಆಯ್ಕೆಯಾದರು. ಈ ಗೆಲುವಿನಿಂದ ವಿಂಡೀಸ್ 3 ಪಂದ್ಯಗಳ ಸರಣಿಯಲ್ಲಿ 1-0 ಇಂದ ಮುನ್ನಡೆ ಸಾಧಿಸಿದರು.

ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

Latest stories

LEAVE A REPLY

Please enter your comment!
Please enter your name here

5 × 4 =