ಕ್ರಿಕೆಟ್ಹಿರಿಯ ಕ್ರಿಕೆಟ್ ಆಟಗಾರ ಯಾದವ್ ನಾಯ್ಕ್ ಕೆಮ್ಮಣ್ಣು ಅವರಿಗೆ ಸನ್ಮಾನ

ಹಿರಿಯ ಕ್ರಿಕೆಟ್ ಆಟಗಾರ ಯಾದವ್ ನಾಯ್ಕ್ ಕೆಮ್ಮಣ್ಣು ಅವರಿಗೆ ಸನ್ಮಾನ

-

- Advertisment -spot_img

 

ಹಿರಿಯ ಕ್ರಿಕೆಟ್ ಆಟಗಾರ ಯಾದವ್ ನಾಯ್ಕ್ ಕೆಮ್ಮಣ್ಣು ಅವರಿಗೆ ಸನ್ಮಾನ

ಮಲ್ಪೆ:

ತೋನ್ಸೆ ಹೆಲ್ತ್ ಸೆಂಟರ್ ಹಾಗೂ ಬೈಕಾಡಿ ಹಸನ್ ಸಾಹೇಬ್ ಮೆಮೊರಿಯಲ್ ಚಾರಿಟಬಲ್ ಟ್ರಸ್ಟ್ (ರಿ) ಇವರ ಸಂಯುಕ್ತ ಆಶ್ರಯದಲ್ಲಿ ಹೆಲ್ತ್ ಸೆಂಟರ್ ಸಭಾಭವನದಲ್ಲಿ ಇತ್ತೀಚೆಗೆ ಸಾಧಕರಿಗೆ ಸನ್ಮಾನ ಕಾರ್ಯಕ್ರಮವನ್ನು ಆಯೋಜಿಸಲಾಯಿತು.

ಈ ಕಾರ್ಯಕ್ರಮದಲ್ಲಿ ಸಿಂಡಿಕೇಟ್ ಬ್ಯಾಂಕ್ ಮಂಗಳೂರು ವಲಯದ ಮಾಜಿ ಕ್ರಿಕೆಟ್ ಆಟಗಾರರಾಗಿರುವ ಹಿರಿಯ ಕ್ರೀಡಾಪಟು ಯಾದವ್ ನಾಯ್ಕ್ ಕೆಮ್ಮಣ್ಣು ಅವರನ್ನು ವಿಶೇಷವಾಗಿ ಗೌರವಿಸಲಾಯಿತು. ಪ್ಯಾರಡೈಸ್ ಬನ್ನಂಜೆ, ಕೆಮ್ಮಣ್ಣು ಕ್ರಿಕೆಟರ್ಸ್, ಸಿಂಡಿಕೇಟ್ ಬ್ಯಾಂಕ್ ಹಾಗೂ ಮಂಗಳೂರು ವಿಶ್ವವಿದ್ಯಾಲಯ ತಂಡಗಳನ್ನು ಪ್ರತಿನಿಧಿಸಿ ಯಶಸ್ವಿಯಾಗಿ ಕ್ರಿಕೆಟ್ ಆಡಿದ ಅನುಭವ ಹೊಂದಿರುವ ಯಾದವ್ ನಾಯ್ಕ್ ಕೆಮ್ಮಣ್ಣು ಅವರನ್ನು ಶಾಲು ಹೊದಿಸಿ ಗೌರವ ಪತ್ರದೊಂದಿಗೆ ಸನ್ಮಾನಿಸಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಸ್ಥೆಯ ಸ್ಥಾಪಕರಾದ ಬಿ. ಎಂ. ಜಾಫರ್ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಮಾಜಿ ಜಿಲ್ಲಾ ಪರಿಷತ್ ಸದಸ್ಯ ಜನಾರ್ಧನ ತೋನ್ಸೆ, ಕೆಮ್ಮಣ್ಣು ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಕುಸುಮ ರವೀಂದ್ರ, ನಿವೃತ್ತ ಪ್ರಿನ್ಸಿಪಾಲ್ ಡಾ. ಜೆರಾಲ್ಡ್ ಪಿಂಟೋ, ಮುಸ್ತಾಕ್ ಬೆಳ್ವೆ, ಮೊಹಮ್ಮದ್ ಇಮ್ತಿಯಾಜ್, ಮಾಹೆ–ಮಣಿಪಾಲದ ರಮೇಶ್ ಕಾಮತ್, ಬೈಕಾಡಿ ಹುಸೈನ್ ಸಾಹೇಬ್ ಹಾಗೂ ಸಂಸ್ಥೆಯ ಮುಖ್ಯ ವೈದ್ಯಾಧಿಕಾರಿ ಡಾ. ಶ್ರುತಿ ಅವರು ಉಪಸ್ಥಿತರಿದ್ದರು.

ಗೌರವಿತರ ಪರಿಚಯ ಹಾಗೂ ಗೌರವ ಪತ್ರದ ವಾಚನವನ್ನು ಡಾ. ಶ್ರುತಿ ಅವರು ನೆರವೇರಿಸಿದರು. ಇದೇ ಸಂದರ್ಭದಲ್ಲಿ ಸಂಸ್ಥೆಯ ಐದು ಉದ್ಯೋಗಿಗಳನ್ನು ಅವರ ಉತ್ತಮ ಸೇವೆಯನ್ನು ಗುರುತಿಸಿ ವರ್ಷದ ಉದ್ಯೋಗಿ ಪ್ರಮಾಣಪತ್ರ ಹಾಗೂ ನಗದು ಬಹುಮಾನಗಳೊಂದಿಗೆ ಗಣ್ಯರ ಉಪಸ್ಥಿಯಲ್ಲಿ ಸನ್ಮಾನಿಸಲಾಯಿತು.

ಇದೇ ಸಂಧರ್ಭ ಕೆಮ್ಮಣ್ಣು ಕ್ರಿಕೇಟರ್ಸ್‌ನ ಆಸಿಫ್, ನೆಲ್ಸನ್, ಖ್ಯಾತ ಕ್ರಿಕೆಟರ್ ಸದಾಕತ್, ಊರ ಪರವೂರಿನ ಅಭಿಮಾನಿಗಳು ಹಾಗೂ ಸಂಸ್ಥೆಯ ಸಿಬ್ಬಂದಿಗಳ ಸಮ್ಮುಖದಲ್ಲಿ, ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ವಿಜೇತರಾದ ಶ್ರೀಮಾನ್ ರಮೇಶ್ ತಿಂಗಳಾಯ, ಡಾ. ಹಾಜಿ ಅಬ್ದುಲ್ ವಾಹಿದ್ ಹಾಗೂ ರೆಜಿನಾಲ್ಡ್ ಫುರ್ಟಾಡೋ ಇವರನ್ನೂ ಈ ಸಂದರ್ಭದಲ್ಲೇ ಶಾಲು ಹೊದಿಸಿ ಗೌರವ ಪತ್ರದೊಂದಿಗೆ ಗೌರವಿಸಲಾಯಿತು.

ಕಾರ್ಯಕ್ರಮದ ನಿರೂಪಣೆ ಹಾಗೂ ಧನ್ಯವಾದ ಅರ್ಪಣೆಯನ್ನು ಸಂಸ್ಥೆಯ ಮ್ಯಾನೇಜರ್ ಹರೀಶ್ ಶೆಟ್ಟಿ ಅವರು ನಿರ್ವಹಿಸಿದರು.

LEAVE A REPLY

Please enter your comment!
Please enter your name here

five + 6 =

Latest news

ಸಿರ್ಸಿಯಲ್ಲಿ ‘ಶ್ರೀ ಮಾರಿಕಾಂಬಾ ಟ್ರೋಫಿ’ ಕ್ರಿಕೆಟ್ ಟೂರ್ನಮೆಂಟ್‌ಗೆ ಭರ್ಜರಿ ಸಿದ್ಧತೆ

ಸಿರ್ಸಿಯಲ್ಲಿ ‘ಶ್ರೀ ಮಾರಿಕಾಂಬಾ ಟ್ರೋಫಿ’ ಕ್ರಿಕೆಟ್ ಟೂರ್ನಮೆಂಟ್‌ಗೆ ಭರ್ಜರಿ ಸಿದ್ಧತೆ ಸಿರ್ಸಿಯ ಶ್ರೀ ಮಾರಿಕಾಂಬಾ ಜಿಲ್ಲಾ ಕ್ರೀಡಾಂಗಣದಲ್ಲಿ Shri Marikamba Trophy ಓಪನ್ ಹಾರ್ಡ್ ಟೆನಿಸ್ ಕ್ರಿಕೆಟ್...

ಹೆಜಮಾಡಿಯಲ್ಲಿ ಸಂಭ್ರಮದೊಂದಿಗೆ ಯಶಸ್ವಿಯಾಗಿ ನಡೆದ “ಅಭರಣ್ GPL ಉತ್ಸವ 2026” – ಸಿಡಿಲಿನ ಸಮರದಲ್ಲಿ Temple Square Puttur ಗೆ ಚಾಂಪಿಯನ್ ಪಟ್ಟ!

ಹೆಜಮಾಡಿಯಲ್ಲಿ ಸಂಭ್ರಮದೊಂದಿಗೆ ಯಶಸ್ವಿಯಾಗಿ ನಡೆದ “ಅಭರಣ್ GPL ಉತ್ಸವ 2026” – ಸಿಡಿಲಿನ ಸಮರದಲ್ಲಿ Temple Square Puttur ಗೆ ಚಾಂಪಿಯನ್ ಪಟ್ಟ! ಹೆಜಮಾಡಿ ಸಮೀಪದ ಶಾನುಭಾಗ...

ಕಟಪಾಡಿಯಲ್ಲಿ ಕ್ರಿಕೆಟ್ ಪ್ರೇರಿತ ಮಿಯಾವಾಕಿ ಅರಣ್ಯ ಯೋಜನೆ ಉದ್ಘಾಟನೆ

ಕಟಪಾಡಿಯಲ್ಲಿ ಕ್ರಿಕೆಟ್ ಪ್ರೇರಿತ ಮಿಯಾವಾಕಿ ಅರಣ್ಯ ಯೋಜನೆ ಉದ್ಘಾಟನೆ ಉಡುಪಿ, ಏಪ್ರಿಲ್ 5, 2026: ಪರಿಸರ ಸಂರಕ್ಷಣೆಗೆ ಹೊಸ ದಿಕ್ಕು ತೋರಿಸುವ ವಿಶಿಷ್ಟ ಪ್ರಯತ್ನವಾಗಿ, ಕ್ರಿಕೆಟ್ ದಂತಕಥೆ...

ಅಮ್ಗೆಲೆ ಅಭರಣ್ GPL ಉತ್ಸವ – 2026: ತಂಡಗಳ ಫಿಕ್ಸ್ಚರ್ಸ್ ಬಿಡುಗಡೆ, ಕಾದಿದ್ದ ಕ್ಷಣಕ್ಕೆ ತೆರೆ

ಅಮ್ಗೆಲೆ ಅಭರಣ್ GPL– 2026: ತಂಡಗಳ ಫಿಕ್ಸ್ಚರ್ಸ್ ಬಿಡುಗಡೆ, ಕಾದಿದ್ದ ಕ್ಷಣಕ್ಕೆ ತೆರೆ ಜಿಎಸ್‌ಬಿ ಕ್ರೀಡಾಭಿಮಾನಿಗಳು ಆತುರದಿಂದ ಕಾಯುತ್ತಿದ್ದ ಕ್ಷಣ ಕೊನೆಗೂ ಬಂದಿದೆ. *ಅಮ್ಗೆಲೆ ಅಭರಣ್ GPL...
- Advertisement -spot_imgspot_img

ಮುಂಬೈಯಲ್ಲಿ ಮಾಜಿ ರಣಜಿ ಕ್ರಿಕೆಟಿಗ ಪ್ರಕಾಶ್ ಕರ್ಕೇರಾ ನಿಧನ

ಮುಂಬೈಯಲ್ಲಿ ಮಾಜಿ ರಣಜಿ ಕ್ರಿಕೆಟಿಗ ಪ್ರಕಾಶ್ ಕರ್ಕೇರಾ ನಿಧನ ರೈಲ್ವೇಸ್ ಪರವಾಗಿ ರಣಜಿ ಟ್ರೋಫಿಯಲ್ಲಿ ಪ್ರತಿನಿಧಿಸಿದ್ದ ಮಾಜಿ ಕ್ರಿಕೆಟಿಗ ಪ್ರಕಾಶ್ ಕರ್ಕೇರಾ ಅವರು ಹೃದಯಾಘಾತದಿಂದ ಮುಂಬೈನ ಮುಲುಂಡ್‌ನಲ್ಲಿರುವ...

ಅಳಿಯೂರು ಪ್ರೀಮಿಯರ್ ಲೀಗ್ (APL-2026) ಗೆ ಸಜ್ಜಾಗಿದೆ ಅಳಿಯೂರು

ಅಳಿಯೂರು ಪ್ರೀಮಿಯರ್ ಲೀಗ್ (APL-2026) ಗೆ ಸಜ್ಜಾಗಿದೆ ಅಳಿಯೂರು ಫ್ರೆಂಡ್ಸ್ ಅಳಿಯೂರು ವತಿಯಿಂದ ಮೊದಲ ಬಾರಿಗೆ ಅಳಿಯೂರು ಪ್ರೀಮಿಯರ್ ಲೀಗ್ (APL-2026) – ಸೀಸನ್ 1 ಆಯೋಜಿಸಲಾಗಿದೆ....

Must read

- Advertisement -spot_imgspot_img

You might also likeRELATED
Recommended to you