ಕ್ರಿಕೆಟ್ತಾಲೂಕವಿದ್ಯಾರ್ಥಿಗಳಲ್ಲಿ ಪ್ರಾಮಾಣಿಕ ಪರಿಶ್ರಮ‌, ಆತ್ಮವಿಶ್ವಾಸವಿದ್ದರೆ ಯಶಸ್ಸು :  ಗೌತಮ್ ಶೆಟ್ಟಿ

ವಿದ್ಯಾರ್ಥಿಗಳಲ್ಲಿ ಪ್ರಾಮಾಣಿಕ ಪರಿಶ್ರಮ‌, ಆತ್ಮವಿಶ್ವಾಸವಿದ್ದರೆ ಯಶಸ್ಸು :  ಗೌತಮ್ ಶೆಟ್ಟಿ

-

- Advertisment -spot_img

ಕುಂದಾಪುರ : ಕೋಡಿ ಬ್ಯಾರೀಸ್ ಸಮೂಹ ಶಿಕ್ಷಣ ಸಂಸ್ಥೆಯಲ್ಲಿ ವಾರ್ಷಿಕ ಕ್ರೀಡೋತ್ಸವ ಇತ್ತೀಚಿಗಷ್ಟೇ ಸಂಸ್ಥೆಯ ಮೈದಾನದಲ್ಲಿ ನಡೆಯಿತು.

 

 

 

 

 

 

 

 

 

 

ಹಳೆಯಂಗಡಿ ಟೊರ್ಪೆಡೋಸ್ ಸ್ಪೋರ್ಟ್ಸ್ ಕ್ಲಬ್ ಸಂಸ್ಥಾಪಕ ಗೌತಮ ಶೆಟ್ಟಿ ಕ್ರೀಡಾ ಜ್ಯೋತಿಯನ್ನು ಉದ್ಘಾಟಿಸಿ, ಮಾತನಾಡಿದ ಅವರು ವಿದ್ಯಾರ್ಥಿಗಳಲ್ಲಿ ಪ್ರಾಮಾಣಿಕ ಪರಿಶ್ರಮಬೇಕು. ಕ್ರೀಡೆ ರಂಗದಲ್ಲಿ ಸಾಕಷ್ಟು ಸಾಧನೆಯನ್ನು ಮಾಡಬಹುದು. ನಮ್ಮಲ್ಲಿ ಆತ್ಮ ವಿಶ್ವಾಸ ಇದ್ದಾಗ ಮಾತ್ರ ನಮ್ಮ ಯಶಸ್ಸನ್ನು ನೀಡುತ್ತದೆ. ಪಠ್ಯೇತರ ಚಟುವಟಿಕೆ ಜೊತೆಗೆ ಕ್ರೀಡಾ ಕ್ಷೇತ್ರಯಲ್ಲೂ ಸಾಕಷ್ಟು ಪರಿಶ್ರಮವನ್ನು ಮಾಡಬೇಕು. ಯಾವುದೇ ರಂಗದಲ್ಲಿ ಸೋಲು-ಗೆಲುವು ಇರುವುದೇ, ಆದರೆ ನಮ್ಮ ಜೀವನದಲ್ಲಿ ಸೋಲಿನಲ್ಲಿ ಸಾಕಷ್ಟು ಹೋರಾಟ ಮಾಡುವುದರಿಂದ ಒಂದೆಲ್ಲಾ ಒಂದು ಅದಕ್ಕೆ ಗೆಲವು ಖಚಿತವಾಗಿದೆ ಎಂದು ಕ್ರೀಡಾಳುಗಳಿಗೆ ಪ್ರೇರಣೆ ನೀಡಿದರು.

ಕೋಡಿ ಬ್ಯಾರೀಸ್ ಸಮೂಹ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಹಾಜಿ ಕೆ. ಎಂ ಅಬ್ದುಲ್ ರೆಹಮಾನ್ ಕ್ರೀಡೋತ್ಸವ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು.

ಈ ಸಂದರ್ಭದಲ್ಲಿ ಕುಂದಾಪುರ ಪುರಸಭೆಯ ಸದಸ್ಯೆ ಕಮಲ, ಕೋಡಿ ಬ್ಯಾರಿ ಮೆಮೋರಿಯಲ್ ಸರಕಾರಿ ಉರ್ದು ಹಿರಿಯ ಪ್ರಾಥಮಿಕ ಶಾಲೆಯ ಎಸ್.ಡಿ.ಎಂ.ಸಿ ಅಧ್ಯಕ್ಷ ರಫೀಕ್ ಹಾಜಿ ಕೆ ಮೊಹಿದ್ದೀನ್ ಬ್ಯಾರಿ ಅನುದಾನಿತ ಪ್ರೌಢಶಾಲೆಯ ಶಾಲಾಭಿವೃದ್ಧಿ ಸಮಿತಿಯ ಸದಸ್ಯರಾದ ನಾಗರಾಜ್ ಕಾಂಚನ್, ಅಬ್ದುಲ್ ಕೋಡಿ, ಕೋಡಿ ಬ್ಯಾರೀಸ್ ಸೀ ಸೈಡ್ ಪಬ್ಲಿಕ್ ಸ್ಕೂಲ್ ಶಿಕ್ಷಕ-ರಕ್ಷಕ ಸಮಿತಿಯ ಮುಖ್ಯ ಸಲಹೆಗಾರ ಅಭಿಷೇಕ್, ಉಪಾಧ್ಯಕ್ಷರಾದ ಪ್ರಕಾಶ್, ಮುಸ್ತರಿನ್ ಇದ್ದರು.

ಕೋಡಿ ಬ್ಯಾರೀಸ್ ಸಮೂಹ ಶಿಕ್ಷಣ ಸಂಸ್ಥೆಯ ನಿರ್ದೇಶಕ ಪ್ರೋ ಧೋಮ ಚಂದ್ರಶೇಖರ ಪ್ರಾಸ್ತಾವಿಕ ಮಾತನಾಡಿದರು, ಬ್ಯಾರೀಸ್ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕಿ ಪೂರ್ಣಿಮಾ ಸ್ವಾಗತಿಸಿದರು. ಬ್ಯಾರೀಸ್ ಆಂಗ್ಲ ಮಾಧ್ಯಮ ಶಾಲೆಯ ಸಹ ಶಿಕ್ಷಕಿ ಶ್ವೇತಾ ಕಾರ್ಯಕ್ರಮ ನಿರ್ವಹಿಸಿದರು, ಹಾಜಿ ಕೆ ಮೊಹಿದ್ದೀನ್ ಬ್ಯಾರಿ ಅನುದಾನಿತ ಪ್ರೌಢಶಾಲೆಯ ದೈಹಿಕ ಶಿಕ್ಷಕ ಇಲಿಯಾಸ್ ವಂದಿಸಿದರು.

ಕೋಡಿ ಬ್ಯಾರೀಸ್ ಸಮೂಹ ಶಿಕ್ಷಣ ಸಂಸ್ಥೆಗಳ ಮುಖ್ಯಸ್ಥರು, ಬೋಧಕ, ಬೋಧಕೇತರ ಸಿಬ್ಬಂದಿಯವರು ಇದ್ದರು.

 

ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

LEAVE A REPLY

Please enter your comment!
Please enter your name here

14 + 16 =

Latest news

ಫ್ರೆಂಡ್ಸ್ ಟ್ರೋಫಿ ಹೆಮ್ಮಾಡಿ ಕ್ರಿಕೆಟ್ ಟೂರ್ನಿ: ಮೇ 30 ಮತ್ತು 31ರಂದು ಆಯೋಜನೆ

ಫ್ರೆಂಡ್ಸ್ ಟ್ರೋಫಿ ಹೆಮ್ಮಾಡಿ ಕ್ರಿಕೆಟ್ ಟೂರ್ನಿ: ಮೇ 30 ಮತ್ತು 31ರಂದು ಆಯೋಜನೆ ಟ್ರೋಫಿ ಹೆಮ್ಮಾಡಿ ಕ್ರಿಕೆಟ್ ಟೂರ್ನಿ: ಮೇ 30 ಮತ್ತು 31ರಂದು ಆಯೋಜನೆ ಯುವ...

ಕಪ್ ರೆಡಿಯಾ..? ಗುಜರಾತ್ ಮಣಿಸಿ ಫೈನಲ್‌ಗೆ ಎಂಟ್ರಿ ಕೊಟ್ಟ ಬೆಂಗಳೂರು!

ಕಪ್ ರೆಡಿಯಾ..? ಗುಜರಾತ್ ಮಣಿಸಿ ಫೈನಲ್‌ಗೆ ಎಂಟ್ರಿ ಕೊಟ್ಟ ಬೆಂಗಳೂರು!   2026ರ ಐಪಿಎಲ್‌ನ ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ಗುಜರಾತ್ ಟೈಟನ್ಸ್ ತಂಡವನ್ನು 92 ರನ್‌ಗಳಿಂದ ಮಣಿಸಿದ ರಾಯಲ್...

20 ಲಕ್ಷದ ಆಟಗಾರ… ಇಂದು ಆರ್‌ಸಿಬಿಯ ಅಮೂಲ್ಯ ರತ್ನ!

20 ಲಕ್ಷದ ಆಟಗಾರ… ಇಂದು ಆರ್‌ಸಿಬಿಯ ಅಮೂಲ್ಯ ರತ್ನ! ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಇತಿಹಾಸದಲ್ಲಿ ಕೆಲವು ಆಟಗಾರರು ಕೇವಲ ಕ್ರಿಕೆಟಿಗರಾಗಿ ಮಾತ್ರ ಉಳಿಯುವುದಿಲ್ಲ; ಅವರು ಭಾವನೆಗಳಾಗುತ್ತಾರೆ....

RCBvsGT: ಫೈನಲ್‌ಗೆ ಯಾರು ಮುನ್ನಡೆಯುತ್ತಾರೆ… ಪ್ಲೇ-ಆಫ್ ಸುತ್ತನ್ನು ಗೆಲ್ಲುವ ಹೆಚ್ಚಿನ ಅವಕಾಶ ಯಾರಿಗೆ ಇದೆ?

  RCBvsGT: ಫೈನಲ್‌ಗೆ ಯಾರು ಮುನ್ನಡೆಯುತ್ತಾರೆ... ಪ್ಲೇ-ಆಫ್ ಸುತ್ತನ್ನು ಗೆಲ್ಲುವ ಹೆಚ್ಚಿನ ಅವಕಾಶ ಯಾರಿಗೆ ಇದೆ? ಈ ಋತುವಿನ ಐಪಿಎಲ್‌ನ ಮೊದಲ ಅರ್ಹತಾ ಸುತ್ತಿನಲ್ಲಿ ಬೆಂಗಳೂರು ಮತ್ತು ಗುಜರಾತ್...
- Advertisement -spot_imgspot_img

ಮಾಜಿ ಕರ್ನಾಟಕ ಕ್ರಿಕೆಟಿಗ ಎಸ್.ಎಲ್. ಅಕ್ಷಯ್ ಹೃದಯಾಘಾತದಿಂದ ನಿಧನ

ಮಾಜಿ ಕರ್ನಾಟಕ ಕ್ರಿಕೆಟಿಗ ಎಸ್.ಎಲ್. ಅಕ್ಷಯ್ ಹೃದಯಾಘಾತದಿಂದ ನಿಧನ ಕರ್ನಾಟಕದ ಮಾಜಿ ಕ್ರಿಕೆಟಿಗ ಹಾಗೂ ಪ್ರತಿಭಾವಂತ ವೇಗದ ಬೌಲರ್ ಎಸ್.ಎಲ್. ಅಕ್ಷಯ್ ಅವರು ಭಾನುವಾರ ಲೀಗ್ ಪಂದ್ಯವೊಂದರ...

ಜೆ ಕೆ ಪ್ರೆಸೆಂಟ್ಸ್ ಅರಸೀಕೆರೆ ಚಾಂಪಿಯನ್ಸ್ ಕಪ್ 2026 – ಕ್ರಿಕೆಟ್ ಟೂರ್ನಮೆಂಟ್

ಜೆ ಕೆ ಪ್ರೆಸೆಂಟ್ಸ್ ಅರಸೀಕೆರೆ ಚಾಂಪಿಯನ್ಸ್ ಕಪ್ 2026 – ಕ್ರಿಕೆಟ್ ಟೂರ್ನಮೆಂಟ್ ಅರಸೀಕೆರೆಯ ಕ್ರಿಕೆಟ್ ಅಭಿಮಾನಿಗಳಿಗೆ ಭರ್ಜರಿ ಕ್ರೀಡಾ ರಸದೌತಣ ನೀಡಲು “ಅರಸೀಕೆರೆ ಚಾಂಪಿಯನ್ಸ್...

Must read

- Advertisement -spot_imgspot_img

You might also likeRELATED
Recommended to you