9 C
London
Wednesday, April 17, 2024
Homeಕ್ರಿಕೆಟ್ತಾಲೂಕವಿದ್ಯಾರ್ಥಿಗಳಲ್ಲಿ ಪ್ರಾಮಾಣಿಕ ಪರಿಶ್ರಮ‌, ಆತ್ಮವಿಶ್ವಾಸವಿದ್ದರೆ ಯಶಸ್ಸು :  ಗೌತಮ್ ಶೆಟ್ಟಿ

ವಿದ್ಯಾರ್ಥಿಗಳಲ್ಲಿ ಪ್ರಾಮಾಣಿಕ ಪರಿಶ್ರಮ‌, ಆತ್ಮವಿಶ್ವಾಸವಿದ್ದರೆ ಯಶಸ್ಸು :  ಗೌತಮ್ ಶೆಟ್ಟಿ

Date:

Related stories

ಇಂದು ವಿಶ್ವದ ಅತ್ಯಂತ ಪ್ರೀತಿಪಾತ್ರ ಕ್ರಿಕೆಟಿಗ ಧೋನಿಯ ಕೊನೆಯ ಪಂದ್ಯ..

ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯಲಿರುವ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಮುಂಬೈ...

T20 ವಿಶ್ವಕಪ್‌ನಲ್ಲಿ ಭಾರತದ ವಿಕೆಟ್‌ಕೀಪರ್ ಯಾರು? 5 ಆಟಗಾರರು ರೇಸ್ ನಲ್ಲಿ

ಐಪಿಎಲ್  ನಂತರ ಟಿ20 ವಿಶ್ವಕಪ್ ಆಡಬೇಕಿದೆ. ಈ ಮೆಗಾ  ಟೂರ್ನಿಯನ್ನು ಜೂನ್‌ನಲ್ಲಿ...

ಇಂತಹ ಒಬ್ಬ ಆಟಗಾರನನ್ನು RCB ತಯಾರು ಮಾಡಿದೆಯೇ..?

ರಿಯಾನ್ ಪರಾಗ್’ನಂಥವರು ಕರ್ನಾಟಕದಲ್ಲಿ ಅದೆಷ್ಟು ಹುಡುಗರಿದ್ದರು..! ಈಗಲೂ ಇದ್ದಾರೆ.. ಆದರೆ ಅವರೆಲ್ಲಾ ಐಪಿಎಲ್’ನಲ್ಲಿ...

RCB ಫ್ರಾಂಚೈಸಿಗೆ ಕನ್ನಡಿಗರ ಮೇಲಿರುವುದು ನಿರ್ಲಕ್ಷ್ಯವಲ್ಲ, ಅಲರ್ಜಿ..!

ನಾಲ್ಕೇ ನಾಲ್ಕು ದಿನಗಳ ಹಿಂದೆ..  4 ಓವರ್’ಗಳಲ್ಲಿ 23 ರನ್, ಒಂದು...

RCB ಯನ್ನು ಸುಟ್ಟು ಹಾಕಿದ ಮಯಾಂಕ್ ಯಾದವ್ ಅವರ ವೇಗ

RCB ವಿರುದ್ಧ 3/14 ರ ಅದ್ಭುತ ಬೌಲಿಂಗ್ ಅಂಕಿಅಂಶಗಳಿಗಾಗಿ  ಮಯಾಂಕ್ ಯಾದವ್...
spot_imgspot_img

ಕುಂದಾಪುರ : ಕೋಡಿ ಬ್ಯಾರೀಸ್ ಸಮೂಹ ಶಿಕ್ಷಣ ಸಂಸ್ಥೆಯಲ್ಲಿ ವಾರ್ಷಿಕ ಕ್ರೀಡೋತ್ಸವ ಇತ್ತೀಚಿಗಷ್ಟೇ ಸಂಸ್ಥೆಯ ಮೈದಾನದಲ್ಲಿ ನಡೆಯಿತು.

 

 

 

 

 

 

 

 

 

 

ಹಳೆಯಂಗಡಿ ಟೊರ್ಪೆಡೋಸ್ ಸ್ಪೋರ್ಟ್ಸ್ ಕ್ಲಬ್ ಸಂಸ್ಥಾಪಕ ಗೌತಮ ಶೆಟ್ಟಿ ಕ್ರೀಡಾ ಜ್ಯೋತಿಯನ್ನು ಉದ್ಘಾಟಿಸಿ, ಮಾತನಾಡಿದ ಅವರು ವಿದ್ಯಾರ್ಥಿಗಳಲ್ಲಿ ಪ್ರಾಮಾಣಿಕ ಪರಿಶ್ರಮಬೇಕು. ಕ್ರೀಡೆ ರಂಗದಲ್ಲಿ ಸಾಕಷ್ಟು ಸಾಧನೆಯನ್ನು ಮಾಡಬಹುದು. ನಮ್ಮಲ್ಲಿ ಆತ್ಮ ವಿಶ್ವಾಸ ಇದ್ದಾಗ ಮಾತ್ರ ನಮ್ಮ ಯಶಸ್ಸನ್ನು ನೀಡುತ್ತದೆ. ಪಠ್ಯೇತರ ಚಟುವಟಿಕೆ ಜೊತೆಗೆ ಕ್ರೀಡಾ ಕ್ಷೇತ್ರಯಲ್ಲೂ ಸಾಕಷ್ಟು ಪರಿಶ್ರಮವನ್ನು ಮಾಡಬೇಕು. ಯಾವುದೇ ರಂಗದಲ್ಲಿ ಸೋಲು-ಗೆಲುವು ಇರುವುದೇ, ಆದರೆ ನಮ್ಮ ಜೀವನದಲ್ಲಿ ಸೋಲಿನಲ್ಲಿ ಸಾಕಷ್ಟು ಹೋರಾಟ ಮಾಡುವುದರಿಂದ ಒಂದೆಲ್ಲಾ ಒಂದು ಅದಕ್ಕೆ ಗೆಲವು ಖಚಿತವಾಗಿದೆ ಎಂದು ಕ್ರೀಡಾಳುಗಳಿಗೆ ಪ್ರೇರಣೆ ನೀಡಿದರು.

ಕೋಡಿ ಬ್ಯಾರೀಸ್ ಸಮೂಹ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಹಾಜಿ ಕೆ. ಎಂ ಅಬ್ದುಲ್ ರೆಹಮಾನ್ ಕ್ರೀಡೋತ್ಸವ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು.

ಈ ಸಂದರ್ಭದಲ್ಲಿ ಕುಂದಾಪುರ ಪುರಸಭೆಯ ಸದಸ್ಯೆ ಕಮಲ, ಕೋಡಿ ಬ್ಯಾರಿ ಮೆಮೋರಿಯಲ್ ಸರಕಾರಿ ಉರ್ದು ಹಿರಿಯ ಪ್ರಾಥಮಿಕ ಶಾಲೆಯ ಎಸ್.ಡಿ.ಎಂ.ಸಿ ಅಧ್ಯಕ್ಷ ರಫೀಕ್ ಹಾಜಿ ಕೆ ಮೊಹಿದ್ದೀನ್ ಬ್ಯಾರಿ ಅನುದಾನಿತ ಪ್ರೌಢಶಾಲೆಯ ಶಾಲಾಭಿವೃದ್ಧಿ ಸಮಿತಿಯ ಸದಸ್ಯರಾದ ನಾಗರಾಜ್ ಕಾಂಚನ್, ಅಬ್ದುಲ್ ಕೋಡಿ, ಕೋಡಿ ಬ್ಯಾರೀಸ್ ಸೀ ಸೈಡ್ ಪಬ್ಲಿಕ್ ಸ್ಕೂಲ್ ಶಿಕ್ಷಕ-ರಕ್ಷಕ ಸಮಿತಿಯ ಮುಖ್ಯ ಸಲಹೆಗಾರ ಅಭಿಷೇಕ್, ಉಪಾಧ್ಯಕ್ಷರಾದ ಪ್ರಕಾಶ್, ಮುಸ್ತರಿನ್ ಇದ್ದರು.

ಕೋಡಿ ಬ್ಯಾರೀಸ್ ಸಮೂಹ ಶಿಕ್ಷಣ ಸಂಸ್ಥೆಯ ನಿರ್ದೇಶಕ ಪ್ರೋ ಧೋಮ ಚಂದ್ರಶೇಖರ ಪ್ರಾಸ್ತಾವಿಕ ಮಾತನಾಡಿದರು, ಬ್ಯಾರೀಸ್ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕಿ ಪೂರ್ಣಿಮಾ ಸ್ವಾಗತಿಸಿದರು. ಬ್ಯಾರೀಸ್ ಆಂಗ್ಲ ಮಾಧ್ಯಮ ಶಾಲೆಯ ಸಹ ಶಿಕ್ಷಕಿ ಶ್ವೇತಾ ಕಾರ್ಯಕ್ರಮ ನಿರ್ವಹಿಸಿದರು, ಹಾಜಿ ಕೆ ಮೊಹಿದ್ದೀನ್ ಬ್ಯಾರಿ ಅನುದಾನಿತ ಪ್ರೌಢಶಾಲೆಯ ದೈಹಿಕ ಶಿಕ್ಷಕ ಇಲಿಯಾಸ್ ವಂದಿಸಿದರು.

ಕೋಡಿ ಬ್ಯಾರೀಸ್ ಸಮೂಹ ಶಿಕ್ಷಣ ಸಂಸ್ಥೆಗಳ ಮುಖ್ಯಸ್ಥರು, ಬೋಧಕ, ಬೋಧಕೇತರ ಸಿಬ್ಬಂದಿಯವರು ಇದ್ದರು.

 

ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

Latest stories

LEAVE A REPLY

Please enter your comment!
Please enter your name here

18 − ten =