Categories
ಕ್ರಿಕೆಟ್

ಎ.ಕೆ‌ ಉಡುಪಿಯ ವಿರುದ್ಧ ಅಚ್ಚರಿಯ ಗೆಲುವು ಸಾಧಿಸಿದ ಹಿಂದುಸ್ತಾನ್ ಬೆಂಗಳೂರು

ಬೆಂಗಳೂರು-ಪೀಣ್ಯದಲ್ಲಿ ನಡೆಯುತ್ತಿರುವ ಅಂತರಾಷ್ಟ್ರೀಯ ಮಟ್ಟದ ಟೆನಿಸ್ಬಾಲ್ ಕ್ರಿಕೆಟ್ ಪಂದ್ಯಾಟದ ನಾಲ್ಕನೇ ದಿನವಾದ ಇಂದು ಅಚ್ಚರಿಯ ಫಲಿತಾಂಶವೊಂದು ಹೊರಬಿದ್ದಿದೆ.
ಹಲವಾರು ಯುವ ಪ್ರತಿಭೆಗಳನ್ನು ರಾಜ್ಯಕ್ಕೆ ಪರಿಚಯಿಸಿದ ಹಿಂದುಸ್ತಾನ್ ಬೆಂಗಳೂರು,ರಾಜ್ಯದ ಬಲಿಷ್ಠ ತಂಡ ಎ.ಕೆ‌.ಉಡುಪಿಯನ್ನು ಸೋಲಿಸಿ ನಿರ್ಣಾಯಕ ಸುತ್ತನ್ನು ಪ್ರವೇಶಿಸಿದೆ.
ಮೊದಲು ಬ್ಯಾಟಿಂಗ್ ನಡೆಸಿದ ಹಿಂದುಸ್ತಾನ್ ಬೆಂಗಳೂರು ಪ್ರದೀಪ್ 23 ಮತ್ತು ಪವನ್ 17 ರನ್ ನೆರವಿನಿಂದ 8 ಓವರ್ ಗಳಲ್ಲಿ 3 ವಿಕೆಟ್ ನಷ್ಟಕ್ಕೆ 57 ರನ್ ಗಳಿಸಿ ಸವಾಲಿನ ಮೊತ್ತ ಕಲೆ ಹಾಕಿತ್ತು.
ಸವಾಲಿನ ಗುರಿ ಚೇಸಿಂಗ್ ವೇಳೆ ಆರಂಭಿಕ ಹಂತದಲ್ಲೇ ಲಗುಬಗನೆ ವಿಕೆಟ್ ಕಳೆದುಕೊಂಡ ಎ‌.ಕೆ‌‌.ಉಡುಪಿ 8 ಓವರ್ ಗಳಲ್ಲಿ 7 ವಿಕೆಟ್ ನಷ್ಟಕ್ಕೆ 52 ರನ್ ಗಳಷ್ಟೇ ಕಲೆ ಹಾಕಿ 5 ರನ್ ಅಂತರದಿಂದ ಸೋಲೊಪ್ಪಿಕೊಂಡಿತು

By ಕೋಟ ರಾಮಕೃಷ್ಣ ಆಚಾರ್ಯ

ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ
ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

Leave a Reply

Your email address will not be published.

8 + 10 =