SportsKannada | ಸ್ಪೋರ್ಟ್ಸ್ ಕನ್ನಡ

ವಿದ್ಯಾರ್ಥಿಗಳಲ್ಲಿ ಪ್ರಾಮಾಣಿಕ ಪರಿಶ್ರಮ‌, ಆತ್ಮವಿಶ್ವಾಸವಿದ್ದರೆ ಯಶಸ್ಸು :  ಗೌತಮ್ ಶೆಟ್ಟಿ

ಕುಂದಾಪುರ : ಕೋಡಿ ಬ್ಯಾರೀಸ್ ಸಮೂಹ ಶಿಕ್ಷಣ ಸಂಸ್ಥೆಯಲ್ಲಿ ವಾರ್ಷಿಕ ಕ್ರೀಡೋತ್ಸವ ಇತ್ತೀಚಿಗಷ್ಟೇ ಸಂಸ್ಥೆಯ ಮೈದಾನದಲ್ಲಿ ನಡೆಯಿತು.

 

 

 

 

 

 

 

 

 

 

ಹಳೆಯಂಗಡಿ ಟೊರ್ಪೆಡೋಸ್ ಸ್ಪೋರ್ಟ್ಸ್ ಕ್ಲಬ್ ಸಂಸ್ಥಾಪಕ ಗೌತಮ ಶೆಟ್ಟಿ ಕ್ರೀಡಾ ಜ್ಯೋತಿಯನ್ನು ಉದ್ಘಾಟಿಸಿ, ಮಾತನಾಡಿದ ಅವರು ವಿದ್ಯಾರ್ಥಿಗಳಲ್ಲಿ ಪ್ರಾಮಾಣಿಕ ಪರಿಶ್ರಮಬೇಕು. ಕ್ರೀಡೆ ರಂಗದಲ್ಲಿ ಸಾಕಷ್ಟು ಸಾಧನೆಯನ್ನು ಮಾಡಬಹುದು. ನಮ್ಮಲ್ಲಿ ಆತ್ಮ ವಿಶ್ವಾಸ ಇದ್ದಾಗ ಮಾತ್ರ ನಮ್ಮ ಯಶಸ್ಸನ್ನು ನೀಡುತ್ತದೆ. ಪಠ್ಯೇತರ ಚಟುವಟಿಕೆ ಜೊತೆಗೆ ಕ್ರೀಡಾ ಕ್ಷೇತ್ರಯಲ್ಲೂ ಸಾಕಷ್ಟು ಪರಿಶ್ರಮವನ್ನು ಮಾಡಬೇಕು. ಯಾವುದೇ ರಂಗದಲ್ಲಿ ಸೋಲು-ಗೆಲುವು ಇರುವುದೇ, ಆದರೆ ನಮ್ಮ ಜೀವನದಲ್ಲಿ ಸೋಲಿನಲ್ಲಿ ಸಾಕಷ್ಟು ಹೋರಾಟ ಮಾಡುವುದರಿಂದ ಒಂದೆಲ್ಲಾ ಒಂದು ಅದಕ್ಕೆ ಗೆಲವು ಖಚಿತವಾಗಿದೆ ಎಂದು ಕ್ರೀಡಾಳುಗಳಿಗೆ ಪ್ರೇರಣೆ ನೀಡಿದರು.

ಕೋಡಿ ಬ್ಯಾರೀಸ್ ಸಮೂಹ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಹಾಜಿ ಕೆ. ಎಂ ಅಬ್ದುಲ್ ರೆಹಮಾನ್ ಕ್ರೀಡೋತ್ಸವ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು.

ಈ ಸಂದರ್ಭದಲ್ಲಿ ಕುಂದಾಪುರ ಪುರಸಭೆಯ ಸದಸ್ಯೆ ಕಮಲ, ಕೋಡಿ ಬ್ಯಾರಿ ಮೆಮೋರಿಯಲ್ ಸರಕಾರಿ ಉರ್ದು ಹಿರಿಯ ಪ್ರಾಥಮಿಕ ಶಾಲೆಯ ಎಸ್.ಡಿ.ಎಂ.ಸಿ ಅಧ್ಯಕ್ಷ ರಫೀಕ್ ಹಾಜಿ ಕೆ ಮೊಹಿದ್ದೀನ್ ಬ್ಯಾರಿ ಅನುದಾನಿತ ಪ್ರೌಢಶಾಲೆಯ ಶಾಲಾಭಿವೃದ್ಧಿ ಸಮಿತಿಯ ಸದಸ್ಯರಾದ ನಾಗರಾಜ್ ಕಾಂಚನ್, ಅಬ್ದುಲ್ ಕೋಡಿ, ಕೋಡಿ ಬ್ಯಾರೀಸ್ ಸೀ ಸೈಡ್ ಪಬ್ಲಿಕ್ ಸ್ಕೂಲ್ ಶಿಕ್ಷಕ-ರಕ್ಷಕ ಸಮಿತಿಯ ಮುಖ್ಯ ಸಲಹೆಗಾರ ಅಭಿಷೇಕ್, ಉಪಾಧ್ಯಕ್ಷರಾದ ಪ್ರಕಾಶ್, ಮುಸ್ತರಿನ್ ಇದ್ದರು.

ಕೋಡಿ ಬ್ಯಾರೀಸ್ ಸಮೂಹ ಶಿಕ್ಷಣ ಸಂಸ್ಥೆಯ ನಿರ್ದೇಶಕ ಪ್ರೋ ಧೋಮ ಚಂದ್ರಶೇಖರ ಪ್ರಾಸ್ತಾವಿಕ ಮಾತನಾಡಿದರು, ಬ್ಯಾರೀಸ್ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕಿ ಪೂರ್ಣಿಮಾ ಸ್ವಾಗತಿಸಿದರು. ಬ್ಯಾರೀಸ್ ಆಂಗ್ಲ ಮಾಧ್ಯಮ ಶಾಲೆಯ ಸಹ ಶಿಕ್ಷಕಿ ಶ್ವೇತಾ ಕಾರ್ಯಕ್ರಮ ನಿರ್ವಹಿಸಿದರು, ಹಾಜಿ ಕೆ ಮೊಹಿದ್ದೀನ್ ಬ್ಯಾರಿ ಅನುದಾನಿತ ಪ್ರೌಢಶಾಲೆಯ ದೈಹಿಕ ಶಿಕ್ಷಕ ಇಲಿಯಾಸ್ ವಂದಿಸಿದರು.

ಕೋಡಿ ಬ್ಯಾರೀಸ್ ಸಮೂಹ ಶಿಕ್ಷಣ ಸಂಸ್ಥೆಗಳ ಮುಖ್ಯಸ್ಥರು, ಬೋಧಕ, ಬೋಧಕೇತರ ಸಿಬ್ಬಂದಿಯವರು ಇದ್ದರು.

 

Exit mobile version